Just In
- 14 min ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 1 hr ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 1 hr ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
- 2 hrs ago Hero: ಮಧ್ಯಮ ವರ್ಗದವರ ನೆಚ್ಚಿನ ಬೈಕ್.. ರೂ.75 ಸಾವಿರ ಬೆಲೆ.. ಮೈಲೇಜ್ನಲ್ಲಿ ಸರಿ ಸಾಟಿಯಿಲ್ಲ!
Don't Miss!
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- News ಏಪ್ರಿಲ್ 28ಕ್ಕೆ ಬೆಣ್ಣೆನಗರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ: ಸಿದ್ಧತೆ ಹೇಗಿದೆ? ಮಾಹಿತಿ
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Sports ಟಿ20 ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡದ ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ಸಂಜು, ರಾಹುಲ್ಗೆ ಸ್ಥಾನವಿಲ್ಲ!
- Movies ಮದುವೆ ಆಗದೇ ಗರ್ಭಿಣಿಯಾಗಿದ್ರಾ ಮಾಧುರಿ ದಿಕ್ಷಿತ್? ವಿವಾದಾತ್ಮಕ ಟ್ವೀಟ್ಗೆ ಫ್ಯಾನ್ಸ್ ಆಕ್ರೋಶ!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ಡೌನ್ ಉಲ್ಲಂಘಿಸಿ ತಿರುಗುತ್ತಿದ್ದ ಮರ್ಸಿಡಿಸ್ ಕಾರುಗಳನ್ನು ಸೀಜ್ ಮಾಡಿದ ಬೆಂಗಳೂರು ಪೊಲೀಸರು!
ದೇಶಾದ್ಯಂತ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳು ಸೋಂಕು ಹರಡುವಿಕೆಯನ್ನು ತಗ್ಗಿಸಲು ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಸೋಂಕು ಹೆಚ್ಚಿರುವ ನಗರಗಳಲ್ಲಿ ಜನದಟ್ಟಣೆ ತಗ್ಗಿಸುವ ಉದ್ದೇಶದಿಂದ ಲಾಕ್ಡೌನ್ ವಿಧಿಸಲಾಗಿದೆ.
ಹೆಚ್ಚುತ್ತಿರುವ ಕರೋನಾ ವೈರಸ್ ಎರಡನೇ ಅಲೆ ತಡೆಗಾಗಿ ಕೇಂದ್ರ ಸರ್ಕಾರದ ಸಲಹೆ ಮೇರೆಗೆ ಕರ್ನಾಟಕ ಸರ್ಕಾರವು ಸಹ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಕಠಿಣ ನಿರ್ಬಂಧಗಳನ್ನು ಒಳಗೊಂಡ ಲಾಕ್ಡೌನ್ ಜಾರಿಗೊಳಿಸಿದ್ದು, ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.
ಲಾಕ್ಡೌನ್ ಸಂದರ್ಭದಲ್ಲಿ ಅಗತ್ಯ ಸೇವೆಗಳಿಗಾಗಿ ಬಳಕೆಯಾಗುವ ವಾಹನ ಸಂಚಾರವನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ಮಾದರಿಯ ವಾಹನ ಸಂಚಾರವನ್ನು ಕಟ್ಟುನಿಟ್ಟಾಗಿ ಬಂದ್ ಮಾಡಲಾಗಿದ್ದು, ಕಠಿಣ ಕ್ರಮ ಜಾರಿ ನಡುವೆಯೂ ಖಾಸಗಿ ವಾಹನ ಮಾಲೀಕರು ನಿಯಮ ಉಲ್ಲಂಘಿಸುತ್ತಿರುವುದು ಸೋಂಕು ಹರಡುವಿಕೆಗೆ ಪ್ರಮುಖ ಕಾರಣವಾಗಿದೆ.
ಅಗತ್ಯ ಸೇವೆಗಳನ್ನು ಒದಗಿಸುವ ವಾಹನಗಳಿಗೆ, ಸರಕು ಸಾಗಣೆ ವಾಹನಗಳಿಗೆ ಮತ್ತು ಆರೋಗ್ಯ ಸೇವೆಯ ವಾಹನಗಳಿಗೆ ಮಾತ್ರ ಅವಕಾಶ ನೀಡಿರುವ ಸರ್ಕಾರವು ಇತರೆ ಎಲ್ಲಾ ಖಾಸಗಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ಬೆಂಗಳೂರು ಒಂದರಲ್ಲೇ ಪೊಲೀಸ್ ಇಲಾಖೆಯು ಇದುವರೆ ಲಾಕ್ಡೌನ್ ಉಲ್ಲಂಘನೆ ಮಾಡಿರುವ ವಾಹನ ಮಾಲೀಕರಿಂದ ಸುಮಾರು ರೂ.4 ಕೋಟಿಯಷ್ಟು ದಂಡ ವಸೂಲಿ ಮಾಡಿದ್ದು, ಗಂಭೀರ ಪ್ರಕರಣಗಳಲ್ಲಿ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ.
ನಿನ್ನೆಯಷ್ಟೇ ಬೆಂಗಳೂರಿನ ಕಾರ್ಪೊರೇಷನ್ ವೃತ್ತದಲ್ಲೂ ಅನಗತ್ಯವಾಗಿ ಓಡಾಡುತ್ತಿದ್ದ ಮರ್ಸಿಡಿಸ್ ಬೆಂಝ್ ಸಿ ಕ್ಲಾಸ್ ಕಾರನ್ನು ಸೀಜ್ ಮಾಡಲಾಗಿದ್ದು, ಲಾಕ್ಡೌನ್ ಸಮಯದಲ್ಲಿ ಹೊರೆಗೆ ಊಟಕ್ಕೆ ಹೋಗಿದ್ದಾಗಿ ನೆಪ ಹೇಳಿದ ಯುವಕನಿಗೆ ಶಾಕ್ ನೀಡಿದ ಪೊಲೀಸರು ಕಾರನ್ನು ಜಪ್ತಿ ಮಾಡಿ ಠಾಣೆ ಕರೆದೊಯ್ದದಿದ್ದಾರೆ.
ಮತ್ತೊಂದು ಪ್ರಕಣದಲ್ಲೂ ಕೂಡಾ ಅನಾವಶ್ಯಕವಾಗಿ ಮರ್ಸಿಡಿಸ್ ಬೆಂಝ್ ಜಿಎಲ್ಸಿ ಕಾರಿನಲ್ಲಿ ಬಂದಿದ್ದ ಯುವಕರ ಗುಂಪೊಂದನ್ನು ಲಾಕ್ ಮಾಡಿದ ಪೊಲೀಸರು ಕಠಿಣ ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದು, ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಉಲ್ಲಂಘನೆಯ ಪ್ರಕರಣಗಳನ್ನು ದಾಖಲಿಸಿರುವ ಸಾಧ್ಯತೆಗಳಿವೆ.
ಇಷ್ಟು ದಿನಗಳ ಕಾಲ ಲಾಕ್ಡೌನ್ ಉಲ್ಲಂಘಿಸುವ ವಾಹನ ಮಾಲೀಕರಿಗೆ ಸಾಮಾನ್ಯ ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣಗಳನ್ನು ದಾಖಲಿಸಿ ಸ್ಥಳದಲ್ಲೇ ದಂಡ ವಸೂಲಿ ಮಾಡುತ್ತಿದ್ದ ಪೊಲೀಸರು ಇದೀಗ ಕಠಿಣ ಕಾನೂನು ಕ್ರಮಗಳನ್ನು ಒಳಗೊಂಡ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಉಲ್ಲಂಘನೆಯ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ.
ಕರ್ನಾಟಕದಲ್ಲಿ ಈಗಾಗಲೇ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಉಲ್ಲಂಘನೆಯ ಪ್ರಕರಣಗಳ ಅಡಿ ಸಾವಿರಾರು ಕೇಸ್ಗಳನ್ನು ದಾಖಲಿಸಿಕೊಳ್ಳಲಾಗಿದ್ದು, ಈ ಪ್ರಕರಣಗಳಲ್ಲಿ ವಾಹನ ಮಾಲೀಕರು ಕಡ್ಡಾಯವಾಗಿ ಕೋರ್ಟ್ನಲ್ಲೇ ಇತ್ಯರ್ಥ ಮಾಡಿಕೊಳ್ಳಬೇಕಾಗುತ್ತದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!
ಸಾಮಾನ್ಯ ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣಗಳನ್ನು ದಾಖಲಿಸಿದರೆ ಸ್ಥಳದಲ್ಲೇ ದಂಡ ಪಾವತಿಸಿ ನಿಯಮ ಉಲ್ಲಂಘನೆ ಪ್ರಕರಣವನ್ನು ಹಿಂಪಡೆಯಬಹುದಾಗಿದ್ದು, ಆದರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಉಲ್ಲಂಘನೆಯ ಪ್ರಕರಣಗಳ ಇತ್ಯರ್ಥಕ್ಕಾಗಿ ಕಾನೂನು ಹೋರಾಟ ಮಾಡಬೇಕಾಗುತ್ತದೆ.
ಇದಕ್ಕಾಗಿ ನೀವು ವಕೀಲರನ್ನು ಸಹ ನೇಮಕ ಮಾಡಿಕೊಳ್ಳಬೇಕಿದ್ದು, ನಿರ್ಬಂಧದ ಅವಧಿಯಲ್ಲಿ ವಾಹನವನ್ನು ಬಳಕೆ ಮಾಡಿದ್ದಕ್ಕೆ ಸೂಕ್ತ ಕಾರಣ ಮತ್ತು ದಾಖಲೆಗಳನ್ನು ಹಾಜರುಪಡಿಸಬೇಕು. ಒಂದು ವೇಳೆ ಕೋರ್ಟ್ ವಿಚಾರಣೆಯಲ್ಲಿ ಸೂಕ್ತ ದಾಖಲೆ ಒದಗಿಸುವಲ್ಲಿ ವಿಫಲವಾದರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆ ಅಡಿ ಕನಿಷ್ಠ 7 ವರ್ಷ ಶಿಕ್ಷೆ ಅನುಭವಿಸಬೇಕಾಗುತ್ತದೆ.
MOST READ: ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!
ಇಷ್ಟು ದಿನ ಕಾಲ ಲಾಕ್ಡೌನ್ ಸಂದರ್ಭದಲ್ಲಿ ನಿಯಮ ಉಲ್ಲಂಘಿಸಿದ ವಾಹನ ಮಾಲೀಕರ ವಿರುದ್ದ ಕೇವಲ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳನ್ನು ದಾಖಲಿಸಿ ದಂಡ ವಸೂಲಿ ಮಾಡಿ ಕೈಬಿಡುತ್ತಿದ್ದ ಪೊಲೀಸರು ಇದೀಗ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ.