Just In
- 52 min ago Tata Nexon: ಮುಂಬರಲಿರುವ ಟಾಟಾ ನೆಕ್ಸಾನ್ ಸಿಎನ್ಜಿ ಕಾರಿನ ವಿಶೇಷತೆಗಳಿವು.. ಹೆಚ್ಚು ಮೈಲೇಜ್!
- 1 hr ago ರಾಂಗ್ ರೂಟ್ನಲ್ಲಿ ಬಂದು ಪ್ರಶ್ನಿಸಿದ ಬೈಕ್ ಸವಾರನಿಗೆ ಥಳಿಸಿದ ಕಾರು ಚಾಲಕ: ವಿಡಿಯೋ
- 14 hrs ago ಡಿ ಬಾಸ್ ಪತ್ನಿ ಖರೀದಿಸಿದ್ದು ಸಾಮಾನ್ಯ ಕಾರಲ್ಲ: ಬಂಗಲೆಯಂತಹ ಇಂಟೀರಿಯರ್!
- 15 hrs ago ಭಾರತದ ನಂ.1 ಕಾರು... ದಾಖಲೆಯ ಮಾರಾಟ... 5.5 ಲಕ್ಷ ಬೆಲೆ... 34 ಕಿ.ಮೀ ಮೈಲೇಜ್
Don't Miss!
- News ಕನ್ನಡ ನಾಮಫಲಕ: ಬಲವಂತದ ಕ್ರಮ ಬೇಡ ಎಂದ ಕೋರ್ಟ್
- Finance ಟಿಸಿಎಸ್ನಿಂದ ಭಾರತೀಯ ಸೇನೆಗೆ ಸೇರಿದ ಲೆಫ್ಟಿನೆಂಟ್ ದಿವ್ಯಾಂಗಿನಿ ತ್ರಿಪಾಠಿ
- Movies 'ಹಿಟ್ಲರ್ ಕಲ್ಯಾಣ' ಅಂತ್ಯ; ಧಾರಾವಾಹಿ ಬಿಟ್ಟು ಸಿನಿಮಾದಲ್ಲಿ ಬ್ಯುಸಿಯಾಗ್ತಾರಾ 'ಉಪಾಧ್ಯಕ್ಷ'ನ ಬೆಡಗಿ?
- Technology ಇಂದು ಮಾರುಕಟ್ಟೆಗೆ ಬರಲಿದೆ ಗೆಸ್ಚರ್ ಮೂಲಕ ಕೆಲಸ ಮಾಡುವ ಸ್ಮಾರ್ಟ್ಫೋನ್!
- Sports IPL 2024: ಐಪಿಎಲ್ ಆರಂಭಕ್ಕೂ ಮುನ್ನವೇ 'ಸೂಪರ್' ಭವಿಷ್ಯ; ಆರ್ಸಿಬಿ ಈ ಬಾರಿ ಕಪ್ ಗೆಲ್ಲುತ್ತದಾ? ಇಲ್ಲಿದೆ ಉತ್ತರ
- Lifestyle ಬಾಯಲ್ಲಿ ನೀರು ತರಿಸುವ ಮಸಾಲೆ ಮೊಟ್ಟೆ ಬುರ್ಜಿ ಮಾಡೋದು ಹೇಗೆ.? ತುಂಬಾ ಸಿಂಪಲ್ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಒಂದೇ ದಿನದಲ್ಲಿ ಸಾವಿರಕ್ಕೂ ಹೆಚ್ಚು ಆಂಬ್ಯುಲೆನ್ಸ್ ಪಡೆದ ಜಗನ್ ಸರ್ಕಾರ
ಆಂಧ್ರಪ್ರದೇಶದ ಮುಖ್ಯಮಂತ್ರಿಗಳಾದ ಜಗನ್ ಮೋಹನ್ ರೆಡ್ಡಿರವರು ಕರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಜನರ ಒಳಿತಿಗಾಗಿ ಹಲವಾರು ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಲಾಕ್ ಡೌನ್ ನಿಂದ ತೊಂದರೆಗೀಡಾಗಿರುವ ಬಡವರು ಹಾಗೂ ಅಸಹಾಯಕರಿಗೆ ಹಣಕಾಸಿನ ಸಹಾಯ ಸೇರಿದಂತೆ ಹಲವು ರೀತಿಯಲ್ಲಿ ನೆರವಾಗಿದ್ದಾರೆ.
ಲಾಂಡ್ರಿ ಕಾರ್ಮಿಕರು, ಕ್ಷೌರಿಕರು, ಟೈಲರ್ಗಳಂತಹ ಕಾರ್ಮಿಕರಿಗಾಗಿ ರೂ.247 ಕೋಟಿ ಬಿಡುಗಡೆಗೊಳಿಸಿದ್ದಾರೆ. ಇದರ ಜೊತೆಗೆ ಸಂಕಷ್ಟಕ್ಕೆ ಸಿಲುಕಿರುವ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ತಲಾ ರೂ.10 ಸಾವಿರ ನೀಡಿದ್ದಾರೆ. ಈಗ ಆಂಧ್ರಪ್ರದೇಶ ಸರ್ಕಾರವು ಹೊಸದಾಗಿ 1,068 ಆಂಬುಲೆನ್ಸ್ಗಳನ್ನು ನಿಯೋಜಿಸಿದೆ.
ಪುಣೆ ಮೂಲದ ಕಂಪನಿಯಿಂದ ಈ ಆಂಬ್ಯುಲೆನ್ಸ್ ಗಳನ್ನು ಪಡೆಯಲಾಗಿದೆ. 1,068 ಆಂಬುಲೆನ್ಸ್ಗಳ ಪೈಕಿ 130 ಆಂಬುಲೆನ್ಸ್ಗಳಲ್ಲಿ ಸುಧಾರಿತ ಜೀವ ಉಳಿಸುವ ಸಾಧನಗಳನ್ನು ಅಳವಡಿಸಲಾಗಿದೆ. 282 ಆಂಬ್ಯುಲೆನ್ಸ್ ಗಳು ಭದ್ರತಾ ಸೌಲಭ್ಯಗಳನ್ನು ಹೊಂದಿವೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಇನ್ನುಳಿದ 656 ಯುನಿಟ್ ಗಳನ್ನು ಗ್ರಾಮೀಣ ಜನರ ಸೇವೆಗಾಗಿ ನಿಯೋಜಿಸಲಾಗಿದೆ. ಈ ಎಲ್ಲಾ ಆಂಬ್ಯುಲೆನ್ಸ್ ಗಳನ್ನು ಬಣ್ಣ, ಹೆಚ್ಚುವರಿ ಫೀಚರ್ ಹಾಗೂ ಡಯಲ್ ನಂಬರ್ ಗಳಿಂದ (104 ಮತ್ತು 108) ಗುರುತಿಸಲಾಗಿದೆ.
ಇಡೀ ದೇಶವು ಮಾರಕ ಕರೋನಾ ವೈರಸ್ ಕಪಿಮುಷ್ಟಿಯಲ್ಲಿ ಸಿಲುಕಿದೆ. ಈ ಪರಿಸ್ಥಿತಿಯಲ್ಲಿ ಆಂಧ್ರ ಪ್ರದೇಶ ಸರ್ಕಾರವು ಜನರನ್ನು ರಕ್ಷಿಸಲು ಯಾವುದೇ ತೊಂದರೆಯುಂಟಾಗದಂತೆ ನೋಡಿಕೊಳ್ಳಲು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಆಂಬುಲೆನ್ಸ್ಗಳನ್ನು ನಿಯೋಜಿಸಿದೆ.
MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್
ಗಮನಿಸಬೇಕಾದ ಸಂಗತಿಯೆಂದರೆ ಭಾರತದ ಬೇರೆ ಯಾವುದೇ ರಾಜ್ಯವು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಆಂಬುಲೆನ್ಸ್ಗಳನ್ನು ಹೊಂದಿಲ್ಲ. ಆಂಧ್ರ ಪ್ರದೇಶದ ಈ ನಡೆ ಇಡೀ ದೇಶದ ಗಮನ ಸೆಳೆದಿದೆ.
ಜಗನ್ ಮೋಹನ್ ರೆಡ್ಡಿರವರು ಅಧಿಕಾರ ವಹಿಸಿಕೊಂಡಾಗ 104 ಹಾಗೂ 108 ಸಂಖ್ಯೆಯ ಆಂಬ್ಯುಲೆನ್ಸ್ ಸೇವೆಯನ್ನು ರಾಜ್ಯದಲ್ಲಿ ತರಲು ಆದೇಶ ನೀಡಿದ್ದರು. ಕರೋನಾ ವೈರಸ್ ನಿಂದ ಉಂಟಾಗಿರುವ ಈ ಸಂಕಷ್ಟದ ಸಂದರ್ಭದಲ್ಲಿ 104 ಹಾಗೂ 108 ಸಂಖ್ಯೆಗಳನ್ನು ಹೊಂದಿರುವ ಆಂಬುಲೆನ್ಸ್ಗಳನ್ನು ನಿಯೋಜಿಸಲಾಗಿದೆ.
MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!
ಈ ಬಗ್ಗೆ ಮಾತನಾಡಿರುವ ಜಗನ್ ಮೋಹನ್ ರೆಡ್ಡಿರವರು ಸಾರ್ವಜನಿಕರು ತುರ್ತು ಪರಿಸ್ಥಿತಿಯಲ್ಲಿ ಕರೆ ಮಾಡಿದರೆ, ನಗರ ಪ್ರದೇಶಗಳಲ್ಲಿ 15 ನಿಮಿಷಗಳಲ್ಲಿ, ಗ್ರಾಮೀಣ ಪ್ರದೇಶದಲ್ಲಿ 20 ನಿಮಿಷಗಳಲ್ಲಿ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ 30 ನಿಮಿಷಗಳಲ್ಲಿ ಆಂಬುಲೆನ್ಸ್ಗಳು ಸ್ಥಳಕ್ಕೆ ಧಾವಿಸುತ್ತವೆ ಎಂದು ಹೇಳಿದ್ದಾರೆ.
ಜುಲೈ 1ರಂದು ವಿಜಯವಾಡದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ, ಜಗನ್ ಮೋಹನ್ ರೆಡ್ಡಿರವರು ಈ ಆಂಬ್ಯುಲೆನ್ಸ್ ಗಳಿಗೆ ಚಾಲನೆ ನೀಡಿದ್ದಾರೆ. ಈ ಮೂಲಕ ಕರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ತಮ್ಮದೇ ಆದ ರೀತಿಯಲ್ಲಿ ಕೈಜೋಡಿಸಿದ್ದಾರೆ.