Just In
- 17 min ago ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- 33 min ago ಓಲಾ ಎಸ್ 1 ಪ್ರೋ VS ಏಥರ್ 450X: ಮದಗಜಗಳ ಹಣಾಹಣಿಯಲ್ಲಿ ಯಾರು ಬೆಸ್ಟ್?
- 33 min ago Ather: ಬೆಂಗಳೂರಿನ ಎಥರ್ನಿಂದ ಫ್ಯಾಮಿಲಿ ಇ-ಸ್ಕೂಟರ್ 'ರಿಜ್ಟಾ' ಬುಕ್ಕಿಂಗ್ ಆರಂಭ, ರೂ.999 ಪಾವತಿಸಿದರೆ ಸಾಕು!
- 1 hr ago Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
Don't Miss!
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Movies ಬಿಸಿಲು, ಮಳೆ, ಧೂಳು ಬರಲಿ.. ಯಶ್ ಇದ್ರೆ ಸಾಕು.. ಏನಂತೀರಾ?
- News ಪೂಜೆ ಮಾಡಿದ ಈ ಲಿಂಬೆಹಣ್ಣು ಲಕ್ಷಕ್ಕೆ ಹರಾಜ್! ಶಾಕ್ ಆಡ್ಬೇಡಿ ಇದು ನಿಜ...
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚೆನ್ನೈನಲ್ಲಿ ಭೀಕರ ರಸ್ತೆ ಅಪಘಾತ- ಇಬ್ಬರು ಕೆಟಿಎಂ ಸವಾರರು ಸ್ಪಾಟ್ ಡೆತ್..!!
ಚೆನ್ನೈ ಹೊರವಲಯದಲ್ಲಿ ನಿನ್ನೇಯಷ್ಟೇ ಭೀಕರ ಅಪಘಾತ ಒಂದು ಸಂಭವಿಸಿದೆ. ನಿಯಮ ಉಲ್ಲಂಘಿಸಿ ರಸ್ತೆಗೆ ಅಡ್ಡ ಬಂದ ಕೆಟಿಎಂ ಸವಾರಿರಬ್ಬರು ತಮಿಳುನಾಡು ಸಾರಿಗೆ ಬಸ್ಗೆ ಸಿಲುಕಿ ಸಾವನ್ನಪ್ಪಿದ್ದಾರೆ.
ದೇಶದಲ್ಲಿ ರಸ್ತೆ ನಿಯಮ ಪಾಲಿಸದ ಹಿನ್ನೆಲೆ ದಿನಂಪ್ರತಿ ಹತ್ತಾರು ಭೀಕರ ರಸ್ತೆ ಅಪಘಾತ ಸಂಭವಿಸುತ್ತಲೇ ಇರುತ್ತವೆ. ಚೆನ್ನೈನಲ್ಲೂ ಭೀಕರ ರಸ್ತೆ ಅಪಘಾತವೊಂದು ನಡೆದಿದ್ದು, ರಸ್ತೆಯಲ್ಲಿ ಅಡ್ಡಲಾಗಿ ಬಂದ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿ ದುರ್ಮರಣಕ್ಕಿಡಾಗಿದ್ದಾರೆ.
ಘಟನೆಗೂ ಮುನ್ನ ರಸ್ತೆ ಕ್ರಾಸ್ ಮಾಡುತ್ತಿದ್ದ ಮತ್ತೊಂದು ಬೈಕ್ ಕೆಟಿಎಂ ಬೈಕ್ಗೆ ಡಿಕ್ಕಿ ಹೊಡೆದಿದೆ. ಆದ್ರೆ ಡಿಕ್ಕಿ ಸಂದರ್ಭದಲ್ಲೇ ತಮಿಳುನಾಡು ಸಾರಿಗೆ ಬಸ್ ಕೂಡಾ ಬಂದಿದ್ದು, ರಸ್ತೆಯಲ್ಲಿ ಬಿದ್ದಿದ್ದ ಬೈಕ್ ಸವಾರರ ಮೇಲೆ ಹರಿದುಹೋಗಿದೆ.
ಇನ್ನು ಬಸ್ ಹರಿದ ರಭಸಕ್ಕೆ ಕೆಟಿಎಂ ಬೈಕ್ನಲ್ಲಿದ್ದ ಇಬ್ಬರು ದುರಂತವಾಗಿ ಸಾವನ್ನಪ್ಪಿದರೆ ಇನ್ನೊಂದು ಬೈಕಿನಲ್ಲಿದ್ದ ಇನ್ನಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಕುರಿತಂತೆ ತನಿಖೆ ನಡೆಸಿರುವ ಚೆನ್ನೈ ಪೊಲೀಸರು ಘಟನೆ ಕುರಿತಂತೆ ಮಹತ್ವದ ಮಾಹಿತಿ ಕಲೆಹಾಕಿದ್ದಾರೆ.
ಘಟನಾ ಸ್ಥಳ ಪರಿಶೀಲನೆ ನಂತರ ಆ ಪ್ರದೇಶದ ಸುತ್ತುಲಿನ ಸಿಸಿಟಿವಿ ವೀಕ್ಷಿಸಿರುವ ಪೊಲೀಸರು, ಕೆಟಿಎಂ ಬೈಕ್ ಸವಾರರು ಮಾಡಿದ ಅಧ್ವಾನವೇ ಘಟನೆಗೆ ಕಾರಣವೆಂಬುದನ್ನು ಖಚಿತಪಡಿಸಿದ್ದಾರೆ.
ಅತಿಯಾದ ವೇಗದಲ್ಲಿ ಬಂದಿದ್ದ ಕೆಟಿಎಂ ಬೈಕ್ ಸವಾರರು ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬೈಕ್ ಚಾಲನೆ ಮಾಡುತ್ತಿದ್ದರು. ಇದಲ್ಲದೇ ರೋಡ್ ಕ್ರಾಸಿಂಗ್ ಮಾಡುತ್ತಿದ್ದ ಮತ್ತೊಂದು ಬೈಕಿಗೆ ಅವರೇ ಡಿಕ್ಕಿ ಹೊಡೆದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸದ್ಯ ತನಿಖೆಯನ್ನು ಪೂರ್ಣಗೊಳಿಸಿರುವ ಪೊಲೀಸರು, ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. ಅಲ್ಲದೇ ಬೈಕ್ ಸವಾರರ ಮೇಲೆ ಬಸ್ ಹರಿಸಿದ ಚಾಲಕನ ಮೇಲೂ ಕೇಸ್ ದಾಖಲಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆದ್ರೆ ಪ್ರಕರಣವನ್ನು ಮೇಲ್ನೋಟಕ್ಕೆ ನೋಡಿದಾಗ ಕೆಟಿಎಂ ಬೈಕ್ ಸವಾರರದ್ದೇ ತಪ್ಪು ಎಂದು ಸಾಬೀತಾಗಿದ್ದರೂ ಅನ್ಯಾಯವಾಗಿ ಬಸ್ ಚಾಲಕ ಸದ್ಯಕ್ಕೆ ಕಂಬಿ ಎಣಿಸುವಂತಾಗಿದೆ. ಇದರಿಂದಾಗಿ ಅತಿವೇಗದ ಬೈಕ್ ಚಾಲನೆ ಮತ್ತು ರಸ್ತೆ ನಿಯಮ ಉಲ್ಲಂಘನೆ ಮಾಡುವ ಮೊದಲು ಎಲ್ಲರೂ ಒಮ್ಮೆ ಯೋಚಿಸಲೇಬೇಕು.
ಹೊಚ್ಚ ಹೊಸ ಮಾರುತಿ ಇಗ್ನಿಸ್ ಕಾರಿನ ಫೋಟೋಗಳನ್ನು ವೀಕ್ಷಿಸಲು ಈ ಕೆಳಗಿನ ಗ್ಯಾಲರಿಯನ್ನು ಕ್ಲಿಕ್ ಮಾಡಿ.