Just In
- 23 min ago ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- 2 hrs ago ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- 2 hrs ago TVS iQube: ಲಕ್ಷಾಂತರ ಭಾರತೀಯರ ನೆಚ್ಚಿನ ಸ್ಕೂಟರ್ನ ಡೌನ್ಪೇಮೆಂಟ್, ಇಎಂಐ, ಲೋನ್ ವಿವರ!
- 2 hrs ago viral video: ಬೆಂಗಳೂರಿನಲ್ಲಿ ಮಾತ್ರ ಸಾಧ್ಯ: ಹೆಣ್ಮಗು.. ಹೆಣ್ಮಗು ಓಹ್.. ಎಂದ ನೆಟ್ಟಿಗರು!
Don't Miss!
- Movies 16 ವರ್ಷಗಳ ಬಳಿಕ ಸೂಪರ್ ಹಿಟ್ ಜೋಡಿ ದರ್ಶನ; 'ಮಹಾನಟಿ'ಗಾಗಿ ರಮೇಶ್ ಅರವಿಂದ್-ಪ್ರೇಮಾ!
- News ವಿರಾಟ್ ಕೊಹ್ಲಿ ಬಳಿ ಬಂದ ಅಭಿಮಾನಿಯನ್ನು ಕಾಲಲ್ಲಿ ತುಳಿದ ಸೆಕ್ಯೂರಿಟಿ ಸಿಬ್ಬಂದಿ-ರೂಪೇಶ್ ರಾಜಣ್ಣ ಹೇಳಿದ್ದೇನು?
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಂಡ ಪಾವತಿಸಲು ಹಣವಿಲ್ಲದ ಮಹಿಳೆ ಕೊನೆಗೆ ಮಾಡಿದ್ದು ಹೀಗೆ
ಬೆಳಗಾವಿಯ 30 ವರ್ಷದ ಮಹಿಳೆಯೊಬ್ಬರು ತಮ್ಮ ಮಂಗಳ ಸೂತ್ರವನ್ನು ಪೊಲೀಸರಿಗೆ ನೀಡಿದ ಘಟನೆ ವರದಿಯಾಗಿದೆ. ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕೆ ಅವರಿಗೆ ದಂಡ ವಿಧಿಸಲಾಗಿತ್ತು.
ದಂಡ ಪಾವತಿಸಲು ಹಣ ಇಲ್ಲದ ಕಾರಣ ಅವರು ತಮ್ಮ ಮಂಗಳ ಸೂತ್ರವನ್ನು ಪೊಲೀಸರಿಗೆ ನೀಡಿದ್ದಾರೆ. ಹೀಗೆ ತಮ್ಮ ಮಂಗಳಸೂತ್ರವನ್ನು ಪೊಲೀಸರಿಗೆ ಒಪ್ಪಿಸಿದ ಮಹಿಳೆಯ ಹೆಸರು ಭಾರತಿ ವಿಬುಧಿ. ಅವರು ಹಾಸಿಗೆಯೊಂದನ್ನು ಖರೀದಿಸಲು ತಮ್ಮ ಪತಿಯೊಂದಿಗೆ ಸ್ಕೂಟರಿನಲ್ಲಿ ಮಾರುಕಟ್ಟೆಗೆ ತೆರಳಿದ್ದರು.
ದಂಪತಿ ತಮ್ಮ ಬಳಿ ರೂ.1,800ಗಳನ್ನು ಹೊಂದಿದ್ದರು. ಇದರಲ್ಲಿ ಹಾಸಿಗೆ ಖರೀದಿಸಲು ರೂ.1,700 ಖರ್ಚು ಮಾಡಿದ್ದಾರೆ. ಉಳಿದ 100 ರೂಪಾಯಿಗಳನ್ನು ಉಪಾಹಾರಕ್ಕೆಂದು ಖರ್ಚು ಮಾಡಿದ್ದಾರೆ.
MOSTREAD: ಟ್ರ್ಯಾಕ್ಟರ್ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್ಗಳಿರಲು ಕಾರಣಗಳಿವು
ಮನೆಗೆ ಹಿಂದಿರುವಾಗ ಪೊಲೀಸರು ಸಿಟಿ ಬಸ್ ನಿಲ್ದಾಣದ ಬಳಿ ಅವರ ಸ್ಕೂಟರ್ ಅನ್ನು ನಿಲ್ಲಿಸಿದ್ದಾರೆ. ಹೆಲ್ಮೆಟ್ ಇಲ್ಲದೆ ಪ್ರಯಾಣಿಸಿದ್ದಕ್ಕಾಗಿ ರೂ.500 ದಂಡ ಪಾವತಿಸುವಂತೆ ಪೊಲೀಸರು ಹೇಳಿದ್ದಾರೆ.
ಆದರೆ ತಮ್ಮ ಬಳಿ ಇದ್ದ ಹಣ ಖರ್ಚಾಗಿದೆ ಎಂದು ಭಾರತಿ ವಿಬುಧಿ ಪೊಲೀಸರಿಗೆ ತಿಳಿಸಿದ್ದಾರೆ. ತಮ್ಮನ್ನು ಬಿಟ್ಟು ಬಿಡುವಂತೆ ಮನವಿ ಮಾಡಿಕೊಂಡಿದ್ದಾರೆ. ಆದರೆ ಪೊಲೀಸರು ಹಣ ಪಾವತಿಸಲೇ ಬೇಕೆಂದು ಪಟ್ಟು ಹಿಡಿದ್ದಾರೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್
ಈ ವೇಳೆ ಪೊಲೀಸರು ಹಾಗೂ ಭಾರತಿ ವಿಬುಧಿರವರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವಾಗ್ವಾದವು ಸುಮಾರು 2 ಗಂಟೆಗಳ ಕಾಲ ನಡೆದಿದೆ ಎಂದು ಹೇಳಲಾಗಿದೆ. ಈ ವೇಳೆ ಘಟನಾ ಸ್ಥಳದಲ್ಲಿದ್ದ ಸಾರ್ವಜನಿಕರು ಘಟನೆಯನ್ನು ರೆಕಾರ್ಡ್ ಮಾಡಲು ಮುಂದಾಗಿದ್ದಾರೆ.
ಕೊನೆಗೆ ತನ್ನ ಭಾರತಿ ವಿಬುಧಿ ತಮ್ಮ ಮಂಗಳಸೂತ್ರವನ್ನು ತೆಗೆದು ಪೊಲೀಸ್ ಅಧಿಕಾರಿಗೆ ನೀಡಿದ್ದಾರೆ. ಅದನ್ನು ಮಾರಾಟ ಮಾಡಿ ಸಂಚಾರ ನಿಯಮ ಉಲ್ಲಂಘನೆಯ ದಂಡವನ್ನು ಪಾವತಿಸಿಕೊಳ್ಳುವಂತೆ ಹೇಳಿದ್ದಾರೆ ಎಂದು ವರದಿಯಾಗಿದೆ.
MOSTREAD: ಲಾಕ್ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ
ಈ ವೇಳೆ ಕೆಲವು ಹಿರಿಯ ಪೊಲೀಸ್ ಅಧಿಕಾರಿಗಳು ಆ ರಸ್ತೆಯ ಮೂಲಕ ಹಾದು ಹೋಗುವ ಈ ದೃಶ್ಯವನ್ನು ಗಮನಿಸಿದ್ದಾರೆ. ಹಿರಿಯ ಅಧಿಕಾರಿಗಳು ಮಧ್ಯಪ್ರವೇಶಿಸಿ ಭಾರತಿ ವಿಬುಧಿ ಹಾಗೂ ಅವರ ಪತಿಗೆ ಅಲ್ಲಿಂದ ತೆರಳಲು ಅವಕಾಶ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಪೊಲೀಸರು ವಿಧಿಸುವ ದಂಡದಿಂದ ಸಾರ್ವಜನಿಕರು ಈ ರೀತಿ ನಿರಾಶೆಗೊಳ್ಳುತ್ತಿರುವುದು ಭಾರತದಲ್ಲಿ ಇದೇ ಮೊದಲಲ್ಲ. ಇದಕ್ಕೂ ಮೊದಲು ಹೆಚ್ಚು ದಂಡ ವಿಧಿಸಿದ್ದರು ಎಂಬ ಕಾರಣಕ್ಕೆ ದ್ವಿಚಕ್ರ ವಾಹನ ಸವಾರನೊಬ್ಬ ತನ್ನ ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ್ದ.
ಗಮನಿಸಿ: ಈ ಲೇಖನದಲ್ಲಿ ಸಾಂದರ್ಭಿಕ ಚಿತ್ರಗಳನ್ನು ಬಳಸಲಾಗಿದೆ.