Just In
- 38 min ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 55 min ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 2 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 2 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- News Bengaluru Heat: ಏ.25 ರಂದು ನಗರದಲ್ಲಿ ಅತ್ಯಧಿಕ ತಾಪಮಾನ: 12 ವರ್ಷಗಳ ದಾಖಲೆ ಉಡೀಸ್
- Lifestyle ದೇಹದಲ್ಲಿ ಈ ಬದಲಾವಣೆ ಆದರೆ ನಿಮ್ಮಲ್ಲಿ ವಿಟಮಿನ್ ಬಿ12 ಕೊರತೆಯಾಗಿದೆ ಎಂದರ್ಥ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Movies Shrirasthu Shubhamasthu:ದೀಪಿಕಾಗೆ ಉತ್ತರ ಕೊಡೋಕೆ ಆಗ್ತಿಲ್ಲ; ಇತ್ತ ಹೆಂಡತಿಗೆ ಸಮಾಧಾನ ಮಾಡೋಕೆ ಆಗ್ತಿಲ್ಲ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಚಾರಿ ನಿಯಮ ಉಲ್ಲಂಘನೆ- ಬೈಕ್ ಸವಾರನಿಗೆ ನಮಸ್ಕರಿಸಿದ ಸರ್ಕಲ್ ಇನ್ಸ್ಪೆಕ್ಟರ್
ಸ್ವಪರಿವಾರ ಕುಟುಂಬ ಸಮೇತರಾಗಿ ಬೈಕ್ ನಲ್ಲಿ ಸವಾರಿ ಹೋಗುತ್ತಿದ್ದುದ್ದನ್ನು ಕಂಡ ಸರ್ಕಲ್ ಇನ್ಸ್ ಪೆಕ್ಟರ್ ಒಬ್ಬರು ಬೈಕ್ ಸವಾರನ ಕಾರ್ಯಕ್ಕೆ ನಮಸ್ಕರಿಸುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಮೊನ್ನೆಯಷ್ಟೇ ಬೈಕ್ ಸವಾರನೊಬ್ಬ ಸ್ವಪರಿವಾರ ಕುಟುಂಬ ಸಮೇತರಾಗಿ ಬೈಕ್ ನಲ್ಲಿ ಸವಾರಿ ಹೋಗುತ್ತಿದ್ದುದ್ದನ್ನು ಕಂಡ ಸರ್ಕಲ್ ಇನ್ಸ್ ಪೆಕ್ಟರ್ ಒಬ್ಬರು ಬೈಕ್ ಸವಾರನ ಕಾರ್ಯಕ್ಕೆ ನಮಸ್ಕರಿಸುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಅಂದಹಾಗೆ ಇದೆಲ್ಲಾ ನಡೆದಿರುವುದು ಆಂಧ್ರಪ್ರದೇಶದ ಆನಂತಪುರ ಜಿಲ್ಲೆಯ ಮಡಕಶಿರ ಸರ್ಕಲ್ ನಲ್ಲಿ. ಕಳೆದ 2 ದಿನಗಳ ಹಿಂದೆ ಬೈಕ್ ಸವಾರನೊಬ್ಬ ಹೆಲ್ಮೆಟ್ ಹಾಕದೆ ನಾಲ್ಪರೊಂದಿಗೆ ಬೈಕ್ ನಲ್ಲಿ ಪ್ರಯಾಣಿಸುತ್ತಿರುವುದನ್ನು ತಡೆದ ಸರ್ಕಲ್ ಇನ್ಸ್ ಪೆಕ್ಟರ್ ಬಿ ಶುಭಾ ಕುಮಾರ್ ಅವರು, ನಿನ್ನ ಕಾರ್ಯಕ್ಕೆ ನನ್ನ ದೊಡ್ಡ ನಮಸ್ಕಾರ ಎಂದು ಹೇಳಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ.
ಇದಲ್ಲದೇ ಸಂಚಾರಿ ನಿಮಯ ಉಲ್ಲಂಘಿಸಿದ್ದ ಈ ಬೈಕ್ ಸವಾರ ತನ್ನ ಇಬ್ಬರು ಮಕ್ಕಳನ್ನು ಪೆಟ್ರೋಲ್ ಟ್ಯಾಂಕ್ ಮೇಲೆ ಕೂರಿಸಿದ್ದ ಹಾಗೂ ತನ್ನ ಹೆಂಡಿಯನ್ನು ಬೈಕ್ ಹಿಂಬದಿ ಕೂರಿಸಿದ್ದು ಇವರಿಬ್ಬರ ಮಧ್ಯೆ ಬಾಲಕಿಯೊಬ್ಬಳನ್ನು ಕೂರಿಸಿದ್ದು ಒಟ್ಟಾರೆ ಒಂದು ಬೈಕ್ ನಲ್ಲಿ ಐವರು ಪ್ರಯಾಣಿಸುತ್ತಿದ್ದರು.
Recommended Video
ಆಗ ಬೈಕ್ ತಡೆದ ಶುಭಾ ಕುಮಾರ್ ಅವರು ಸುರಕ್ಷತೆ ಬಗ್ಗೆ ಯಾವುದೇ ಪರಿವೇ ಇಲ್ಲದೆ ಈ ರೀತಿ ಪ್ರಯಾಣ ಮಾಡುತ್ತಿರುವುದು ಅಪಾಯದ ಸಂಕೇತ ಇನ್ನು ಮುಂದಾದರೂ ಸಂಚಾರಿ ನಿಮಯ ಪಾಲಿಸಿವಂತೆ ಬುದ್ದಿ ಮಾತು ಹೇಳಿದ್ದಾರೆ.
ಇನ್ನೊಂದು ವಿಪರ್ಯಾಸ ಎಂದರೇ ಈ ಘಟನೆಗೂ ಮುನ್ನ ಬೈಕ್ ಸವಾರ ಅದಾಗಲೇ ಒಂದೂವರೆ ಗಂಟೆಗಳ ಕಾಲ ಸಂಚಾರಿ ಸುರಕ್ಷತೆ ಬಗ್ಗೆ ಸೆಮಿನಾರ್ ನಲ್ಲಿ ಭಾಗವಹಿಸಿ ನಂತರ ಐವರನ್ನು ಬೈಕ್ ನಲ್ಲಿ ಕೂರಿಸಿಕೊಂಡು ಹೋಗಿದ್ದಾನೆ ಎನ್ನಲಾಗಿದೆ.
ಇನ್ನು ಪದೇ ಪದೇ ಸಂಚಾರಿ ನಿಯಮ ಉಲ್ಲಂಘನೆ ಮಾಡುತ್ತಿದ್ದ ಬೈಕ್ ಸವಾರನಿಗೆ ಇದಕ್ಕೂ ಮೊದಲೇ ಪೊಲೀಸರು ಹಲವು ಬಾರಿ ಎಚ್ಚರಿಕೆ ನೀಡಿದ್ದರು. ಆದರು ಬೈಕ್ ಸವಾರ ಮಾತ್ರ ಎಚ್ಚೆತ್ತುಕೊಂಡಿಲ್ಲ ಎನ್ನಲಾಗಿದೆ.