Just In
- 3 hrs ago ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- 4 hrs ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- 4 hrs ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 4 hrs ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
Don't Miss!
- News ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದ ಡಾ. ಕೆ. ಸುಧಾಕರ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Movies Bhagyalakshmi: ಕನ್ನಿಕಾ ಮೇಡಂ ಚಿನ್ನಾಭರಣ ಕದ್ದರಾ? ಆಕೆ ಅಹಂ ಇಳಿಸಲು ಮಾಡಿದ ಐಡಿಯಾ?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಂಗಳೂರು ನಗರ ಮಧ್ಯೆ ದೈತ್ಯ ಅನಕೊಂಡ; ಬೆಚ್ಚಿಬಿದ್ದ ಜನ!
ಬಿಡುವಿಲ್ಲದ ವೇಳೆ, ಸಾರ್ವಜನಿಕರು ತಮ್ಮ ತಮ್ಮ ಕೆಲಸ ಕಾರ್ಯಗಳಲ್ಲಿ ಮಗ್ನವಾಗಿದ್ದರು. ಸ್ವಲ್ಪ ಹೊತ್ತಿನಲ್ಲೇ ಎಲ್ಲರಲ್ಲೂ ಗಾಬರಿ ಆವರಿಸಿತ್ತು. ನೋಡ ನೋಡುತ್ತಲೇ ವಿಷಯ ನಗರದೆಲ್ಲೆಡೆ ಮಿಂಚಿನ ವೇಗದಲ್ಲಿ ಪಸರಿಸಿತೊಡಗಿತ್ತು.
ನೆರೆದಿದ್ದ
ಎಲ್ಲರಲ್ಲೂ
ವಿಷಯ
ಏನೆಂಬುದು
ತಿಳಿದುಕೊಳ್ಳುವ
ಹಂಬಲ.
ಆದರೆ
ಹತ್ತಿರ
ಹೋಗುವ
ಧೈರ್ಯ
ಯಾರಲ್ಲೂ
ಇರಲಿಲ್ಲ.
ಯಾಕೆಂದರೆ
ಅದು
ಅಂತಿಂಥ
ಹಾವಲ್ಲ.
ದಕ್ಷಿಣ
ಅಮೆರಿಕಾ
ಹಾಗೂ
ಆಫ್ರಿಕಾದ
ದಟ್ಟಾರಣ್ಯದಲ್ಲಿ
ಮಾತ್ರ
ಕಾಣ
ಸಿಗುವ
ಪ್ರಪಂಚದ
ಅತಿ
ದೊಡ್ಡ
ಹಾವು
'ಅನಕೊಂಡ'.
ಆಗಲೇ ಓರ್ವ ವ್ಯಕ್ತಿಯನ್ನು ಅನಕೊಂಡ ನುಂಗಿಯಾಗಿತ್ತು. ರಕ್ತಸಿಕ್ತವಾದ ಆತನ ಕೈಗಳೂ ಅನಾಕೊಂಡ ಬಾಯಲ್ಲಿ ಸ್ಪಷ್ಟವಾಗಿ ಕಾಣಿಸುತ್ತಿತ್ತು. ಇವೆಲ್ಲವೂ ಬೆಂಗ್ಳೂರಿಗರನ್ನು ಬೆಚ್ಚಿ ಬೀಳಿಸಿದ ಕ್ಷಣಗಳು.
ಚಿತ್ರ ಕೃಪೆ: ದಿ ನ್ಯೂಸ್ ಮಿನಿಟ್
ವಿಷಯ ಏನೆಂಬುದನ್ನು ತಿಳಿದುಕೊಳ್ಳುವ ಕುತೂಹಲ ನಮ್ಮಲ್ಲೂ ಕಾಡುತ್ತಿತ್ತು. ವಿಷಯದ ಗಂಭೀರತೆಯ ಬಗ್ಗೆ ಆಳವಾಗಿ ಚರ್ಚಿಸಿದಾಗ ರಸ್ತೆ ಮಧ್ಯೆಗಳ ನಡುವೆ ಸೃಷ್ಟಿಯಾಗಿರುವ ದೊಡ್ಡ ಗುಂಡಿಗಳನ್ನು ಲೆಕ್ಕಿಸದೇ ಚಿರನಿದ್ರೆಗೆ ಜಾರಿರುವ ಆಡಳಿತ ವರ್ಗವನ್ನು ಎಚ್ಚರಿಸುವ ಕೆಲಸ ಇದಾಗಿತ್ತು ಎಂಬುದು ತಿಳಿದು ಬಂದಿತ್ತು.
ಚಿತ್ರ ಕೃಪೆ: ದಿ ನ್ಯೂಸ್ ಮಿನಿಟ್
ನಮ್ಮ ಬೆಂಗಳೂರು ಫೌಂಡೇಷನ್ (ಎನ್ಬಿಎಫ್) ಕಾರ್ಯಕರ್ತರು ಯಶವಂತಪುರದಲ್ಲಿ ಈ ವಿನೂತನ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದರು. ಪ್ರಸ್ತುತ ಘಟನೆಯು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದೆ.
ಚಿತ್ರ ಕೃಪೆ: ದಿ ನ್ಯೂಸ್ ಮಿನಿಟ್
ಎರಡು ತಿಂಗಳುಗಳ ಹಿಂದೆಯಷ್ಟೇ ಇದಕ್ಕೆ ಸಮಾನವಾದ ಘಟನೆಯಲ್ಲಿ ನಗರ ಮಧ್ಯೆ ಮೊಸಳೆ ಎದ್ದು ಕಾಣಿಸಿತ್ತು. ಅಂದು ಮೈಸೂರು ಕಲಾವಿದ ಬಾದಲ್ ನಂಜುಂಡಸ್ವಾಮಿ ಸುಲ್ತಾನ್ ಪಾಳ್ಯ ಮುಖ್ಯ ರಸ್ತೆಯ ಮಧ್ಯೆ ಉಂಟಾದ ದೊಡ್ಡ ಗುಂಡಿಯೊಳಗೆ 12 ಅಡಿ ಉದ್ದದ ಕೃತಕ ಮೊಸಳೆಯನ್ನು ತಂದು ಮೌನ ಪ್ರತಿಭಟನೆ ನಡೆಸಿದ್ದರು.
ಒಟ್ಟಿನಲ್ಲಿ ಈಗಲಾದರೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಎಚ್ಚೆತ್ತುಕೊಳ್ಳುವರೇ ಎಂಬುದನ್ನು ಕಾದು ನೋಡಬೇಕಾಗಿದೆ. ಈ ಸಂಬಂಧ ಸಾರ್ವಜನಿಕರಿಂದಲೂ ವ್ಯಾಪಕ ಪ್ರತಿಭಟನೆ ವ್ಯಕ್ತವಾಗುತ್ತಿದೆ.
ಚಿತ್ರ ಕೃಪೆ: ದಿ ನ್ಯೂಸ್ ಮಿನಿಟ್