Just In
- 30 min ago Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- 1 hr ago ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- 3 hrs ago ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- 3 hrs ago Maruti: ಜಪಾನ್ನಲ್ಲಿ ಗರಿಷ್ಟ ಗುಣಮಟ್ಟದ ಸ್ವಿಫ್ಟ್ ಕಾರು! ಭಾರತಕ್ಕೆ ಮಾತ್ರ ಕಳಪೆ ಗುಣಮಟ್ಟ ಏಕೆ?
Don't Miss!
- News Rain Alert: ಮಳೆ.. ಮಳೆ.. ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಗ್ಯಾರಂಟಿ!
- Lifestyle ಮಳೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ..!
- Movies Lok Sabha Election 2024: ಕನ್ನಡ ತಾರೆಯರು ನಾಳೆಏಪ್ರಿಲ್ 26 ಎಲ್ಲೆಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ?
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೋವಿಡ್ 19: ಸಾಮಾಜಿಕ ಅಂತರ ಕಾಯ್ದಕೊಳ್ಳಲು ಈ ರಿಕ್ಷಾ ಮಾಲೀಕನ ಐಡಿಯಾ ಹೇಗಿದೆ ನೋಡಿ..
ಕರೋನಾ ವೈರಸ್ ಹರಡುವಿಕೆಯನ್ನು ತಡೆಯುವಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸಾಕಷ್ಟು ಸಹಕಾರಿಯಾಗಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಜನದಟ್ಟಣೆಯಾಗುವ ಪ್ರತಿ ಸ್ಥಳದಲ್ಲೂ ಇದೀಗ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೇ ಪ್ರಮುಖ ಸವಾಲಾಗಿದೆ.
ಇಡೀ ವಿಶ್ವವೇ ಇದೀಗ ಮಹಾಮಾರಿ ಕರೋನಾ ವೈರಸ್ ಅಟ್ಟಹಾಸಕ್ಕೆ ನಲುಗಿ ಹೋಗಿದ್ದು, ವೈರಸ್ ತಡೆಗಾಗಿ ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕರೋನಾ ವೈರಸ್ಗೆ ಸೂಕ್ತವಾದ ಔಷಧಿಗಳಿಲ್ಲದಿರುವುದು ಸಾಕಷ್ಟು ಸಾವು-ನೋವಿಗೆ ಕಾರಣವಾಗಿದ್ದು, ವೈರಸ್ ಹರಡುವಿಕೆಯನ್ನು ತಡೆಯುವುದಕ್ಕಾಗಿ ಸದ್ಯಕ್ಕೆ ಸಾಮಾಜಿಕ ಅಂತರ ಕಾಯ್ದಕೊಳ್ಳುತ್ತಿದ್ದಕ್ಕಿಂತ ಮತ್ತೊಂದು ಉತ್ತಮ ಮುಂಜಾಗ್ರತೆ ಇಲ್ಲ ಎನ್ನಬಹುದು.
ತರಕಾರಿ ಖರೀದಿಯಿಂದ ಹಿಡಿದು ಸಾರಿಗೆ ವ್ಯವಸ್ಥೆಯ ಬಳಕೆಯ ತನಕವು ಇದೀಗ ಸಾಮಾಜಿಕ ಅಂತರ ಕಾಯ್ದಕೊಳ್ಳುವುದರ ಬಗೆಗೆ ಹೆಚ್ಚು ಗಮನಹರಿಸಲಾಗುತ್ತಿದ್ದು, ಇಲ್ಲೊಬ್ಬ ಎಲೆಕ್ಟ್ರಿಕ್ ಆಟೋ ರಿಕ್ಷಾ ಮಾಲೀಕ ಕೂಡಾ ಇದೇ ವಿಚಾರವಾಗಿ ಆಟೋ ಉದ್ಯಮದ ದಿಗ್ಗಜ ಆನಂದ್ ಮಹೀಂದ್ರಾ ಅವರ ಮೆಚ್ಚುಗೆಗೆ ಕಾರಣನಾಗಿದ್ದಾನೆ.
MOST READ: ಲಾಕ್ಡೌನ್ ಸಂಕಷ್ಟ- ಆಟೋ ಚಾಲಕರ ಬ್ಯಾಂಕ್ ಖಾತೆ ಸೇರಿದ ರೂ.5 ಸಾವಿರ ಪರಿಹಾರ..!
ಲಾಕ್ಡೌನ್ ತೆರುವು ನಂತರ ಸಾಮಾಜಿಕ ಬದುಕು ಹೇಗಿರಲಿದೆ ಎನ್ನುವುದರ ಕುರಿತು ಮಾತನಾಡಿರುವ ಆನಂದ್ ಮಹೀಂದ್ರಾ ಅವರು, ಸೋಂಕು ನಿಯಂತ್ರಿಸುವಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಬಗೆಗೆ ಆಟೋ ರಿಕ್ಷಾ ಮಾಲೀಕನೊಬ್ಬ ತೆಗೆದುಕೊಂಡಿರುವ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ದೆಹಲಿ ಹೊರವಲಯದಲ್ಲಿ ಆಟೋ ರಿಕ್ಷಾ ಮಾಲೀಕನೊಬ್ಬ ಪ್ರಯಾಣಿಕರ ನಡುವೆ ಸಾಮಾಜಿಕ ಅಂತರ ಕಾಯ್ದಕೊಳ್ಳುವಂತೆ ವಿಶೇಷವಾಗಿ ಒಳವಿನ್ಯಾಸ ಮಾಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಆನಂದ್ ಮಹೀಂದ್ರಾ ಅವರು, ಸಂಕಷ್ಟ ಸಮಯದಲ್ಲೂ ಜನಸಾಮಾನ್ಯರ ಮುಂದಾಲೋಚನೆಗಳನ್ನು ಕೊಂಡಾಡಿದ್ದಾರೆ.
MOST READ: ಲಾಕ್ಡೌನ್ ವೇಳೆ ಕಾರು ಚಾಲನೆ ಮಾಡಿ ಸಿಕ್ಕಿಬಿದ್ದ ಮಹಿಳೆಯಿಂದ ಹೈಡ್ರಾಮಾ..
ಆಟೋ ರಿಕ್ಷಾದಲ್ಲಿ ಸೋಂಕು ಹರಡದಂತೆ ಪ್ರತಿ ಪ್ರಯಾಣಿಕರಿಗೂ ಪ್ರತ್ಯೇಕ ಆಸನದೊಂದಿಗೆ ವ್ಯವಸ್ಥೆ ಮಾಡಿರುವುದಲ್ಲದೆ ಸೋಂಕು ಹರಡದಂತೆ ಪರದೆ ಹಾಕಿರುವುದು ಆನಂದ್ ಮಹೀಂದ್ರಾ ಅವರ ಗಮನಸೆಳೆದಿದೆ.
ಈ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಆನಂದ್ ಮಹೀಂದ್ರಾ ಅವರು ಸೋಂಕು ಹರಡದಂತೆ ರಿಕ್ಷಾ ಮಾಲೀಕ ತೆಗೆದುಕೊಂಡ ಸುರಕ್ಷಾ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಲ್ಲದೆ ತಮ್ಮ ಮುಂದಿನ ಆಟೋ ರಿಕ್ಷಾ ಉತ್ಪನ್ನಗಳಲ್ಲಿ ಇಂತಹ ಮಹತ್ವದ ಬದಲಾವಣೆಯನ್ನು ಮಾಡಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.
MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಭಾರೀ ಪ್ರಮಾಣದ ದೇಣಿಗೆ ನೀಡಿದ ಟಿವಿಎಸ್ ಮೋಟಾರ್
ಹೀಗಾಗಿ ಮಾರಕ ವೈರಸ್ ತಡೆಯಲು ಸಾಮಾಜಿಕ ಅಂತರ ಕಾಯ್ದಕೊಳ್ಳುವುದನ್ನು ಪ್ರತಿಯೊಬ್ಬರು ಕಡ್ಡಾಯವಾಗಿ ಪಾಲನೆ ಮಾಡಲೇಬೇಕಿದ್ದು, ಸಾರ್ವಜನಿಕ ಸಾರಿಗೆ ಬಳಕೆ ಮಾಡುವಾಗ ಇನ್ಮುಂದೆ ಪ್ರತಿ ಪ್ರಯಾಣಿಕರ ಮಧ್ಯದಲ್ಲೂ ಇಂತಿಷ್ಟು ಅಂತರ ಇರಲೇಬೇಕಾದ ಅನಿವಾರ್ಯತೆಗಳಿವೆ.
ಜೊತೆಗೆ ಕರೋನಾ ವೈರಸ್ ಹರಡುವ ಭಯದಿಂದ ಬಹುತೇಕರು ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳ ಬಳಕೆಯನ್ನು ಕಡಿಮೆ ಮಾಡಬಹುದೆನ್ನುವ ವಿಚಾರವು ಟ್ಯಾಕ್ಸಿ ಮಾಲೀಕರಲ್ಲಿ ಆತಂಕ ಉಂಟು ಮಾಡುತ್ತಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರಯಾಣಿಕರಿಗೆ ಸೇವೆ ನೀಡುವುದು ಆರ್ಥಿಕವಾಗಿ ಭಾರೀ ಹೊಡೆತ ನೀಡುವ ಸಾಧ್ಯತೆಗಳಿವೆ.
MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು
ಈ ನಿಟ್ಟಿನಲ್ಲಿ ಆಟೋ ರಿಕ್ಷಾ ಮಾಲೀಕರೊಬ್ಬರು ಕೈಗೊಂಡ ಕಾರ್ಯವು ಸಾರ್ವಜನಿಕರ ಮೆಚ್ಟುಗೆ ಕಾರಣವಾಗಿದ್ದು, ಇತ್ತ ಸಾಮಾಜಿಕ ಅಂತರದೊಂದಿಗೆ ಪ್ರಯಾಣಿಕರಿಗೆ ಸುರಕ್ಷತೆಯ ಸೇವೆ ನೀಡುವಲ್ಲಿ ಇದು ಸಾಕಷ್ಟು ಸಹಕಾರಿಯಾಗಿದೆ.