Just In
- 2 hrs ago ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- 3 hrs ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- 4 hrs ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 4 hrs ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
Don't Miss!
- Lifestyle ಹೋಳಿ ದಿನ ಸ್ಕೂಟಿಯಲ್ಲಿ ಟೈಟಾನಿಕ್ ಪೋಸ್ ನೀಡಿ ದೊಪ್ಪೆಂದು ಬಿದ್ದ ಹುಡುಗಿಗೆ ಬಿತ್ತು ದುಬಾರಿ ಫೈನ್
- News ಮಳೆ ಬರದೇ ಇದ್ದರೆ ಮುಗೀತು ಕಥೆ!
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Movies Puttakkana Makkalu:ಈ ಬಾರಿ ಸಹನಾ ಹೊಗಳಿದ ಅಭಿಮಾನಿಗಳು: ಪುಟ್ಟಕ್ಕನ ನಡವಳಿಕೆಗೆ ಫ್ಯಾನ್ಸ್ ಬೇಸರ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರೋನಾ ಸೋಂಕಿತರಿಗಾಗಿ ಬಳಕೆಯಾಗಲಿದೆ ಬುದ್ಧ ಇಂಟರ್ ನ್ಯಾಷನಲ್ ಸರ್ಕ್ಯೂಟ್
ದೇಶಾದ್ಯಂತ ಹರಡುತ್ತಿರುವ ಕರೋನಾ ವೈರಸ್ ಅನ್ನು ತಡೆಗಟ್ಟುವ ಕಾರಣಕ್ಕೆ ಇಡೀ ದೇಶವನ್ನು ಲಾಕ್ ಡೌನ್ ಮಾಡಲು ಕೇಂದ್ರ ಸರ್ಕಾರವು ಆದೇಶಿಸಿದೆ. ಈ ಲಾಕ್ಡೌನ್ನಿಂದಾಗಿ ಕರೋನಾ ವೈರಸ್ ಹರಡುವುದನ್ನು ತಡೆಯಬಹುದು ಎಂದು ಹೇಳಲಾಗಿದೆ.
ಆದರೆ ಈ ಲಾಕ್ಡೌನ್ನಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಹೆಚ್ಚಿನ ಸಂಖ್ಯೆಯ ಕೂಲಿ ಕಾರ್ಮಿಕರು ಕೆಲಸವಿಲ್ಲದ ಕಾರಣ ದಿಕ್ಕು ದೋಚದಂತಾಗಿದ್ದಾರೆ. ಉತ್ತರ ಪ್ರದೇಶ ಹಾಗೂ ಬಿಹಾರದ ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ದೆಹಲಿಗೆ ಕೆಲಸಕ್ಕಾಗಿ ಗುಳೆ ಹೋಗಿದ್ದಾರೆ.
ಲಾಕ್ಡೌನ್ ಮಾಡಿರುವ ಕಾರಣಕ್ಕೆ ಬಹುತೇಕ ಜನರು ಯಾವುದೇ ಸಾರಿಗೆ ವ್ಯವಸ್ಥೆಯಿಲ್ಲದ ಕಾರಣಕ್ಕೆ ಕಾಲ್ನಡಿಗೆಯಲ್ಲಿ ತಮ್ಮ ಊರುಗಳಿಗೆ ವಾಪಸ್ ಆಗುತ್ತಿದ್ದಾರೆ. ನೋಯ್ಡಾದ ಗೌತಮ್ ಬುದ್ಧ ನಗರದ ಜಿಲ್ಲಾಡಳಿತವು ಸಹ, ಸಂಪೂರ್ಣವಾದ ಲಾಕ್ಡೌನ್ ಅನ್ನು ಜಾರಿಮಾಡಿದೆ. ಇದರಿಂದಾಗಿ ಅಲ್ಲಿರುವ ಜನರು ತಮ್ಮ ಊರುಗಳಿಗೆ ವಾಪಸ್ ಆಗಲು ಸಾಧ್ಯವಾಗುತ್ತಿಲ್ಲ.
ಈ ಪರಿಸ್ಥಿತಿಯಲ್ಲಿ, ಅವರ ಊಟ ಹಾಗೂ ವಸತಿ ವ್ಯವಸ್ಥೆಯನ್ನು ಅಲ್ಲಿನ ಜಿಲ್ಲಾಡಳಿತ ಮಾಡಿದೆ. ಈ ಎಲ್ಲಾ ಜನರಿಗೆ ವಸತಿ ಹಾಗೂ ವಾಸ್ತವ್ಯವನ್ನು ಬುದ್ಧ ಇಂಟರ್ ನ್ಯಾಷನಲ್ ಸರ್ಕ್ಯೂಟ್ ನಲ್ಲಿ ಕಲ್ಪಿಸಲಾಗುವುದು.
ಇದರ ಜೊತೆಗೆ ಈ ಸರ್ಕ್ಯೂಟ್ ಅನ್ನು ಕರೋನಾ ವೈರಸ್ ನಿಂದ ಸೋಂಕಿತರಾಗಿರುವವರನ್ನು ಕ್ವಾರಂಟೈನ್ ಮಾಡಲು ಸಹ ಬಳಸಲಾಗುವುದು. ನೋಯ್ಡಾ ಹಾಗೂ ಗಾಜಿಯಾಬಾದ್ ನಲ್ಲಿ ಹೆಚ್ಚಿನ ಸಂಖ್ಯೆಯ ವಲಸಿಗರು ನೆಲೆಸಿದ್ದಾರೆ.
MOST READ:ವಾಹನ ಸವಾರರ ಕಾಲಿಗೆ ಬೀಳುತ್ತೇನೆಂದ ಸಂಚಾರಿ ಪೊಲೀಸ್, ಕಾರಣವೇನು ಗೊತ್ತಾ?
ಉತ್ತರ ಪ್ರದೇಶ ಸರ್ಕಾರವು ಈ ಕೂಲಿ ಕಾರ್ಮಿಕರನ್ನು ಅವರ ಮನೆಗಳಿಗೆ ತಲುಪಿಸುವುದಕ್ಕಾಗಿ ಸುಮಾರು 1000 ಬಸ್ಸುಗಳ ವ್ಯವಸ್ಥೆಯನ್ನು ಮಾಡಿತ್ತು. ಆದರೆ ಕೇಂದ್ರ ಗೃಹ ಇಲಾಖೆಯು ಇವರನ್ನು ಅಲ್ಲಿಯೇ ಉಳಿಸಿಕೊಂಡು ವಾಸ್ತವ್ಯಕ್ಕೆ ವ್ಯವಸ್ಥೆ ಮಾಡುವಂತೆ ಆದೇಶಿಸಿತು.
MOST READ: ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್
ಈ ಆದೇಶದ ನಂತರ, ಉತ್ತರ ಪ್ರದೇಶ ಸರ್ಕಾರವು ಜಿಪಿ ಸ್ಪೋರ್ಟ್ಸ್ ಸಿಟಿಯನ್ನು ವಶಕ್ಕೆ ಪಡೆದು, ಈ ಜನರಿಗೆ ಅಲ್ಲಿಯೇ ವಸತಿ ಹಾಗೂ ಊಟದ ವ್ಯವಸ್ಥೆಯನ್ನು ಮಾಡಲು ಮುಂದಾಗಿದೆ. ಜಿಪಿ ಸ್ಪೋರ್ಟ್ಸ್ ಸಿಟಿಯಲ್ಲಿಯೇ ಇರುವ ಬುದ್ಧ ಇಂಟರ್ ನ್ಯಾಷನಲ್ ಸರ್ಕ್ಯೂಟ್ ವಸತಿ ಸೌಲಭ್ಯಗಳನ್ನು ಹೊಂದಿದೆ.
MOSTREAD: ವಾಹನ ಉತ್ಪಾದನೆ ಸ್ಥಗಿತದಿಂದಾಗಿ ಸಾವಿರಾರು ಕೋಟಿ ನಷ್ಟ
ಜಿಲ್ಲಾಡಳಿತವು ಅಲ್ಲಿ ಆಶ್ರಯಕ್ಕಾಗಿ ಮನೆಗಳನ್ನು ನಿರ್ಮಿಸುತ್ತಿದೆ. ಬುದ್ಧ ಇಂಟರ್ ನ್ಯಾಷನಲ್ ಸರ್ಕ್ಯೂಟ್ ನ ಹೊರತಾಗಿ ಸರ್ಕಾರಿ ಶಾಲೆಗಳಲ್ಲಿಯೂ ಸಹ ಕರೋನಾ ಸೋಂಕು ಪೀಡಿತರನ್ನು ಕ್ವಾರಂಟೈನ್ ಮಾಡಲು ಜಿಲ್ಲಾಡಳಿತವು ಕ್ರಮ ಕೈಗೊಂಡಿದೆ.