Just In
- 35 min ago Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- 13 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 14 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 15 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
Don't Miss!
- Sports 2024ರ ಟಿ20 ವಿಶ್ವಕಪ್ ರಾಯಭಾರಿಯಾಗಿ ಒಲಿಂಪಿಕ್ ಐಕಾನ್ ಉಸೇನ್ ಬೋಲ್ಟ್ ನೇಮಕ
- Finance ಒಂದೇ ವರ್ಷದಲ್ಲಿ 210 ಕೋಟಿ ರೂ. ಆದಾಯ ಗಳಿಸಿದ ಭಾರತದಲ್ಲಿನ ಆಪಲ್ ಸ್ಟೋರ್ಗಳು
- News Subrahmanya Dhareshwara: ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ವಿಧಿವಶ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶವ ಸಾಗಿಸಲು ದುಬಾರಿ ಹಣಕ್ಕೆ ಒತ್ತಾಯಿಸಿದ್ದ ಆಂಬ್ಯುಲೆನ್ಸ್ ಮಾಲೀಕನ ಬಂಧನ
ಕೊರೋನಾ ಸೋಂಕಿತನನ್ನು ಮನೆಯಿಂದ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಮೃತಪಟ್ಟ ಬಳಿಕ ಮೃತದೇಹವನ್ನು ಚಿತಾಗಾರಕ್ಕೆ ಆಂಬ್ಯುಲೆನ್ಸ್ನಲ್ಲಿ ಸಾಗಿಸಲು ರೂ.60 ಸಾವಿರ ಬೇಡಿಕೆ ಇಟ್ಟ ಪ್ರಕರಣ ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಇದೀಗ ಈ ಪ್ರಕರಣದಲ್ಲಿ ಅಮೃತಹಳ್ಳಿ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಅಮೃತಹಳ್ಳಿಯ ಹನುಮಂತಪ್ಪ ಸಿಂಗ್ರಿ ಹಾಗೂ ಹರೀಶ್ ಬಂಧಿತ ಆರೋಪಿಗಳಾಗಿದ್ದಾರೆ. ಏಪ್ರಿಲ್ 20 ರಂದು ಮತ್ತಿಕೆರೆ ನಿವಾಸಿ ಭವ್ಯಾ (29) ಎಂಬ ಮಹಿಳೆಯ ತಂದೆ ಪ್ರಸಾದ್ ಎಂಬುವವರು ಅನಾರೋಗ್ಯದ ಕಾರಣ ಖಾಸಗಿ ಆಸ್ಪತ್ರೆಗೆ ಆಂಬ್ಯುಲೆನ್ಸ್ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದರು. ನಂತರ ತಂದೆಯ ಮೃತದೇಹವನ್ನು ಚಿತಾಗಾರಕ್ಕೆ ಸಾಗಿಸಲು ಮುಂದಾದ ಭವ್ಯಾ ಆ್ಯಂಬುಲೆನ್ಸ್ ಮೊರೆ ಹೋಗಿದ್ದರು.
ಈ ವೇಳೆ ಜೈ ಹನುಮಾನ್ ಆ್ಯಂಬುಲೆನ್ಸ್ ಮಾಲೀಕ ಹಾಗೂ ಚಾಲಕ ಹನುಮಂತಪ್ಪ ಮತ್ತು ನಂದನ ಇಂಟರ್ ನ್ಯಾಷನಲ್ ಆ್ಯಂಬುಲೆನ್ಸ್ ಮಾಲೀಕ ಹರೀಶ್ ಎಂಬುವರನ್ನು ಮೃತರ ಮಗಳಾದ ಭವ್ಯ ಸಂಪರ್ಕಿಸಿದ್ದರು.
ಚಿತಾಗಾರಕ್ಕೆ ಸಾಗಿಸಲು ಭವ್ಯಾ ಅವರ ಬಳಿ ಆ್ಯಂಬುಲೆನ್ಸ್ ಮಾಲೀಕ ರೂ.60 ಸಾವಿರ ಬೇಡಿಕೆ ಇಟ್ಟಿದ್ದಾನೆ. ಇಲ್ಲವಾದರೆ ರಸ್ತೆಯ ಮೇಲೆ ಮೃತದೇಹ ಬಿಟ್ಟು ಹೋಗುತ್ತೇವೆಂದು ಬೆದರಿಕೆ ಹಾಕಿದ್ದಾರೆ..
ಈ ವೇಳೆ ಭವ್ಯಾ ತಮ್ಮ ಬಳಿ ಇದೀಗ ಅಷ್ಟು ಹಣವಿಲ್ಲ. ಮಾಂಗಲ್ಯ ಸರ ಮಾಡಿ ಹಣ ನೀಡುತ್ತೇನೆ. ಈಗ ಮೃತದೇಹ ಸಾಗಿಸಲು ಸಹಾಯ ಮಾಡುವಂತೆ ಬೇಡಿಕೊಂಡಿದ್ದೇನೆ. ಆದರೆ ಆ್ಯಂಬುಲೆನ್ಸ್ ಮಾಲೀಕ ಇದಕ್ಕೆ ನಿರಾಕರಿಸಿದ್ದಾನೆ.
ಬಳಿಕ ಭವ್ಯಾ ಅವರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಬಳಿಕ ಪರಿಸ್ಥಿತಿಯ ಸೂಕ್ಷ್ಮತೆ ಅರಿತ ಆ್ಯಂಬುಲೆನ್ಸ್ ಮಾಲೀಕ ರೂ.60 ಸಾವಿರಕ್ಕೆ ಮೃತದೇಹ ಸಾಗಿಸಲು ಒಪ್ಪಿದ್ದಾನೆ. ಬಳಿಕ ಭವ್ಯಾ ಅವರು ಹಣವನ್ನು ನೀಡಿ ಮೃತದೇಹವನ್ನು ಸಾಗಿಸಿದ್ದಾರೆ.
ಈ ಕುರಿತು ಮಾಧ್ಯಮಗಳಲ್ಲಿ ನಿರಂತರ ಸುದ್ದಿ ಪ್ರಸಾರವಾಗುತ್ತಿದ್ದಂತೆ ಘಟನೆಯ ಗಂಭೀರತೆಯನ್ನು ಪರಿಗಣಿಸಿ ಅಮೃತಹಳ್ಳಿ ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 384, 269, 270 ಹಾಗೂ ರಾಷ್ಟ್ರೀಯ ವಿಕೋಪ ನಿರ್ವಹಣಾ ಕಾಯ್ದೆ (ಎನ್ಡಿಎಂಎ) ಸೆಕ್ಷನ್ 54 ಅಡಿ ಎಫ್ಐಆರ್ ದಾಖಲಿಸಿಕೊಂಡು ಇಬ್ಬರನ್ನು ಬಂಧಿಸಿ ಆ್ಯಂಬುಲೆನ್ಸ್ ಸಹ ವಶಪಡಿಸಿಕೊಂಡಿದ್ದಾರೆ.
ಆರೋಪಿಗಳು ಇದೇ ರೀತಿ ಹಲವರಿಂದ ಹಣಕ್ಕೆ ಬೇಡಿಕೆ ಮಾಡಿರುವ ಶಂಕೆಯಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ತನಿಖೆ ನಡೆಸುತ್ತಿರುವುದಾಗಿ ನಗರ ಈಶಾನ್ಯ ವಿಭಾಗದ ಡಿಸಿಪಿ ಸಿ.ಕೆ.ಬಾಬಾ ಅವರು ಮಾಧ್ಯಮಕ್ಕೆ ಮಾಹಿತಿ ತಿಳಿಸಿದ್ದಾರೆ.
ಒಟ್ಟಿನಲ್ಲಿ ಈ ರೀತಿಯಲ್ಲಿ ಘಟನೆಗಳು ನಡೆದಾಗ ಕೊಡಲೇ ಪೊಲೀಸರಿಗೆ ಮಾಹಿತಿಯನ್ನು ನೀಡಿ. ಕೊರೋನಾ ಮಹಾಮಾರಿ ಅಟ್ಟಹಾಸ ಹೆಚ್ಚಾಗುತ್ತಿದಂತೆ ಹಲವರು ಇಂತಹ ಸಂಕಷ್ಟದ ಸಮಯದಲ್ಲಿಯು ಮಾನವೀಯತೆಯನ್ನು ಮೆರತು ಹಣ ಮಾಡಲು ಮುಂದಾಗಿರುವುದು ದುರಂತವೇ ಸರಿ.