Just In
- 6 min ago ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- 23 min ago ಓಲಾ ಎಸ್ 1 ಪ್ರೋ VS ಏಥರ್ 450X: ಮದಗಜಗಳ ಹಣಾಹಣಿಯಲ್ಲಿ ಯಾರು ಬೆಸ್ಟ್?
- 23 min ago Ather: ಬೆಂಗಳೂರಿನ ಎಥರ್ನಿಂದ ಫ್ಯಾಮಿಲಿ ಇ-ಸ್ಕೂಟರ್ 'ರಿಜ್ಟಾ' ಬುಕ್ಕಿಂಗ್ ಆರಂಭ, ರೂ.999 ಪಾವತಿಸಿದರೆ ಸಾಕು!
- 1 hr ago Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
Don't Miss!
- Movies ಬಿಸಿಲು, ಮಳೆ, ಧೂಳು ಬರಲಿ.. ಯಶ್ ಇದ್ರೆ ಸಾಕು.. ಏನಂತೀರಾ?
- News ಪೂಜೆ ಮಾಡಿದ ಈ ಲಿಂಬೆಹಣ್ಣು ಲಕ್ಷಕ್ಕೆ ಹರಾಜ್! ಶಾಕ್ ಆಡ್ಬೇಡಿ ಇದು ನಿಜ...
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಶಿಷ್ಟ ಬಗೆಯ ಹೆಲ್ಮೆಟ್ ಧರಿಸಿ ಜಾಗೃತಿ ಮೂಡಿಸಿದ ಪೊಲೀಸರು
ಕರೋನಾ ವೈರಸ್ ಹರಡದಂತೆ ತಡೆಯಲು ಭಾರತದಾದ್ಯಂತ ಲಾಕ್ಡೌನ್ ಜಾರಿಗೊಳಿಸಲಾಗಿದೆ. ಜನರು ಹೊರ ಬರದಂತೆ ತಡೆಯಲು ವಿವಿಧ ರಾಜ್ಯಗಳ ಪೊಲೀಸರು ವಿವಿಧ ವಿಧಾನಗಳನ್ನು ಅನುಸರಿಸುತ್ತಿದ್ದಾರೆ. ತಮಿಳುನಾಡು ಪೊಲೀಸರು ಕರೋನಾ ವೈರಸ್ ರೀತಿಯ ಹೆಲ್ಮೆಟ್ನಲ್ಲಿ ಕಾಣಿಸಿಕೊಂಡಿದ್ದಾರೆ.
ತಮಿಳುನಾಡಿನ ಚೆನ್ನೈನಲ್ಲಿ, ಕರೋನಾ ಹೆಲ್ಮೆಟ್ ಧರಿಸಿ, ಜನರು ಮನೆಯಿಂದ ಹೊರ ಬರದಂತೆ ಪೊಲೀಸರು ತಡೆಯುತ್ತಿದ್ದಾರೆ. ವೈರಸ್ ಬಗ್ಗೆ ಜನರಿಗೆ ಅರಿವು ಮೂಡಿಸಲಾಗುತ್ತಿದ್ದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಸೂಚಿಸಲಾಗುತ್ತಿದೆ.
ಈ ಶಿರಸ್ತ್ರಾಣವನ್ನು ವಿನ್ಯಾಸಗೊಳಿಸಿದ ರಾಜೇಶ್ ಬಾಬುರವರು ಮಾತನಾಡಿ, ನಾವು ಜನರೊಂದಿಗೆ ಮಾತನಾಡಿದಾಗ, ಅವರಲ್ಲಿ ಕರೋನಾ ವೈರಸ್ ಬಗ್ಗೆ ಜಾಗೃತಿ ಇಲ್ಲದೇ ಇರುವುದು ಕಂಡು ಬಂತು. ಈ ಕಾರಣಕ್ಕೆ ನಾವು ವಿಭಿನ್ನವಾಗಿ ಯೋಚಿಸಿ ಕರೋನಾ ವೈರಸ್ ನಂತೆ ಕಾಣುವ ಹೆಲ್ಮೆಟ್ ಅನ್ನು ವಿನ್ಯಾಸಗೊಳಿಸಿದೆವು ಎಂದು ಹೇಳಿದರು.
ಇದರಿಂದಾದರೂ ಜನರಲ್ಲಿ ಜಾಗೃತಿ ಮೂಡಿ ಮನೆಯಲ್ಲಿಯೇ ಇರುವಂತಾಗಲಿದೆ ಎಂದು ಅವರು ಹೇಳುತ್ತಾರೆ. ಈ ಹೆಲ್ಮೆಟ್ ತಯಾರಿಸಲು ಅವರು ಮುರಿದ ಹೆಲ್ಮೆಟ್ ಹಾಗೂ ಪೇಪರ್ ಅನ್ನು ಬಳಸಿದ್ದಾರೆ. ಈ ಹೆಲ್ಮೆಟ್ ಪರಿಣಾಮಕಾರಿಯಾಗಿದ್ದು, ಜನರು ಜಾಗೃತರಾಗಿದ್ದಾರೆ ಎಂದು ಅವರು ಹೇಳಿದರು.
ದೇಶದಲ್ಲಿ ಲಾಕ್ಡೌನ್ ಜಾರಿಗೊಳಿಸಿದ ನಂತರ, ಈ ರೀತಿಯ ಅನೇಕ ವೀಡಿಯೊಗಳು ಹೊರಬಂದಿದ್ದು, ಆ ವೀಡಿಯೊಗಳಲ್ಲಿ ಪೊಲೀಸರು ಜನರಿಗೆ ಜಾಗೃತಿ ಮೂಡಿಸುತ್ತಿದ್ದಾರೆ. ಜೊತೆಗೆ ಅನಗತ್ಯವಾಗಿ ಹೊರಹೋಗುವವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಈ ಪರಿಸ್ಥಿತಿಯಲ್ಲಿ, ಈ ರೀತಿಯ ವಿಶಿಷ್ಟ ಜಾಗೃತಿಗಳು ಬಹಳ ಪರಿಣಾಮಕಾರಿಯಾಗಬಲ್ಲವು.
ಇತ್ತೀಚೆಗಷ್ಟೇ ಲಾಕ್ಡೌನ್ ಸಮಯದಲ್ಲಿ ಹೊರಗೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದ ಪೊಲೀಸರು, ಅದರ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಅದಾದ ನಂತರ ಆ ವ್ಯಕ್ತಿ ಪೊಲೀಸರ ಬಳಿ ಕ್ಷಮೆಯಾಚಿಸಿದ್ದ.
MOST READ: ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್
ಕರೋನಾ ಹಾವಳಿಯಿಂದಾಗಿ, ಅನೇಕ ವಾಹನ ತಯಾರಕ ಕಂಪನಿಗಳು ವಿವಿಧ ರೀತಿಯಲ್ಲಿ ಸಹಾಯ ಮಾಡುತ್ತಿವೆ. ಮಾರುತಿ ಸುಜುಕಿ ಕಂಪನಿಯು ವೆಂಟಿಲೇಟರ್ಗಳನ್ನು ತಯಾರಿಸುವುದಾಗಿ ಘೋಷಿಸಿದೆ.
MOST READ: ವಾಹನ ಸವಾರರ ಕಾಲಿಗೆ ಬೀಳುತ್ತೇನೆಂದ ಸಂಚಾರಿ ಪೊಲೀಸ್, ಕಾರಣವೇನು ಗೊತ್ತಾ?
ಮಹೀಂದ್ರಾ ಅಂಡ್ ಮಹೀಂದ್ರಾ ಕಂಪನಿಯು ಕೂಡ ವೆಂಟಿಲೇಟರ್ ತಯಾರಿಕೆಯಲ್ಲಿ ತೊಡಗಿದ್ದು, ಇತ್ತೀಚೆಗೆ ಮೊದಲ ಮೂಲಮಾದರಿ ಸಿದ್ಧ ಪಡಿಸಿದೆ. ಕಂಪನಿಯು ಇದರ ಉತ್ಪಾದನೆಯನ್ನು ಶೀಘ್ರದಲ್ಲೇ ಆರಂಭಿಸಲಿದೆ.
MOST READ: ವಾಹನ ಉತ್ಪಾದನೆ ಸ್ಥಗಿತದಿಂದಾಗಿ ಸಾವಿರಾರು ಕೋಟಿ ನಷ್ಟ
ಭಾರತದ ಬಹುತೇಕ ಎಲ್ಲಾ ರಾಜ್ಯಗಳ ಪೊಲೀಸರು ತಮ್ಮದೇ ಆದ ರೀತಿಯಲ್ಲಿ ಜನರಿಗೆ ಅರಿವು ಮೂಡಿಸಲು ಪ್ರಯತ್ನಿಸುತ್ತಿದ್ದಾರೆ. ಕರೋನಾ ಹೆಲ್ಮೆಟ್ ಇದಕ್ಕೊಂದು ತಾಜಾ ಉದಾಹರಣೆಯಾಗಿದೆ.
ಚಿತ್ರಕೃಪೆ: ಎಎನ್ಐ