Just In
- 2 hrs ago
ಕೊನೆಯ ಆಸೆಯೆಂತೆ ರಾಜಕುಮಾರ ಪ್ರಿನ್ಸ್ ಫಿಲಿಪ್ ಅಂತಿಮ ಯಾತ್ರೆಗೆ ಸಿದ್ದವಾಗಿದೆ ಮಾಡಿಫೈ ಲ್ಯಾಂಡ್ ರೋವರ್
- 4 hrs ago
ಜಪಾನ್ನಲ್ಲಿ ಬಿಡುಗಡೆಯಾಯ್ತು ಮೇಡ್ ಇನ್ ಇಂಡಿಯಾ 2021ರ ಸುಜುಕಿ ಜಿಕ್ಸರ್ 250 ಬೈಕ್
- 4 hrs ago
ಆಕರ್ಷಕ ಬೆಲೆಯಲ್ಲಿ ದೇಶದ ಮೊದಲ ಹೈಬ್ರಿಡ್ ಟ್ರ್ಯಾಕ್ಟರ್ ಬಿಡುಗಡೆ
- 5 hrs ago
ಬೆಲೆ ಏರಿಕೆ ಪಡೆದುಕೊಂಡ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್
Don't Miss!
- News
ಬೆಂಗಳೂರಿನಲ್ಲಿ ಭೀತಿ: ಕೊರೊನಾ ಹೆಚ್ಚು ರೆಮ್ಡೆಸಿವಿರ್ ಔಷಧಿ ಕಡಿಮೆ!
- Sports
ಐಪಿಎಲ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ಆರ್ಸಿಬಿ!
- Finance
ಚಿನ್ನ, ಬೆಳ್ಳಿ ಸ್ವಲ್ಪ ಕುಸಿತ: ಏಪ್ರಿಲ್ 14ರಂದು ಎಲ್ಲೆಡೆ ಬೆಲೆ ಎಷ್ಟಿದೆ?
- Movies
40, 50, 60ರ ಸೀಕ್ರೆಟ್ ಬಿಚ್ಚಿಟ್ಟ ಕ್ರೇಜಿಸ್ಟಾರ್ ರವಿಚಂದ್ರನ್
- Education
SSLC Exams 2021: ಸಿಬಿಎಸ್ಇ ಪರೀಕ್ಷೆ ರದ್ದು ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಊಹಾಪೋಹ: ಸುರೇಶ್ ಕುಮಾರ್ ಸ್ಪಷ್ಟನ
- Lifestyle
ನಿಮ್ಮ ಮಗು 10ವರ್ಷ ತಲುಪುವಾಗ ಕಲಿಸಬೇಕಾದ ಜೀವನ ಕೌಶಲ್ಯಗಳಿವು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭೀಕರ ರಸ್ತೆ ಅಪಘಾತಕ್ಕೆ ಕಾರಣನಾದ ಬೈಕ್ ಸವಾರ
ಬೇರೊಂದು ವಾಹನ, ಬೇರೊಬ್ಬ ವ್ಯಕ್ತಿ ಅಥವಾ ಯಾವುದಾದರೂ ಪ್ರಾಣಿಗಳು ಹಠಾತ್ತನೇ ಅಡ್ಡ ಬಂದಾಗ ಅಪಘಾತಗಳು ಸಂಭವಿಸುತ್ತವೆ ಎಂಬುದು ಈ ಹಿಂದೆ ನಡೆದಿರುವ ಅಪಘಾತಗಳಿಂದ ಸಾಬೀತಾಗಿವೆ.

ಕೆಲವೊಮ್ಮೆ ಚಾಲಕನು ಕುಡಿದು ವಾಹನ ಚಾಲನೆ ಮಾಡುವಾಗ ರಸ್ತೆಯ ಮೇಲೆ ಮಾತ್ರ ಗಮನಹರಿಸಿದ್ದರೆ ಅಪಘಾತಗಳು ಸಂಭವಿಸುವುದಿಲ್ಲ. ಆದರೆ ಯಾರಾದರೂಇದ್ದಕ್ಕಿದ್ದಂತೆ ಅಡ್ಡ ಬರುವುದರಿಂದ ಯಾವುದೇ ವಾಹನ ಚಾಲಕನಾಗಿರಲಿ ವಾಹನದ ಮೇಲೆ ನಿಯಂತ್ರಣ ಕಳೆದುಕೊಳ್ಳುತ್ತಾನೆ.

ಒಮ್ಮೊಮ್ಮೆ ದ್ವಿಚಕ್ರ ಹಾಗೂ ಸಣ್ಣ ವಾಹನಗಳನ್ನು ಕಂಟ್ರೋಲ್ ಮಾಡಬಹುದು. ಆದರೆ ವೇಗವಾಗಿ ಸಾಗುತ್ತಿರುವ ಲಾರಿ, ಬಸ್ ಹಾಗೂ ಟ್ರಕ್'ನಂತಹ ವಾಹನಗಳನ್ನು ಒಮ್ಮೆಲೆ ಕಂಟ್ರೋಲ್ ಮಾಡುವುದಕ್ಕೆ ಅವುಗಳನ್ನು ಚಾಲನೆ ಮಾಡುವವರಿಗೆ ಕಷ್ಟವಾಗುತ್ತದೆ.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಕಳೆದ ಸೋಮವಾರ ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಈ ಅಪಘಾತಕ್ಕೆ ಸಂಬಂಧಿಸಿದ ಸಿಸಿಟಿವಿ ವಿಡಿಯೋ ಎರಡು ಕೋನಗಳಿಂದ ಅಪಘಾತವನ್ನು ತೋರಿಸುತ್ತದೆ.

ಈ ವೀಡಿಯೊವನ್ನು ನೋಡಿದಾಗ ಅಪಘಾತಕ್ಕೆ ಬೈಕ್ ಸವಾರ ಹಾಗೂ ಲಾರಿ ಡ್ರೈವರ್ ಇಬ್ಬರ ತಪ್ಪು ಕಂಡು ಬರುತ್ತದೆ. ಜನರು ಹೆಚ್ಚಾಗಿ ಸಂಚರಿಸುವ ಪ್ರದೇಶದಲ್ಲಿ ವೇಗವಾಗಿ ಬಂದಿದ್ದು ಲಾರಿ ಚಾಲಕನ ತಪ್ಪು.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಆತ ಸರಿಯಾದ ಮಾರ್ಗದಲ್ಲಿಯೇ ಬಂದಿದ್ದಾನೆ. ಆದರೆ ಬೈಕ್ ಸವಾರನಿಗೆ ಗುದಿಯುವುದನ್ನು ತಪ್ಪಿಸಲು ಲಾರಿಯನ್ನು ಬಲಕ್ಕೆ ತಿರುಗಿಸಿದ್ದಾನೆ. ಹೀಗಾಗಿ ಈ ಅಪಘಾತಕ್ಕೆ ಬೈಕ್ ಸವಾರನೇ ಸಂಪೂರ್ಣ ಕಾರಣನೆಂದು ಹೇಳಬಹುದು.

ರಸ್ತೆಯನ್ನು ದಾಟಲು ಪ್ರಯತ್ನಿಸಿದ ಬೈಕ್ ಸವಾರ ತನ್ನ ಬಲಭಾಗದಲ್ಲಿ ಲಾರಿ ಬರುವುದನ್ನು ಗಮನಿಸಿಲ್ಲ. ಬೈಕ್ ಸವಾರ ರಸ್ತೆಯ ಮೇಲೆ ಗಮನ ಹರಿಸದಿರುವುದೇ ಈ ಅಪಘಾತಕ್ಕೆ ಕಾರಣ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಬೈಕಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಟ್ರಕ್ ಅನ್ನು ಎದುರು ರಸ್ತೆಗೆ ತಿರುಗಿದ ಲಾರಿಗೆ ಎದುರುಗಡೆಯಿಂದ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಎದುರುಗಡೆಯಿಂದ ಬಂದ ಲಾರಿಗೆ ಡಿಕ್ಕಿ ಹೊಡೆದ ಲಾರಿ, ಪಲ್ಟಿ ಹೊಡೆಯುವುದನ್ನು ಈ ವೀಡಿಯೊದಲ್ಲಿ ಕಾಣಬಹುದು.

ಬೈಕ್ ಸವಾರ ವೇಗವಾಗಿ ಸಾಗಿದ್ದರೆ ಅಥವಾ ಹಿಂದೆ ಸರಿದಿದ್ದರೆ ಈ ಭೀಕರ ಅಪಘಾತ ಸಂಭವಿಸುತ್ತಿರಲಿಲ್ಲ. ಮುಂಜಾನೆ ವೇಳೆ ಈ ಅಪಘಾತ ಸಂಭವಿಸಿದ ಕಾರಣಕ್ಕೆ ಎರಡು ಲಾರಿಗಳನ್ನು ಹೊರತುಪಡಿಸಿ ಬೇರೆ ಯಾವುದೇ ವಾಹನಗಳಿಗೆ ಯಾವುದೇ ಹಾನಿ ಸಂಭವಿಸಿಲ್ಲ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು
ಈ ಎರಡೂ ಲಾರಿಗಳ ಚಾಲಕರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ವರದಿಯಾಗಿದೆ. ಭೀಕರ ಅಪಘಾತಕ್ಕೆ ಕಾರಣನಾದ ಬೈಕ್ ಸವಾರನನ್ನು ಬಂಧಿಸಿ, ಆತನ ಡ್ರೈವಿಂಗ್ ಲೈಸೆನ್ಸ್ ರದ್ದುಪಡಿಸಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

ಸ್ಥಳದಲ್ಲಿ ಸಿಸಿಟಿವಿ ಇಲ್ಲದಿದ್ದರೆ ಈ ಅಪಘಾತದ ಹೊಣೆ ಟ್ರಕ್ ಚಾಲಕನ ಮೇಲೆ ಬೀಳುತ್ತಿತ್ತು. ಬೈಕ್ ಸವಾರ ತಪ್ಪಿಸಿಕೊಳ್ಳುತ್ತಿದ್ದ. ಆದರೆ ಸಿಸಿಟಿವಿಯಿಂದಾಗಿ ಬೈಕ್ ಸವಾರನ ಅಚಾತುರ್ಯ ಬೆಳಕಿಗೆ ಬಂದಿದೆ.