Just In
- 1 hr ago ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- 1 hr ago Google Maps: ಇವಿ ಮಾಲೀಕರೇ ಆತಂಕ ಬಿಡಿ... ಗೂಗಲ್ ಮ್ಯಾಪ್ಸ್ ಭರ್ಜರಿ ಅಪ್ಡೇಟ್!
- 1 hr ago ಫ್ಯಾಮಿಲಿ ಕಾರಾಗಿ ಜನರ ಮನಗೆದ್ದ ಹ್ಯುಂಡೈ ಅಲ್ಕಾಜರ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- 3 hrs ago Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿಸಬೇಕೇ? ಆನ್-ರೋಡ್ ಬೆಲೆ ಎಷ್ಟು, EMI ಏನು?
Don't Miss!
- Lifestyle ಮಸಾಲ ಭರಿತ ಬಿಸಿ ಬಿಸಿ ಪೊಂಗಲ್ ಮಾಡೋದು ಹೇಗೆ..? ಏನಿದರ ರೆಸಿಪಿ?
- News Namma Metro Pink Line: ಮೆಟ್ರೋ ಸುರಂಗ ಕಾಮಗಾರಿ ಬಹುತೇಕ ಪೂರ್ಣ: ಯೋಜನೆಯ ಅಪ್ಡೇಟ್
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Movies 'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರೋನಾ ಸೋಂಕಿತರಿಗಾಗಿ ಬಳಕೆಯಾಗಲಿದೆ ಬುದ್ಧ ಇಂಟರ್ ನ್ಯಾಷನಲ್ ಸರ್ಕ್ಯೂಟ್
ದೇಶಾದ್ಯಂತ ಹರಡುತ್ತಿರುವ ಕರೋನಾ ವೈರಸ್ ಅನ್ನು ತಡೆಗಟ್ಟುವ ಕಾರಣಕ್ಕೆ ಇಡೀ ದೇಶವನ್ನು ಲಾಕ್ ಡೌನ್ ಮಾಡಲು ಕೇಂದ್ರ ಸರ್ಕಾರವು ಆದೇಶಿಸಿದೆ. ಈ ಲಾಕ್ಡೌನ್ನಿಂದಾಗಿ ಕರೋನಾ ವೈರಸ್ ಹರಡುವುದನ್ನು ತಡೆಯಬಹುದು ಎಂದು ಹೇಳಲಾಗಿದೆ.
ಆದರೆ ಈ ಲಾಕ್ಡೌನ್ನಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಹೆಚ್ಚಿನ ಸಂಖ್ಯೆಯ ಕೂಲಿ ಕಾರ್ಮಿಕರು ಕೆಲಸವಿಲ್ಲದ ಕಾರಣ ದಿಕ್ಕು ದೋಚದಂತಾಗಿದ್ದಾರೆ. ಉತ್ತರ ಪ್ರದೇಶ ಹಾಗೂ ಬಿಹಾರದ ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ದೆಹಲಿಗೆ ಕೆಲಸಕ್ಕಾಗಿ ಗುಳೆ ಹೋಗಿದ್ದಾರೆ.
ಲಾಕ್ಡೌನ್ ಮಾಡಿರುವ ಕಾರಣಕ್ಕೆ ಬಹುತೇಕ ಜನರು ಯಾವುದೇ ಸಾರಿಗೆ ವ್ಯವಸ್ಥೆಯಿಲ್ಲದ ಕಾರಣಕ್ಕೆ ಕಾಲ್ನಡಿಗೆಯಲ್ಲಿ ತಮ್ಮ ಊರುಗಳಿಗೆ ವಾಪಸ್ ಆಗುತ್ತಿದ್ದಾರೆ. ನೋಯ್ಡಾದ ಗೌತಮ್ ಬುದ್ಧ ನಗರದ ಜಿಲ್ಲಾಡಳಿತವು ಸಹ, ಸಂಪೂರ್ಣವಾದ ಲಾಕ್ಡೌನ್ ಅನ್ನು ಜಾರಿಮಾಡಿದೆ. ಇದರಿಂದಾಗಿ ಅಲ್ಲಿರುವ ಜನರು ತಮ್ಮ ಊರುಗಳಿಗೆ ವಾಪಸ್ ಆಗಲು ಸಾಧ್ಯವಾಗುತ್ತಿಲ್ಲ.
ಈ ಪರಿಸ್ಥಿತಿಯಲ್ಲಿ, ಅವರ ಊಟ ಹಾಗೂ ವಸತಿ ವ್ಯವಸ್ಥೆಯನ್ನು ಅಲ್ಲಿನ ಜಿಲ್ಲಾಡಳಿತ ಮಾಡಿದೆ. ಈ ಎಲ್ಲಾ ಜನರಿಗೆ ವಸತಿ ಹಾಗೂ ವಾಸ್ತವ್ಯವನ್ನು ಬುದ್ಧ ಇಂಟರ್ ನ್ಯಾಷನಲ್ ಸರ್ಕ್ಯೂಟ್ ನಲ್ಲಿ ಕಲ್ಪಿಸಲಾಗುವುದು.
ಇದರ ಜೊತೆಗೆ ಈ ಸರ್ಕ್ಯೂಟ್ ಅನ್ನು ಕರೋನಾ ವೈರಸ್ ನಿಂದ ಸೋಂಕಿತರಾಗಿರುವವರನ್ನು ಕ್ವಾರಂಟೈನ್ ಮಾಡಲು ಸಹ ಬಳಸಲಾಗುವುದು. ನೋಯ್ಡಾ ಹಾಗೂ ಗಾಜಿಯಾಬಾದ್ ನಲ್ಲಿ ಹೆಚ್ಚಿನ ಸಂಖ್ಯೆಯ ವಲಸಿಗರು ನೆಲೆಸಿದ್ದಾರೆ.
MOST READ:ವಾಹನ ಸವಾರರ ಕಾಲಿಗೆ ಬೀಳುತ್ತೇನೆಂದ ಸಂಚಾರಿ ಪೊಲೀಸ್, ಕಾರಣವೇನು ಗೊತ್ತಾ?
ಉತ್ತರ ಪ್ರದೇಶ ಸರ್ಕಾರವು ಈ ಕೂಲಿ ಕಾರ್ಮಿಕರನ್ನು ಅವರ ಮನೆಗಳಿಗೆ ತಲುಪಿಸುವುದಕ್ಕಾಗಿ ಸುಮಾರು 1000 ಬಸ್ಸುಗಳ ವ್ಯವಸ್ಥೆಯನ್ನು ಮಾಡಿತ್ತು. ಆದರೆ ಕೇಂದ್ರ ಗೃಹ ಇಲಾಖೆಯು ಇವರನ್ನು ಅಲ್ಲಿಯೇ ಉಳಿಸಿಕೊಂಡು ವಾಸ್ತವ್ಯಕ್ಕೆ ವ್ಯವಸ್ಥೆ ಮಾಡುವಂತೆ ಆದೇಶಿಸಿತು.
MOST READ: ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್
ಈ ಆದೇಶದ ನಂತರ, ಉತ್ತರ ಪ್ರದೇಶ ಸರ್ಕಾರವು ಜಿಪಿ ಸ್ಪೋರ್ಟ್ಸ್ ಸಿಟಿಯನ್ನು ವಶಕ್ಕೆ ಪಡೆದು, ಈ ಜನರಿಗೆ ಅಲ್ಲಿಯೇ ವಸತಿ ಹಾಗೂ ಊಟದ ವ್ಯವಸ್ಥೆಯನ್ನು ಮಾಡಲು ಮುಂದಾಗಿದೆ. ಜಿಪಿ ಸ್ಪೋರ್ಟ್ಸ್ ಸಿಟಿಯಲ್ಲಿಯೇ ಇರುವ ಬುದ್ಧ ಇಂಟರ್ ನ್ಯಾಷನಲ್ ಸರ್ಕ್ಯೂಟ್ ವಸತಿ ಸೌಲಭ್ಯಗಳನ್ನು ಹೊಂದಿದೆ.
MOSTREAD: ವಾಹನ ಉತ್ಪಾದನೆ ಸ್ಥಗಿತದಿಂದಾಗಿ ಸಾವಿರಾರು ಕೋಟಿ ನಷ್ಟ
ಜಿಲ್ಲಾಡಳಿತವು ಅಲ್ಲಿ ಆಶ್ರಯಕ್ಕಾಗಿ ಮನೆಗಳನ್ನು ನಿರ್ಮಿಸುತ್ತಿದೆ. ಬುದ್ಧ ಇಂಟರ್ ನ್ಯಾಷನಲ್ ಸರ್ಕ್ಯೂಟ್ ನ ಹೊರತಾಗಿ ಸರ್ಕಾರಿ ಶಾಲೆಗಳಲ್ಲಿಯೂ ಸಹ ಕರೋನಾ ಸೋಂಕು ಪೀಡಿತರನ್ನು ಕ್ವಾರಂಟೈನ್ ಮಾಡಲು ಜಿಲ್ಲಾಡಳಿತವು ಕ್ರಮ ಕೈಗೊಂಡಿದೆ.