Just In
- 2 hrs ago ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- 3 hrs ago ಎಲೆಕ್ಟ್ರಿಕ್ ಅವತಾರದಲ್ಲಿ ಬರಲಿದೆ ಹೋಂಡಾ ಆಕ್ಟಿವಾ: ಎಲೆಕ್ಟ್ರಿಕ್ ಸ್ಕೂಟರ್ಗಳ ರಾಜ ಆಗುತ್ತಾ?
- 3 hrs ago ಪ್ರೇರಣಾತ್ಮಕ ಕಥೆ: ಮನೆ ಕೆಲಸದಾಕೆಗೆ 'ಸೈಕಲ್' ಖರೀದಿಸಲು ಸಹಾಯ ಮಾಡಿದ ಮಾಲೀಕ.. ವಿಡಿಯೋ ವೈರಲ್
- 5 hrs ago ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
Don't Miss!
- News Toilet Photo Viral: ಕಡಿಮೆ ಖರ್ಚಿನಲ್ಲಿ 'ಲೀಕೆಜ್ ಟ್ಯಾಂಕರ್'ನಿಂದ ಟಾಯ್ಲೆಟ್ ನಿರ್ಮಾಣ: ನೀವೂ ಟ್ರೈ ಮಾಡಿ
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Movies ರಾಜಕೀಯ ಆಯಾಮ ಬೇಡ, ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದ ರಚಿತಾ ರಾಮ್ ; #JusticeForNeha ಎಂದ ರಿಷಬ್ ಶೆಟ್ಟಿ..!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮುಗಿಯದ ಲಾಕ್ಡೌನ್ ರಗಳೆ: 15 ವರ್ಷದ ಬಾಲಕಿಯ ಸಾಹಸಕ್ಕೊಂದು ದೊಡ್ಡ ಸಲಾಂ
ದೇಶಾದ್ಯಂತ ಲಾಕ್ಡೌನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ವಾಪಸ್ ಆಗುತ್ತಿದ್ದಾರೆ. ಯಾವುದೇ ಸಾರಿಗೆ ಸೌಲಭ್ಯಗಳಿಲ್ಲದ ಕಾರಣಕ್ಕೆ ಜನರು ತಮ್ಮದೇ ಆದ ಸಾರಿಗೆ ವ್ಯವಸ್ಥೆಗಳ ಮೂಲಕ ಊರುಗಳಿಗೆ ತೆರಳುತ್ತಿದ್ದಾರೆ.
ದೇಶಾದ್ಯಂತ ಸಾರ್ವಜನಿಕ ಸಾರಿಗೆಯನ್ನು ಸ್ಥಗಿತಗೊಳಿಸಲಾಗಿದೆ. ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಕರೆತರಲು ವಿಶೇಷ ರೈಲು ಹಾಗೂ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಆದರೆ ಎಲ್ಲರಿಗೂ ಈ ಸೌಲಭ್ಯ ಸಿಗುತ್ತಿಲ್ಲ. ಈ ಸೌಲಭ್ಯ ಸಿಗದ ಬಡ ವಲಸೆ ಕಾರ್ಮಿಕರು ತಾವೇ ಸ್ವತಃ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ.
ಇದೇ ರೀತಿ 15 ವರ್ಷದ ಬಿಹಾರ ಮೂಲದ ಬಾಲಕಿಯೊಬ್ಬಳು ಅನಾರೋಗ್ಯಕ್ಕೀಡಾಗಿದ್ದ ತನ್ನ ತಂದೆಯನ್ನು ದೆಹಲಿಯಿಂದ ದರ್ಭಂಗಕ್ಕೆ ಕರೆತಂದಿದ್ದಾಳೆ. ಕೋವಿಡ್ -19 ವೈರಸ್ ಆಕೆಯ ತಂದೆಯ ಜೀವನೋಪಾಯವನ್ನು ಕಸಿದುಕೊಂಡಿದೆ. ಆಕೆಯ ತಂದೆಯ ಕಾಲಿಗೆ ಗಾಯವಾಗಿದ್ದು, ನಡೆಯಲು ಸಾಧ್ಯವಾಗುತ್ತಿಲ್ಲ. ಈ ಕಾರಣಕ್ಕೆ ಆಕೆ ಸೈಕಲ್ನಲ್ಲಿ ತನ್ನ ತಂದೆಯನ್ನು ಕರೆತಂದಿದ್ದಾಳೆ.
MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!
ಜ್ಯೋತಿ ಎಂಬ 15 ವರ್ಷದ ಬಾಲಕಿಯೇ ತಂದೆಯನ್ನು ಸೈಕಲ್ನಲ್ಲಿ ಊರಿಗೆ ಮರಳಿ ಕರೆತಂದ ದಿಟ್ಟ ಹುಡುಗಿ. ತಂದೆ-ಮಗಳು ಮೇ 10ರಂದು ದೆಹಲಿಯಿಂದ ದರ್ಭಂಗಕ್ಕೆ ಹೊರಟರು. ಮೊದಲಿಗೆ ಅವರು ಬಸ್ನಲ್ಲಿ ಮನೆಗೆ ಹೋಗಬೇಕೆಂದು ನಿರ್ಧರಿಸಿ, ಬಸ್ ನಿಲ್ದಾಣವನ್ನು ತಲುಪಿದರು. ಆದರೆ ಬಸ್ ಪ್ರಯಾಣ ದರವಾದ ರೂ.6000ಗಳನ್ನು ಹೊಂದಿಸಲು ಸಾಧ್ಯವಾಗಲಿಲ್ಲ.
ಕೊನೆಗೆ ಜ್ಯೋತಿ ರೂ.500 ಮೌಲ್ಯದ ಸೈಕಲ್ ಖರೀದಿಸಿದಳು. ನಂತರ ಆಕೆಯ ಬಳಿ ಕೇವಲ 100 ರೂಪಾಯಿ ಮಾತ್ರ ಉಳಿದಿತ್ತು. ಈ ಹಣವನ್ನು ಆಕೆ ಮುಂದಿನ ಪ್ರಯಾಣಕ್ಕಾಗಿ ಉಳಿಸಿದ್ದಳು. ಆಕೆ ಮತ್ತು ಆಕೆಯ ತಂದೆ ಹೆದ್ದಾರಿಯಲ್ಲಿ ಹಗಲು ರಾತ್ರಿ ಪ್ರಯಾಣಿಸಿದರು.
MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್
ಈ ಬಗ್ಗೆ ಮಾತನಾಡಿದ ಜ್ಯೋತಿ, ನೂರಾರು ಕಾರ್ಮಿಕರು ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಾರಣ ರಾತ್ರಿ ವೇಳೆ ಸೈಕಲ್ ತುಳಿಯಲು ಭಯವಾಗಲಿಲ್ಲ ಎಂದು ಹೇಳಿದಳು. ಈ ಪ್ರಯಾಣದ ವೇಳೆಯಲ್ಲಿ ಅವರು 2 - 3 ಗಂಟೆಗಳ ಕಾಲ ವಿಶ್ರಾಂತಿ ಪಡೆಯುತ್ತಿದ್ದರು.
ಪೆಟ್ರೋಲ್ ಬಂಕ್ಗಳಲ್ಲಿ 2-3 ಗಂಟೆಗಳ ಕಾಲ ವಿಶ್ರಾಂತಿ ಪಡೆದು ನಂತರ ಪ್ರಯಾಣ ಮಾಡುತ್ತಿದ್ದರು. ದಾರಿಯಲ್ಲಿ ಪರಿಹಾರ ಶಿಬಿರದಲ್ಲಿ ನೀಡುತ್ತಿದ್ದ ಆಹಾರವನ್ನು ಸೇವಿಸುತ್ತಿದ್ದರು. ತಂದೆ ಮಗಳ ಈ ಪ್ರಯಾಣದ ಬಗ್ಗೆ ಸ್ಥಳೀಯರು ಆಶ್ಚರ್ಯ ವ್ಯಕ್ತಪಡಿಸುತ್ತಿದ್ದರು.
MOSTREAD: ನಟ ವಿಕ್ರಮ್ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್
ಈಗ ಈ ಹುಡುಗಿಗೆ ನೆರವಾಗಲು ಹಲವಾರು ಜನರು ಮುಂದಾಗಿದ್ದಾರೆ. ಸೈಕ್ಲಿಂಗ್ ಫೆಡರೇಶನ್ ಸಹ ಆಕೆಯ ಸಹಾಯಕ್ಕೆ ಮುಂದಾಗಿದೆ. ಲಾಕ್ಡೌನ್ ಹಿನ್ನೆಲೆಯಲ್ಲಿ ಇದೇ ರೀತಿಯ ಅನೇಕ ಘಟನೆಗಳು ನಡೆದಿವೆ. ವಿಶೇಷ ಚೇತನ ತಾಯಿಯೊಬ್ಬರು ತಮ್ಮ ಮಗನನ್ನು ಕರೆ ತರಲು 1,400 ಕಿ.ಮೀ ಸ್ಕೂಟರ್ ಚಾಲನೆ ಮಾಡಿದ್ದರು.