Just In
- 20 min ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 54 min ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- 1 hr ago ಹ್ಯುಂಡೈನ ಈ ಕಾರಿಗೆ ಭಾರತದಲ್ಲಿ ಭರ್ಜರಿ ಡಿಸ್ಕೌಂಟ್: ಇದಕ್ಕಿಂತ ಉತ್ತಮ ಆಫರ್ ಸದ್ಯಕ್ಕಿಲ್ಲ!
- 1 hr ago ರೈತರ ವಿಶ್ವಾಸದೊಂದಿಗೆ 40 ಲಕ್ಷ ಟ್ರ್ಯಾಕ್ಟರ್ ಮಾರಾಟ ಮೈಲಿಗಲ್ಲು ಸಾಧಿಸಿದ ಮಹೀಂದ್ರಾ
Don't Miss!
- News Lok Sabha Election 2024: ಈ 6 ಜಿಲ್ಲೆಗಳಲ್ಲಿ 0% ಮತದಾನ-ಎಲ್ಲಿ ಹಾಗೂ ಕಾರಣ ಏನು?
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Movies ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಂದಕಕ್ಕಿಳಿಯುತ್ತಿದ್ದ ಕಂದನನ್ನು ರಕ್ಷಿಸಿದ ಬೈಕ್ ಸವಾರ
ಭಾರತದ ರಸ್ತೆಗಳು ತುಂಬಾ ಅಪಾಯಕಾರಿಯಾಗಿವೆ. ಇಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು. ದನಗಳು ಅಥವಾ ಪಾದಚಾರಿಗಳು ಇದ್ದಕ್ಕಿದ್ದಂತೆ ಬಂದು ಅಪಘಾತಕ್ಕೆ ಕಾರಣವಾಗಬಹುದು. ಈ ಕಾರಣಕ್ಕೆ ವಾಹನಗಳು ಮಧ್ಯಮ ವೇಗದಲ್ಲಿ ಸಂಚರಿಸುವುದು ಒಳ್ಳೆಯದು.
ಇದರ ಜೊತೆಗೆ ಪೋಷಕರ ನಿರ್ಲಕ್ಷ್ಯದಿಂದಾಗಿ ಕೆಲವೊಮ್ಮೆ ಮಕ್ಕಳು ಸಹ ಅಪಘಾತಕ್ಕೀಡಾಗುತ್ತಾರೆ. ಕೆಲವು ಪೋಷಕರು ತಮ್ಮ ಮಕ್ಕಳನ್ನು ರಸ್ತೆಗಳಲ್ಲಿ ಬಿಡುತ್ತಾರೆ. ಪೋಷಕರು ಗಮನ ಹರಿಸದ ಕಾರಣ ಮಕ್ಕಳು ಅಪಘಾತಕ್ಕೆ ಸಿಲುಕುವ ಸಾಧ್ಯತೆಗಳು ಹೆಚ್ಚಿರುತ್ತವೆ.
ಇತ್ತೀಚಿಗೆ ಇದೇ ರೀತಿಯ ಘಟನೆಯೊಂದು ನಡೆದಿತ್ತು. ಆದರೆ ಬೈಕ್ ಸವಾರನೊಬ್ಬನ ಸಮಯ ಪ್ರಜ್ಞೆಯಿಂದಾಗಿ ಅನಾಹುತ ತಪ್ಪಿದೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು
ಚಲನಚಿತ್ರ ನಿರ್ಮಾಪಕ ನಿಲಾ ಮಾತಾಬ್ ಪಾಂಡಾ ಈ ವೀಡಿಯೊವನ್ನು ಟ್ವಿಟರ್ ನಲ್ಲಿ ಶೇರ್ ಮಾಡಿದ್ದಾರೆ. ನಿಜವಾದ ನಾಯಕರು ಈ ರೀತಿ ಇರುತ್ತಾರೆ ಎಂದು ಅವರು ಹೇಳಿದ್ದಾರೆ. ಈ ವೀಡಿಯೊದಲ್ಲಿ ಸ್ಟ್ರೋಲರ್ ನಲ್ಲಿದ್ದ ಮಗುವೊಂದು ಏಕಾಏಕಿ ರಸ್ತೆಯ ಮಧ್ಯಭಾಗಕ್ಕೆ ಬರುತ್ತದೆ.
ಸ್ಟ್ರೋಲರ್ ರಸ್ತೆಯ ಬದಿಗೆ ಹೋಗಿ ಇದ್ದಕ್ಕಿದ್ದಂತೆ ಕಂದಕಕ್ಕೆ ಇಳಿಯಲು ಆರಂಭಿಸುತ್ತದೆ. ಇದೇ ವೇಳೆ ಯುವಕನೊಬ್ಬ ದ್ವಿಚಕ್ರ ವಾಹನದಲ್ಲಿ ಅಲ್ಲಿಗೆ ಬಂದಿದ್ದಾನೆ. ತಕ್ಷಣವೇ ಬೈಕ್ ಬಿಟ್ಟು ಮಗುವನ್ನು ರಕ್ಷಿಸಲು ಮುಂದಾಗಿದ್ದಾನೆ.
MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ
ಬೈಕ್ ಸವಾರ ಓಡಿ ಬಂದು ಮಗುವನ್ನು ರಕ್ಷಿಸಿದ್ದಾನೆ. ಈ ಘಟನೆಯ ನಂತರ ಮಹಿಳೆಯೊಬ್ಬರು ಸ್ಥಳಕ್ಕೆ ಧಾವಿಸಿದ್ದಾರೆ. ಬೈಕ್ ಸವಾರ ತಾನು ರಕ್ಷಿಸಿದ ಮಗುವನ್ನು ಆಕೆಗೆ ನೀಡಿದ್ದಾನೆ.
ಯಾವುದೇ ಕಾರಣಕ್ಕೂ ಮಕ್ಕಳನ್ನು ಒಂಟಿಯಾಗಿ ಬಿಡಬಾರದು ಎಂಬುದನ್ನು ಈ ಘಟನೆಯಿಂದ ಕಲಿಯಬಹುದು. ಮಗು ಏಕಾಏಕಿ ರಸ್ತೆಗೆ ಬಂದಾಗ ಅದೃಷ್ಟವಶಾತ್ ಯಾವುದೇ ವಾಹನಗಳು ಅಲ್ಲಿಗೆ ಬಂದಿಲ್ಲ.
MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ
ಸಾಮಾನ್ಯವಾಗಿ ಭಾರತದ ರಸ್ತೆಗಳಲ್ಲಿ ಸಂಚರಿಸುವ ವಾಹನಗಳು ಹೆಚ್ಚಿನ ವೇಗದಲ್ಲಿರುತ್ತವೆ. ಒಂದು ವೇಳೆ ಯಾವುದೇ ವಾಹನವು ವೇಗದಲ್ಲಿ ಬಂದಿದ್ದರೆ, ಈ ಘಟನೆಯ ಪರಿಣಾಮ ಬೇರೆಯೇ ಆಗಿರುತ್ತಿತ್ತು. ಈ ಘಟನೆ ಎಲ್ಲಿ ನಡೆಯಿತು, ಯಾವಾಗ ಸಂಭವಿಸಿತು ಎಂಬುದು ನಿಖರವಾಗಿ ತಿಳಿದಿಲ್ಲ.
ಮತ್ತೊಂದು ಅಂಶವೆಂದರೆ ಮಗುವನ್ನು ರಕ್ಷಿಸಿದ ಯುವಕ ನಿಧಾನವಾಗಿ ಬೈಕ್ ಚಾಲನೆ ಮಾಡಿಕೊಂಡು ಸಾಗುತ್ತಿದ್ದ. ಈ ಕಾರಣಕ್ಕೆ ಹಠಾತ್ತನೇ ಬ್ರೇಕ್ ಹಾಕಿ ಬೈಕ್ ನಿಲ್ಲಿಸಿದ್ದಾನೆ. ಒಂದು ವೇಳೆ ಯುವಕ ಬೈಕ್ ಅನ್ನು ವೇಗವಾಗಿ ಚಾಲನೆ ಮಾಡುತ್ತಿದ್ದರೆ, ಮಗುವಿಗೆ ಅಪಾಯವಾಗುವ ಸಾಧ್ಯತೆಗಳಿದ್ದವು.
MOST READ:ಒಂದು ವರ್ಷದಿಂದ ಚಲಿಸಿದರೂ ಇನ್ನೂ ಗುರಿ ಮುಟ್ಟದ ಟ್ರಕ್
ಬೈಕ್ ವೇಗದಲ್ಲಿದ್ದಾಗ ಬ್ರೇಕ್ ಹಾಕಿದರೆ ಎಡವಿ ಬೀಳುವ ಸಾಧ್ಯತೆಗಳಿರುತ್ತವೆ. ಭಾರತದ ರಸ್ತೆಗಳಲ್ಲಿ ಏನು ಬೇಕಾದರೂ ಆಗುತ್ತದೆ ಎಂಬುದಕ್ಕೆ ಇದು ಮತ್ತೊಂದು ಉದಾಹರಣೆ. ಕುರಿ, ಹಸು, ನಾಯಿ, ಅಥವಾ ರಸ್ತೆ ದಾಟಲು ಪ್ರಯತ್ನಿಸುತ್ತಿರುವ ಪಾದಚಾರಿಗಳು ನಿಮ್ಮ ವಾಹನಕ್ಕೆ ಇದ್ದಕ್ಕಿದ್ದಂತೆ ಅಡ್ಡ ಬರಬಹುದು.
ತುಂಬಾ ವೇಗವಾಗಿ ಚಲಿಸುತ್ತಿದ್ದರೆ ವಾಹನವನ್ನು ನಿಯಂತ್ರಿಸುವುದು ಕಷ್ಟವಾಗುತ್ತದೆ. ಆದ್ದರಿಂದ ಮಧ್ಯಮ ವೇಗದಲ್ಲಿ ವಾಹನಗಳನ್ನು ಚಾಲನೆ ಮಾಡುವುದು ಒಳ್ಳೆಯದು.