Just In
- 4 hrs ago ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- 5 hrs ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- 5 hrs ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 5 hrs ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
Don't Miss!
- News Mukhtar Ansari: ಗ್ಯಾಂಗ್ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು
- Movies Radha Bhagavathi ; ಮಲ್ಲಿ ಅಲಿಯಾಸ್ ರಾಧಾ ಭಗವತಿ ಹಿನ್ನೆಲೆ ಏನ್ಗೊತ್ತಾ..?
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ ಡೌನ್ ಹಿನ್ನೆಲೆ: ವಿದೇಶಿಯರನ್ನು ಜೈಪುರದಿಂದ ದೆಹಲಿಗೆ ಕರೆತಂದ ಓಲಾ
ಚೀನಾದ ವುಹಾನ್ ನಗರದಿಂದ ಹರಡಿದ ದ ಕೋವಿಡ್ -19 ವೈರಸ್ ಪ್ರಪಂಚವನ್ನೇ ಬೆಚ್ಚಿಬೀಳಿಸಿದೆ. ಕೋವಿಡ್ -19 ವೈರಸ್ನಿಂದ ಸಾವನ್ನಪ್ಪಿದವರ ಸಂಖ್ಯೆ 70 ಸಾವಿರ ಮುಟ್ಟಿತ್ತಿದೆ. ಈ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಕೋವಿಡ್ -19 ವೈರಸ್ ಹರಡದಂತೆ ತಡೆಯಲು ಜಗತ್ತಿನ ಬಹುತೇಕ ದೇಶಗಳಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ಭಾರತದಲ್ಲಿಯೂ 21 ದಿನಗಳ ಲಾಕ್ ಡೌನ್ ಘೋಷಿಸಲಾಗಿದೆ. ಬಸ್, ರೈಲು, ವಿಮಾನ ಸೇವೆಗಳನ್ನು ರದ್ದುಪಡಿಸಲಾಗಿದ್ದು, ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.
ಅನಗತ್ಯವಾಗಿ ಹೊರಬರುವ ವಾಹನಗಳನ್ನು ವಶಕ್ಕೆ ಪಡೆಯಲಾಗುತ್ತಿದೆ. ಸಾರ್ವಜನಿಕ ಸಾರಿಗೆ ಇಲ್ಲದಿರುವ ಕಾರಣಕ್ಕೆ ತುರ್ತು ಪರಿಸ್ಥಿತಿಗಳಲ್ಲಿ ಹೊರಗೆ ಹೋಗಬೇಕಾದವರು ಸಂಕಷ್ಟವನ್ನು ಎದುರಿಸುತ್ತಿದ್ದಾರೆ.
ಇದೇ ರೀತಿ ರಾಜಸ್ಥಾನದ ಜೈಪುರದಲ್ಲಿ ಸಿಲುಕಿದ್ದ 4 ವಿದೇಶಿಯರಿಗೆ ದೆಹಲಿಯ ಓಲಾ ಕಂಪನಿ ಸಹಾಯಹಸ್ತವನ್ನು ಚಾಚಿದೆ. ಈ ನಾಲ್ವರೂ ಆಸ್ಟ್ರೇಲಿಯಾಕ್ಕೆ ಸೇರಿದವರು, ಇವರಲ್ಲಿ ಇಬ್ಬರು ಮಹಿಳೆಯರಿದ್ದರು. ಈ ನಾಲ್ವರೂ ಶನಿವಾರ ಮಧ್ಯಾಹ್ನ ದೆಹಲಿ ತಲುಪಿದ್ದಾರೆ.
ಲಾಕ್ ಡೌನ್ ಜಾರಿಗೊಳಿಸುವ ಮುನ್ನ ಈ ನಾಲ್ವರೂ ಜೈಪುರದಲ್ಲಿದ್ದರು. ಬಸ್, ರೈಲು, ವಿಮಾನ ವಾಯು ಸೇವೆಗಳನ್ನು ರದ್ದುಪಡಿಸಿದ ಕಾರಣಕ್ಕೆ ಅವರಿಗೆ ಜೈಪುರದಿಂದ ಹೊರ ಬರಲು ಸಾಧ್ಯವಾಗಿಲ್ಲ. ಈ ಕಾರಣಕ್ಕೆ ಅವರು ದೆಹಲಿಯಲ್ಲಿರುವ ಆಸ್ಟ್ರೇಲಿಯಾದ ಹೈಕಮಿಷನ್ನರ ಸಹಾಯ ಕೋರಿದ್ದಾರೆ.
ಪರವಾನಗಿ ಹಾಗೂ ಪಾಸ್ಗಳನ್ನು ಪಡೆದ ನಂತರ ಓಲಾ ಕಂಪನಿಯು ಈ ನಾಲ್ವರನ್ನು ದೆಹಲಿಗೆ ಕರೆದೊಯ್ದಿದೆ. ಈ ನಾಲ್ವರನ್ನು ದೆಹಲಿಗೆ ಕರೆತರಲು ಓಲಾ ಕಂಪನಿಯು ಅನುಭವಿ ಡ್ರೈವರ್ ಜೊತೆಗೆ ಸೋಂಕು ನಿವಾರಕ ಕಾರಿನ ವ್ಯವಸ್ಥೆಯನ್ನು ಮಾಡಿತ್ತು.
ದೆಹಲಿಗೆ ವಾಪಸಾಗುವ ಮುನ್ನ ಅವರನ್ನು ಜೈಪುರದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಲ್ಲಿ ಯಾರಿಗೂ ಕೋವಿಡ್ -19 ವೈರಸ್ ಸೋಂಕು ಇರಲಿಲ್ಲ. ಸಾರ್ವಜನಿಕ ಸಾರಿಗೆ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಓಲಾ ಕಂಪನಿಯು ಆಸ್ಟ್ರೇಲಿಯನ್ನರನ್ನು ದೆಹಲಿಗೆ ಕರೆತರಲು ಮುಂದಾಗಿದೆ.
ಓಲಾ ಕಂಪನಿಯು ಕರ್ನಾಟಕದಲ್ಲಿ ಕರೋನಾ ಮಹಾಮಾರಿಗೆ ಚಿಕಿತ್ಸೆ ನೀಡುತ್ತಿರುವ ಡಾಕ್ಟರ್ ಗಳಿಗೆ ಅನುಕೂಲವಾಗುವ ಉದ್ದೇಶದಿಂದ 500 ವಾಹನಗಳನ್ನು ಕರ್ನಾಟಕ ಸರ್ಕಾರಕ್ಕೆ ಪೂರೈಸಲು ಮುಂದಾಗಿದೆ. ಈ ವಾಹನಗಳನ್ನು ಕೋವಿಡ್ -19 ಸಂಬಂಧಿತ ಕಾರ್ಯಾಚರಣೆಗಳಿಗೆ ಬಳಸಲಾಗುತ್ತದೆ. ಕರೋನಾ ವಿರುದ್ಧದ ಹೋರಾಟಕ್ಕೆ ಕೈಜೋಡಿಸಿರುವ ಓಲಾ ಕಂಪನಿಯ ಕ್ರಮ ಶ್ಲಾಘನೀಯ.
ಸೂಚನೆ: ಈ ಚಿತ್ರಗಳನ್ನು ರೆಫರೆನ್ಸ್ ಗಾಗಿ ಬಳಸಲಾಗಿದೆ.