Just In
- 44 min ago ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- 53 min ago ನಿಮ್ಮ ಬಳಿ 7 ಲಕ್ಷ ರೂಪಾಯಿ ಇದ್ದರೆ ಸಾಕು.. ಕನಸಿನ ಕಾರನ್ನು ಮನೆ ತರಬಹುದು!
- 16 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 16 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
Don't Miss!
- Movies ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- News Heavy Rain: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು: ಸಿಡಿಲು ಬಡಿದು 25 ಮೇಕೆಗಳ ಸಾವು
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Finance ಸುಗಮ, ಸುರಕ್ಷಿತ ಸಂಚಾರಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ ಬೆಂಗಳೂರು ಸಂಚಾರಿ ಪೊಲೀಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ ಡೌನ್ ಹಿನ್ನೆಲೆ: ದುಬಾರಿ ಬೆಲೆಯ ಬೈಕ್ ಕದ್ದ ಖದೀಮರು..!
ಕರೋನಾ ವೈರಸ್ ಕಾರಣಕ್ಕೆ ಪ್ರಪಂಚದ ಬಹುತೇಕ ಎಲ್ಲಾ ದೇಶಗಳಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಭಾರತದಲ್ಲಿಯೂ ಏಪ್ರಿಲ್ 14ರವರೆಗೆ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಕರೋನಾ ವೈರಸ್ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಈ ಲಾಕ್ ಡೌನ್ ಅನ್ನು ವಿಸ್ತರಿಸಬಹುದು ಎಂದು ಹೇಳಲಾಗುತ್ತಿದೆ.
ಆದರೆ, ಈ ಕುರಿತು ಯಾವುದೇ ಅಧಿಕೃತ ಮಾಹಿತಿ ಬಿಡುಗಡೆಯಾಗಿಲ್ಲ. ಇದರ ಜೊತೆಗೆ ಲಾಕ್ ಡೌನ್ ಅನ್ನು ವಿಸ್ತರಿಸುವ ಉದ್ದೇಶವಿಲ್ಲವೆಂದು ಕೇಂದ್ರ ಸರ್ಕಾರವು ಹೇಳಿದೆ. ರಾಜ್ಯ ಸರ್ಕಾರಗಳು ಈ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಲಾಕ್ ಡೌನ್ ಅನ್ನು ವಿಸ್ತರಿಸಿದರೆ ಜನರು ಇನ್ನೂ ಕೆಲವು ದಿನಗಳ ಕಾಲ ಮನೆಯಲ್ಲಿಯೇ ಉಳಿಯಬೇಕಾಗುತ್ತದೆ. ಇದರಿಂದಾಗಿ ಸಮಾಜ ವಿರೋಧಿಗಳು ಇದರ ಲಾಭವನ್ನು ಪಡೆಯುತ್ತಿದ್ದಾರೆ.
ಕೆಲ ಸಮಾಜ ವಿರೋಧಿಗಳು ದರೋಡೆ ಹಾಗೂ ಕಳ್ಳತನದಂತಹ ಕೃತ್ಯಗಳಲ್ಲಿ ತೊಡಗಿದ್ದಾರೆ. ಇಂತಹ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಲಾಕ್ ಡೌನ್ ಸಮಯದಲ್ಲಿ ದುಬಾರಿ ಬೆಲೆಯ ಬಿಎಂಡಬ್ಲ್ಯು ಜಿ 310 ಆರ್ ಬೈಕ್ ಅನ್ನು ಕದಿಯಲಾಗಿದೆ. ಈ ಬೈಕಿನ ಬೆಲೆ ಭಾರತದಲ್ಲಿ ರೂ.3 ಲಕ್ಷಗಳಾಗಿದೆ.
ಬೆಂಗಳೂರಿನ ಸೂರಜ್ ಎಂಬಾತನೇ ದುಬಾರಿ ಬೆಲೆಯ ಬಿಎಂಡಬ್ಲ್ಯು ಜಿ 310 ಆರ್ ಬೈಕ್ ಕಳೆದುಕೊಂಡ ಯುವಕ. ಲಾಕ್ ಡೌನ್ ಕಾರಣಕ್ಕೆ ಮನೆಯಿಂದ ಹೊರಬಾರದ ಸೂರಜ್ ತಾವು ವಾಸವಿರುವ ಅಪಾರ್ಟ್ಮೆಂಟ್ ಪಾರ್ಕಿಂಗ್ ನಲ್ಲಿ ತಮ್ಮ ಬೈಕ್ ಅನ್ನು ಪಾರ್ಕ್ ಮಾಡಿದ್ದಾರೆ.
ಈ ಪರಿಸ್ಥಿತಿಯ ಲಾಭವನ್ನು ಪಡೆದ ಕಿಡಿಗೇಡಿಯೊಬ್ಬ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಬಿಎಂಡಬ್ಲ್ಯು ಬೈಕ್ ಅನ್ನು ಕದ್ದಿದ್ದಾನೆ. ಲಾಕ್ ಡೌನ್ ನಿಂದ ಮನೆಯೊಳಗಿದ್ದ ಸೂರಜ್ ಬೈಕ್ ಕಾಣೆಯಾಗಿರುವುದನ್ನು ನೋಡಿ ಆಘಾತಕ್ಕೊಳಗಾಗಿದ್ದಾರೆ.
ಮಾರ್ಚ್ 28ರಂದು ಕೊನೆಯ ಬಾರಿಗೆ ಪಾರ್ಕಿಂಗ್ ನಲ್ಲಿ ತಮ್ಮ ಬೈಕ್ ಅನ್ನು ನೋಡಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಅವರು ಮಾರ್ಚ್ 28 ಹಾಗೂ ಏಪ್ರಿಲ್ 1ರ ನಡುವೆ ಬೈಕ್ ಕಳ್ಳತನವಾಗಿದೆ ಎಂದು ಹೇಳಿದ್ದಾರೆ.
ಕೆಎ05 ಕೆಪಿ5515 ರಿಜಿಸ್ಟರ್ ನಂಬರ್ ಹೊಂದಿರುವ ಈ ಬಿಎಂಡಬ್ಲ್ಯು ಬೈಕ್ಗಾಗಿ ಪೊಲೀಸರು ಹುಡುಕಾಡುತ್ತಿದ್ದಾರೆ. ಸೂರಜ್ ರವರು ತಂಗಿರುವ ಅಪಾರ್ಟ್ಮೆಂಟ್ ಸುತ್ತಲಿನ ಪ್ರದೇಶವನ್ನು ಪರಿಶೀಲನೆ ನಡೆಸಲಾಗುತ್ತಿದೆ.
ಸೂರಜ್ ರವರ ಬಿಎಂಡಬ್ಲ್ಯು ಬೈಕಿನಲ್ಲಿ ಜಿಪಿಎಸ್ ಫೀಚರ್ ಇಲ್ಲದ ಕಾರಣಕ್ಕೆ ಈ ಬೈಕ್ ಅನ್ನು ಪತ್ತೆ ಹಚ್ಚುವುದು ಸವಾಲಿನ ಕೆಲಸವಾಗಿದೆ. ಇದರ ಜೊತೆಗೆ ಸೂರಜ್ ರವರು ವಾಸವಿದ್ದ ಅಪಾರ್ಟ್ಮೆಂಟ್ ನಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿಲ್ಲ.
ಈ ಕಾರಣಗಳಿಗಾಗಿ ಬೈಕ್ ಹುಡುಕಲು ಪೊಲೀಸರಿಗೆ ಕಷ್ಟವಾಗುತ್ತಿದ್ದು, ಸೂರಜ್ ರವರ ಅಪಾರ್ಟ್ಮೆಂಟ್ ಸುತ್ತಮುತ್ತ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆ ನಡೆಸಲಾಗುತ್ತಿದೆ. ಲಾಕ್ ಡೌನ್ ನಂತಹ ಸಂದರ್ಭದಲ್ಲಿಯೂ ಇಂತಹ ನಿಜ ಕೆಲಸಕ್ಕೆ ಕಿಡಿಗೇಡಿಗಳು ಕೈ ಹಾಕಿರುವುದು ನಿಜಕ್ಕೂ ಅಸಹ್ಯಕರ.