Just In
- 13 min ago Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ದೊಡ್ಡ ಘೋಷಣೆ.. ಏನದು?
- 1 hr ago ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- 2 hrs ago ಸಾಮಾನ್ಯರಂತೆ ಹಳ್ಳಿಯಲ್ಲಿರುವ ದೇಶದ 55ನೇ ಶ್ರೀಮಂತ ಶ್ರೀಧರ್ ವೆಂಬು: ಕಚೇರಿಗೆ ಹೋಗಲು ಎಲೆಕ್ಟ್ರಿಕ್ ಆಟೋ ಖರೀದಿ!
- 4 hrs ago ಹ್ಯುಂಡೈ ವೆರ್ನಾ ಕಾರಿಗೆ ಭಾರೀ ಡಿಸ್ಕೌಂಟ್: ರಾಶಿ ಫೀಚರ್ನ ಕಾರಿಗೆ ಇಷ್ಟು ಆಫರ್ ಯಾಕೆಂದ ನೆಟ್ಟಿಗರು!
Don't Miss!
- News Bengaluru Heat Wave: ಮಳೆಯ ನಡುವೆ ಮತ್ತೆ ದಾಖಲೆಯ ಗರಿಷ್ಠ ತಾಪಮಾನ: ಶಾಖದ ಅಲೆ ಮುನ್ಸೂಚನೆ
- Sports CSK vs LSG IPL 2024: ಚೆನ್ನೈನ ಚೆಪಾಕ್ ಕೋಟೆಯನ್ನು ಭೇದಿಸುವುದೇ ಲಕ್ನೋ?; ಸಂಭಾವ್ಯ ಆಡುವ 11ರ ಬಳಗ
- Technology ನಾಳೆ ವಿವೋದ ಈ ಹೊಸ ಫೋನ್ ಫಸ್ಟ್ ಸೇಲ್!..ಬಜೆಟ್ ಬೆಲೆಗೆ ಲಭ್ಯ!
- Movies ಕಲರ್ಫುಲ್ ಲೈಟು.. ಡಿಂಪಲ್ ಸ್ಮೈಲು.. 'ಸಂಜು ವೆಡ್ಸ್ ಗೀತಾ 2' ಒಂದು ಹಾಡಿನ ಸೆಟ್ಟಿಗೆ ಬರೋಬ್ಬರಿ ₹50 ಲಕ್ಷ!
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೋಂಕಿತರಿಗೆ ನೆರವಾಗಲು ಆಕ್ಸಿಜನ್ ಎಕ್ಸ್ಪ್ರೆಸ್, ಉಚಿತ ಆಟೋ ಸೇವೆ ಆರಂಭಿಸಿದ ಸ್ಯಾಂಡಲ್ವುಡ್ ನಟ, ನಟಿ
ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸಿದೆ. ಕೊರೋನಾ ಸೋಂಕುವಿನ ಹರಡುವಿಕೆ ಶರವೇಗವನ್ನು ಪಡೆದುಕೊಂಡಿದೆ. ಹಲವು ಕೊರೋನಾ ಸೋಂಕಿತರು ಬೆಡ್, ಆಕ್ಸಿಜನ್ ಮತ್ತು ಆಂಬ್ಯುಲೆನ್ಸ್ ಸೇವೆ ಸಿಗದೇ ಪರದಾಡುತ್ತಿದ್ದಾರೆ.
ಇನ್ನೊಂದು ಕಡೆ ಬಡ ಜನರು ಲಾಕ್ ಡೌನ್ ನಿಂದ ಕೆಲವರು ತಿನ್ನುವ ಅನ್ನಕ್ಕೆ ಪರದಾಡುತ್ತಿದ್ದಾರೆ. ಇಂತವರಿಗೆ ಹಲವು ಸೆಲಬ್ರಿಟಿಗಳು ನೆರವಾಗುತ್ತಿದ್ದಾರೆ. ಇದೇ ರೀತಿ ಕಳೆದ ಒಂದೆರೆಡು ವಾರದಿಂದ ನಟ ಭುವನ್ ಪೊನ್ನಣ್ಣ ಮತ್ತು ನಟಿ ಹರ್ಷಿಕಾ ಪೂಣಚ್ಚ ಭುವನಂ ಫೌಂಡೇಶನ್ ವತಿಯಿಂದ ಆಹಾರ ಕಿಟ್ಗಳು ಹಾಗೂ ಆಕ್ಸಿಜನ್ ಸಿಗದೆ ಪರದಾಡುತ್ತಿರುವವರಿಗೆ ಆಕ್ಸಿಜನ್ ಒದಗಿಸಲು ಸಹಾಯ ಮಾಡುತ್ತಿದ್ದರು.
ಇದೀಗ ಸ್ಯಾಂಡಲ್ವುಡ್ ನಟ, ಭುವನ್ ಪೊನ್ನಣ್ಣ ಹಾಗೂ ಹರ್ಷಿಕಾ ಮತ್ತೊಂದು ಮಹತ್ವದ ಹೆಚ್ಚೆ ಇಟ್ಟಿದ್ದಾರೆ. ಶ್ವಾಸ ಮತ್ತು ಬಾಂಧವ ಎಂಬ ಹೆಸರಿನ ಎರಡು ಸೇವೆಗಳನ್ನು ಭುವನ್ ತಮ್ಮ ಭುವನಂ ಫೌಂಡೇಶನ್ ವತಿಯಿಂದ ಆರಂಭಿಸಿದ್ದಾರೆ.
MOST READ: ಐಷಾರಾಮಿ ಬಿಎಂಡಬ್ಲ್ಯು ಎಕ್ಸ್7 ಕಾರು ಚಾಲನೆ ವೇಳೆ ಕಾಣಿಸಿಕೊಂಡ ಬಾಲಿವುಡ್ ಸ್ಟಾರ್
ಈ ಎರಡು ಸೇವೆಗಳಿಗೆ ಫ್ರೀಡಂ ಪಾರ್ಕ್ನಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ಚಾಲನೆ ನೀಡಿದರು. ಆಕ್ಸಿಜನ್ ಸಿಗದೆ ಕಷ್ಟಪಡುವವರಿಗಾಗಿ ಎರಡು ಆಕ್ಸಿಜನ್ ಬಸ್ಗಳ ವ್ಯವಸ್ಥೆ ಮಾಡಿದ್ದಾರೆ. ಎರಡು ಬಸ್ ಗಳಲ್ಲಿ ಆಕ್ಸಿಜನ್ ಕಾನ್ಸನ್ಟ್ರೇಟರ್ಗಳ ವ್ಯವಸ್ಥೆಯನ್ನು ಮಾಡಿದ್ದಾರೆ.
'ಬಾಂಧವ' ಎಂಬ ಹೆಸರಿನ ಆಟೋಗಳ ಮೂಲಕ ಉಚಿತವಾಗಿ ಔಷಧಿ, ದಿನಸಿ, ಊಟ ಹಾಗೂ ಆಕ್ಸಿಜನ್ ಸರಬರಾಜು ಮಾಡಲಾಗುತ್ತದೆ. ಈ ಸೇವೆಗಳನ್ನು ಕೇವಲ ಬೆಂಗಳೂರಿಗೆ ಸೀಮಿತವಾಗಿ ಇಡದೆ, ರಾಜ್ಯಾದ್ಯಂತ ವಿಸ್ತರಿಸುವ ಉದ್ದೇಶವಿದೆ ಎಂದು ಭುವನ್ ಪೊನ್ನಣ್ಣ ಹೇಳಿದ್ದಾರೆ.
MOST READ: ಫೆಬ್ರವರಿ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಡೀಸೆಲ್ ಕಾರುಗಳಿವು
ಭುವನ್ ಪೊನ್ನಣ್ಣ ಹಾಗೂ ಹರ್ಷಿಕಾ ಪೂಣಚ್ಚ ಹಮ್ಮಿಕೊಂಡಿರುವ ಈ ಕಾರ್ಯಗಳಿಗೆ ವ್ಯಾಪಕ ಮೆಚ್ಚುಗೆ ಪಾತ್ರವಾಗಿದೆ. ಇದಕ್ಕೂ ಮುಂಚೆ ಭುವನ್ ಪೊನ್ನಣ್ಣ ಹೆಲ್ಫ್ಲೈನ್ ಆರಂಭಿಸಿದ್ದರು. ಸಹಾಯ ಬೇಕದವರು ಕರೆ ಮಾಡಲು ಎಂದು ಖಾಸಗಿ ನಂಬರ್ ಅನ್ನು ಸಾಮಾಜಿಕ ಜಾಲತಾಣಗಳ ಮೂಲಕ ನೀಡಿದ್ದರು.
ಈ ನಂಬರ್'ಗೆ ಸಹಾಯ ಕೇಳೆ ದಿನಕ್ಕೆ 3-4 ಸಾವಿರ ಕರೆ ಬರಲು ಪ್ರಾರಂಭವಾಗಿತ್ತು. ನಂತರ ಅದಕ್ಕಾಗಿ ತಂಡವೊಂದನ್ನು ರಚಿಸಿ ಅನೇಕರಿಗೆ ಸಹಾಯ ಮಾಡಿದ್ದಾರೆ. ಈ ಸಂದರ್ಭದಲ್ಲಿ ಇವರು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆಗೆ ಪಾತ್ರರಾಗಿದ್ದರು.
MOST READ: ಕರೋನಾ ವೈರಸ್ ಬಗ್ಗೆ ಜನ ಜಾಗೃತಿ ಮೂಡಿಸಲು ಉಬರ್ ಜೊತೆಗೆ ಕೈಜೋಡಿಸಿದ ಪೊಲೀಸ್ ಇಲಾಖೆ
ವಾರಗಳ ಹಿಂದೆ ಸುಮಾರು 150 ಕೂಲಿ ಕಾರ್ಮಿಕ ಕುಟುಂಬಗಳಿಗೆ ಫುಡ್ ಕಿಟ್ಗಳನ್ನು ಹಂಚುವ ಮೂಲಕ ಸಹಾಯ ಹಸ್ತ ಚಾಚಿದ್ದರು. ಈ ಫುಡ್ ಕಿಟ್ ಅಕ್ಕಿ, ಬೇಳೆ, ಸಕ್ಕರೆ, ಅಡುಗೆ ಎಣ್ಣೆ, ಗೋಧಿ ಹಿಟ್ಟು, ಮಸಾಲಾ ಪದಾರ್ಥಗಳು, ತರಕಾರಿಗಳನ್ನು ಒಳಗೊಂಡಿದೆ.
ಇನ್ನು ಕೊಡಗು, ಉತ್ತರ ಕರ್ನಾಟಕದಲ್ಲಿ ವರ್ಷಗಳ ಹಿಂದೆ ಪ್ರವಾಹ ಉಂಟಾದ ಸಂದರ್ಭದಲ್ಲಿ ಭುವನ್ ಪೊನ್ನಣ್ಣ ಹಾಗೂ ಹರ್ಷಿಕಾ ಪೂಣಚ್ಚ ಹಲವರು ರೀತಿ ನೆರವು ನೀಡಿದ್ದರು, ಈ ಭುವನ್ ಪೊನ್ನಣ್ಣ ಹಾಗೂ ಹರ್ಷಿಕಾ ಪೂಣಚ್ಚ ಅವರು ಚಿತ್ರರಂಗಕ್ಕೆ ಮಾದರಿ ನಟ ಮತ್ತು ನಟಿಯಾಗಿದ್ದಾರೆ.