Just In
- 3 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 4 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 5 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 5 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- News ಕುಡುಕರಿಗೆ ಎಣ್ಣೆ ಸಿಗುತ್ತಿಲ್ಲ, ಪರದಾಟ ನೋಡಲು ಆಗುತ್ತಿಲ್ಲ!
- Movies Bhagyalakshmi: ಶ್ರೇಷ್ಠಾ-ತಾಂಡವ್ ಮದುವೆಗೆ ಕುಸುಮಾ ಹಾರೈಕೆ; ಸತ್ಯ ಗೊತ್ತಾದ್ರೆ ಐತೆ ಮಾರಿ ಹಬ್ಬ!
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪೊಲೀಸ್ ಸೈರನ್ ಬಳಸಿ ಸಿಕ್ಕಿ ಬಿದ್ದ ರೆಸ್ಟೋರೆಂಟ್ ಮಾಲೀಕ
ಕರೋನಾ ವೈರಸ್ ಪ್ರಪಂಚದೆಲ್ಲೆಡೆ ವೇಗವಾಗಿ ಹರಡುತ್ತಿದೆ. ಭಾರತವೂ ಇದಕ್ಕೆ ಹೊರತಾಗಿಲ್ಲ. ಕೋವಿಡ್ -19 ವೈರಸ್ ಭಾರತದಲ್ಲಿ ವೇಗವಾಗಿ ಹರಡುತ್ತಿದೆ. ಇದನ್ನು ತಡೆಯಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿವೆ.
ಇದರ ಅಂಗವಾಗಿ ಕೇಂದ್ರ ಸರ್ಕಾರವು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಜಾರಿಗೊಳಿಸಿದೆ. ಜನರು ಅಗತ್ಯವಿಲ್ಲದೆ ಮನೆ ಬಿಟ್ಟು ಹೊರಗೆ ಬರುವುದನ್ನು ನಿರ್ಬಂಧಿಸಲಾಗಿದೆ. ಜನರು ಔಷಧಿಗಳಂತಹ ಅಗತ್ಯ ವಸ್ತುಗಳ ಖರೀದಿಗೆ ಹೊರ ಬರಬಹುದು. ಲಾಕ್ ಡೌನ್ ಹಿನ್ನೆಲೆಯಲ್ಲಿ ಬಸ್, ರೈಲು ಹಾಗೂ ವಿಮಾನಗಳ ಸೇವೆಗಳನ್ನು ರದ್ದುಪಡಿಸಲಾಗಿದೆ. ಯಾವುದೇ ವಾಹನಗಳ ಓಡಾಟವಿಲ್ಲದ ಕಾರಣಕ್ಕೆ ರಸ್ತೆಗಳು ನಿರ್ಜನವಾಗಿವೆ.
ಆದರೂ ಕೆಲ ಜನರು ಕಾರು, ಬೈಕುಗಳಲ್ಲಿ ಓಡಾಡುತ್ತಿದ್ದಾರೆ. ಇಂತಹವರ ಮೇಲೆ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ. ಅಗತ್ಯವಿಲ್ಲದೆ ಸಂಚರಿಸುವ ವಾಹನ ಚಾಲಕರಿಗೆ ದಂಡ ವಿಧಿಸುವುದರ ಜೊತೆಗೆ, ವಾಹನಗಳನ್ನು ಜಪ್ತಿ ಮಾಡಲಾಗುತ್ತಿದೆ. ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದರ ಜೊತೆಗೆ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ.
ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕೆ ಮುಂಬೈ ಪೊಲೀಸರು ಅಲ್ಲಿನ ಪ್ರಸಿದ್ಧ ಕೂಲರ್ ರೆಸ್ಟೋರೆಂಟ್ ಮಾಲೀಕನನ್ನು ಬಂಧಿಸಿದ್ದಾರೆ. ಕೂಲರ್ ರೆಸ್ಟೋರೆಂಟ್ ಮಾಲೀಕರಾದ ಅಲಿ ಕೂಲರ್ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊವೊಂದನ್ನು ಪೋಸ್ಟ್ ಮಾಡಿದ್ದರು.
ಈ ವೀಡಿಯೊದಲ್ಲಿ ಅವರು ತಮ್ಮ ಕಾರಿನಲ್ಲಿ ಸುತ್ತಾಡುತ್ತಿರುವುದನ್ನು ಕಾಣಬಹುದು. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ ನಂತರ ಈ ಘಟನೆ ನಡೆದಿದೆ. ಅಲಿ ಕೂಲರ್ ತನ್ನ ಕಾರಿನಲ್ಲಿ ಪೊಲೀಸ್ ಸೈರನ್ ಬಳಸಿ ಸಾರ್ವಜನಿಕ ರಸ್ತೆಗಳಲ್ಲಿ ಸುತ್ತಾಡಿದ್ದಾನೆ.
ಅಗತ್ಯವಿಲ್ಲದೆ ಯಾರೂ ಹೊರ ಬರಬಾರದು ಎಂದು ಸರ್ಕಾರ ಎಚ್ಚರಿಸಿದ್ದರೂ ರೆಸ್ಟೋರೆಂಟ್ ಮಾಲೀಕ ಇವುಗಳನ್ನು ಉಲ್ಲಂಘಿಸಿ ಹೊರಬರುವುದರ ಜೊತೆಗೆ ಕರೋನಾ, ಕರೋನಾ ಎಂದು ನಗುತ್ತಿರುವುದನ್ನು ಈ ವೀಡಿಯೊದಲ್ಲಿ ಕಾಣಬಹುದು.
ಆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇನ್ನೊಬ್ಬರು ಈ ದೃಶ್ಯವನ್ನು ರೆಕಾರ್ಡ್ ಮಾಡಿದ್ದಾರೆ. ಅಲಿ ಕೂಲರ್ ಎಷ್ಟು ದಿನ ಕಾರಿನಿಂದ ಈ ರೀತಿ ಹೊರಬಂದಿದ್ದರೂ ಎಂದು ತಿಳಿದು ಬಂದಿಲ್ಲ. ಈ ಘಟನೆಗೆ ಅಲಿ ಕೂಲರ್ ಕ್ಷಮೆಯಾಚಿಸಿದ್ದಾರೆ.
ಮತ್ತೊಂದು ವೀಡಿಯೊದಲ್ಲಿ ಮಾತನಾಡಿರುವ ಅವರು, ಲಾಕ್ ಡೌನ್ ಗೆ ಎಲ್ಲರೂ ಬದ್ಧರಾಗಿರಬೇಕು. ಪ್ರತಿಯೊಬ್ಬರೂ ತಮ್ಮ ಸುರಕ್ಷತೆಗೆ ಆದ್ಯತೆ ನೀಡಬೇಕೆಂದು ಹೇಳಿದ್ದಾರೆ. ಕ್ಷಮೆಯಾಚಿಸಿದ ನಂತರವೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದೆಂದು ಪೊಲೀಸರು ಹೇಳಿದ್ದಾರೆ.
ಹೆಚ್ಚು ಜನಸಾಂದ್ರತೆಯನ್ನು ಹೊಂದಿರುವ ಭಾರತದಲ್ಲಿ ಕೋವಿಡ್ -19 ವೈರಸ್ ವೇಗವಾಗಿ ಹರಡುವ ಸಾಧ್ಯತೆಗಳಿರುವುದರಿಂದ ಲಾಕ್ ಡೌನ್ ಘೋಷಿಸಲಾಗಿದೆ. ಈ ಕಾರಣಕ್ಕೆ ಪೊಲೀಸರು ಜನರು ಹೊರ ಬರದಂತೆ ಒತ್ತಾಯಿಸುತ್ತಿದ್ದಾರೆ. ಹಾಗಿದ್ದರೂ ಕೆಲವರು ಈ ರೀತಿಯಾಗಿ ವರ್ತಿಸುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ.