Just In
- 35 min ago Tata Nexon: ಮುಂಬರಲಿರುವ ಟಾಟಾ ನೆಕ್ಸಾನ್ ಸಿಎನ್ಜಿ ಕಾರಿನ ವಿಶೇಷತೆಗಳಿವು.. ಹೆಚ್ಚು ಮೈಲೇಜ್!
- 1 hr ago ರಾಂಗ್ ರೂಟ್ನಲ್ಲಿ ಬಂದು ಪ್ರಶ್ನಿಸಿದ ಬೈಕ್ ಸವಾರನಿಗೆ ಥಳಿಸಿದ ಕಾರು ಚಾಲಕ: ವಿಡಿಯೋ
- 14 hrs ago ಡಿ ಬಾಸ್ ಪತ್ನಿ ಖರೀದಿಸಿದ್ದು ಸಾಮಾನ್ಯ ಕಾರಲ್ಲ: ಬಂಗಲೆಯಂತಹ ಇಂಟೀರಿಯರ್!
- 14 hrs ago ಭಾರತದ ನಂ.1 ಕಾರು... ದಾಖಲೆಯ ಮಾರಾಟ... 5.5 ಲಕ್ಷ ಬೆಲೆ... 34 ಕಿ.ಮೀ ಮೈಲೇಜ್
Don't Miss!
- Movies 'ಹಿಟ್ಲರ್ ಕಲ್ಯಾಣ' ಅಂತ್ಯ; ಧಾರಾವಾಹಿ ಬಿಟ್ಟು ಸಿನಿಮಾದಲ್ಲಿ ಬ್ಯುಸಿಯಾಗ್ತಾರಾ 'ಉಪಾಧ್ಯಕ್ಷ'ನ ಬೆಡಗಿ?
- News ಕನಕಪುರಕ್ಕೆ ಕಾಲಿಡಲು ಭಯ; ಕೋರ್ಟ್ಗೆ ಯತ್ನಾಳ್ ಹೇಳಿಕೆ!
- Finance ತನ್ನ 4 ವರ್ಷದ ಮೊಮ್ಮಗನಿಗೆ 240 ಕೋಟಿ ಮೌಲ್ಯದ ಇನ್ಫೋಸಿಸ್ ಷೇರುಗಳನ್ನು ಉಡುಗೊರೆಯಾಗಿ ನೀಡಿದ ನಾರಾಯಣ ಮೂರ್ತಿ
- Technology ಇಂದು ಮಾರುಕಟ್ಟೆಗೆ ಬರಲಿದೆ ಗೆಸ್ಚರ್ ಮೂಲಕ ಕೆಲಸ ಮಾಡುವ ಸ್ಮಾರ್ಟ್ಫೋನ್!
- Sports IPL 2024: ಐಪಿಎಲ್ ಆರಂಭಕ್ಕೂ ಮುನ್ನವೇ 'ಸೂಪರ್' ಭವಿಷ್ಯ; ಆರ್ಸಿಬಿ ಈ ಬಾರಿ ಕಪ್ ಗೆಲ್ಲುತ್ತದಾ? ಇಲ್ಲಿದೆ ಉತ್ತರ
- Lifestyle ಬಾಯಲ್ಲಿ ನೀರು ತರಿಸುವ ಮಸಾಲೆ ಮೊಟ್ಟೆ ಬುರ್ಜಿ ಮಾಡೋದು ಹೇಗೆ.? ತುಂಬಾ ಸಿಂಪಲ್ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಶಿಷ್ಟ ಬಗೆಯ ಹೆಲ್ಮೆಟ್ ಧರಿಸಿ ಜಾಗೃತಿ ಮೂಡಿಸಿದ ಪೊಲೀಸರು
ಕರೋನಾ ವೈರಸ್ ಹರಡದಂತೆ ತಡೆಯಲು ಭಾರತದಾದ್ಯಂತ ಲಾಕ್ಡೌನ್ ಜಾರಿಗೊಳಿಸಲಾಗಿದೆ. ಜನರು ಹೊರ ಬರದಂತೆ ತಡೆಯಲು ವಿವಿಧ ರಾಜ್ಯಗಳ ಪೊಲೀಸರು ವಿವಿಧ ವಿಧಾನಗಳನ್ನು ಅನುಸರಿಸುತ್ತಿದ್ದಾರೆ. ತಮಿಳುನಾಡು ಪೊಲೀಸರು ಕರೋನಾ ವೈರಸ್ ರೀತಿಯ ಹೆಲ್ಮೆಟ್ನಲ್ಲಿ ಕಾಣಿಸಿಕೊಂಡಿದ್ದಾರೆ.
ತಮಿಳುನಾಡಿನ ಚೆನ್ನೈನಲ್ಲಿ, ಕರೋನಾ ಹೆಲ್ಮೆಟ್ ಧರಿಸಿ, ಜನರು ಮನೆಯಿಂದ ಹೊರ ಬರದಂತೆ ಪೊಲೀಸರು ತಡೆಯುತ್ತಿದ್ದಾರೆ. ವೈರಸ್ ಬಗ್ಗೆ ಜನರಿಗೆ ಅರಿವು ಮೂಡಿಸಲಾಗುತ್ತಿದ್ದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಸೂಚಿಸಲಾಗುತ್ತಿದೆ.
ಈ ಶಿರಸ್ತ್ರಾಣವನ್ನು ವಿನ್ಯಾಸಗೊಳಿಸಿದ ರಾಜೇಶ್ ಬಾಬುರವರು ಮಾತನಾಡಿ, ನಾವು ಜನರೊಂದಿಗೆ ಮಾತನಾಡಿದಾಗ, ಅವರಲ್ಲಿ ಕರೋನಾ ವೈರಸ್ ಬಗ್ಗೆ ಜಾಗೃತಿ ಇಲ್ಲದೇ ಇರುವುದು ಕಂಡು ಬಂತು. ಈ ಕಾರಣಕ್ಕೆ ನಾವು ವಿಭಿನ್ನವಾಗಿ ಯೋಚಿಸಿ ಕರೋನಾ ವೈರಸ್ ನಂತೆ ಕಾಣುವ ಹೆಲ್ಮೆಟ್ ಅನ್ನು ವಿನ್ಯಾಸಗೊಳಿಸಿದೆವು ಎಂದು ಹೇಳಿದರು.
ಇದರಿಂದಾದರೂ ಜನರಲ್ಲಿ ಜಾಗೃತಿ ಮೂಡಿ ಮನೆಯಲ್ಲಿಯೇ ಇರುವಂತಾಗಲಿದೆ ಎಂದು ಅವರು ಹೇಳುತ್ತಾರೆ. ಈ ಹೆಲ್ಮೆಟ್ ತಯಾರಿಸಲು ಅವರು ಮುರಿದ ಹೆಲ್ಮೆಟ್ ಹಾಗೂ ಪೇಪರ್ ಅನ್ನು ಬಳಸಿದ್ದಾರೆ. ಈ ಹೆಲ್ಮೆಟ್ ಪರಿಣಾಮಕಾರಿಯಾಗಿದ್ದು, ಜನರು ಜಾಗೃತರಾಗಿದ್ದಾರೆ ಎಂದು ಅವರು ಹೇಳಿದರು.
ದೇಶದಲ್ಲಿ ಲಾಕ್ಡೌನ್ ಜಾರಿಗೊಳಿಸಿದ ನಂತರ, ಈ ರೀತಿಯ ಅನೇಕ ವೀಡಿಯೊಗಳು ಹೊರಬಂದಿದ್ದು, ಆ ವೀಡಿಯೊಗಳಲ್ಲಿ ಪೊಲೀಸರು ಜನರಿಗೆ ಜಾಗೃತಿ ಮೂಡಿಸುತ್ತಿದ್ದಾರೆ. ಜೊತೆಗೆ ಅನಗತ್ಯವಾಗಿ ಹೊರಹೋಗುವವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಈ ಪರಿಸ್ಥಿತಿಯಲ್ಲಿ, ಈ ರೀತಿಯ ವಿಶಿಷ್ಟ ಜಾಗೃತಿಗಳು ಬಹಳ ಪರಿಣಾಮಕಾರಿಯಾಗಬಲ್ಲವು.
ಇತ್ತೀಚೆಗಷ್ಟೇ ಲಾಕ್ಡೌನ್ ಸಮಯದಲ್ಲಿ ಹೊರಗೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದ ಪೊಲೀಸರು, ಅದರ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಅದಾದ ನಂತರ ಆ ವ್ಯಕ್ತಿ ಪೊಲೀಸರ ಬಳಿ ಕ್ಷಮೆಯಾಚಿಸಿದ್ದ.
MOST READ: ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್
ಕರೋನಾ ಹಾವಳಿಯಿಂದಾಗಿ, ಅನೇಕ ವಾಹನ ತಯಾರಕ ಕಂಪನಿಗಳು ವಿವಿಧ ರೀತಿಯಲ್ಲಿ ಸಹಾಯ ಮಾಡುತ್ತಿವೆ. ಮಾರುತಿ ಸುಜುಕಿ ಕಂಪನಿಯು ವೆಂಟಿಲೇಟರ್ಗಳನ್ನು ತಯಾರಿಸುವುದಾಗಿ ಘೋಷಿಸಿದೆ.
MOST READ: ವಾಹನ ಸವಾರರ ಕಾಲಿಗೆ ಬೀಳುತ್ತೇನೆಂದ ಸಂಚಾರಿ ಪೊಲೀಸ್, ಕಾರಣವೇನು ಗೊತ್ತಾ?
ಮಹೀಂದ್ರಾ ಅಂಡ್ ಮಹೀಂದ್ರಾ ಕಂಪನಿಯು ಕೂಡ ವೆಂಟಿಲೇಟರ್ ತಯಾರಿಕೆಯಲ್ಲಿ ತೊಡಗಿದ್ದು, ಇತ್ತೀಚೆಗೆ ಮೊದಲ ಮೂಲಮಾದರಿ ಸಿದ್ಧ ಪಡಿಸಿದೆ. ಕಂಪನಿಯು ಇದರ ಉತ್ಪಾದನೆಯನ್ನು ಶೀಘ್ರದಲ್ಲೇ ಆರಂಭಿಸಲಿದೆ.
MOST READ: ವಾಹನ ಉತ್ಪಾದನೆ ಸ್ಥಗಿತದಿಂದಾಗಿ ಸಾವಿರಾರು ಕೋಟಿ ನಷ್ಟ
ಭಾರತದ ಬಹುತೇಕ ಎಲ್ಲಾ ರಾಜ್ಯಗಳ ಪೊಲೀಸರು ತಮ್ಮದೇ ಆದ ರೀತಿಯಲ್ಲಿ ಜನರಿಗೆ ಅರಿವು ಮೂಡಿಸಲು ಪ್ರಯತ್ನಿಸುತ್ತಿದ್ದಾರೆ. ಕರೋನಾ ಹೆಲ್ಮೆಟ್ ಇದಕ್ಕೊಂದು ತಾಜಾ ಉದಾಹರಣೆಯಾಗಿದೆ.
ಚಿತ್ರಕೃಪೆ: ಎಎನ್ಐ