Just In
- 34 min ago ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- 48 min ago Google Maps: ಇವಿ ಮಾಲೀಕರೇ ಆತಂಕ ಬಿಡಿ... ಗೂಗಲ್ ಮ್ಯಾಪ್ಸ್ ಭರ್ಜರಿ ಅಪ್ಡೇಟ್!
- 1 hr ago ಫ್ಯಾಮಿಲಿ ಕಾರಾಗಿ ಜನರ ಮನಗೆದ್ದ ಹ್ಯುಂಡೈ ಅಲ್ಕಾಜರ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- 2 hrs ago Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿಸಬೇಕೇ? ಆನ್-ರೋಡ್ ಬೆಲೆ ಎಷ್ಟು, EMI ಏನು?
Don't Miss!
- News Neha Hiremath: ಸಿದ್ದರಾಮಯ್ಯ ಹೇಳಿಕೆಗೆ ಕಾಂಗ್ರೆಸ್ ಕಾರ್ಪೊರೇಟರ್ ನೇಹಾ ತಂದೆ ಆಕ್ರೋಶ
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Movies 'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನೆಲಸಮವಾಯ್ತು 190 ವರ್ಷ ಹಳೆಯ ಸೇತುವೆ
ಮುಂಬೈ-ಪುಣೆ ಎಕ್ಸ್ಪ್ರೆಸ್ ಹೆದ್ದಾರಿ ಬಳಿಯಿದ್ದ 190 ವರ್ಷದ ಹಳೆಯ ಅಮೃತಾಂಜನ್ ರೈಲ್ವೆ ಬ್ರಿಡ್ಜ್ ಅನ್ನು ಭಾನುವಾರ ಸಂಜೆ ನೆಲಸಮಗೊಳಿಸಲಾಗಿದೆ. ವಾಹನಗಳ ದಟ್ಟಣೆ ಹೆಚ್ಚಿದ್ದ ಕಾರಣಕ್ಕೆ ಸುಗಮ ಸಂಚಾರ ಕಲ್ಪಿಸುವ ಸಲುವಾಗಿ ಈ ಈ ರೈಲ್ವೆ ಸೇತುವೆಯನ್ನು ನೆಲಸಮಗೊಳಿಸಲಾಗಿದೆ.
ಈ ಸೇತುವೆಯು ಹಳೆ ಲೋನವಾಲಾ ರೈಲು ನೆಟ್ ವರ್ಕ್ ನ ಭಾಗವಾಗಿತ್ತು. ಎಂಎಸ್ಆರ್ಡಿಸಿ ಸ್ಫೋಟಕಗಳ ಸಹಾಯದಿಂದ ಈ ಸೇತುವೆಯನ್ನು ನೆಲಸಮಗೊಳಿಸಿದೆ. ಈ ಸೇತುವೆ ತುಂಬಾ ದುರ್ಬಲವಾಗಿದೆಯೆಂದು 2017ರ ಲೆಕ್ಕಪರಿಶೋಧನೆ ವರದಿಯಲ್ಲಿ ಹೇಳಲಾಗಿತ್ತು.
ಸೇತುವೆಯು ದುರ್ಬಲಗೊಂಡಿದ್ದ ಕಾರಣಕ್ಕೆ ಅದರ ಕೆಳಗೆ ಹೋಗುವ ವಾಹನಗಳ ದಟ್ಟಣೆಯನ್ನು ನಿಭಾಯಿಸಲು ಸಾಧ್ಯವಾಗುತ್ತಿರಲಿಲ್ಲ. ಈ ಸೇತುವೆಯು ಯಾವುದೇ ಸಮಯದಲ್ಲಿ ಕುಸಿದು ಬಿದ್ದುಅಪಘಾತವಾಗುವ ಸಾಧ್ಯತೆಗಳಿದ್ದವು.
ಲಾಕ್ಡೌನ್ ಸಮಯದಲ್ಲಿ ಯಾವುದೇ ವಾಹನಗಳ ಸಂಚಾರವಿಲ್ಲ. ಈ ಕಾರಣಕ್ಕೆ ಎಂಎಸ್ಆರ್ಡಿಸಿ ಈ ಸೇತುವೆಯನ್ನು ನೆಲಸಮಗೊಳಿಸಲು ಮುಂದಾಗಿದೆ. ಈಗ ನೆಲಸಮಗೊಂಡಿರುವ ಸೇತುವೆಯ ಭಗ್ನಾವಶೇಷಗಳನ್ನು ತೆಗೆದುಹಾಕಲಾಗುತ್ತಿದೆ.
ಮುಂದಿನ 4 ದಿನಗಳಲ್ಲಿ ಈ ಸೇತುವೆಯ ಅವಶೇಷಗಳನ್ನು ಸಂಪೂರ್ಣವಾಗಿ ತೆಗೆದು ಹಾಕಿ ಸ್ವಚ್ವಗೊಳಿಸಲಾಗುವುದೆಂದು ಎಂಎಸ್ಆರ್ಡಿಸಿ ತಿಳಿಸಿದೆ. ಇದಕ್ಕಾಗಿ ಸುಮಾರು 1200 ಟ್ರಕ್ ಗಳನ್ನು ಬಳಸಲಾಗುವುದು. ಈ ವೇಳೆ ಇಲ್ಲಿ ಸಂಚರಿಸುವ ವಾಹನಗಳ ಮಾರ್ಗವನ್ನು ಕಂಡಾಲಾಗೆ ತಿರುಗಿಸಲಾಗುವುದು ಎಂದು ಎಂಎಸ್ಆರ್ಡಿಸಿ ಹೇಳಿದೆ.
ಅಮೃತಾಂಜನ್ ಸೇತುವೆಯನ್ನು ಮೊದಲ ಬಾರಿಗೆ 1830ರ ನವೆಂಬರ್ 10ರಂದು ಬಳಕೆಗೆ ಆರಂಭಿಸಲಾಯಿತು. ಈ ಸೇತುವೆ ಮುಂಬೈ ಹಾಗೂ ಪುಣೆ ನಗರಗಳನ್ನು ಸಂಪರ್ಕಿಸಲು ನೆರವಾಗುತ್ತಿತ್ತು.
ನಂತರದ ದಿನಗಳಲ್ಲಿ ಈ ಸೇತುವೆಯನ್ನು ರೈಲ್ವೆಯ ಮೂರನೇ ಸಾಲಿನ ಟ್ರಾಕ್ ನಂತೆ ಬಳಸಲಾಯಿತು. ಈ ಟ್ರಾಕ್ ನಲ್ಲಿ ಬೋರ್ ಘಾಟ್ ಸೆಕ್ಷನ್ ನ ಎಂಜಿನ್ಗಳನ್ನು ಇಡಲಾಗುತ್ತಿತ್ತು. ಬಲಶಾಲಿಯಾದ ಎಂಜಿನ್ ಬಂದ ನಂತರ ಈ ಎಂಜಿನ್ ಗಳ ಬಳಕೆಯನ್ನು ನಿಲ್ಲಿಸಲಾಯಿತು.