Just In
- 10 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 13 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 13 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 15 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾಜಿ ಕ್ರಿಕೆಟಿಗ, ಸಂಸದ ಗೌತಮ್ ಗಂಭೀರ್ ತಂದೆ ಕಾರು ಕದ್ದ ಖದೀಮರು
ಭಾರತದ ವಿವಿಧ ಭಾಗಗಳಲ್ಲಿ ವಾಹನಗಳು ಕಳ್ಳತನವಾಗುತ್ತಲೇ ಇರುತ್ತವೆ. ವಾಹನಗಳ ಮಾಲೀಕರು ಎಷ್ಟೇ ಮುನ್ನೆಚ್ಚರಿಕೆ ವಹಿಸಿದರೂ ಕಳ್ಳತನವಾಗುವುದನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ವಾಹನಗಳ್ಳರು ಹೊಸ ಹೊಸ ಮಾರ್ಗಗಳನ್ನು ಹುಡುಕುತ್ತಿರುವುದೇ ಇದಕ್ಕೆ ಮುಖ್ಯ ಕಾರಣ.
ಗೌತಮ್ ಗಂಭೀರ್ ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ. ಕ್ರಿಕೆಟ್ಗೆ ವಿದಾಯ ಹೇಳಿರುವ ಗಂಭೀರ್ ಸದ್ಯಕ್ಕೆ ರಾಜಕಾರಣಿಯಾಗಿದ್ದಾರೆ. ಭಾರತೀಯ ಜನತಾ ಪಕ್ಷದ ಸಂಸದರಾಗಿರುವ ಗಂಭೀರ್ ರಾಜಕೀಯದತ್ತ ಗಮನ ಹರಿಸಿದ್ದಾರೆ.
ಗೌತಮ್ ಗಂಭೀರ್ ಅವರ ತಂದೆ ದೀಪಕ್ ಗಂಭೀರ್ರವರಿಗೆ ಸೇರಿದ ಟೊಯೊಟಾ ಫಾರ್ಚೂನರ್ ಕಾರನ್ನು ಅಪರಿಚಿತರು ಕದ್ದಿದ್ದಾರೆ. ಮೇ 28ರ ತಡರಾತ್ರಿ ಅವರ ಮನೆಯ ಹೊರಗೆ ನಿಲ್ಲಿಸಿದ್ದ ಕಾರನ್ನು ಕಳ್ಳರು ಕದ್ದಿದ್ದಾರೆ. ಸಿಸಿಟಿವಿ ಕ್ಯಾಮೆರಾದಲ್ಲಿ ಕಳ್ಳರು ಟೊಯೊಟಾ ಫಾರ್ಚೂನರ್ ಕಾರನ್ನು ಕದಿಯುತ್ತಿರುವ ದೃಶ್ಯಗಳು ಸೆರೆಯಾಗಿವೆ.
MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ
ಈ ಘಟನೆ ಮಧ್ಯ ದೆಹಲಿಯ ರಾಜೇಂದ್ರ ನಗರದಲ್ಲಿ ನಡೆದಿದೆ. ಸದ್ಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದಾಗ ಗೌತಮ್ ಗಂಭೀರ್ರವರ ಕುಟುಂಬ ಸದಸ್ಯರು ಮನೆಯಲ್ಲಿರಲಿಲ್ಲ ಎಂದು ಹೇಳಲಾಗಿದೆ.
ಕಾರು ಕಳುವಾಗಿದ್ದು ಗಮನಕ್ಕೆ ಬಂದ ಕೂಡಲೇ ಪೊಲೀಸರಿಗೆ ದೂರು ನೀಡಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ವಿಧಿವಿಜ್ಞಾನ ವಿಭಾಗದ ನೆರವನ್ನು ಕೋರಿದ್ದಾರೆ. ಈ ಘಟನೆ ವಾಹನ ಮಾಲೀಕರಿಗೆ ಆಘಾತವನ್ನುಂಟು ಮಾಡಿದೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಕಾರು ಕದಿಯಲು ಕಳ್ಳರು ಮತ್ತೊಂದು ಕಾರಿನಲ್ಲಿ ಬಂದಿದ್ದರು. ಕಾರು ಕದಿಯಲು ಹೆಚ್ಚು ಸಮಯ ತೆಗೆದುಕೊಳ್ಳದೇ, ಕಾರು ಅಲಾರಂ ಮಾಡದಂತೆ ನೋಡಿಕೊಂಡು ಕೇವಲ 4-5 ನಿಮಿಷಗಳಲ್ಲಿ ತಮ್ಮ ಕೆಲಸವನ್ನು ಮುಗಿಸಿದ್ದಾರೆ. ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಕಳುವಾಗಿರುವ ಟೊಯೊಟಾ ಫಾರ್ಚೂನರ್ ಹೊಸ ತಲೆಮಾರಿನ ಕಾರ್ ಆಗಿದ್ದು, ಹೆಚ್ಚಿನ ಸುರಕ್ಷತಾ ಫೀಚರ್ಗಳನ್ನು ಹೊಂದಿದೆ. ಈ ಕಾರಿನಲ್ಲಿ ಎಂಜಿನ್ ಇಮ್ಮೊಬಿಲೈಜರ್ ಕೂಡ ಅಳವಡಿಸಲಾಗಿದೆ. ಆದರೂ ಕಳ್ಳರು ಹೈಟೆಕ್ ಸಾಧನಗಳನ್ನು ಬಳಸಿ ಕಾರ್ ಅನ್ನು ಕದ್ದಿದ್ದಾರೆ. ಈ ಹೈಟೆಕ್ ಸಾಧನಗಳ ಬೆಲೆ ತುಂಬಾ ದುಬಾರಿಯಾಗಿದೆ.
MOSTREAD: ನಟ ವಿಕ್ರಮ್ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್
ಈ ಹೈಟೆಕ್ ಸಾಧನಗಳನ್ನು ಅಭಿವೃದ್ಧಿ ಹೊಂದಿದ ದೇಶಗಳ ಪ್ರಮುಖ ಕಾರು ತಯಾರಕ ಕಂಪನಿಗಳು ಅಭಿವೃದ್ಧಿಪಡಿಸುತ್ತವೆ. ಇದರ ಜೊತೆಗೆ ಕೀಗಳನ್ನು ಡುಪ್ಲಿಕೇಟ್ ಮಾಡುವ ಮತ್ತೊಂದು ಮಾರ್ಗವನ್ನು ಕಂಡುಕೊಂಡಿದ್ದಾರೆ. ಸರ್ವೀಸ್ ಸೆಂಟರ್ ಅಥವಾ ಇನ್ನಾವುದೋ ಸ್ಥಳಗಳಿಗೆ ಹೋದಾಗ ಕಾರು ಮಾಲಿಕರಿಂದ ಕೀ ಪಡೆಯಲಾಗುತ್ತದೆ.
ಅತ್ಯಾಧುನಿಕ ಟೆಕ್ನಾಲಜಿಗಳನ್ನು ಬಳಸಿಕೊಂಡು ಕೀಗಳನ್ನು ಡೂಪ್ಲಿಕೇಟ್ ಮಾಡಲಾಗುತ್ತದೆ. ಡೂಪ್ಲಿಕೇಟ್ ಮಾಡಲಾದ ಕೀ ಬಳಸಿ ಕಾರಿನಲ್ಲಿ ಅಲಾರಂ ಬರದಂತೆ ಮಾಡಿ ಕಾರುಗಳನ್ನು ಕದಿಯುತ್ತಾರೆ. ಸರ್ವೀಸ್ ಸೆಂಟರ್ಗಳಲ್ಲಿ ನಕಲಿ ದಾಖಲೆಗಳನ್ನು ನೀಡಿ ಕೆಲಸಕ್ಕೆ ಸೇರಿಕೊಳ್ಳುವ ಕಳ್ಳರು ಈ ಕೃತ್ಯಗಳನ್ನು ಎಸಗುತ್ತಿದ್ದಾರೆ.
MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!
ಈ ಡೂಪ್ಲಿಕೇಟ್ ಕೀಗಳನ್ನು ಬಳಸಿ ಕಾರುಗಳನ್ನು ಸುಲಭವಾಗಿ ಕದಿಯಬಹುದು. ಕಾರು ಮಾಲೀಕರು ಸರ್ವೀಸ್ ಸೆಂಟರ್ಗಳಲ್ಲಿ ಬೇರೆಯವರಿಗೆ ತಮ್ಮ ಕೀಗಳನ್ನು ನೀಡುವ ಮುನ್ನ ಜಾಗರೂಕತೆ ವಹಿಸುವುದು ಒಳ್ಳೆಯದು. ಕಾರಿನಲ್ಲಿ ಟ್ರ್ಯಾಕಿಂಗ್ ಸಾಧನಗಳನ್ನು ಹೊಂದಿದ್ದರೆ ಕಳುವಾದ ಕಾರನ್ನು ಮರಳಿ ಪಡೆಯಬಹುದು.
ಕಾರು ಮಾಲೀಕರು ಟ್ರ್ಯಾಕಿಂಗ್ ಸಾಧನಗಳನ್ನು ಬಳಸುವುದು ಉತ್ತಮ. ಅವುಗಳ ಬೆಲೆ ಸಹ ದುಬಾರಿಯೇನಲ್ಲ. ದುಬಾರಿ ಕಾರುಗಳನ್ನು ಹೊಂದಿರುವವರು ಟ್ರ್ಯಾಕಿಂಗ್ ಸಾಧನಗಳನ್ನು ಬಳಸುವುದು ಅಗತ್ಯ.