Just In
- 2 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 3 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 4 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 5 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- Movies ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಇವರು ಪ್ರವೃತ್ತಿಯಲ್ಲಿ ನಟಿ: ಯಾರಿವರು ಗೊತ್ತೇ?
- News Heavy Rain: ಸಕ್ಕರೆ ನಾಡಿನಲ್ಲಿ ವರ್ಷದ ಮೊದಲ ಮಳೆ: ಧರೆಗುರುಳಿದ ಮರ, ಕಮಾನುಗಳು
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Sports PBKS vs MI IPL 2024: ಸೂರ್ಯಕುಮಾರ್ ಶೈನಿಂಗ್; ಪಂಜಾಬ್ಗೆ ಸವಾಲಿನ ಗುರಿ ನೀಡಿದ ಮುಂಬೈ
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಂಡ ಪಾವತಿಸಲು ಹಣವಿಲ್ಲದ ಮಹಿಳೆ ಕೊನೆಗೆ ಮಾಡಿದ್ದು ಹೀಗೆ
ಬೆಳಗಾವಿಯ 30 ವರ್ಷದ ಮಹಿಳೆಯೊಬ್ಬರು ತಮ್ಮ ಮಂಗಳ ಸೂತ್ರವನ್ನು ಪೊಲೀಸರಿಗೆ ನೀಡಿದ ಘಟನೆ ವರದಿಯಾಗಿದೆ. ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕೆ ಅವರಿಗೆ ದಂಡ ವಿಧಿಸಲಾಗಿತ್ತು.
ದಂಡ ಪಾವತಿಸಲು ಹಣ ಇಲ್ಲದ ಕಾರಣ ಅವರು ತಮ್ಮ ಮಂಗಳ ಸೂತ್ರವನ್ನು ಪೊಲೀಸರಿಗೆ ನೀಡಿದ್ದಾರೆ. ಹೀಗೆ ತಮ್ಮ ಮಂಗಳಸೂತ್ರವನ್ನು ಪೊಲೀಸರಿಗೆ ಒಪ್ಪಿಸಿದ ಮಹಿಳೆಯ ಹೆಸರು ಭಾರತಿ ವಿಬುಧಿ. ಅವರು ಹಾಸಿಗೆಯೊಂದನ್ನು ಖರೀದಿಸಲು ತಮ್ಮ ಪತಿಯೊಂದಿಗೆ ಸ್ಕೂಟರಿನಲ್ಲಿ ಮಾರುಕಟ್ಟೆಗೆ ತೆರಳಿದ್ದರು.
ದಂಪತಿ ತಮ್ಮ ಬಳಿ ರೂ.1,800ಗಳನ್ನು ಹೊಂದಿದ್ದರು. ಇದರಲ್ಲಿ ಹಾಸಿಗೆ ಖರೀದಿಸಲು ರೂ.1,700 ಖರ್ಚು ಮಾಡಿದ್ದಾರೆ. ಉಳಿದ 100 ರೂಪಾಯಿಗಳನ್ನು ಉಪಾಹಾರಕ್ಕೆಂದು ಖರ್ಚು ಮಾಡಿದ್ದಾರೆ.
MOSTREAD: ಟ್ರ್ಯಾಕ್ಟರ್ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್ಗಳಿರಲು ಕಾರಣಗಳಿವು
ಮನೆಗೆ ಹಿಂದಿರುವಾಗ ಪೊಲೀಸರು ಸಿಟಿ ಬಸ್ ನಿಲ್ದಾಣದ ಬಳಿ ಅವರ ಸ್ಕೂಟರ್ ಅನ್ನು ನಿಲ್ಲಿಸಿದ್ದಾರೆ. ಹೆಲ್ಮೆಟ್ ಇಲ್ಲದೆ ಪ್ರಯಾಣಿಸಿದ್ದಕ್ಕಾಗಿ ರೂ.500 ದಂಡ ಪಾವತಿಸುವಂತೆ ಪೊಲೀಸರು ಹೇಳಿದ್ದಾರೆ.
ಆದರೆ ತಮ್ಮ ಬಳಿ ಇದ್ದ ಹಣ ಖರ್ಚಾಗಿದೆ ಎಂದು ಭಾರತಿ ವಿಬುಧಿ ಪೊಲೀಸರಿಗೆ ತಿಳಿಸಿದ್ದಾರೆ. ತಮ್ಮನ್ನು ಬಿಟ್ಟು ಬಿಡುವಂತೆ ಮನವಿ ಮಾಡಿಕೊಂಡಿದ್ದಾರೆ. ಆದರೆ ಪೊಲೀಸರು ಹಣ ಪಾವತಿಸಲೇ ಬೇಕೆಂದು ಪಟ್ಟು ಹಿಡಿದ್ದಾರೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್
ಈ ವೇಳೆ ಪೊಲೀಸರು ಹಾಗೂ ಭಾರತಿ ವಿಬುಧಿರವರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವಾಗ್ವಾದವು ಸುಮಾರು 2 ಗಂಟೆಗಳ ಕಾಲ ನಡೆದಿದೆ ಎಂದು ಹೇಳಲಾಗಿದೆ. ಈ ವೇಳೆ ಘಟನಾ ಸ್ಥಳದಲ್ಲಿದ್ದ ಸಾರ್ವಜನಿಕರು ಘಟನೆಯನ್ನು ರೆಕಾರ್ಡ್ ಮಾಡಲು ಮುಂದಾಗಿದ್ದಾರೆ.
ಕೊನೆಗೆ ತನ್ನ ಭಾರತಿ ವಿಬುಧಿ ತಮ್ಮ ಮಂಗಳಸೂತ್ರವನ್ನು ತೆಗೆದು ಪೊಲೀಸ್ ಅಧಿಕಾರಿಗೆ ನೀಡಿದ್ದಾರೆ. ಅದನ್ನು ಮಾರಾಟ ಮಾಡಿ ಸಂಚಾರ ನಿಯಮ ಉಲ್ಲಂಘನೆಯ ದಂಡವನ್ನು ಪಾವತಿಸಿಕೊಳ್ಳುವಂತೆ ಹೇಳಿದ್ದಾರೆ ಎಂದು ವರದಿಯಾಗಿದೆ.
MOSTREAD: ಲಾಕ್ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ
ಈ ವೇಳೆ ಕೆಲವು ಹಿರಿಯ ಪೊಲೀಸ್ ಅಧಿಕಾರಿಗಳು ಆ ರಸ್ತೆಯ ಮೂಲಕ ಹಾದು ಹೋಗುವ ಈ ದೃಶ್ಯವನ್ನು ಗಮನಿಸಿದ್ದಾರೆ. ಹಿರಿಯ ಅಧಿಕಾರಿಗಳು ಮಧ್ಯಪ್ರವೇಶಿಸಿ ಭಾರತಿ ವಿಬುಧಿ ಹಾಗೂ ಅವರ ಪತಿಗೆ ಅಲ್ಲಿಂದ ತೆರಳಲು ಅವಕಾಶ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಪೊಲೀಸರು ವಿಧಿಸುವ ದಂಡದಿಂದ ಸಾರ್ವಜನಿಕರು ಈ ರೀತಿ ನಿರಾಶೆಗೊಳ್ಳುತ್ತಿರುವುದು ಭಾರತದಲ್ಲಿ ಇದೇ ಮೊದಲಲ್ಲ. ಇದಕ್ಕೂ ಮೊದಲು ಹೆಚ್ಚು ದಂಡ ವಿಧಿಸಿದ್ದರು ಎಂಬ ಕಾರಣಕ್ಕೆ ದ್ವಿಚಕ್ರ ವಾಹನ ಸವಾರನೊಬ್ಬ ತನ್ನ ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ್ದ.
ಗಮನಿಸಿ: ಈ ಲೇಖನದಲ್ಲಿ ಸಾಂದರ್ಭಿಕ ಚಿತ್ರಗಳನ್ನು ಬಳಸಲಾಗಿದೆ.