Just In
- 8 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 9 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 9 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 11 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಂಬ್ಯುಲೆನ್ಸ್ಗೆ ಅಡ್ಡಿ ಪಡಿಸಿ ವ್ಯಕ್ತಿಯ ಸಾವಿಗೆ ಕಾರಣನಾದ ಕಾರು ಚಾಲಕ
ಇತ್ತೀಚೆಗೆ ಮೈಸೂರಿನಲ್ಲಿ 85 ವರ್ಷದ ವ್ಯಕ್ತಿಯೊಬ್ಬರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಆಂಬ್ಯುಲೆನ್ಸ್ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಕಾರು ಚಾಲಕನೊಬ್ಬ ಆಂಬ್ಯುಲೆನ್ಸ್ಗೆ ದಾರಿ ಕೊಡದೇ ಅಡ್ಡಿಪಡಿಸಿದ್ದಾನೆ. ಆಂಬ್ಯುಲೆನ್ಸ್ಗೆ ಅಡ್ಡಿ ಪಡಿಸಿದ ಕಾರು ಚಾಲಕನಿಗೆ ರೂ.11,000ಗಳ ದಂಡ ವಿಧಿಸಲಾಗಿದೆ.
ಆದರೆ ಆಸ್ಪತ್ರೆಗೆ ತಲುಪುವುದು ತಡವಾದ ಹಿನ್ನೆಲೆಯಲ್ಲಿ ಆಂಬ್ಯುಲೆನ್ಸ್ನಲ್ಲಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ. ಮೈಸೂರು ನಗರದ ಸಂಚಾರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಕಾರು ಚಾಲಕ ಜಯನಾಥ್ ಎಂಬಾತನೇ ಆಂಬ್ಯುಲೆನ್ಸ್ಗೆ ದಾರಿ ಕೊಡದೇ ಅಡ್ಡಿ ಪಡಿಸಿದ ವ್ಯಕ್ತಿ. ಈ ಕಾರಣಕ್ಕೆ ಆತನಿಗೆ 2019ರ ಮೋಟಾರು ವಾಹನ ಕಾಯ್ದೆಯಡಿಯಲ್ಲಿ ತುರ್ತು ವಾಹನಕ್ಕೆ ದಾರಿ ನೀಡದ ಕಾರಣಕ್ಕೆ ರೂ.10,000 ಹಾಗೂ ಅಪಾಯಕಾರಿ ಚಾಲನೆಗೆ ರೂ.1,000 ದಂಡ ವಿಧಿಸಲಾಗಿದೆ.
ಆಗಸ್ಟ್ 22 ರಂದು 85 ವರ್ಷದ ಚಂದ್ರಶೇಖರ್ ಆಚಾರ್ಯ ಎಂಬುವವರಿಗೆ ಹೃದಯಾಘಾತವಾಗಿತ್ತು. ಅವರನ್ನು ಆಂಬ್ಯುಲೆನ್ಸ್ನಲ್ಲಿ ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ರಾತ್ರಿ 8.30ರ ಸುಮಾರಿಗೆ ಆಂಬ್ಯುಲೆನ್ಸ್ ಹುಣಸೂರು ರಸ್ತೆಯನ್ನು ತಲುಪಿದಾಗ, ಜಯನಾಥ್ ಚಾಲನೆ ಮಾಡುತ್ತಿದ್ದ ಕಾರನ್ನು ರಸ್ತೆಯಲ್ಲಿ ಅಡ್ಡ ನಿಲ್ಲಿಸಲಾಗಿತ್ತು.
MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ
ಆಂಬ್ಯುಲೆನ್ಸ್ ಹಲವಾರು ಬಾರಿ ಹಾರ್ನ್ ಮಾಡಿದರೂ, ಸೈರನ್ ಮಾಡಿದರೂ ಜಯನಾಥ್ ತನ್ನ ಕಾರನ್ನು ರಸ್ತೆಯಿಂದ ತೆಗೆದಿಲ್ಲ. ಜಯನಾಥ್ ಕಾರನ್ನು ರಸ್ತೆಯ ಮೇಲೆ ಅಡ್ಡ ನಿಲ್ಲಿಸಿದ್ದರಿಂದ ರಸ್ತೆ ಬ್ಲಾಕ್ ಆಗಿತ್ತು.
ಆಂಬ್ಯುಲೆನ್ಸ್ ಚಾಲಕ ಕಿಶೋರ್ ಆಂಬ್ಯುಲೆನ್ಸ್ನಿಂದ ಕೆಳಗಿಳಿದು ದಾರಿ ನೀಡುವಂತೆ ಜಯನಾಥ್ಗೆ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ. ರೋಗಿಯ ಸಂಬಂಧಿಕರು ಸಹ ಆಂಬ್ಯುಲೆನ್ಸ್ನಿಂದ ಕೆಳಗಿಳಿದು ಜಯನಾಥನನ್ನು ಅಂಗಲಾಚಿ ಬೇಡಿ ಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ.
MOSTREAD: ಬೀದಿ ನಾಯಿಯೇ ಈ ಶೋರೂಂನ ರಿಸೆಪ್ಶನಿಸ್ಟ್
ಇದರಿಂದಾಗಿ 15 ನಿಮಿಷಗಳ ಅಮೂಲ್ಯ ಸಮಯ ವ್ಯರ್ಥವಾಗಿದೆ. ಆಂಬ್ಯುಲೆನ್ಸ್ ಆಸ್ಪತ್ರೆಗೆ ತಲುಪುವ ಹೊತ್ತಿಗೆ ಹೃದಯಾಘಾತಕ್ಕೆ ಒಳಗಾಗಿದ್ದ ವ್ಯಕ್ತಿ ಮೃತಪಟ್ಟಿದ್ದರು. ಆಸ್ಪತ್ರೆ ತಲುಪಲು ವಿಳಂಬವಾದ ಕಾರಣ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಹೃದಯಾಘಾತವಾದಾಗ ಪ್ರತಿ ಸೆಕೆಂಡ್ ಅಮೂಲ್ಯವಾಗಿರುತ್ತದೆ. ಜಯನಾಥ್ ರಿಂದ 15 ನಿಮಿಷ ವ್ಯರ್ಥವಾಗಿದೆ. ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್ ಆಸ್ಪತ್ರೆಗೆ ತಲುಪಿದ್ದರೆ ಆ ವ್ಯಕ್ತಿ ಬದುಕುಳಿಯುತ್ತಿದ್ದರು. ಪೊಲೀಸರು ಆಂಬ್ಯುಲೆನ್ಸ್ಗೆ ಅಡ್ಡಿ ಪಡಿಸಿದ ಜಯನಾಥ್ ವಿರುದ್ಧ ಕ್ರಮ ಕೈಗೊಂಡು ದಂಡ ವಿಧಿಸಿದ್ದಾರೆ.
MOSTREAD: ಮದುವೆ ಉಂಗುರದ ಶೋಧಕ್ಕಾಗಿ ಚೆಲ್ಲಾಪಿಲ್ಲಿಯಾದ ಕಾರಿನ ಇಂಟಿರಿಯರ್
ಕಳೆದ ವರ್ಷ ಜಾರಿಗೆ ತರಲಾದ ಹೊಸ ಮೋಟಾರು ವಾಹನ ಕಾಯ್ದೆಯನ್ವಯ ತುರ್ತು ವಾಹನಗಳಿಗೆ ದಾರಿ ನೀಡದವರಿಗೆ ಭಾರೀ ಪ್ರಮಾಣದ ದಂಡ ವಿಧಿಸಲಾಗುತ್ತದೆ. ತುರ್ತು ವಾಹನಗಳಲ್ಲಿ ಆಂಬ್ಯುಲೆನ್ಸ್, ಅಗ್ನಿಶಾಮಕ ದಳ, ಪೊಲೀಸ್ ವಾಹನಗಳು ಸೇರಿವೆ.
ಗಮನಿಸಿ: ಈ ಲೇಖನದಲ್ಲಿರುವ ಎಲ್ಲಾ ಚಿತ್ರಗಳು ಸಾಂದರ್ಭಿಕ ಚಿತ್ರಗಳು.