Just In
- 43 min ago ರಾಂಗ್ ರೂಟ್ನಲ್ಲಿ ಬಂದು ಪ್ರಶ್ನಿಸಿದ ಬೈಕ್ ಸವಾರನಿಗೆ ಥಳಿಸಿದ ಕಾರು ಚಾಲಕ: ವಿಡಿಯೋ
- 13 hrs ago ಡಿ ಬಾಸ್ ಪತ್ನಿ ಖರೀದಿಸಿದ್ದು ಸಾಮಾನ್ಯ ಕಾರಲ್ಲ: ಬಂಗಲೆಯಂತಹ ಇಂಟೀರಿಯರ್!
- 13 hrs ago ಭಾರತದ ನಂ.1 ಕಾರು... ದಾಖಲೆಯ ಮಾರಾಟ... 5.5 ಲಕ್ಷ ಬೆಲೆ... 34 ಕಿ.ಮೀ ಮೈಲೇಜ್
- 14 hrs ago ಈ ಹ್ಯುಂಡೈ ಕಾರಿಗೆ ಭಾರತದಲ್ಲಿ ಭರ್ಜರಿ ಬೇಡಿಕೆ: ಇದು ನಿಮಗೆ ಬೇಕು ಅಂದ್ರೆ ಕಾಯಲೇಬೇಕು!
Don't Miss!
- Finance ಬೆಂಗಳೂರಿನಿಂದ ಲಕ್ಷದ್ವೀಪಕ್ಕೆ ನೇರ ವಿಮಾನ ಸೇವೆ ಆರಂಭ, ದಿನಾಂಕ ವಿವರ
- News ವಿ ಸೋಮಣ್ಣಗೆ ಎದುರಾಯ್ತು ಸಂಕಷ್ಟ: ಕೈ ನಾಯಕರ ಸಂಪರ್ಕದಲ್ಲಿರುವ ಮಾಧುಸ್ವಾಮಿ: ಕಾಂಗ್ರೆಸ್ ಸೇರ್ಪಡೆ?
- Movies ರಣ್ವೀರ್ ಸಿಂಗ್ ಗೆ ಶಕ್ತಿಮಾನ್ ಪಾತ್ರ ಮಾಡುವ ಅರ್ಹತೆ-ಯೋಗ್ಯತೆ ಇಲ್ಲ ; ಮುಖೇಶ್ ಖನ್ನಾ..!
- Lifestyle ಬಾಯಲ್ಲಿ ನೀರು ತರಿಸುವ ಮಸಾಲೆ ಮೊಟ್ಟೆ ಬುರ್ಜಿ ಮಾಡೋದು ಹೇಗೆ.? ತುಂಬಾ ಸಿಂಪಲ್ ರೆಸಿಪಿ
- Sports IPL 2024: ಮುಂಬೈ ನಾಯಕನಿಗೆ ಪತ್ರಕರ್ತರಿಂದ ಬೌನ್ಸರ್: ಉತ್ತರಿಸದೆ ಮೌನಕ್ಕೆ ಶರಣಾದ ಹಾರ್ದಿಕ್ ಪಾಂಡ್ಯ
- Technology Best Coolers: ಭಾರತದಲ್ಲಿ 5 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯ ಇರುವ ಅತ್ಯುತ್ತಮ ಕೂಲರ್ಗಳು! ಫೀಚರ್ಸ್ ಏನಿದೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ಬಗೆಯ ಸಾಮಾಜಿಕ ಅಂತರದ ಫೋಟೋ ಶೇರ್ ಮಾಡಿದ ಆನಂದ್ ಮಹೀಂದ್ರಾ
ಕರೋನಾ ಸಾಂಕ್ರಾಮಿಕದ ಈ ಸಮಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಫೇಸ್ ಮಾಸ್ಕ್ ಧರಿಸುವಂತೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಜನರಿಗೆ ಪದೇ ಪದೇ ಮನವಿ ಮಾಡುತ್ತಿವೆ.
ಈ ಸಂದರ್ಭಕ್ಕೆ ತಕ್ಕಂತೆ ಮಹೀಂದ್ರಾ ಅಂಡ್ ಮಹೀಂದ್ರಾ ಕಂಪನಿಯ ಅಧ್ಯಕ್ಸರಾದ ಆನಂದ್ ಮಹೀಂದ್ರಾರವರು ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋವೊಂದನ್ನು ಶೇರ್ ಮಾಡಿದ್ದಾರೆ. ತಮಾಷೆಯಿಂದ ಕೂಡಿರುವ ಈ ಫೋಟೋ ವೈರಲ್ ಆಗಿದೆ.
ಈ ಫೋಟೋ ಶೇರ್ ಮಾಡಿರುವ ಆನಂದ್ ಮಹೀಂದ್ರಾ, ಈ ಪ್ರಯತ್ನವು ನನ್ನ ಮುಖದಲ್ಲಿ ಮಂದಹಾಸವನ್ನು ಮೂಡಿಸಿದೆ. ಆದರೆ ಕೆಲವು ಸಾಮಾಜಿಕ ಅಂತರಗಳು ಸುರಕ್ಷತೆಗಿಂತ ಹೆಚ್ಚು ಅಪಾಯಕಾರಿಯಾಗಿರುತ್ತವೆ ಎಂದು ಹೇಳಿದ್ದಾರೆ.
MOST READ:ವಾಹನ ಖರೀದಿಸುವವರಿಗೆ, ಮಾರಾಟ ಮಾಡುವವರಿಗೆ ನೆರವಾಗುವ ಆರ್ಟಿಒ ಫಾರಂಗಳಿವು!
ಆನಂದ್ ಮಹೀಂದ್ರಾರವರ ಈ ಪೋಸ್ಟ್ಗೆ ಇದುವರೆಗೂ 4 ಸಾವಿರಕ್ಕೂ ಹೆಚ್ಚು ಲೈಕ್ಗಳು ಬಂದಿದ್ದು, 232 ಬಾರಿ ರಿಟ್ವೀಟ್ ಮಾಡಲಾಗಿದೆ. ಇದೇ ವೇಳೆ ಹಲವು ಟ್ವಿಟರ್ ಬಳಕೆದಾರರು ಈ ಪೋಸ್ಟ್ ಬಗ್ಗೆ ಹಾಸ್ಯ ಭರಿತ ಕಾಮೆಂಟ್'ಗಳನ್ನು ಮಾಡಿದ್ದಾರೆ.
ಆನಂದ್ ಮಹೀಂದ್ರಾರವರು ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ಕೆಲವೊಮ್ಮೆ ತಮಾಷೆಯ ಟ್ವೀಟ್'ಗಳನ್ನು ಶೇರ್ ಮಾಡುತ್ತಾರೆ. ಈ ಮೂಲಕ ಅವರ ಫಾಲೋವರ್'ಗಳನ್ನು ರಂಜಿಸುತ್ತಾರೆ.
MOST READ:ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು
ಉದ್ಯಮಿ ಆನಂದ್ ಮಹೀಂದ್ರಾ ತಮ್ಮ ಲೋಕೋಪಕಾರಿ ಕಾರ್ಯಗಳಿಗೂ ಹೆಸರುವಾಸಿಯಾಗಿದ್ದಾರೆ. ಸ್ಕೂಟರ್ ಮೂಲಕ ತಮ್ಮ ತಾಯಿಯನ್ನು ದೇಶ ಸುತ್ತಾಡಿಸಿದ್ದ ಮೈಸೂರಿನ ವ್ಯಕ್ತಿಗೆ ಆನಂದ್ ಮಹೀಂದ್ರಾ ತಮ್ಮ ಕಂಪನಿಯ ಕಾರ್ ಅನ್ನು ಉಡುಗೊರೆಯಾಗಿ ನೀಡಿದ್ದರು.
ಇಷ್ಟು ಮಾತ್ರವಲ್ಲದೇ ಈ ವರ್ಷದ ಆರಂಭದಲ್ಲಿ ಭಾರತ ಕ್ರಿಕೆಟ್ ತಂಡವು ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿ ಜಯಿಸಲು ನೆರವಾದ ಆರು ಜನ ಯುವ ಕ್ರಿಕೆಟಿಗರಿಗೆ ಉದ್ಯಮಿ ಆನಂದ್ ಮಹೀಂದ್ರಾ ಹೊಸ ಥಾರ್ ಎಸ್ಯುವಿಯನ್ನು ಉಡುಗೊರೆಯಾಗಿ ನೀಡಿದ್ದರು.
MOST READ:10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್
ಇತ್ತೀಚೆಗಷ್ಟೇ ಆನಂದ್ ಮಹೀಂದ್ರಾರವರು ದೆಹಲಿ, ಮುಂಬೈ ಹಾಗೂ ಪುಣೆ ಸೇರಿದಂತೆ ದೇಶದ ಹಲವು ಸಣ್ಣ ಹಾಗೂ ದೊಡ್ಡ ನಗರಗಳಿಗೆ ಮೆಡಿಕಲ್ ಆಕ್ಸಿಜನ್ ಪೂರೈಸುವ ಸಲುವಾಗಿ ಆಕ್ಸಿಜನ್ ಆನ್ ವ್ಹೀಲ್ಸ್ ಅಭಿಯಾನಕ್ಕೆ ಚಾಲನೆ ನೀಡಿದ್ದರು.
ಆಕ್ಸಿಜನ್ ಆನ್ ವ್ಹೀಲ್ಸ್ ಅಭಿಯಾನದ ಮೂಲಕ ಮಹೀಂದ್ರಾ ಅಂಡ್ ಮಹೀಂದ್ರಾ ಕಂಪನಿಯು ಆಸ್ಪತ್ರೆ ಹಾಗೂ ರೋಗಿಗಳ ಮನೆಗಳಿಗೆ ಮೆಡಿಕಲ್ ಆಕ್ಸಿಜನ್ ಅನ್ನುಉಚಿತವಾಗಿ ತಲುಪಿಸುತ್ತಿದೆ.
MOST READ:ವರ್ಷಗಳ ಕಾಲ ಉಪ್ಪು ನೀರಿನಲ್ಲಿದ್ದರೂ ಹಡಗುಗಳ ಆಂಕರ್ಗಳಿಗೆ ತುಕ್ಕು ಹಿಡಿಯದಿರಲು ಕಾರಣಗಳಿವು
ಮಹೀಂದ್ರಾ ಬೊಲೆರೊ ಪಿಕಪ್ ವಾಹನದ ಸಹಾಯದಿಂದ ಮಹೀಂದ್ರಾ ಕಂಪನಿಯು ದಿನಕ್ಕೆ 600ಕ್ಕೂ ಹೆಚ್ಚು ಆಕ್ಸಿಜನ್ ಸಿಲಿಂಡರ್ಗಳನ್ನು ಅಗತ್ಯವಿರುವವರ ಮನೆ ಬಾಗಿಲಿಗೆ ತಲುಪಿಸುತ್ತಿದೆ.