Just In
- 47 min ago ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- 47 min ago ಬರಲಿದೆ ಮತ್ತೊಂದು ಫ್ಯಾಮಿಲಿ ಎಲೆಕ್ಟ್ರಿಕ್ ಸ್ಕೂಟರ್: ಕಡಿಮೆ ಖರ್ಚಿನಲ್ಲಿ ಓಡಾಡಬಹುದು!
- 1 hr ago ಮಾರುತಿ ಸ್ವಿಫ್ಟ್ ಖರೀದಿಸುತ್ತಿದ್ದೀರಾ? ಸ್ವಲ್ಪ ಕಾಯಿರಿ... ಹೊಸ ಸ್ವಿಫ್ಟ್ ಬರುತ್ತಿದೆ! 35 ಕಿ.ಮೀ ಮೈಲೇಜ್
- 2 hrs ago ನಟಿ ಶಿಲ್ಪಾ ಶೆಟ್ಟಿಗೆ ಮತ್ತೊಂದು ಸಮಸ್ಯೆ ತಂದಿಟ್ಟ ಪತಿ: ಐಷಾರಾಮಿ ಕಾರುಗಳು ಸೀಜ್!
Don't Miss!
- News ಜನ ಸೇವಕನಾಗಿ ದುಡಿಯಲು ನನಗೊಂದು ಅವಕಾಶ ಕೊಡಿ: ವಿನೋದ್ ಅಸೂಟಿ
- Technology OnePlus: ಒನ್ಪ್ಲಸ್ 13 ಸ್ಮಾರ್ಟ್ಫೋನ್ ಡಿಸ್ಪ್ಲೇ, ವಿನ್ಯಾಸ ಲೀಕ್!..ಯಾವಾಗ ಲಾಂಚ್?
- Movies ತಾತನಿಗೆ ಧನ್ಯಾ ರಾಮ್ಕುಮಾರ್ ಟ್ರಿಬ್ಯೂಟ್; ಕಿಶನ್ ಜೊತೆ ಡ್ಯುಯೆಟ್
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Lifestyle ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- Finance ಝಿಲಿಂಗೋನ ಸಹ-ಸಂಸ್ಥಾಪಕ ಹಾಗೂ ಮಾಜಿ ಸಿಒಒ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಿದ ಅಂಕಿತಿ ಬೋಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭೀಕರ ರಸ್ತೆ ಅಪಘಾತಕ್ಕೆ ಕಾರಣನಾದ ಬೈಕ್ ಸವಾರ
ಬೇರೊಂದು ವಾಹನ, ಬೇರೊಬ್ಬ ವ್ಯಕ್ತಿ ಅಥವಾ ಯಾವುದಾದರೂ ಪ್ರಾಣಿಗಳು ಹಠಾತ್ತನೇ ಅಡ್ಡ ಬಂದಾಗ ಅಪಘಾತಗಳು ಸಂಭವಿಸುತ್ತವೆ ಎಂಬುದು ಈ ಹಿಂದೆ ನಡೆದಿರುವ ಅಪಘಾತಗಳಿಂದ ಸಾಬೀತಾಗಿವೆ.
ಕೆಲವೊಮ್ಮೆ ಚಾಲಕನು ಕುಡಿದು ವಾಹನ ಚಾಲನೆ ಮಾಡುವಾಗ ರಸ್ತೆಯ ಮೇಲೆ ಮಾತ್ರ ಗಮನಹರಿಸಿದ್ದರೆ ಅಪಘಾತಗಳು ಸಂಭವಿಸುವುದಿಲ್ಲ. ಆದರೆ ಯಾರಾದರೂಇದ್ದಕ್ಕಿದ್ದಂತೆ ಅಡ್ಡ ಬರುವುದರಿಂದ ಯಾವುದೇ ವಾಹನ ಚಾಲಕನಾಗಿರಲಿ ವಾಹನದ ಮೇಲೆ ನಿಯಂತ್ರಣ ಕಳೆದುಕೊಳ್ಳುತ್ತಾನೆ.
ಒಮ್ಮೊಮ್ಮೆ ದ್ವಿಚಕ್ರ ಹಾಗೂ ಸಣ್ಣ ವಾಹನಗಳನ್ನು ಕಂಟ್ರೋಲ್ ಮಾಡಬಹುದು. ಆದರೆ ವೇಗವಾಗಿ ಸಾಗುತ್ತಿರುವ ಲಾರಿ, ಬಸ್ ಹಾಗೂ ಟ್ರಕ್'ನಂತಹ ವಾಹನಗಳನ್ನು ಒಮ್ಮೆಲೆ ಕಂಟ್ರೋಲ್ ಮಾಡುವುದಕ್ಕೆ ಅವುಗಳನ್ನು ಚಾಲನೆ ಮಾಡುವವರಿಗೆ ಕಷ್ಟವಾಗುತ್ತದೆ.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ
ಕಳೆದ ಸೋಮವಾರ ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಈ ಅಪಘಾತಕ್ಕೆ ಸಂಬಂಧಿಸಿದ ಸಿಸಿಟಿವಿ ವಿಡಿಯೋ ಎರಡು ಕೋನಗಳಿಂದ ಅಪಘಾತವನ್ನು ತೋರಿಸುತ್ತದೆ.
ಈ ವೀಡಿಯೊವನ್ನು ನೋಡಿದಾಗ ಅಪಘಾತಕ್ಕೆ ಬೈಕ್ ಸವಾರ ಹಾಗೂ ಲಾರಿ ಡ್ರೈವರ್ ಇಬ್ಬರ ತಪ್ಪು ಕಂಡು ಬರುತ್ತದೆ. ಜನರು ಹೆಚ್ಚಾಗಿ ಸಂಚರಿಸುವ ಪ್ರದೇಶದಲ್ಲಿ ವೇಗವಾಗಿ ಬಂದಿದ್ದು ಲಾರಿ ಚಾಲಕನ ತಪ್ಪು.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು
ಆತ ಸರಿಯಾದ ಮಾರ್ಗದಲ್ಲಿಯೇ ಬಂದಿದ್ದಾನೆ. ಆದರೆ ಬೈಕ್ ಸವಾರನಿಗೆ ಗುದಿಯುವುದನ್ನು ತಪ್ಪಿಸಲು ಲಾರಿಯನ್ನು ಬಲಕ್ಕೆ ತಿರುಗಿಸಿದ್ದಾನೆ. ಹೀಗಾಗಿ ಈ ಅಪಘಾತಕ್ಕೆ ಬೈಕ್ ಸವಾರನೇ ಸಂಪೂರ್ಣ ಕಾರಣನೆಂದು ಹೇಳಬಹುದು.
ರಸ್ತೆಯನ್ನು ದಾಟಲು ಪ್ರಯತ್ನಿಸಿದ ಬೈಕ್ ಸವಾರ ತನ್ನ ಬಲಭಾಗದಲ್ಲಿ ಲಾರಿ ಬರುವುದನ್ನು ಗಮನಿಸಿಲ್ಲ. ಬೈಕ್ ಸವಾರ ರಸ್ತೆಯ ಮೇಲೆ ಗಮನ ಹರಿಸದಿರುವುದೇ ಈ ಅಪಘಾತಕ್ಕೆ ಕಾರಣ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ
ಬೈಕಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಟ್ರಕ್ ಅನ್ನು ಎದುರು ರಸ್ತೆಗೆ ತಿರುಗಿದ ಲಾರಿಗೆ ಎದುರುಗಡೆಯಿಂದ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಎದುರುಗಡೆಯಿಂದ ಬಂದ ಲಾರಿಗೆ ಡಿಕ್ಕಿ ಹೊಡೆದ ಲಾರಿ, ಪಲ್ಟಿ ಹೊಡೆಯುವುದನ್ನು ಈ ವೀಡಿಯೊದಲ್ಲಿ ಕಾಣಬಹುದು.
ಬೈಕ್ ಸವಾರ ವೇಗವಾಗಿ ಸಾಗಿದ್ದರೆ ಅಥವಾ ಹಿಂದೆ ಸರಿದಿದ್ದರೆ ಈ ಭೀಕರ ಅಪಘಾತ ಸಂಭವಿಸುತ್ತಿರಲಿಲ್ಲ. ಮುಂಜಾನೆ ವೇಳೆ ಈ ಅಪಘಾತ ಸಂಭವಿಸಿದ ಕಾರಣಕ್ಕೆ ಎರಡು ಲಾರಿಗಳನ್ನು ಹೊರತುಪಡಿಸಿ ಬೇರೆ ಯಾವುದೇ ವಾಹನಗಳಿಗೆ ಯಾವುದೇ ಹಾನಿ ಸಂಭವಿಸಿಲ್ಲ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು
ಈ ಎರಡೂ ಲಾರಿಗಳ ಚಾಲಕರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ವರದಿಯಾಗಿದೆ. ಭೀಕರ ಅಪಘಾತಕ್ಕೆ ಕಾರಣನಾದ ಬೈಕ್ ಸವಾರನನ್ನು ಬಂಧಿಸಿ, ಆತನ ಡ್ರೈವಿಂಗ್ ಲೈಸೆನ್ಸ್ ರದ್ದುಪಡಿಸಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.
ಸ್ಥಳದಲ್ಲಿ ಸಿಸಿಟಿವಿ ಇಲ್ಲದಿದ್ದರೆ ಈ ಅಪಘಾತದ ಹೊಣೆ ಟ್ರಕ್ ಚಾಲಕನ ಮೇಲೆ ಬೀಳುತ್ತಿತ್ತು. ಬೈಕ್ ಸವಾರ ತಪ್ಪಿಸಿಕೊಳ್ಳುತ್ತಿದ್ದ. ಆದರೆ ಸಿಸಿಟಿವಿಯಿಂದಾಗಿ ಬೈಕ್ ಸವಾರನ ಅಚಾತುರ್ಯ ಬೆಳಕಿಗೆ ಬಂದಿದೆ.