Just In
- 7 min ago Mahindra: ಫ್ಯಾಮಿಲಿ ಕಾರು ಮಹೀಂದ್ರಾ ಎಕ್ಸ್ಯುವಿ700 ಖರೀದಿಸುವವರಿಗೆ ಸಿಹಿಸುದ್ದಿ.. ಇನ್ನೂ ತಿಂಗಳೇ ಸಾಕು!
- 1 hr ago Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- 1 hr ago ಬೈಕಿನಂತೆ ಮೈಲೇಜ್ ಕೊಡೋದ್ರಿಂದ ಈ ಹ್ಯುಂಡೈ ಕಾರಿನ ಮಾಲೀಕರು ಫುಲ್ ಖುಷ್
- 2 hrs ago ಮಹೀಂದ್ರಾ ಪ್ರೀಯರಿಗೆ ಭಾರೀ ಸಿಹಿಸುದ್ದಿ: ಗಲ್ಲಿಗಲ್ಲಿಯಲ್ಲಿ ಶುರುವಾಗುತ್ತಾ ಸ್ಕಾರ್ಪಿಯೋ ಹವಾ!
Don't Miss!
- News ನೇಹಾ ಕೊಲೆಗೆ ಸಿಎಂ ತೀವ್ರ ಖಂಡನೆ: ಕೊಲೆಗಾರನಿಗೆ ಶಿಕ್ಷೆ ಕುರಿತು ಸಿದ್ದರಾಮಯ್ಯ ಹೇಳಿದ್ದೇನು?
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Movies ಹಳೇ ಟ್ವೀಟ್ ಹಾಕಿ ರಕ್ಷಿತ್ ಶೆಟ್ಟಿ ಹೇಳಿದ್ದೇನು? 'ರಿಚರ್ಡ್ ಆಂಟನಿ' ಕಥೆ ಏನಾಯ್ತು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ಉದ್ಯಮ ವ್ಯವಹಾರಗಳಿಗೆ ನಾಂದಿ ಹಾಡಿದ ಕರೋನಾ ವೈರಸ್
ಭಾರತದಲ್ಲಿ ಕರೋನಾ ವೈರಸ್ ತೀವ್ರತೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ವೈರಸ್ ಭಾರತದಲ್ಲಿ ಕಳೆದ ಎರಡು ತಿಂಗಳಿನಿಂದ ಹಾವಳಿಯನ್ನುಂಟು ಮಾಡುತ್ತಿದೆ. ಇದರಿಂದಾಗಿ ಭಾರತವು ಅಪಾರ ಪ್ರಮಾಣದ ನಷ್ಟವನ್ನು ಅನುಭವಿಸುತ್ತಿದೆ.
ಈ ಮಹಾಮಾರಿ ವೈರಸ್ ಕಾರಣಕ್ಕೆ ಹೆಚ್ಚಿನ ಸಂಖ್ಯೆಯ ಜನರು ಕೆಲಸ ಕಳೆದುಕೊಂಡಿದ್ದಾರೆ. ಸೋಂಕು ವ್ಯಾಪಕವಾಗಿ ಹರಡದಂತೆ ತಡೆಯುವ ಕಾರಣಕ್ಕೆ ದೇಶಾದ್ಯಂತ ಲಾಕ್ಡೌನ್ ಜಾರಿಗೊಳಿಸಲಾಯಿತು. ಇದರಿಂದಾಗಿ ಎಲ್ಲಾ ವ್ಯಾಪಾರ ವ್ಯವಹಾರಗಳು ಸ್ಥಗಿತಗೊಂಡವು. ಅನೇಕ ಉದ್ಯಮಗಳು ಶಾಶ್ವತವಾಗಿ ಬಂದ್ ಆದವು.
ಲಾಕ್ಡೌನ್ ಕೆಲವರ ಮೇಲೆ ತಾತ್ಕಾಲಿಕ ಪರಿಣಾಮವನ್ನುಂಟು ಮಾಡಿದರೆ, ಇನ್ನೂ ಕೆಲವರ ಮೇಲೆ ಶಾಶ್ವತ ಪರಿಣಾಮವನ್ನುಂಟು ಮಾಡಿದೆ. ಆರ್ಥಿಕ ಪರಿಸ್ಥಿತಿಯನ್ನು ಸರಿದೂಗಿಸುವ ಸಲುವಾಗಿ ಕೆಲವು ಕಂಪನಿಗಳು ನೌಕರರನ್ನು ಕೆಲಸದಿಂದ ವಜಾ ಮಾಡಿವೆ.
MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ
ಭಾರತದಲ್ಲಿ ಮಾತ್ರವಲ್ಲದೇ ಪ್ರಪಂಚದ ಬಹುತೇಕ ದೇಶಗಳಲ್ಲಿ ಇದೇ ಪರಿಸ್ಥಿತಿ ಎದುರಾಗಿದೆ. ಆದರೆ ಮಾರಣಾಂತಿಕ ಕರೋನಾ ವೈರಸ್ ಹೊಸ ಉದ್ಯೋಗಗಳ ಸೃಷ್ಟಿಗೂ ಕಾರಣವಾಗಿದೆ. ಕರೋನಾ ವೈರಸ್ ಹರಡ ಬಹುದೆಂಬ ಭೀತಿಯಿಂದ ಜನರು ಆಂಟಿಸೆಪ್ಟಿಕ್ ಹಾಗೂ ಇತರ ಸುರಕ್ಷತಾ ಕ್ರಮಗಳನ್ನು ಅನುಸರಿಸುತ್ತಿದ್ದಾರೆ.
ಇದರಿಂದಾಗಿ ಮಾಸ್ಕ್ ಹಾಗೂ ಆಂಟಿಸೆಪ್ಟಿಕ್ಗಳನ್ನು ತಯಾರಿಸುವ ಕಂಪನಿಗಳು ಹೊಸದಾಗಿ ಆರಂಭವಾಗಿವೆ. ಇದರ ಜೊತೆಗೆ ಪ್ರಮುಖ ನಗರಗಳಲ್ಲಿ ವಾಹನಗಳನ್ನು ಸ್ವಚ್ವಗೊಳಿಸುವ ಘಟಕಗಳನ್ನು ತೆರೆಯಲಾಗುತ್ತಿದೆ. ವೈರಸ್ ಹರಡದಂತೆ ತಡೆಯುವುದೇ ಇದರ ಮುಖ್ಯ ಉದ್ದೇಶ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಈ ಕಾರಣಕ್ಕೆ ಬಹಳಷ್ಟು ಜನರು ಸಾರ್ವಜನಿಕ ವಾಹನಗಳ ಬದಲಿಗೆ ತಮ್ಮ ಸ್ವಂತ ವಾಹನಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಕರೋನಾ ವೈರಸ್ ವಾಹನಗಳ ಮೂಲಕವೂ ಸಹ ಹರಡುತ್ತದೆ ಎಂಬ ಆತಂಕವಿದೆ. ಈ ಪರಿಸ್ಥಿತಿಯ ಲಾಭ ಪಡೆಯಲು ಕೆಲವು ಖಾಸಗಿ ಕಂಪನಿಗಳು ವಾಹನಗಳನ್ನು ಸ್ಯಾನಿಟೈಜೆಷನ್ ಮಾಡುವ ಕೇಂದ್ರಗಳನ್ನು ತೆರೆಯುತ್ತಿವೆ.
ದೆಹಲಿಯಲ್ಲಿ ಹೆಚ್ಚಿನ ಸಂಖ್ಯೆಯ ಸ್ಯಾನಿಟೈಜೆಷನ್ ಸೆಂಟರ್ಗಳನ್ನು ತೆರೆಯಲಾಗಿದೆ. ಇದರ ಜೊತೆಗೆ ಭಾರತದ ಹಲವಾರು ಪ್ರಮುಖ ನಗರಗಳಲ್ಲಿ ಸ್ಯಾನಿಟೈಜೆಷನ್ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ.ಸ್ಯಾನಿಟೈಜೆಷನ್ ಉದ್ಯಮಕ್ಕೆ ಈಗ ಹೆಚ್ಚಿನ ಬೇಡಿಕೆ ಉಂಟಾಗಿದೆ.
MOSTREAD: ನಟ ವಿಕ್ರಮ್ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್
ಈ ಮೊದಲು ಕೇವಲ ವಾಟರ್ ವಾಶ್ ಮಾಡುತ್ತಿದ್ದ ಕಂಪನಿಗಳು ಈಗ ಜೊತೆಯಲ್ಲಿ ಸ್ಯಾನಿಟೈಜೆಷನ್ ಕೇಂದ್ರಗಳನ್ನು ತೆರೆಯುತ್ತಿವೆ. ಆರ್ಥಿಕ ವ್ಯವಸ್ಥೆಗೆ ಚೇತರಿಕೆ ನೀಡುವ ಕಾರಣಕ್ಕೆ ಲಾಕ್ಡೌನ್ಗೆ ಸ್ವಲ್ಪ ಪ್ರಮಾಣದ ವಿನಾಯಿತಿ ನೀಡಲಾಗಿದೆ.
ಇದರಿಂದ ಇಷ್ಟು ದಿನ ಮನೆಯಲ್ಲಿ ಬಂಧಿಯಾಗಿದ್ದ ಜನರು ಮನೆಗಳಿಂದ ಹೊರಬರಲು ಆರಂಭಿಸಿದ್ದಾರೆ. ಆದರೆ ಜನರಲ್ಲಿ ವೈರಸ್ ಹರಡಬಹುದೆಂಬ ಭೀತಿ ಇರುವ ಕಾರಣಕ್ಕೆ ತಮ್ಮ ಸ್ವಂತ ವಾಹನಗಳಲ್ಲಿ ಪ್ರಯಾಣಿಸುತ್ತಿದ್ದಾರೆ.
MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!
ಇದನ್ನು ಗಮನದಲ್ಲಿಟ್ಟುಕೊಂಡು ಸ್ಯಾನಿಟೈಜೆಷನ್ ಕೇಂದ್ರಗಳನ್ನು ಆರಂಭಿಸಲಾಗಿದೆ. ಈ ಸ್ಯಾನಿಟೈಜೆಷನ್ ಕೇಂದ್ರಗಳಲ್ಲಿ ವಾಹನಗಳ ಆಧಾರದ ಮೇಲೆ ರೂ. 20ರಿಂದ ರೂ. 100ರವರೆಗೆ ಶುಲ್ಕ ವಿಧಿಸಲಾಗುತ್ತದೆ. ದ್ವಿಚಕ್ರ ವಾಹನಗಳಿಗೆ ಕನಿಷ್ಠ ರೂ. 20 ಹಾಗೂ ನಾಲ್ಕು ಚಕ್ರ ವಾಹನಗಳಿಗೆ ಕನಿಷ್ಠ ರೂ. 50ರಿಂದ ರೂ. 100ರವರೆಗೆ ಶುಲ್ಕ ವಿಧಿಸಲಾಗುತ್ತದೆ.