Just In
- 1 hr ago
ಭಾರತದಲ್ಲಿ ಶೀಘ್ರವೇ ಸಿಗಲಿದೆ ಟಾಟಾ ಆಲ್ಟ್ರೊಜ್ ರೇಸರ್: ಎಲ್ಲರೂ ಮೆಚ್ಚುವ ವೈಶಿಷ್ಟ್ಯಗಳಿವೆ..!
- 14 hrs ago
ಹೊಸ ಇನೋವಾ ಹೈಕ್ರಾಸ್ ಬಲದೊಂದಿಗೆ ಮಾರಾಟದಲ್ಲಿ ದಾಖಲೆ ಮಟ್ಟದ ಬೆಳವಣಿಗೆ ಸಾಧಿಸಿದ ಟೊಯೊಟಾ
- 15 hrs ago
ದ್ವಿಚಕ್ರ ವಾಹನ ಖರೀದಿಸುತ್ತಿದ್ದೀರಾ? ಇದೇ ತಿಂಗಳ ಪ್ರಮುಖ ಬಿಡುಗಡೆಗಳನ್ನು ಒಮ್ಮೆ ಪರಿಶೀಲಿಸಿ
- 15 hrs ago
ಸಪ್ತ ಸಾಗರದಾಚೆಯೂ ಮಹೀಂದ್ರಾ ಕಾರಿಗೆ ಬೇಡಿಕೆ... ನೇಪಾಳದಲ್ಲಿ ಎಕ್ಸ್ಯುವಿ700 ಬಿಡುಗಡೆ
Don't Miss!
- News
ರಾಜ್ಯದಲ್ಲಿ ರೈಲು ಯೋಜನೆಗಳಿಗೆ ಹೆಚ್ಚಿನ ಹಣದ ಭರವಸೆ
- Finance
UPI Transactions in January 2023 : ಜನವರಿಯಲ್ಲಿ 8 ಬಿಲಿಯನ್ ಯುಪಿಐ ವಹಿವಾಟು, ಎಷ್ಟು ಮೌಲ್ಯ?
- Movies
ಬರಲಿದೆ 'ನಂಗನ್ಸಿದ್ದು 2'; ಈ ಬಾರಿ ರಾಹುಲ್ ಡಿಟೊ ಹಾಡಿನ ಬಾಣ ಯಾರ ಕಡೆ?
- Sports
ಅಹ್ಮದಾಬಾದ್ನಲ್ಲಿ ಶುಬ್ಮನ್ ಅಬ್ಬರ: ಅಪರೂಪದ ಸಾಧನೆ ಮಾಡಿದ ಗಿಲ್
- Lifestyle
Horoscope Today 2 Feb 2023: ಗುರುವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Technology
ChatGPT ಸಂಸ್ಥೆಯಿಂದ ಮತ್ತೆ ಹೊಸ ಟೂಲ್; ಇದು ಟೆಕ್ ಲೋಕದ ಅಚ್ಚರಿ!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಒಂದೆರಡು ದಿನಗಳಲ್ಲಿ ನಿಗದಿಯಾಗಲಿದೆ ಆ್ಯಪ್ ಆಧಾರಿತ ಆಟೋ ಸೇವೆ ದರ
ಬೆಂಗಳೂರು: ಆ್ಯಪ್ ಆಧಾರಿತ ಆಟೋ ಸೇವೆಗೆ ದರ ನಿಗದಿಪಡಿಸುವ ಸಂಬಂಧ ರಾಜ್ಯ ಸರ್ಕಾರ ಒಂದೆರಡು ದಿನಗಳಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆ ಒದಗಿಸುವ ಉಬರ್, ಓಲಾದಂತಹ ಕಂಪನಿಗಳು ತಮ್ಮ ಪ್ಲಾಟ್ಫಾರಂ ಮೂಲಕ ಆಟೋ ಬುಕ್ ಮಾಡುವ ಬಳಕೆದಾರರಿಂದ ಎಷ್ಟು ಪ್ರಯಾಣ ಶುಲ್ಕ ಪಡೆಯಬೇಕೆಂಬುದರ ಬಗ್ಗೆ ಸಾರಿಗೆ ಇಲಾಖೆಯು ಶುಕ್ರವಾರ ಹೈಕೋರ್ಟ್ಗೆ ಅಫಿಡವಿಟ್ ಸಲ್ಲಿಸಬೇಕಾಗಿದೆ.
ಬೆಂಗಳೂರಿನಲ್ಲಿ ಆಟೋ ಸೇವೆ ಸ್ಥಗಿತಗೊಳಿಸುವಂತೆ ಅ.6ರಂದು ಸಾರಿಗೆ ಇಲಾಖೆ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ, ಉಬರ್, ಓಲಾ ಸಲ್ಲಿಸಿದ ರಿಟ್ ಅರ್ಜಿಗಳನ್ನು ಕೋರ್ಟ್ ವಿಚಾರಣೆ ನಡೆಸುತ್ತಿದೆ. ಈ ಕಂಪನಿಗಳು ಕನಿಷ್ಠ ದರವನ್ನು 100 ರೂ.ವರೆಗೆ ವಿಧಿಸುತ್ತಿವೆ. ಆದರೆ, ಸರ್ಕಾರವು ಮೂಲ ದರವನ್ನು 30 ರೂ.ಗೆ ಮಿತಿಗೊಳಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಜಿಎಸ್ಟಿ ಹೊರತುಪಡಿಸಿ, ಸೇವಾ ಶುಲ್ಕವನ್ನು 10%ಗೆ ಮಿತಿಗೊಳಿಸಿ, ಅಕ್ಟೋಬರ್ 14ರಂದು ಹೈಕೋರ್ಟ್ ನೀಡಿದ ಮಧ್ಯಂತರ ಆದೇಶದನ್ವಯ ಈ ಪ್ಲಾಟ್ಫಾರಂಗಳು ಆಟೋ ಸೇವೆಗೆ ಬುಕಿಂಗ್ ಸ್ವೀಕರಿಸುತ್ತಿವೆ.
ಈ ಪ್ರಕರಣ ಸೋಮವಾರ ನ್ಯಾಯಮೂರ್ತಿ ಸಿಎಂ ಪೂಣಚ್ಚ ಅವರ ಪೀಠದ ಮುಂದೆ ವಿಚಾರಣೆಗೆ ಬರಲಿದೆ. ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರು ಈಗಾಗಲೇ ಸಾರಿಗೆ ಕಾರ್ಯದರ್ಶಿ ಎನ್.ವಿ.ಪ್ರಸಾದ್, ಸಾರಿಗೆ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ ಮತ್ತು ಇತರ ಹಿರಿಯ ಸಾರಿಗೆ ಅಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ನ್ಯಾಯಾಲಯದ ಮುಂದೆ ಸರ್ಕಾರದ ನಿಲುವನ್ನು ತಿಳಿಸುವ ಮೊದಲು ಹಿರಿಯ ಅಧಿಕಾರಿಗಳು ಇಂದು ಅಥವಾ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಾಹಿತಿ ನೀಡುವ ಸಾಧ್ಯತೆ ಇದೆ.
ಈ ಪ್ಲಾಟ್ಫಾರ್ಮ್ಗಳಲ್ಲಿ ಪ್ರತಿದಿನ ಸಾವಿರಾರು ಮಂದಿ ಪ್ರಯಾಣಕ್ಕಾಗಿ ಆಟೋಗಳನ್ನು ಬುಕ್ ಮಾಡುತ್ತಿರುವುದರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತೀರ್ಮಾನ ನಿರ್ಣಾಯಕವಾಗಿರುತ್ತದೆ. ಅವರ ಯಾವುದೇ ನಿರ್ಧಾರ ಹೆಚ್ಚಿನ ಸಂಖ್ಯೆಯ ಬೆಂಗಳೂರಿಗರ ಮೇಲೆ ಪರಿಣಾಮ ಬೀರುವುದು ಖಚಿತ. ಕಳೆದ ತಿಂಗಳು, ಹಿರಿಯ ಸಾರಿಗೆ ಅಧಿಕಾರಿಗಳು ಆಯೋಜಿಸಿದ್ದ ಸಭೆಯಲ್ಲಿ, ಜಿಎಸ್ಟಿಯನ್ನು ಹೊರತುಪಡಿಸಿ, ಆಟೋ ದರಗಳ ಮೇಲೆ 20% ಸೇವಾ ಶುಲ್ಕ ವಿಧಿಸುತ್ತೇವೆ ಎಂದು ಪ್ಲಾಟ್ಫಾರಂಗಳು ಕೋರಿದ್ದರು ಎಂದು ವರದಿಯಾಗಿದೆ.
ಅಕ್ಟೋಬರ್ 14ರಂದು ನ್ಯಾಯಮೂರ್ತಿ ಎಂ.ಜಿ.ಶುಕುರೆ ಕಮಲ್ ಅವರು, ನೀಡಿದ್ದ ಮಧ್ಯಂತರ ಆದೇಶ ಶುಲ್ಕವನ್ನೇ ವಿಧಿಸಲು ರಾಜ್ಯ ಸಾರಿಗೆ ಇಲಾಖೆ ಅಧಿಕಾರಿಗಳು ಹೆಚ್ಚಿನ ಒಲವನ್ನು ಹೊಂದಿದ್ದಾರೆ ಎಂದು ಹೇಳಲಾಗಿದೆ. ಇದರಿಂದ ಗ್ರಾಹಕರ ಹಿತಾಸಕ್ತಿ, ವ್ಯವಹಾರ ನಡೆಸುವವರಿಗೂ ಅನುಕೂಲವಾಗಲಿದೆ ಎಂದು ಅವರ ಅಭಿಪ್ರಾಯವಾಗದೆ. ಆದರೆ, ಈ ಸಂಬಂಧ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರದ್ದೆ ಆಗಿದ್ದು, ಸದ್ಯ ಎಲ್ಲರ ಕುತೂಹಲ ಅವರ ಮೇಲೆ ನೆಟ್ಟಿದೆ.
ನವೆಂಬರ್ 1ರಂದು ಉಬರ್ ಬಿಡುಗಡೆಗೊಳಿಸಿದ್ದ ತನ್ನ ಹೇಳಿಕೆಯಲ್ಲಿ, 'ಪ್ರಸ್ತುತ, ಬೆಂಗಳೂರಿನಲ್ಲಿ ನಮ್ಮ ಕಮಿಷನ್ ಸಂಗ್ರಹಿಸುವ ದರವನ್ನು 10%ಗೆ ಸೀಮಿತಗೊಳಿಸಲಾಗಿದೆ. ಇದು ಆರ್ಥಿಕವಾಗಿ ಸಮರ್ಥನೀಯವಲ್ಲ. ನಮ್ಮ ವೆಚ್ಚಗಳನ್ನು ಕಮಿಷನ್ ಮೂಲಕ ಭರಿಸಲಾಗದಿದ್ದರೆ, ಚಾಲಕರು ಮತ್ತು ಪ್ರಯಾಣಿಕರ ಮೇಲೆ ಪರಿಣಾಮ ಬೀರಲಿದ್ದು, ವೆಚ್ಚವನ್ನು ಸರಿದೂಗಿಸಲು ಬೇರೆ ಮಾರ್ಗ ಕಂಡುಕೊಳ್ಳಬೇಕಾಗುತ್ತದೆ. ಅಂದರೆ, ಬೆಂಗಳೂರಿನ ಆಯ್ದ ಭಾಗಗಳಿಗೆ ಉಬರ್ ಆಟೋವನ್ನು ಸೀಮಿತಗೊಳಿಸುವ ಕಠಿಣ ನಿರ್ಧಾರವನ್ನು ನಾವು ಮಾಡಬೇಕಾಗುತ್ತದೆ' ಎಂದು ಹೇಳಿತ್ತು.
ಅರ್ಜಿಗಳ ವಿಚಾರಣೆ ವೇಳೆ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ.ನಾವದಗಿ ಹಾಜರಾಗಿ, ದರ ನಿಗದಿ ವಿಚಾರ ಕುರಿತು ಸಂಬಂಧಪಟ್ಟವರಿಂದ ಅಹವಾಲು ಆಹ್ವಾನಿಸಲಾಗಿದೆ. ಈ ಬಗ್ಗೆ ನ.25 ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಹಾಗಾಗಿ, ಸರ್ಕಾರ ತೀರ್ಮಾನ ಕೈಗೊಳ್ಳುವರೆಗೂ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮಧ್ಯಂತರ ಆದೇಶ ನೀಡಬಾರದು ಎಂದು ಕೋರಿದ್ದರು. ಆ ಮನವಿ ಆಲಿಸಿದ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ಪೀಠ ಅರ್ಜಿ ವಿಚಾರಣೆಯನ್ನು ನ.28ಕ್ಕೆ ಮುಂದೂಡಿತ್ತು.