Just In
- 4 min ago ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- 1 hr ago ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- 1 hr ago Mahindra Thar: ಸುಲಭವಾಗಿ ಆಫ್ರೋಡ್ ಕಿಂಗ್ ಖರೀದಿಸಬೇಕೆ?: ಆನ್ರೊಡ್ ಬೆಲೆ, EMI ಸಂಪೂರ್ಣ ಮಾಹಿತಿ!
- 1 hr ago Mahindra: ಫ್ಯಾಮಿಲಿ ಕಾರು ಮಹೀಂದ್ರಾ ಎಕ್ಸ್ಯುವಿ700 ಖರೀದಿಸುವವರಿಗೆ ಸಿಹಿಸುದ್ದಿ.. ಇನ್ನೂ ತಿಂಗಳೇ ಸಾಕು!
Don't Miss!
- News ಇಂದು ಕರ್ನಾಟಕಕ್ಕೆ ಮೋದಿ :11 ಪ್ರಶ್ನೆಗಳ ಬಾಣ ಬಿಟ್ಟ ಸಿದ್ದರಾಮಯ್ಯ
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Movies Sathya ; ಸತ್ಯಾ ತವರು ಮನೆಗೆ ಅವಮಾನ ಮಾಡಿದ ಕೀರ್ತನ..!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇತರರಿಗೆ ಮಾದರಿಯಾದ ನವೀನ್ ಪಟ್ನಾಯಕ್ ನಿರ್ಧಾರ..!
ಚೀನಾದ ವುಹಾನ್ನಿಂದ ಹರಡಿದ ಕರೋನಾ ವೈರಸ್ ಮಾನವಕುಲಕ್ಕೆ ದೊಡ್ಡ ಅಪಾಯವನ್ನು ತಂದಿಟ್ಟಿದೆ. ಪ್ರಪಂಚದ ದೊಡ್ಡ ದೇಶಗಳಿಗೂ ಸಹ ಈ ಕರೋನಾ ವೈರಸ್ ಹಾವಳಿಯನ್ನು ತಡೆಗಟ್ಟಲು ಸಾಧ್ಯವಾಗುತ್ತಿಲ್ಲ.
ವೈದ್ಯಕೀಯ ಕ್ಷೇತ್ರದಲ್ಲಿ ಮುಂದುವರೆದಿರುವ ದೇಶಗಳಲ್ಲಿಯೂ ಸಹ ವೈದ್ಯಕೀಯ ಸಲಕರಣೆಗಳ ಕೊರತೆ ಎದುರಾಗಿದೆ. ಅದರಲ್ಲೂ ವೆಂಟಿಲೇಟರ್ಗಳು ಹಾಗೂ ಎನ್ 95 ಮಾಸ್ಕ್ಗಳ ಕೊರತೆ ಎದುರಾಗಿದೆ. ಭಾರತದಲ್ಲಿ ತೀವ್ರವಾಗಿ ಹರಡುತ್ತಿರುವ ಕರೋನಾವನ್ನು ತಡೆಗಟ್ಟಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿವೆ.
ಇದರ ಅಂಗವಾಗಿ ಭಾರತದಲ್ಲಿ 21 ದಿನಗಳ ಲಾಕ್ಡೌನ್ ಜಾರಿಗೊಳಿಸಲಾಗಿದೆ. ಏಪ್ರಿಲ್ 14ರವರೆಗೆ ಜಾರಿಯಲ್ಲಿರುವ ಈ ಲಾಕ್ಡೌನ್ ಅವಧಿಯನ್ನು ಮತ್ತಷ್ಟು ವಿಸ್ತರಿಸುವ ಸಾಧ್ಯತೆಗಳಿವೆ. ಶೀಘ್ರದಲ್ಲೇ ಇದರ ಬಗ್ಗೆ ಅಧಿಕೃತ ಘೋಷಣೆಯಾಗುವ ಸಾಧ್ಯತೆಗಳಿವೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಆದರೆ ಒಡಿಶಾ ರಾಜ್ಯ ಸರ್ಕಾರವು ಈ ಲಾಕ್ಡೌನ್ ಅನ್ನು ಏಪ್ರಿಲ್ 30ರವರೆಗೆ ವಿಸ್ತರಿಸಿದೆ. ಇದರೊಂದಿಗೆ, ಒಡಿಶಾ ಲಾಕ್ಡೌನ್ ವಿಸ್ತರಿಸಿದ ಭಾರತದ ಮೊದಲ ರಾಜ್ಯವಾಗಿದೆ. ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ನೇತೃತ್ವದ ಸರ್ಕಾರವು ಕರೋನಾ ವೈರಸ್ ಹರಡುವುದನ್ನು ತಡೆಗಟ್ಟಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.
ಒಡಿಶಾದಲ್ಲಿ ಇದುವರೆಗೂ 48 ಜನರಿಗೆ ಕರೋನಾ ಸೋಂಕು ತಗುಲಿದೆ. ಒಬ್ಬರು ಸಾವನ್ನಪ್ಪಿದ್ದರೆ, ಇಬ್ಬರು ಚೇತರಿಸಿಕೊಂಡಿದ್ದಾರೆ. ಕರೋನಾ ವೈರಸ್ ಬರದಂತೆ ಇರುವ ಉತ್ತಮ ಮಾರ್ಗವೆಂದರೆ ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವುದು. ಈ ರೋಗಕ್ಕೆ ಯಾವುದೇ ಅಧಿಕೃತ ಚಿಕಿತ್ಸೆ ಇಲ್ಲ.
MOSTREAD: ವಾಹನ ಉತ್ಪಾದನೆ ಸ್ಥಗಿತದಿಂದಾಗಿ ಸಾವಿರಾರು ಕೋಟಿ ನಷ್ಟ
14 ದಿನಗಳ ಕಾಲ ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರಿಗೆ ಒಡಿಶಾ ರಾಜ್ಯ ಸರ್ಕಾರವು 15ನೇ ದಿನದಂದು 15 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡುವುದಾಗಿ ಹೇಳಿದೆ. ಇದರ ಜೊತೆಗೆ ಒಡಿಶಾ ಸರ್ಕಾರವು 4 ತಿಂಗಳ ಪಡಿತರ, ಅಕ್ಕಿ ನೀಡಿದೆ. ಜೊತೆಗೆ ಪಿಂಚಣಿದಾರರಿಗೆ ಹಾಗೂ ಕಟ್ಟಡ ಕಾರ್ಮಿಕರಿಗೆ ಧನ ಸಹಾಯ ಮಾಡಿದೆ.
ಅಗತ್ಯ ಕೆಲಸಗಳಿಗಾಗಿ ಮನೆಯಿಂದ ಹೊರಬೇಕಾದರೆ ಸಾರ್ವಜನಿಕರು ಮಾಸ್ಕ್ ಧರಿಸುವುದನ್ನು ಒಡಿಶಾ ರಾಜ್ಯ ಸರ್ಕಾರವು ಕಡ್ಡಾಯಗೊಳಿಸಿದೆ. ಈ ನಿಯಮವನ್ನು ಉಲ್ಲಂಘಿಸುವವರಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ.
MOST READ:ವಾಹನ ಸವಾರರ ಕಾಲಿಗೆ ಬೀಳುತ್ತೇನೆಂದ ಸಂಚಾರಿ ಪೊಲೀಸ್, ಕಾರಣವೇನು ಗೊತ್ತಾ?
ಮೊದಲ ಮೂರು ಬಾರಿ ಈ ನಿಯಮ ಉಲ್ಲಂಘಿಸಿದರೆ ತಲಾ ರೂ.200, ಮತ್ತೆ ಉಲ್ಲಂಘಿಸಿದರೆ ಪ್ರತಿ ಬಾರಿ ರೂ.500 ದಂಡ ವಿಧಿಸಲಾಗುತ್ತದೆ. ಎಲ್ಲರೂ ಈ ನಿಯಮವನ್ನು ಪಾಲಿಸಬೇಕು ಎಂದು ಒಡಿಶಾ ಸರ್ಕಾರ ಘೋಷಿಸಿದೆ.
ಇದರ ಜೊತೆಗೆ ಒಡಿಶಾ ರಾಜ್ಯದ ಪೆಟ್ರೋಲಿಯಂ ಬಂಕ್ಗಳು ಹೊಸ ಪ್ರಕಟಣೆ ಹೊರಡಿಸಿವೆ. ಅದರಂತೆ, ಮಾಸ್ಕ್ ಧರಿಸದ ವಾಹನ ಚಾಲಕರ ವಾಹನಗಳಿಗೆ ಇನ್ನು ಮುಂದೆ ಪೆಟ್ರೋಲ್ ಹಾಗೂ ಡೀಸೆಲ್ ಮಾರಾಟ ಮಾಡುವುದಿಲ್ಲ.
MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್
ಒಡಿಶಾದಲ್ಲಿರುವ ಎಲ್ಲಾ ಪೆಟ್ರೋಲ್ ಬಂಕ್ಗಳಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಕ್ರಮಕ್ಕೆ ಪ್ರಶಂಸೆ ವ್ಯಕ್ತವಾಗಿದೆ. ಒಡಿಶಾ ರಾಜ್ಯದಾದ್ಯಂತ ಸುಮಾರು 1,600 ಪೆಟ್ರೋಲ್ ಬಂಕ್ಗಳಿವೆ. ಈ ಯೋಜನೆಯನ್ನು ಎಲ್ಲಾ ಬಂಕ್ಗಳಲ್ಲಿ ಜಾರಿಗೆ ತರಲಾಗಿದೆ.
ಅಲ್ಲಿನ ಜನರು ಈ ನಿಯಮಗಳನ್ನು ಅನುಸರಿಸುವಂತೆ ಪೆಟ್ರೋಲ್ ಬಂಕ್ಗಳು ಹೇಳಿವೆ. ಲಾಕ್ಡೌನ್ ಜಾರಿಯಲ್ಲಿದ್ದರೂ, ಪೆಟ್ರೋಲ್ ಮಾರಾಟ ಮಾಡುವುದು ಅಗತ್ಯ. ಪೆಟ್ರೋಲ್ ಬಂಕ್ಗಳ ನೌಕರರು ಸಹ ಸುರಕ್ಷತಾ ಕ್ರಮಗಳನ್ನು ಅನುಸರಿಸುತ್ತಿದ್ದಾರೆ.
ಪೆಟ್ರೋಲ್ ಮಾತ್ರವಲ್ಲದೇ ದಿನಸಿ ಹಾಗೂ ತರಕಾರಿ ಅಂಗಡಿಗಳ ಮಾಲೀಕರು ಸಹ ಮಾಸ್ಕ್ಗಳನ್ನು ಧರಿಸುವಂತೆ ಗ್ರಾಹಕರಿಗೆ ಸಲಹೆ ನೀಡಿದ್ದಾರೆ. ಇಲ್ಲದಿದ್ದರೆ ಅವುಗಳನ್ನು ಮಾರಾಟ ಮಾಡುವುದಿಲ್ಲವೆಂದು ತಿಳಿಸಿದ್ದಾರೆ.
ಒಡಿಶಾ ರಾಜ್ಯವು ಮಳೆ ಹಾಗೂ ಪ್ರವಾಹದಿಂದಾಗಿ ಹೆಚ್ಚಿನ ತೊಂದರೆಯನ್ನು ಅನುಭವಿಸುತ್ತದೆ. ಹೀಗಾಗಿ, ವಿಪತ್ತುಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಒಡಿಶಾ ಹೆಚ್ಚು ಅನುಭವ ಹೊಂದಿದೆ. ಈ ಅನುಭವವು ಕರೋನಾ ವೈರಸ್ ಹಾವಳಿಯನ್ನು ಎದುರಿಸಲು ಒಡಿಶಾಗೆ ನೆರವಾಗಲಿದೆ.
ಸೂಚನೆ: ಈ ಚಿತ್ರಗಳನ್ನು ರೆಫರೆನ್ಸ್ಗಾಗಿ ಬಳಸಲಾಗಿದೆ.