Just In
- 10 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 10 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 11 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 11 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Movies Shobha Shetty ; ನಿಶ್ಚಿತಾರ್ಥದ ಬಗ್ಗೆ ಮಾಹಿತಿ ನೀಡಿದ ನಟಿ ಶೋಭಾ ಶೆಟ್ಟಿ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ಡೌನ್ ಉಲ್ಲಂಘಿಸುವವರೇ ಎಚ್ಚರ, ಹೆಣ ಹೊರಬೇಕಾದೀತು ಜೋಕೆ
ಮಹಾರಾಷ್ಟ್ರ, ಗುಜರಾತ್, ದೆಹಲಿ, ತಮಿಳುನಾಡು ರಾಜ್ಯಗಳಲ್ಲಿ ಕರೋನಾ ವೈರಸ್ ಹಾವಳಿ ಹೆಚ್ಚಾಗಿದೆ. ಈ ರಾಜ್ಯಗಳಲ್ಲಿ ಸಾವು ನೋವುಗಳ ಸಂಖ್ಯೆ ಹೆಚ್ಚುತ್ತಿದೆ. ದೇಶಾದ್ಯಂತ ಲಾಕ್ಡೌನ್ ಜಾರಿಗೊಳಿಸಿದರೂ, ಕರೋನಾ ವೈರಸ್ ಹರಡುವುದನ್ನು ನಿಯಂತ್ರಿಸಲಾಗಿಲ್ಲ.
ಭಾರತದಲ್ಲಿ ಮಾರ್ಚ್ 24ರಿಂದ ಲಾಕ್ಡೌನ್ ಜಾರಿಯಲ್ಲಿದೆ. ಲಾಕ್ಡೌನ್ ಅನ್ನು ಮೇ 31ರವರೆಗೆ ವಿಸ್ತರಿಸಲಾಗಿದೆ. ಅಗತ್ಯ ಕೆಲಸ ಇರುವವರು ಮಾತ್ರ ಮನೆಗಳಿಂದ ಹೊರಬರಬೇಕು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಆದರೆ ಜನರು ಅನಗತ್ಯವಾಗಿ ಸಂಚರಿಸುವುದನ್ನು ಕಾಣಬಹುದು. ಇಂತಹ ವಾಹನ ಚಾಲಕರ ವಿರುದ್ಧ ಪೊಲೀಸರು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ.
ಲಾಕ್ಡೌನ್ ಜಾರಿಗೆ ತಂದಾಗ, ವಾಹನಗಳಲ್ಲಿ ಸಂಚರಿಸುತ್ತಿದ್ದವರನ್ನು ಪೊಲೀಸರು ಥಳಿಸುತ್ತಿದ್ದರು. ಪೊಲೀಸರ ಈ ಕ್ರಮದ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದವು. ಆ ನಂತರ ಪೊಲೀಸರು ಮೇಲೆ ಥಳಿಸುವುದನ್ನು ನಿಲ್ಲಿಸಿದರು.
MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್
ಇದರ ಬದಲಿಗೆ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಹಾಗೂ ದಂಡ ವಿಧಿಸಲು ಮುಂದಾದರು. ಲಾಕ್ಡೌನ್ ಅವಧಿಯಲ್ಲಿ ದೇಶಾದ್ಯಂತ ಹತ್ತು ಲಕ್ಷಕ್ಕೂ ಹೆಚ್ಚು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇಷ್ಟೆಲ್ಲಾ ಕ್ರಮಗಳನ್ನು ಕೈಗೊಂಡರೂ ಪೊಲೀಸರಿಗೆ ವಾಹನಗಳ ದಟ್ಟಣೆಯನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಇದರಿಂದಾಗಿ ಪೊಲೀಸರು ವಿಭಿನ್ನ ಕ್ರಮಗಳಿಗೆ ಮುಂದಾದರು. ಕರೋನಾ ವೈರಸ್ನ ಗಂಭೀರತೆಯನ್ನು ವಾಹನ ಚಾಲಕರಿಗೆ ಅರ್ಥವಾಗುವಂತೆ ಮಾಡುವುದು ಇದರ ಹಿಂದಿರುವ ಉದ್ದೇಶ.
MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!
ತಿರುಪುರ ಪೊಲೀಸರು ಇತ್ತೀಚೆಗೆ ಕೈಗೊಂಡ ಕ್ರಮ ಎಲ್ಲರ ಗಮನ ಸೆಳೆದಿತ್ತು. ಲಾಕ್ಡೌನ್ ಉಲ್ಲಂಘಿಸಿ ಹೊರಬಂದ ಯುವಕರನ್ನು ಆಂಬುಲೆನ್ಸ್ಗೆ ಹತ್ತಿಸಿ ಕರೋನಾ ವೈರಸ್ ಸೋಂಕಿತರ ಜೊತೆ ಕಾಲಕಳೆಯುವಂತೆ ಮಾಡಿದ್ದರು.
ಯುವಕರು ಆಂಬುಲೆನ್ಸ್ ಹತ್ತಲು ಹಿಂದೇಟು ಹಾಕುತ್ತಾ ಕಿರುಚಾಡುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ದೆಹಲಿ ಪೊಲೀಸರು ಈಗ ಸಹ ಇದೇ ರೀತಿಯ ಕ್ರಮಕ್ಕೆ ಮುಂದಾಗಿದ್ದಾರೆ.
MOSTREAD: ನಟ ವಿಕ್ರಮ್ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್
ಭಾರತದಲ್ಲಿ ಕರೋನಾ ವೈರಸ್ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿರುವ ನಗರಗಳಲ್ಲಿ ದೆಹಲಿಯು ಸಹ ಒಂದು. ದೆಹಲಿಯಲ್ಲಿ ವಿನಾಕಾರಣ ಹೊರಬರುವವರ ಮೇಲೆ ಪೊಲೀಸರು ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ.
ಕೆಲ ದಿನಗಳ ಹಿಂದೆ ಪೊಲೀಸರು ಲಾಕ್ಡೌನ್ ಅವಧಿಯಲ್ಲಿ ಎರಡು ಬೈಕ್ಗಳಲ್ಲಿ ಹೊರಬಂದಿದ್ದ ಐವರು ಯುವಕರನ್ನು ತಡೆದು ನಿಲ್ಲಿಸಿದರು. ಯುವಕರು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದರು. ಆದರೂ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ನಂತರ ಪೊಲೀಸರು ಯುವಕರಿಗೆ ರಸ್ತೆಬದಿಯಲ್ಲಿದ್ದ ಶವವನ್ನು ಹೊತ್ತೊಯ್ಯುವಂತೆ ಹೇಳಿದ್ದಾರೆ. ಆ ಶವವು ಕರೋನಾ ವೈರಸ್ನಿಂದ ವ್ಯಕ್ತಿಯದಾಗಿರಬಹುದು ಎಂದು ಯುವಕರು ಭಯಪಟ್ಟರು. ಆದರೆ ಅದು ಡಮ್ಮಿ ಮೃತ ದೇಹವಾಗಿತ್ತು.
ಯುವಕರು ಮೃತದೇಹವನ್ನು ಹೊತ್ತೊಯ್ಯುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಘಟನೆ ಪೂರ್ವ ದೆಹಲಿಯ ಮಧು ವಿಹಾರದಲ್ಲಿ ನಡೆದಿದೆ ಎಂದು ಹೇಳಲಾಗಿದೆ.