Just In
- 11 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 11 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 13 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 13 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- News Karnataka LS Election 2024 LIVE: ಇಂದು ಮೊದಲ ಹಂತದ ಮತದಾನಕ್ಕೆ ಸಿದ್ಧವಾದ ರಾಜ್ಯದ 14 ಕ್ಷೇತ್ರಗಳು
- Movies Shobha Shetty ; ನಿಶ್ಚಿತಾರ್ಥದ ಬಗ್ಗೆ ಮಾಹಿತಿ ನೀಡಿದ ನಟಿ ಶೋಭಾ ಶೆಟ್ಟಿ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ಡೌನ್ ನಡುವೆಯೂ ಕೃಷಿ ಅಧಿಕಾರಿಯ ಅಂಧ ದರ್ಬಾರ್..!
ಕರೋನಾ ವೈರಸ್ ಕಾರಣಕ್ಕೆ ದೇಶಾದ್ಯಂತ ಮೇ 3ರವರೆಗೆ ಲಾಕ್ಡೌನ್ ಜಾರಿಗೊಳಿಸಲಾಗಿದೆ. ಇದರಿಂದಾಗಿ ಎಲ್ಲಾ ರೀತಿಯ ವ್ಯಾಪಾರ, ವಹಿವಾಟು ಸ್ಥಗಿತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕರೋನಾ ವೈರಸ್ ಹರಡುವುದನ್ನು ತಡೆಯಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಠಿಣ ನಿರ್ಧಾರಗಳನ್ನು ಕೈಗೊಳ್ಳುತ್ತಿವೆ.
ಕರೋನಾ ವೈರಸ್ ಹರಡದೇ ಇರುವ ವಲಯಗಳಲ್ಲಿ ಷರತ್ತುಗಳೊಂದಿಗೆ ಕೆಲ ವಿನಾಯಿತಿ ನೀಡಲಾಗಿದೆ. ಇದರಿಂದಾಗಿ ಹಲವಾರು ಜನರು ಕೆಲಸಕ್ಕೆ ಮರಳಿದ್ದಾರೆ. ಸೂಕ್ತ ರೀತಿಯ ತಪಾಸಣೆ ನಡೆಸಿದ ನಂತರ ಪೊಲೀಸರು ವಾಹನಗಳ ಓಡಾಟಕ್ಕೆ ಅನುಮತಿ ನೀಡುತ್ತಿದ್ದಾರೆ.
ಅಧ್ಯಯನದಲ್ಲಿ ತೊಡಗಿದ್ದ ಸರ್ಕಾರಿ ಅಧಿಕಾರಿಯೊಬ್ಬರು ತಪಾಸಣೆಯಲ್ಲಿ ತೊಡಗಿದ್ದ ಗಾರ್ಡ್ಗೆ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರಿ ಅಧಿಕಾರಿಯ ಈ ಅಧಿಕಾರದ ಮದ ಸಾರ್ವಜನಿಕರಲ್ಲಿ ಆಕ್ರೋಶವನ್ನುಂಟು ಮಾಡಿದೆ. ಈ ಘಟನೆ ನಡೆದಿರುವುದು ಬಿಹಾರದ ಅರೇರಿಯಾದಲ್ಲಿ. ಅರೇರಿಯಾ ಪ್ರದೇಶದ ಹಿರಿಯ ಕೃಷಿ ಅಧಿಕಾರಿ ಮನೋಜ್ ಕುಮಾರ್ರವರೇ ಈ ಘನಂದಾರಿ ಕೆಲಸ ಮಾಡಿದವರು.
MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ
ದೇಶಾದ್ಯಂತ, ಕರೋನಾ ವಿರುದ್ಧದ ಹೋರಾಟದಲ್ಲಿ ಪೊಲೀಸರು ತಮ್ಮನ್ನು ತಾವು ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಕಾರಣಕ್ಕೆ ತಮ್ಮ ಕುಟುಂಬಗಳಿಂದಲೂ ದೂರವುಳಿದಿದ್ದಾರೆ. ಪೊಲೀಸ್ ಸಿಬ್ಬಂದಿಯ ಕೊರತೆಯಿಂದಾಗಿ ದೇಶದ ಹಲವು ಭಾಗಗಳಲ್ಲಿ ಗಾರ್ಡ್ಗಳನ್ನು ನಿಯೋಜಿಸಲಾಗಿದೆ.
ಅವರು ಸಹ ಖಾಕಿ ಸಮವಸ್ತ್ರ ಧರಿಸಿ ಪೊಲೀಸರೊಂದಿಗೆ ಕೆಲಸ ಮಾಡುತ್ತಿದ್ದಾರೆ. ವಾಹನ ಪರಿಶೀಲನೆಯಂತಹ ಕೆಲಸದಲ್ಲಿ ತೊಡಗಿ ಪೊಲೀಸರಿಗೆ ನೆರವಾಗುತ್ತಿದ್ದಾರೆ. ಈ ಘಟನೆಯಲ್ಲಿ ಕಾರಿನಲ್ಲಿ ಕುಳಿತಿದ್ದ ಮನೋಜ್ ಕುಮಾರ್ರವರನ್ನು ಗಣೇಶ್ ಎಂಬ ಗಾರ್ಡ್ ಪರಿಶೀಲಿಸಿದ್ದಾರೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಪರಿಶೀಲನೆಗೆ ಸಹಕರಿಸುವ ಬದಲು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಆದರೆ ಗಾರ್ಡ್ ಗಣೇಶ್ ಅವರನ್ನು ಅಡ್ಡಗಟ್ಟಿದ್ದಾರೆ. ಇಷ್ಟಕ್ಕೆ ಕೋಪಗೊಂಡ ಮನೋಜ್ ಕುಮಾರ್ ಕಾರಿನಿಂದ ಕೆಳಕ್ಕಿಳಿದು ಗಣೇಶ್ರವರಿಗೆ ಉಳಿದ ಗಾರ್ಡ್ಗಳ ಎದುರಿನಲ್ಲಿಯೇ ಹೊಡೆದಿದ್ದಾರೆ.
ಇದರ ಜೊತೆಗೆ 50 ಬಸ್ಕಿ ಹೊಡೆಯಲು ಹೇಳಿದ್ದಾರೆ. ಗಣೇಶ್ ತನ್ನನ್ನು ಕ್ಷಮಿಸುವಂತೆ ಕೇಳಿಕೊಂಡರೂ ಬಿಡದೇ ತಮ್ಮ ಅಧಿಕಾರವನ್ನು ಚಲಾಯಿಸಿದ್ದಾರೆ. ಕೃಷಿ ಅಧಿಕಾರಿಯ ಈ ಕೃತ್ಯವು ಸಾರ್ವಜನಿಕರಲ್ಲಿ ಆಕ್ರೋಶವನ್ನುಂಟು ಮಾಡಿದೆ.
MOSTREAD: ನಟ ವಿಕ್ರಮ್ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್
ಈ ವೀಡಿಯೊದಲ್ಲಿ ಕೃಷಿ ಅಧಿಕಾರಿಯ ಮುಂದೆ ಗಾರ್ಡ್ ಬಸ್ಕಿ ಹೊಡೆಯುತ್ತಿರುವುದನ್ನು ಕಾಣಬಹುದು. ಸರ್ಕಾರಿ ಅಧಿಕಾರಿಯ ಕಾರನ್ನು ಹೇಗೆ ನಿಲ್ಲಿಸುತ್ತೀರಿ ಎಂದು ಕೇಳುತ್ತಿರುವುದನ್ನು ಕಾಣಬಹುದು.
ಈ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಹಾರದ ಡಿಜಿಪಿ ಗುಪ್ತೇಶ್ವರ ಪಾಂಡೆರವರು ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ. ಕೃಷಿ ಇಲಾಖೆಯು ಮನೋಜ್ ಕುಮಾರ್ರವರಿಗೆ ನೋಟಿಸ್ ಜಾರಿ ಮಾಡಿದೆ.