Just In
- 10 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 11 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 12 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 13 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ ಡೌನ್ ಹಿನ್ನೆಲೆ: ವಿದೇಶಿಯರನ್ನು ಜೈಪುರದಿಂದ ದೆಹಲಿಗೆ ಕರೆತಂದ ಓಲಾ
ಚೀನಾದ ವುಹಾನ್ ನಗರದಿಂದ ಹರಡಿದ ದ ಕೋವಿಡ್ -19 ವೈರಸ್ ಪ್ರಪಂಚವನ್ನೇ ಬೆಚ್ಚಿಬೀಳಿಸಿದೆ. ಕೋವಿಡ್ -19 ವೈರಸ್ನಿಂದ ಸಾವನ್ನಪ್ಪಿದವರ ಸಂಖ್ಯೆ 70 ಸಾವಿರ ಮುಟ್ಟಿತ್ತಿದೆ. ಈ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಕೋವಿಡ್ -19 ವೈರಸ್ ಹರಡದಂತೆ ತಡೆಯಲು ಜಗತ್ತಿನ ಬಹುತೇಕ ದೇಶಗಳಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ಭಾರತದಲ್ಲಿಯೂ 21 ದಿನಗಳ ಲಾಕ್ ಡೌನ್ ಘೋಷಿಸಲಾಗಿದೆ. ಬಸ್, ರೈಲು, ವಿಮಾನ ಸೇವೆಗಳನ್ನು ರದ್ದುಪಡಿಸಲಾಗಿದ್ದು, ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.
ಅನಗತ್ಯವಾಗಿ ಹೊರಬರುವ ವಾಹನಗಳನ್ನು ವಶಕ್ಕೆ ಪಡೆಯಲಾಗುತ್ತಿದೆ. ಸಾರ್ವಜನಿಕ ಸಾರಿಗೆ ಇಲ್ಲದಿರುವ ಕಾರಣಕ್ಕೆ ತುರ್ತು ಪರಿಸ್ಥಿತಿಗಳಲ್ಲಿ ಹೊರಗೆ ಹೋಗಬೇಕಾದವರು ಸಂಕಷ್ಟವನ್ನು ಎದುರಿಸುತ್ತಿದ್ದಾರೆ.
ಇದೇ ರೀತಿ ರಾಜಸ್ಥಾನದ ಜೈಪುರದಲ್ಲಿ ಸಿಲುಕಿದ್ದ 4 ವಿದೇಶಿಯರಿಗೆ ದೆಹಲಿಯ ಓಲಾ ಕಂಪನಿ ಸಹಾಯಹಸ್ತವನ್ನು ಚಾಚಿದೆ. ಈ ನಾಲ್ವರೂ ಆಸ್ಟ್ರೇಲಿಯಾಕ್ಕೆ ಸೇರಿದವರು, ಇವರಲ್ಲಿ ಇಬ್ಬರು ಮಹಿಳೆಯರಿದ್ದರು. ಈ ನಾಲ್ವರೂ ಶನಿವಾರ ಮಧ್ಯಾಹ್ನ ದೆಹಲಿ ತಲುಪಿದ್ದಾರೆ.
ಲಾಕ್ ಡೌನ್ ಜಾರಿಗೊಳಿಸುವ ಮುನ್ನ ಈ ನಾಲ್ವರೂ ಜೈಪುರದಲ್ಲಿದ್ದರು. ಬಸ್, ರೈಲು, ವಿಮಾನ ವಾಯು ಸೇವೆಗಳನ್ನು ರದ್ದುಪಡಿಸಿದ ಕಾರಣಕ್ಕೆ ಅವರಿಗೆ ಜೈಪುರದಿಂದ ಹೊರ ಬರಲು ಸಾಧ್ಯವಾಗಿಲ್ಲ. ಈ ಕಾರಣಕ್ಕೆ ಅವರು ದೆಹಲಿಯಲ್ಲಿರುವ ಆಸ್ಟ್ರೇಲಿಯಾದ ಹೈಕಮಿಷನ್ನರ ಸಹಾಯ ಕೋರಿದ್ದಾರೆ.
ಪರವಾನಗಿ ಹಾಗೂ ಪಾಸ್ಗಳನ್ನು ಪಡೆದ ನಂತರ ಓಲಾ ಕಂಪನಿಯು ಈ ನಾಲ್ವರನ್ನು ದೆಹಲಿಗೆ ಕರೆದೊಯ್ದಿದೆ. ಈ ನಾಲ್ವರನ್ನು ದೆಹಲಿಗೆ ಕರೆತರಲು ಓಲಾ ಕಂಪನಿಯು ಅನುಭವಿ ಡ್ರೈವರ್ ಜೊತೆಗೆ ಸೋಂಕು ನಿವಾರಕ ಕಾರಿನ ವ್ಯವಸ್ಥೆಯನ್ನು ಮಾಡಿತ್ತು.
ದೆಹಲಿಗೆ ವಾಪಸಾಗುವ ಮುನ್ನ ಅವರನ್ನು ಜೈಪುರದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಲ್ಲಿ ಯಾರಿಗೂ ಕೋವಿಡ್ -19 ವೈರಸ್ ಸೋಂಕು ಇರಲಿಲ್ಲ. ಸಾರ್ವಜನಿಕ ಸಾರಿಗೆ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಓಲಾ ಕಂಪನಿಯು ಆಸ್ಟ್ರೇಲಿಯನ್ನರನ್ನು ದೆಹಲಿಗೆ ಕರೆತರಲು ಮುಂದಾಗಿದೆ.
ಓಲಾ ಕಂಪನಿಯು ಕರ್ನಾಟಕದಲ್ಲಿ ಕರೋನಾ ಮಹಾಮಾರಿಗೆ ಚಿಕಿತ್ಸೆ ನೀಡುತ್ತಿರುವ ಡಾಕ್ಟರ್ ಗಳಿಗೆ ಅನುಕೂಲವಾಗುವ ಉದ್ದೇಶದಿಂದ 500 ವಾಹನಗಳನ್ನು ಕರ್ನಾಟಕ ಸರ್ಕಾರಕ್ಕೆ ಪೂರೈಸಲು ಮುಂದಾಗಿದೆ. ಈ ವಾಹನಗಳನ್ನು ಕೋವಿಡ್ -19 ಸಂಬಂಧಿತ ಕಾರ್ಯಾಚರಣೆಗಳಿಗೆ ಬಳಸಲಾಗುತ್ತದೆ. ಕರೋನಾ ವಿರುದ್ಧದ ಹೋರಾಟಕ್ಕೆ ಕೈಜೋಡಿಸಿರುವ ಓಲಾ ಕಂಪನಿಯ ಕ್ರಮ ಶ್ಲಾಘನೀಯ.
ಸೂಚನೆ: ಈ ಚಿತ್ರಗಳನ್ನು ರೆಫರೆನ್ಸ್ ಗಾಗಿ ಬಳಸಲಾಗಿದೆ.