Just In
- 1 hr ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 2 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 3 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 3 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಸಿದ್ದರಾಮಯ್ಯ ಕೊಟ್ಟ ಭರವಸೆ ಏನು?
- Movies ''ಹೆಣ್ಮಕ್ಕಳು ಎಲ್ಲೆಲ್ಲೋ ಹೋದರು'' ಎಂದ ಶ್ರುತಿಗೆ ಮಹಿಳಾ ಆಯೋಗ ನೋಟಿಸ್ ; 07 ದಿನದ ಗಡುವು..!
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೈವೆನಲ್ಲಿ ದರೋಡೆ ಮಾಡುತ್ತಿದ್ದ ಖದೀಮರಿಗೆ ಡಿಸಿಪಿ ಅಣ್ಣಾಮಲೈ ಮಾಸ್ಟರ್ ಸ್ಟ್ರೋಕ್..!
ಇತ್ತೀಚೆಗೆ ಹೆದ್ದಾರಿಗಳಲ್ಲಿ ಚಲಿಸುವ ವಾಹನಗಳನ್ನು ತಡೆದು ದರೋಡೆ ಮಾಡುವ ಪ್ರಕರಣಗಳು ಹೆಚ್ಚುತ್ತಿದ್ದು, ಹಣ ಕೊಡಲು ಒಪ್ಪದಿದ್ದಾಗ ಕೊಲೆ ಮಾಡುವುದಕ್ಕೂ ಹಿಂದೆ ಮುಂದೆ ನೋಡದ ದರೋಡೆಕೋರರ ಗ್ಯಾಂಗ್ಗಳು ವಾಹನ ಸವಾರರ ಮೇಲೆ ಅಟ್ಟಹಾಸ ಮೆರೆಯುತ್ತಿದ್ದಾರೆ.
ಹೀಗಿರುವಾಗ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಅವರು ಹೈವೆ ದರೋಡೆಕೋರರನ್ನು ಮಟ್ಟಹಾಕಲು ಕೈಗೊಂಡ ವಿಶೇಷ ಕಾರ್ಯಚರಣೆಯೊಂದು ಭಾರೀ ಪ್ರಶಂಸೆಗೆ ಪಾತ್ರವಾಗಿದ್ದು, ಹಣಕ್ಕಾಗಿ ಲಾರಿ ಚಾಲಕನನ್ನು ಹತ್ಯೆ ಮಾಡಿ ಆರಾಮಾಗಿ ಓಡಾಡಿಕೊಂಡಿದ್ದ ನಟೋರಿಸ್ ರಾಬರ್ಸ್ ಗ್ಯಾಂಗ್ವೊಂದನ್ನು ಹೆಡೆಮುರಿಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾರದ ಹಿಂದಷ್ಟೇ ಲಾರಿ ಚಾಲಕನನ್ನು ನಟೋರಿಸ್ ಗ್ಯಾಂಗ್ವೊಂದು ಹಣಕ್ಕಾಗಿ ಹತ್ಯೆ ಮಾಡಿತ್ತು. ಆದಾದ ಬಳಿಕ ಮತ್ತೊಬ್ಬ ಲಾರಿ ಚಾಲಕನ ಮೇಲೂ ಮಾರಣಾಂತಿಕ ಹಲ್ಲೆ ಮಾಡಿ ಹಣ, ಮೊಬೈಲ್ ಕಿತ್ತು ಪರಾರಿಯಾಗಿತ್ತು.
ಇಷ್ಟೆಲ್ಲಾ ಘಟನೆ ನಡೆದ್ರು ಯಾವುದೇ ಸುಳಿವು ಬಿಟ್ಟುಕೊಡದ ದರೋಡೆಕೋರರ ತಂಡವು ತಾವು ಯಾರ ಕೈಗೂ ಸಿಕ್ಕಿಕೊಳ್ಳುವುದಿಲ್ಲ ಎಂದುಕೊಂಡು ವಾಹನ ಸವಾರರನ್ನು ತಡೆದು ದರೋಡೆ ಮಾಡುವುದನ್ನು ಮುಂದುವರಿಸಿತ್ತು.
ಆದ್ರೆ ಈ ಬಾರಿ ಖದೀಮರ ಗ್ಯಾಂಗ್ ಮಟ್ಟಹಾಕಲೆಂದು ಡಿಸಿಪಿ ಅಣ್ಣಾಮಲೈ ಅವರು ಮಾಡಿದ ಆ ಒಂದು ಪ್ಲ್ಯಾನ್ ಮುಂದೆ ದರೋಡೆಕೋರರ ಕಳ್ಳಾಟಕ್ಕೆ ಬ್ರೇಕ್ ಬಿದ್ದಿದ್ದು, ಲಾರಿ ಚಾಲಕರನ್ನೇ ಟಾರ್ಗೆಟ್ ಮಾಡಿ ದರೋಡೆ ಮಾಡುತ್ತಿದ್ದ ಮೂವರು ಖದೀಮರ ಹೆಡೆಮುರಿ ಕಟ್ಟಿದ್ದಾರೆ.
ಅಣ್ಣಾಮಲೈ ಮಾಸ್ಟರ್ ಸ್ಟ್ರೋಕ್..!
ಲಾರಿ ಚಾಲಕನ ಹತ್ಯೆ ಪ್ರಕರಣವನ್ನು ಭೇದಿಸಲು ಡಿಸಿಪಿ ಅಣ್ಣಾಮಲೈ ಕೊಟ್ಟ ಸಲಹೆ ಅಂತೆ ಕುಮಾರಸ್ವಾಮಿ ಲೇಔಟ್ ಪೊಲೀಸರು ಲಾರಿ ಚಾಲಕರಂತೆ ನಟಿಸಿ ಫೀಲ್ಡ್ಗೆ ಇಳಿದಿದ್ದರು. ಈ ವೇಳೆ ಲಾರಿ ಚಾಲಕನ ವೇಷದಲ್ಲಿದ್ದ ಪೊಲೀಸರನ್ನೇ ದರೋಡೆ ಮಾಡಲು ಬಂದಿದ್ದ ಖದೀಮರು ಲಾಕ್ ಆಗಿದ್ದಾರೆ.
ಲಾರಿ ಚಾಲಕರನ್ನು ಟಾರ್ಗೆಟ್ ಮಾಡಿ ಸುಲಿಗೆ ಮಾಡುತ್ತಿದ್ದ ಖದೀಮರ ಗ್ಯಾಂಗ್ ಬಂಧಿಸಲು ಕಳೆದ ಮೂರು ದಿನಗಳಿಂದ ಈ ಪ್ಲ್ಯಾನ್ ಮಾಡಿದ್ದ ಪೊಲೀಸರು ಹಗಲು ರಾತ್ರಿ ಎನ್ನದೇ ಕಾಯ್ದು ಮೂವರು ಖದೀಮರನ್ನು ವಶಕ್ಕೆ ಪಡೆದಿದ್ದಾರೆ.
ಒಟ್ಟಿನಲ್ಲಿ ಅಮಾಯಕರ ಮೇಲೆ ದರೋಡೆ ಮಾಡಿ ಪೊಲೀಸರೊಂದಿಗೆ ಕಣ್ಣಾಮುಚ್ಚಾಲೆ ಆಡುತ್ತಿದ್ದ ಆರೋಪಿಗಳ ಸೆರೆಗೆ ಡಿಸಿಪಿ ಅಣ್ಣಾಮಲೈ ನೀಡಿದ ಪ್ಲ್ಯಾನ್ ಸಕ್ಸಸ್ ಆಗಿದ್ದು, ಆರೋಪಿಗಳ ಬಂಧನದಿಂದಾಗಿ ಇನ್ನು ಹಲವಾರು ದರೋಡೆ ಪ್ರಕರಣಗಳು ಬೆಳಕಿಗೆ ಬಂದಿವೆ.
ರಾತ್ರಿ ವೇಳೆ ಹೈವೇ ಡ್ರೈವಿಂಗ್ಗೂ ಮುನ್ನ ಎಚ್ಚರ..!
ಕೆಲವರಿಗೆ ರಾತ್ರಿ ವೇಳೆಯಲ್ಲಿ ವಾಹನ ಚಾಲನೆ ಮಾಡುವುದು ಅಂದ್ರೆ ತುಂಬಾನೇ ಇಷ್ಟ. ಹಾಗೊಂದು ವೇಳೆ ನಿಮ್ಮಲ್ಲು ನೈಟ್ ರೈಡಿಂಗ್ ಹವ್ಯಾಸವಿದ್ದಲ್ಲಿ ನಾವು ಹೇಳುವ ಕೆಲವು ವಿಚಾರಗಳನ್ನು ನೆನಪಿನಲ್ಲಿಟ್ಟುಕೊಂಡು ರಾತ್ರಿ ವೇಳೆ ವಾಹನ ಚಾಲನೆ ಮಾಡಿದ್ದಲ್ಲಿ ಇಂತಹ ಘಟನೆಗಳಿಂದ ಬಚಾವ್ ಆಗಬಹುದು.
ಹೈವೆನಲ್ಲಿ ಇತ್ತೀಚೆಗೆ ಸಾಕಷ್ಟು ಅಹಿತರ ಘಟನೆಗಳು ಸಂಭವಿಸುತ್ತಿರುವುದನ್ನು ನಾವೆಲ್ಲಾ ಕೇಳಿಯೇ ಇರುತ್ತವೆ. ಅದರಲ್ಲೂ ಡ್ರಾಪ್ ನೇಪದಲ್ಲಿ ದರೋಡೆ ಪ್ರಕರಣಗಳು ಹೆಚ್ಚುತ್ತಿದ್ದು, ಹಣ ಕೊಡಲು ಒಪ್ಪದ್ದಿದ್ದಾಗ ಕೊಲೆ ಮಾಡಲು ಅವರು ಹಿಂದೆ ಮುಂದೆ ನೋಡುವುದಿಲ್ಲಾ.
ಹೀಗಾಗಿ ರಾತ್ರಿ ವೇಳೆ ಹೆದ್ದಾರಿಗಳಲ್ಲಿ ಪ್ರಯಾಣಿಸಬೇಕಾದ ಅನಿವಾರ್ಯತೆಗಳಲ್ಲಿದ್ದಲ್ಲಿ ನಾವಿಂದು ಕೆಲವು ಟಿಪ್ಸ್ಗಳನ್ನು ನೀಡಲಿದ್ದೇವೆ. ಈ ಟಿಪ್ಸ್ಗಳು ಈಗಾಗಲೇ ಬಹುತೇಕ ವಾಹನ ಸವಾರರ ಅನುಭವಕ್ಕೆ ಬಂದಿರುತ್ತೆವೆ ಎನ್ನಬಹುದು.
MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?
ಕಾರಿಗೆ ರಾತ್ರಿ ಮೊಟ್ಟೆ ಬೀಳುತ್ತೆ..!
ರಾತ್ರಿ ಸಮಯದಲ್ಲಿ ಕಾರನ್ನೊಡಿಸುತ್ತಿರುವಾಗ ಕಾರಿನ ಮುಂಭಾಗಕ್ಕೆ ಆಕಸ್ಮಾತ್ ಮೊಟ್ಟೆ ಅಭಿಷೇಕವಾದ್ದಲ್ಲಿ ಯಾವುದೇ ಕಾರಣಕ್ಕೂ ಗಾಡಿ ನಿಲ್ಲುಸುವ ಗೋಜಿಗೆ ಹೋಗದಿರಿ. ಅದಕ್ಕೂ ಮುಖ್ಯವಾಗಿ ಕಾರಿನ ವೈಪರ್ ಆನ್ ಮಾಡುವ ಪ್ರಯತ್ನಕ್ಕೆ ಮುಂದಾಗದಿರಿ.
ಮೇಲೆ ತಿಳಿಸಿದಂತೆ ರಾತ್ರಿ ಪ್ರಯಾಣ ಮಾಡುತ್ತಿರುವಾಗ ಆಕಾಸ್ಮತ್ ಮೊಟ್ಟೆಗಳ ದಾಳಿ ನಡೆದರೆ ವೈಪರ್ ಆನ್ ಮಾಡದಿರಿ. ನೀರು ಚಿಮುಕಿಸಿ ಅದನ್ನು ತೊಳೆಯುವ ಪ್ರಯತ್ನಕ್ಕೆ ಮುಂದಾಗದಿರಿ. ಈ ರೀತಿ ಮಾಡುವುದರಿಂದ ದರೋಡೆಕೋರರ ಉದ್ದೇಶ ಸುಲಭವಾಗಿ ಈಡೇರಲಿದೆ.
MOST READ: ಕಾರ್ ರೀಪೆರಿಗೆ 3 ಲಕ್ಷ ಕೇಳಿದ್ದ ಡೀಲರ್ಸ್ ಅಸಲಿಯತ್ತು ಬಯಲಾಗಿದ್ದು ಲೋಕಲ್ ಗ್ಯಾರೇಜ್ನಲ್ಲಿ..!
ಮೊಟ್ಟೆಯ ಲೋಳೆ, ಹಳದಿ ಹಾಗೂ ನೀರು ಮಿಶ್ರಣವಾಗಿ ಕಾರಿನ ವೈಂಡ್ ಸ್ಕ್ರೀನ್ ಶೇಕಡಾ 92 ರಷ್ಟು ಮುಸುಕಿದಂತಾಗುತ್ತದೆ. ಶುಭ್ರವಾಗಿದ್ದ ಕನ್ನಡಿ ಕೆಲವೇ ಕ್ಷಣಗಳಲ್ಲಿ ಬಿಳಿ ಪೇಂಟ್ ಬಳಿದಂತಾಗುತ್ತದೆ. ಮೊಟ್ಟೆ ನೀರಿನೊಂದಿಗೆ ಮಿಶ್ರಣವಾದರೆ ಶೇಕಡಾ 92 ರಷ್ಟು ನಿಮ್ಮ ದೃಷ್ಟಿ ಸಾಮರ್ಥ್ಯವನ್ನು ಕಡಿಮೆ ಮಾಡಲಿದೆ.
MOST READ:ವಾಹನ ಸವಾರರಿಗೆ ಸಿಹಿಸುದ್ದಿ- ಟೋಲ್ ದರ ಕಡಿತಕ್ಕೆ ಕೇಂದ್ರದಿಂದ ಹೊಸ ಯೋಜನೆ..!
ದರೋಡೆಕೋರರ ಉದ್ದೇಶ ಈಡೇರುವುದು
ಈ ಸಂದರ್ಭದಲ್ಲಿ ಕಾರು ನಿಲ್ಲಿಸಬೇಕಾಗಿರುವುದು ಅನಿವಾರ್ಯವಾಗುತ್ತದೆ. ತಕ್ಷಣ ಕಾರ್ಯಪ್ರವೃತರಾಗುವ ಕಳ್ಳರು ನಿಮ್ಮನ್ನು ಸುತ್ತುವರಿದು ನಿಮ್ಮಲ್ಲಿದ್ದ ಅಮೂಲ್ಯ ವಸ್ತುಗಳನ್ನೆಲ್ಲ ದೋಚುವ ಸಾಧ್ಯತೆಯಿದೆ.
ಗ್ಯಾಂಗ್ ದರೋಡೆ
ಪ್ರಸ್ತುತ ಮೊಟ್ಟೆಯೆಸೆದು ದರೋಡೆ ಮಾಡುವ ಪ್ರಕ್ರಿಯೆ ಬಲು ಜೋರಾಗಿ ನಡೆಯುತ್ತಿದೆ. ಗುಂಪು ಗುಂಪಾಗಿ ಆಗಮಿಸುವ ಕಳ್ಳರ ತಡ ಸುಲಭದಲ್ಲಿ ನಿಮ್ಮನ್ನು ಮೋಸ ಮಾಡಬಲ್ಲರು.
ಹಾಗಾಗಿ ಎಚ್ಚರ ವಹಿಸಿರಿ!
ರಾತ್ರಿ ಪಯಣದ ವೇಳೆ ಆಕಸ್ಮಾತ್ ಮೊಟ್ಟೆ ಎಸೆತ ಉಂಟಾದ್ದಲ್ಲಿ ತಕ್ಷಣ ಕಾರು ನಿಲ್ಲಿಸದಿರಿ. ಹಾಗೆಯೇ ವೈಪರ್ ಆನ್ ಮಾಡುವ ಸಾಹಸಕ್ಕೆ ಮುಂದಾಗದಿರಿ. ಇಲ್ಲದಿದ್ದರೆ ಯೋಗರಾಜ್ ಭಟ್ಟರ ಹಾಡಿನಂತೆ "ಕತ್ತಲಲ್ಲಿ ಕರಡಿಗೆ ಜಾಮೂನು ತಿನ್ನಿಸಿದ್ದಾಂತಾಗುತ್ತೆ" ಎಚ್ಚರವಿರಲಿ!
ಹ್ಯಾಪಿ ಡ್ರೈವಿಂಗ್!