Just In
- 40 min ago ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- 44 min ago 'ಬಾಹುಬಲಿ' ಎಸ್ಯುವಿ ಪರಾಕ್ರಮ: ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ವಿಶೇಷತೆಗಳೇನು?
- 45 min ago Honda: ಭಾರತ ನಿರ್ಮಿಸಿದ ಹೋಂಡಾ ಕಾರಿಗೆ ಮುಗಿಬಿದ್ದ ಜಪಾನ್ ಜನ!
- 56 min ago ಮತ್ತೆ ಅಖಾಡಕ್ಕೆ ಅಮೇರಿಕನ್ ಆಫ್ರೋಡ್ ಕಿಂಗ್: 2024 ಜೀಪ್ ರಾಂಗ್ಲರ್ ಫೇಸ್ಲಿಫ್ಟ್ ರಿವ್ಯೂ!
Don't Miss!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Movies 'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಡ್ಡ ದಾರಿ ಮೂಲಕ ಹಣ ಸಂಪಾದನೆಗೆ ಯತ್ನ, ಅಂದರ್ ಆದ ಆಡಿ ಕಾರು ಮಾಲೀಕ
ಜನರು ಶ್ರೀಮಂತರಾಗಲು ಬಯಸುತ್ತಾರೆ. ಹಣ ಸಂಪಾದಿಸಲು ಹಗಲು ರಾತ್ರಿ ಕಷ್ಟ ಪಡುತ್ತಾರೆ. ಕೆಲವರು ಕಠಿಣ ಪರಿಶ್ರಮದ ಮೂಲಕ ಗುರಿಯನ್ನು ತಲುಪಿದರೆ, ಇನ್ನೂ ಕೆಲವರು ಅಡ್ಡ ದಾರಿಗಳ ಮೂಲಕ ಶ್ರೀಮಂತರಾಗುತ್ತಾರೆ.
ಲಂಚ ಪಡೆದೋ, ಕಳ್ಳತನ ಇಲ್ಲವೇ ದರೋಡೆ ಮಾಡಿಯೋ ಇಲ್ಲವೇ ಸಮಾಜ ದ್ರೋಹಿ ಕೆಲಸಗಳಂತಹ ಅಡ್ಡ ದಾರಿಗಳ ಮೂಲಕ ಹಣ ಸಂಪಾದನೆಗೆ ಇಳಿಯುತ್ತಾರೆ. ಇದೇ ರೀತಿಯ ಘಟನೆಯೊಂದು ಉತ್ತರ ಪ್ರದೇಶದ ಮೀರತ್ನಲ್ಲಿ ನಡೆದಿದೆ.
ಹರ್ಮನ್ ಸಿಂಗ್ ಎಂಬಾತ ತನ್ನ ದುಬಾರಿ ಬೆಲೆಯ ಆಡಿ ಎ 4 ಕಾರು ಕಳ್ಳತನವಾಗಿದೆ ಎಂದು ಪೊಲೀಸರಿಗೆ ದೂರು ನೀಡಿದ್ದ. ತನ್ನ ಕಾರನ್ನು ಒಎಲ್ಎಕ್ಸ್ ಸೈಟಿನಲ್ಲಿ ಮಾರಾಟ ಮಾಡಲು ಜಾಹೀರಾತು ನೀಡಿದ್ದೆ. ಕಾರು ನೋಡಲು ಬಂದ ಇಬ್ಬರು ಟೆಸ್ಟ್ ಡ್ರೈವ್ಗೆ ಎಂದು ಹೇಳಿ ಕಾರಿನೊಂದಿಗೆ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದ.
MOSTREAD: ನಟ ವಿಕ್ರಮ್ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್
ದುಬಾರಿ ಬೆಲೆಯ ಕಾರ್ ಆದ ಕಾರಣ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದರು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಪೊಲೀಸರು ಬೇರೆ ಬೇರೆ ಆಯಾಮಗಳಲ್ಲಿ ತಮ್ಮ ತನಿಖೆಯನ್ನು ಚುರುಕುಗೊಳಿಸಿದರು.
ಪೊಲೀಸರ ತನಿಖೆ ತೀವ್ರಗೊಂಡ ನಂತರ ಕಾರಿನ ಮಾಲೀಕ ಹರ್ಮನ್ ಸಿಂಗ್ ಸಿಕ್ಕಿಬಿದ್ದಿದ್ದಾನೆ. ಕಾಣೆಯಾಗಿದೆ ಎಂದು ಹೇಳಲಾಗಿದ್ದ ಕಾರ್ ಅನ್ನು ವಶಕ್ಕೆ ಪಡೆಯಲಾಗಿದೆ. ಹರ್ಮನ್ ಸಿಂಗ್ ತನ್ನ ಕಾರ್ ಅನ್ನು ಅಡಗಿಸಿ ಕಾರು ಕಳುವಾಗಿದೆ ಎಂದು ಸುಳ್ಳು ದೂರು ನೀಡಿದ್ದ.
MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!
ವಿಮಾ ಹಣ ಪಡೆಯುವ ಸಲುವಾಗಿ ಈ ರೀತಿ ಸುಳ್ಳು ದೂರು ನೀಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಪೊಲೀಸರು ಆತನ ವಿರುದ್ಧ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಹರ್ಮನ್ ಸಿಂಗ್ ಹಾಗೂ ಆತನಿಗೆ ನೆರವು ನೀಡಿದ್ದ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ.
ಸಾಮಾನ್ಯವಾಗಿ ವಿಮೆ ಕಂಪನಿಗಳು ಕಳುವಾದ ವಾಹನಗಳಿಗೂ ಪರಿಹಾರವನ್ನು ನೀಡುತ್ತವೆ. ಜೊತೆಗೆ ಅಪಘಾತಗಳಲ್ಲಿ ಗಾಯಗೊಂಡ ವ್ಯಕ್ತಿಗಳಿಗೂ ಪರಿಹಾರ ನೀಡುತ್ತವೆ. ಇದರಿಂದ ವಾಹನ ಮಾಲೀಕರಿಗೆ ಮಾತ್ರವಲ್ಲದೆ ಮೂರನೇ ವ್ಯಕ್ತಿಗೂ ಪರಿಹಾರ ನೀಡಲಾಗುತ್ತದೆ.
MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್
ಇದಕ್ಕಾಗಿ ಭಾರತೀಯ ಮೋಟಾರು ವಾಹನ ಕಾಯ್ದೆಯು ವಾಹನ ವಿಮೆಯನ್ನು ಕಡ್ಡಾಯಗೊಳಿಸಿದೆ.ಕಳುವಾಗಿದೆ ಎಂದು ಹೇಳಲಾದ ಆಡಿ ಎ4 ಹಳೆಯ ತಲೆಮಾರಿನ ಕಾರ್ ಆಗಿದ್ದು, ಸುರಕ್ಷತಾ ಮಾನದಂಡಗಳಿಗೆ ತಕ್ಕಂತೆ ಅಪ್ಡೇಟ್ ಮಾಡಲಾಗದ ಕಾರಣಕ್ಕೆ ಸ್ಥಗಿತಗೊಳಿಸಲಾಗಿದೆ.
ಸದ್ಯಕ್ಕೆ ಹೊಸ ತಲೆಮಾರಿನ ಕಾರ್ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಈ ಕಾರ್ ಅನ್ನು ಆರು ವಿವಿಧ ಮಾದರಿಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಈ ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಂ ದರದಂತೆ ರೂ.41.49 ಲಕ್ಷದಿಂದ ರೂ.46.96 ಲಕ್ಷಗಳಾಗಿದೆ.