ಹೊಸ ಮೋಟಾರು ವಾಹನ ಕಾಯ್ದೆ ಜಾರಿಗೆ ಬಂದ ನಂತರ ದೊಡ್ಡ ಸಂಖ್ಯೆಯಲ್ಲಿ ದಂಡ ತೆತ್ತ ವಾಹನ ಸವಾರರು

ಭಾರತದಲ್ಲಿ ಪ್ರತಿ ವರ್ಷ ಸುಮಾರು 1.5 ಲಕ್ಷ ಜನರು ರಸ್ತೆ ಅಪಘಾತಗಳಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ವಾಹನ ಚಾಲನೆ ಮಾಡುವಾಗ ತೋರುವ ನಿರ್ಲಕ್ಷ್ಯವೇ ಹೆಚ್ಚಿನ ಸಂಖ್ಯೆಯ ಅಪಘಾತಗಳಿಗೆ ಪ್ರಮುಖ ಕಾರಣ. ರಸ್ತೆ ಅಪಘಾತಗಳಿಗೆ ಕಡಿವಾಣ ಹಾಕಲು 2019ರ ಸೆಪ್ಟೆಂಬರ್ ತಿಂಗಳಿನಲ್ಲಿ ಕೇಂದ್ರ ಸರ್ಕಾರವು ಹಳೆ ಮೋಟಾರು ವಾಹನ ಕಾಯ್ದೆಯನ್ನು ತಿದ್ದುಪಡಿ ಮಾಡಿ ಹೊಸ ಕಾಯ್ದೆಯನ್ನು ಜಾರಿಗೆ ತಂದಿತು.

ಹೊಸ ಮೋಟಾರು ವಾಹನ ಕಾಯ್ದೆ ಜಾರಿಗೆ ಬಂದ ನಂತರ ದೊಡ್ಡ ಸಂಖ್ಯೆಯಲ್ಲಿ ದಂಡ ತೆತ್ತ ವಾಹನ ಸವಾರರು

ಹೊಸ ಮೋಟಾರು ವಾಹನ ಕಾಯ್ದೆಯನ್ವಯ ಸಂಚಾರ ನಿಯಮ ಉಲ್ಲಂಘಿಸುವ ವಾಹನ ಸವಾರರಿಗೆ ಭಾರೀ ಪ್ರಮಾಣದಲ್ಲಿ ದಂಡ ವಿಧಿಸಲಾಗುತ್ತದೆ. ವಾಹನ ಸವಾರರಲ್ಲಿ ಶಿಸ್ತು ಮೂಡಿಸಿ, ಸಂಚಾರ ವ್ಯವಸ್ಥೆಯನ್ನು ಸುಧಾರಿಸಲು ಈ ಹೊಸ ಮೋಟಾರು ವಾಹನ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಈ ಕಾಯ್ದೆ ಜಾರಿಗೆ ಬಂದು 27 ತಿಂಗಳು ಕಳೆದಿದೆ. ಈ 27 ತಿಂಗಳಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕೆ ಸುಮಾರು 8 ಕೋಟಿ ಚಲನ್‌ಗಳನ್ನು ವಿಧಿಸಲಾಗಿದೆ.

ಹೊಸ ಮೋಟಾರು ವಾಹನ ಕಾಯ್ದೆ ಜಾರಿಗೆ ಬಂದ ನಂತರ ದೊಡ್ಡ ಸಂಖ್ಯೆಯಲ್ಲಿ ದಂಡ ತೆತ್ತ ವಾಹನ ಸವಾರರು

ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ರವರು ಗುರುವಾರ ಸಂಸತ್ತಿನಲ್ಲಿ ಮಾಹಿತಿ ನೀಡಿದ್ದಾರೆ. ಅವರು ತಮ್ಮ ಭಾಷಣದಲ್ಲಿ ಮೋಟಾರು ವಾಹನ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೊಳಿಸಿದ ನಂತರ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಸುಮಾರು 8 ಕೋಟಿ ಚಲನ್‌ಗಳನ್ನು ನೀಡಲಾಗಿದೆ ಎಂದು ಹೇಳಿದರು. ಅಂದ ಹಾಗೆ ಕೇಂದ್ರ ಸರ್ಕಾರವು 2019ರ ಸೆಪ್ಟೆಂಬರ್ 1ರಂದು ಹೊಸ ಮೋಟಾರು ವಾಹನ ಕಾಯ್ದೆಯನ್ನು ಜಾರಿಗೆ ತಂದಿತ್ತು.

ಹೊಸ ಮೋಟಾರು ವಾಹನ ಕಾಯ್ದೆ ಜಾರಿಗೆ ಬಂದ ನಂತರ ದೊಡ್ಡ ಸಂಖ್ಯೆಯಲ್ಲಿ ದಂಡ ತೆತ್ತ ವಾಹನ ಸವಾರರು

ಸದನವನ್ನು ಉದ್ದೇಶಿಸಿ ಮಾತನಾಡಿದ ನಿತಿನ್ ಗಡ್ಕರಿ, ಈ ಅವಧಿಯಲ್ಲಿ 7.67 ಕೋಟಿಗೂ ಹೆಚ್ಚು ಸಂಚಾರ ಚಲನ್‌ಗಳನ್ನು ನೀಡಲಾಗಿದೆ ಎಂದು ಹೇಳಿದರು. ಈ ಪ್ರಮಾಣವು ಹೊಸ ಕಾಯಿದೆ ಜಾರಿಗೂ ಮುನ್ನ 1.96 ಕೋಟಿಗಳಾಗಿತ್ತು. ಟ್ರಾಫಿಕ್ ಚಲನ್ ಗಳ ಸಂಖ್ಯೆ 291% ನಷ್ಟು ಹೆಚ್ಚಾಗಿದೆ ಎಂದು ಅವರು ಮಾಹಿತಿ ನೀಡಿದರು.

ಹೊಸ ಮೋಟಾರು ವಾಹನ ಕಾಯ್ದೆ ಜಾರಿಗೆ ಬಂದ ನಂತರ ದೊಡ್ಡ ಸಂಖ್ಯೆಯಲ್ಲಿ ದಂಡ ತೆತ್ತ ವಾಹನ ಸವಾರರು

ಅಪಘಾತ ಪ್ರಮಾಣದಲ್ಲಿ ಇಳಿಕೆ

ಸದನದಲ್ಲಿ ಮಾಹಿತಿ ಹಂಚಿಕೊಂಡ ಸಚಿವ ನಿತಿನ್ ಗಡ್ಕರಿರವರು 2019 ರಲ್ಲಿ 4,49,002 ಗಳಷ್ಟಿದ್ದ ರಸ್ತೆ ಅಪಘಾತಗಳ ಸಂಖ್ಯೆ 2020 ರಲ್ಲಿ 3,66,138 ಕ್ಕೆ ಇಳಿದಿದೆ ಎಂದು ಹೇಳಿದರು. ಅಪಘಾತಗಳ ಸಂಖ್ಯೆ ಕಡಿಮೆಯಾಗುತ್ತಿರುವುದು ರಸ್ತೆ ಸುರಕ್ಷತೆಯ ಸುಧಾರಣೆಯನ್ನು ಸೂಚಿಸುತ್ತದೆ ಎಂದು ಅವರು ಹೇಳಿದರು. ರಸ್ತೆ ಸುರಕ್ಷತೆಯ ಸಮಸ್ಯೆಯನ್ನು ಪರಿಹರಿಸಲು ಶಿಕ್ಷಣ, ಎಂಜಿನಿಯರಿಂಗ್ (ರಸ್ತೆ ಮತ್ತು ವಾಹನ ಎರಡೂ), ಜಾರಿ ಹಾಗೂ ತುರ್ತು ಆರೈಕೆಯ ಆಧಾರದ ಮೇಲೆ ಇಲಾಖೆಯು ಹಲವಾರು ವಿಧಾನಗಳನ್ನು ಅಳವಡಿಸಿಕೊಂಡಿದೆ ಎಂದು ಅವರು ಸಂಸತ್ತಿಗೆ ಮಾಹಿತಿ ನೀಡಿದರು.

ಹೊಸ ಮೋಟಾರು ವಾಹನ ಕಾಯ್ದೆ ಜಾರಿಗೆ ಬಂದ ನಂತರ ದೊಡ್ಡ ಸಂಖ್ಯೆಯಲ್ಲಿ ದಂಡ ತೆತ್ತ ವಾಹನ ಸವಾರರು

ಸಂಚಾರ ನಿಯಮ ಉಲ್ಲಂಘನೆಗೆ ಭಾರಿ ದಂಡ

ಮೋಟಾರು ವಾಹನಗಳ (ತಿದ್ದುಪಡಿ) ಕಾಯಿದೆ 2019 ರ ಪ್ರಕಾರ ಸಂಚಾರ ನಿಯಮ ಉಲ್ಲಂಘಿಸುವವರಿಗೆ 10 ಪಟ್ಟು ಹೆಚ್ಚು ದಂಡ ವಿಧಿಸಲಾಗುತ್ತದೆ. ಹೊಸ ನಿಯಮದ ಪ್ರಕಾರ ದಂಡ ಮೊತ್ತವು ರೂ. 1,000 ಗಳಿಂದ ರೂ. 10,000 ಗಳಿಗೆ ಏರಿಕೆಯಾಗಿದೆ. ಹೆಲ್ಮೆಟ್ ಧರಿಸದಿದ್ದರೆ ವಿಧಿಸಲಾಗುತ್ತಿದ್ದ ದಂಡವನ್ನು ರೂ. 100 ಗಳಿಂದ ರೂ. 1000 ಗಳಿಗೆ ಹೆಚ್ಚಿಸಲಾಗಿದೆ.

ಹೊಸ ಮೋಟಾರು ವಾಹನ ಕಾಯ್ದೆ ಜಾರಿಗೆ ಬಂದ ನಂತರ ದೊಡ್ಡ ಸಂಖ್ಯೆಯಲ್ಲಿ ದಂಡ ತೆತ್ತ ವಾಹನ ಸವಾರರು

ಇದೇ ವೇಳೆ ಸಂಚಾರಿ ನಿಯಮವನ್ನು ಹೆಚ್ಚಾಗಿ ಉಲ್ಲಂಘಿಸಿ ಸಿಕ್ಕಿಬಿದ್ದರೆ ಡ್ರೈವಿಂಗ್ ಲೈಸೆನ್ಸ್ ಅನ್ನು ಸಹ ರದ್ದುಗೊಳಿಸಲಾಗುತ್ತದೆ. ಕಾರು ಚಾಲನೆ ಮಾಡುವಾಗ ಸೀಟ್‌ಬೆಲ್ಟ್ ಧರಿಸದಿದ್ದರೆ ಈಗ ರೂ. 1,000 ದಂಡ ವಿಧಿಸಲಾಗುತ್ತದೆ. ಅದೇ ವೇಳೆ ಅತಿ ವೇಗದಲ್ಲಿ ವಾಹನ ಚಲಾಯಿಸುವವರಿಗೆ ರೂ. 500 ಗಳ ಬದಲು ರೂ. 5000 ಗಳ ದಂಡ ವಿಧಿಸಲಾಗುತ್ತದೆ.

ಹೊಸ ಮೋಟಾರು ವಾಹನ ಕಾಯ್ದೆ ಜಾರಿಗೆ ಬಂದ ನಂತರ ದೊಡ್ಡ ಸಂಖ್ಯೆಯಲ್ಲಿ ದಂಡ ತೆತ್ತ ವಾಹನ ಸವಾರರು

ಹೊಸ ನಿಯಮಗಳ ಪ್ರಕಾರ, ಮದ್ಯಪಾನ ಮಾಡಿ ವಾಹನ ಚಲಾಯಿಸುವ ಪ್ರಕರಣಗಳನ್ನು ಬಿಗಿಗೊಳಿಸಲಾಗುತ್ತಿದೆ. ಡ್ರಿಂಕ್ ಅಂಡ್ ಡ್ರೈವ್ ಪ್ರಕರಣಗಳಲ್ಲಿ ಸಿಕ್ಕಿ ಬೀಳುವವರಿಗೆ ರೂ. 10,000 ದಂಡ ವಿಧಿಸಲಾಗುತ್ತದೆ. ಡ್ರೈವಿಂಗ್ ಲೈಸೆನ್ಸ್ ಅಥವಾ ಮಾನ್ಯ ಪರವಾನಗಿ ಇಲ್ಲದೆ ಸಿಕ್ಕಿಬಿದ್ದವರಿಗೆ ರೂ. 5,000 ದಂಡ ವಿಧಿಸಲಾಗುತ್ತದೆ. ತಿದ್ದುಪಡಿಯಾದ ಮೋಟಾರು ವಾಹನ ಕಾಯ್ದೆಯು ಸಂಚಾರ ನಿಯಮಗಳನ್ನು ಬಲಪಡಿಸಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಹೊಸ ಮೋಟಾರು ವಾಹನ ಕಾಯ್ದೆ ಜಾರಿಗೆ ಬಂದ ನಂತರ ದೊಡ್ಡ ಸಂಖ್ಯೆಯಲ್ಲಿ ದಂಡ ತೆತ್ತ ವಾಹನ ಸವಾರರು

ಹೊಸ ಯೋಜನೆ ಆರಂಭಿಸಿದ ಕೇಂದ್ರ ಸರ್ಕಾರ

ರಸ್ತೆ ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯುವವರಿಗೆ ಕೇಂದ್ರ ಸರ್ಕಾರವು ಉತ್ತಮ ಸಮರಿಟನ್ ಯೋಜನೆಯನ್ನು ಜಾರಿಗೆ ತಂದಿದೆ. ಇದರ ಅಡಿಯಲ್ಲಿ ರಸ್ತೆ ಅಪಘಾತದಲ್ಲಿ ಸಂತ್ರಸ್ತರಿಗೆ ಸಹಾಯ ಮಾಡುವವರನ್ನು ಗುರುತಿಸಿ ಅವರಿಗೆ ನಗದು ಬಹುಮಾನ ನೀಡಲಾಗುವುದು. ಉತ್ತಮ ಸಮರಿಟನ್ ಯೋಜನೆಯಡಿ, ರಸ್ತೆ ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ದು ಜೀವ ಉಳಿಸಿದವರಿಗೆ ಸರ್ಕಾರವು ರೂ. 5,000 ನಗದು ಬಹುಮಾನ ನೀಡುತ್ತದೆ.

ಹೊಸ ಮೋಟಾರು ವಾಹನ ಕಾಯ್ದೆ ಜಾರಿಗೆ ಬಂದ ನಂತರ ದೊಡ್ಡ ಸಂಖ್ಯೆಯಲ್ಲಿ ದಂಡ ತೆತ್ತ ವಾಹನ ಸವಾರರು

ಜೊತೆಗೆ ಉತ್ತಮ ಸಮರಿಟನ್ ತನ್ನ ಹೆಸರನ್ನು ಕಾನೂನು ಜಾರಿ ಸಂಸ್ಥೆಗಳಿಗೆ ಬಹಿರಂಗಪಡಿಸದಿರಲು ಮುಕ್ತವಾಗಿರುತ್ತಾರೆ. ಅಪಘಾತದ ನಂತರ ಕಾನೂನು ಪ್ರಕ್ರಿಯೆ ಹಾಗೂ ತನಿಖೆಯಲ್ಲಿ ಭಾಗವಹಿಸದಿರಲು ಅವರಿಗೆ ಆಯ್ಕೆ ನೀಡಲಾಗಿದೆ. ಇದನ್ನು ಅಧಿಕೃತವಾಗಿ ಕಾನೂನಿನ ಭಾಗವಾಗಿ ಮಾಡಲು, ಕೇಂದ್ರ ಸರ್ಕಾರವು ಮೋಟಾರು ವಾಹನಗಳ (ತಿದ್ದುಪಡಿ) ಕಾಯಿದೆ, 2019 ರಲ್ಲಿ ಸೆಕ್ಷನ್ 134A ಅನ್ನು ಸಂಯೋಜಿಸಿದೆ.

ಹೊಸ ಮೋಟಾರು ವಾಹನ ಕಾಯ್ದೆ ಜಾರಿಗೆ ಬಂದ ನಂತರ ದೊಡ್ಡ ಸಂಖ್ಯೆಯಲ್ಲಿ ದಂಡ ತೆತ್ತ ವಾಹನ ಸವಾರರು

ಈ ಸೆಕ್ಷನ್ ಒಳ್ಳೆಯ ಜನರ ರಕ್ಷಣೆಯೊಂದಿಗೆ ವ್ಯವಹರಿಸುತ್ತದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಇಲಾಖೆಯ ಪ್ರಕಾರ, ಅಪಘಾತ ಸಂಭವಿಸಿದಾಗ ತಕ್ಷಣವೇ ಸಂತ್ರಸ್ತರ ನೆರವಿಗೆ ಧಾವಿಸಿ ಅವರನ್ನು ಗೋಲ್ಡನ್ ಅವರ್'ನೊಳಗೆ ಆಸ್ಪತ್ರೆಗೆ ಸಾಗಿಸುವ ಯಾವುದೇ ವ್ಯಕ್ತಿ ಉತ್ತಮ ಗುಡ್ ಸಮರಿಟನ್ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ.

ಹೊಸ ಮೋಟಾರು ವಾಹನ ಕಾಯ್ದೆ ಜಾರಿಗೆ ಬಂದ ನಂತರ ದೊಡ್ಡ ಸಂಖ್ಯೆಯಲ್ಲಿ ದಂಡ ತೆತ್ತ ವಾಹನ ಸವಾರರು

ಕೆಲ ದಿನಗಳ ಹಿಂದಷ್ಟೇ ನಿತಿನ್ ಗಡ್ಕರಿರವರು ಎಲೆಕ್ಟ್ರಿಕ್ ವಾಹನಗಳಿಗೆ ಬದಲಾಗಲು ಸರ್ಕಾರವು ಜನರನ್ನು ಉತ್ತೇಜಿಸುತ್ತಿದೆ ಎಂದು ಹೇಳಿದ್ದರು. ಇದರ ಜೊತೆಗೆ ಪರ್ಯಾಯ ಇಂಧನಗಳಾದ ಎಥೆನಾಲ್, ಬಯೋ - ಎಲ್‌ಎನ್‌ಜಿ ಹಾಗೂ ಹಸಿರು ಹೈಡ್ರೋಜನ್ ವಾಹನಗಳ ಬಳಕೆಯನ್ನು ಸಹ ಸರ್ಕಾರವು ಉತ್ತೇಜಿಸುತ್ತದೆ ಎಂದು ಅವರು ಹೇಳಿದ್ದರು.

ಹೊಸ ಮೋಟಾರು ವಾಹನ ಕಾಯ್ದೆ ಜಾರಿಗೆ ಬಂದ ನಂತರ ದೊಡ್ಡ ಸಂಖ್ಯೆಯಲ್ಲಿ ದಂಡ ತೆತ್ತ ವಾಹನ ಸವಾರರು

ಆದರೆ ಈ ಕಾರಣಕ್ಕೆ ಐ‌ಸಿ‌ಇ (ಇಂಟರ್ನಲ್ ಕಂಬಸ್ಜನ್ ಎಂಜಿನ್) ವಾಹನಗಳ ನೋಂದಣಿಯನ್ನು ನಿಲ್ಲಿಸುವುದಿಲ್ಲವೆಂದು ಅವರು ಸ್ಪಷ್ಟನೆ ನೀಡಿದ್ದಾರೆ. ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ (ಐಸಿಸಿ) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಅವರು ವಾಯುಯಾನ ಇಂಧನದಲ್ಲಿ 50% ನಷ್ಟು ಎಥೆನಾಲ್ ಅನ್ನು ಬಳಸಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.

ಹೊಸ ಮೋಟಾರು ವಾಹನ ಕಾಯ್ದೆ ಜಾರಿಗೆ ಬಂದ ನಂತರ ದೊಡ್ಡ ಸಂಖ್ಯೆಯಲ್ಲಿ ದಂಡ ತೆತ್ತ ವಾಹನ ಸವಾರರು

ಜನರಿಂದ ಉತ್ತಮ ಸ್ವಾಗತ ಸಿಗುತ್ತಿರುವುದರಿಂದ ಎಲೆಕ್ಟ್ರಿಕ್ ವಾಹನಗಳ ಮಾರಾಟ ಹೆಚ್ಚುತ್ತಿದೆ. 250 ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ ಕಂಪನಿಗಳು ಎಲೆಕ್ಟ್ರಿಕ್ವಾಹನಗಳ ಅಭಿವೃದ್ಧಿ ಕಾರ್ಯದಲ್ಲಿ ತೊಡಗಿಸಿಕೊಂಡಿವೆ. ಇದರಿಂದ ಎಲೆಕ್ಟ್ರಿಕ್ ವಾಹನಗಳ ಬೆಲೆ ಕಡಿಮೆಯಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.

ಗಮನಿಸಿ: ಈ ಲೇಖನದಲ್ಲಿರುವ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Around 8 crore challan issued after implementation of new motor vehicles act details
Story first published: Saturday, December 4, 2021, 10:33 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X