Just In
- 3 hrs ago ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- 3 hrs ago ಎಲೆಕ್ಟ್ರಿಕ್ ಅವತಾರದಲ್ಲಿ ಬರಲಿದೆ ಹೋಂಡಾ ಆಕ್ಟಿವಾ: ಎಲೆಕ್ಟ್ರಿಕ್ ಸ್ಕೂಟರ್ಗಳ ರಾಜ ಆಗುತ್ತಾ?
- 3 hrs ago ಪ್ರೇರಣಾತ್ಮಕ ಕಥೆ: ಮನೆ ಕೆಲಸದಾಕೆಗೆ 'ಸೈಕಲ್' ಖರೀದಿಸಲು ಸಹಾಯ ಮಾಡಿದ ಮಾಲೀಕ.. ವಿಡಿಯೋ ವೈರಲ್
- 5 hrs ago ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
Don't Miss!
- News Toilet Photo Viral: ಕಡಿಮೆ ಖರ್ಚಿನಲ್ಲಿ 'ಲೀಕೆಜ್ ಟ್ಯಾಂಕರ್'ನಿಂದ ಟಾಯ್ಲೆಟ್ ನಿರ್ಮಾಣ: ನೀವೂ ಟ್ರೈ ಮಾಡಿ
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Movies ರಾಜಕೀಯ ಆಯಾಮ ಬೇಡ, ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದ ರಚಿತಾ ರಾಮ್ ; #JusticeForNeha ಎಂದ ರಿಷಬ್ ಶೆಟ್ಟಿ..!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ಡೌನ್ ಎಫೆಕ್ಟ್: ನಾನ್ ಎಮರ್ಜೆನ್ಸಿ ರೋಗಿಗಳಿಗೆ ದೊರೆಯಲಿದೆ ಉಚಿತ ಕ್ಯಾಬ್ ಸೇವೆ
ಕೋವಿಡ್ -19 ವೈರಸ್ ಹರಡುವುದನ್ನು ತಡೆಯಲು ಎಲ್ಲಾ ದೇಶಗಳು ಹೆಣಗಾಡುತ್ತಿವೆ. ಈ ಮಾರಣಾಂತಿಕ ವೈರಸ್ನಿಂದ ಸಾವುನೋವುಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಭಾರತದಲ್ಲಿ ವೈರಸ್ ಹರಡುವುದನ್ನು ತಡೆಗಟ್ಟಲು ಮೇ 3ರವರೆಗೆ ಲಾಕ್ಡೌನ್ ಜಾರಿಗೊಳಿಸಲಾಗಿದೆ.
ಲಾಕ್ಡೌನ್ ಕಾರಣಕ್ಕೆ ಬಸ್ ಹಾಗೂ ರೈಲು ಸೇವೆಗಳನ್ನು ರದ್ದುಪಡಿಸಲಾಗಿದೆ. ಟ್ಯಾಕ್ಸಿ ಹಾಗೂ ಆಟೋಗಳು ಸಹ ಸಂಚರಿಸುತ್ತಿಲ್ಲ. ಜನರು ಅನಗತ್ಯವಾಗಿ ಹೊರಗೆ ಬರದಂತೆ ಸೂಚನೆ ನೀಡಲಾಗಿದೆ. ಅನುಮತಿ ಪಡೆದಿರುವವರು ಆಸ್ಪತ್ರೆ ಸೇರಿದಂತೆ ಅಗತ್ಯವಿರುವ ಕೆಲಸಗಳಿಗೆ ಹೊರಬರಬಹುದು.
ಆದರೆ ಆಸ್ಪತ್ರೆಗಳಿಗೆ ಹೋಗಬೇಕಾದವರು ಪಾಸ್ಗಳನ್ನು ಪಡೆಯುವುದು ಅವಶ್ಯಕವಾಗಿದೆ. ಆದರೆ ಈ ಪಾಸ್ಗಳನ್ನು ಪಡೆಯಲು ಹಲವಾರು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದರಲ್ಲೂ ನೋಯ್ಡಾ-ದೆಹಲಿ ಗಡಿ ದಾಟಲು ಬೇಕಾಗಿರುವ ವಿಶೇಷ ಪಾಸ್ ಪಡೆಯಲು ನಾನಾ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ.
MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ
ಕರೋನಾ ವೈರಸ್ ಹರಡುವುದನ್ನು ತಡೆಯಲು ನೋಯ್ಡಾ-ದೆಹಲಿ ಗಡಿಯನ್ನು ಬಂದ್ ಮಾಡಲಾಗಿದೆ. ರೋಗಿಗಳ ದೂರಿನ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಗೌತಮ ಬುದ್ಧನಗರ ಜಿಲ್ಲಾಡಳಿತವು ವಿಶೇಷ ವ್ಯವಸ್ಥೆಯನ್ನು ಮಾಡಿದೆ.
ನಾನ್ ಎಮರ್ಜೆನ್ಸಿ ರೋಗಿಗಳಿಗೆ ನೋಯ್ಡಾದಿಂದ ದೆಹಲಿಗೆ ಪ್ರಯಾಣಿಸಲು ಉಚಿತ ಕ್ಯಾಬ್ ಸೇವೆಯನ್ನು ಒದಗಿಸಿದೆ. ಡಯಾಲಿಸಿಸ್ ಹಾಗೂ ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯಲು ದೆಹಲಿಗೆ ತಲುಪಬೇಕಾದವರಿಗೆ ಉಚಿತ ಕ್ಯಾಬ್ ಸೇವೆಯನ್ನು ನೀಡಲಿದೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಗೌತಮ ಬುದ್ಧ ನಗರ ಜಿಲ್ಲಾಡಳಿತವು ಉಬರ್ ಕಂಪನಿಯ ಜೊತೆಗೆ ಮೈತ್ರಿ ಮಾಡಿಕೊಂಡಿದೆ. ಈ ಸೇವೆ ನೀಡಲು ಸಹಾಯವಾಣಿ ಸಂಖ್ಯೆಯನ್ನು ಸಹ ನೀಡಲಾಗಿದೆ. ರೋಗಿಗಳು 18004192211 ನಂಬರ್ಗೆ ಕರೆ ಮಾಡುವ ಮೂಲಕ ಈ ವಿಶೇಷ ಸೇವೆಯನ್ನು ಪಡೆಯಬಹುದು. ಈ ಸೇವೆಯನ್ನು ಪಡೆಯಲು ಬಯಸುವವರಿಗೆ ಕೆಲವು ಸೂಚನೆಗಳನ್ನು ನೀಡಲಾಗಿದೆ.
ಗೌತಮ ಬುದ್ಧ ನಗರ ಜಿಲ್ಲೆಯ ಅಧಿಕಾರಿಗಳ ಪ್ರಕಾರ ಈ ಸೇವೆಯನ್ನು ಪಡೆಯಲು ಬಯಸುವವರು ಪ್ರಿಸ್ಕ್ರಿಪ್ಷನ್ ಹಾಗೂ ಚಿಕಿತ್ಸೆ ಪಡೆಯುತ್ತಿರುವ ದಾಖಲೆಗಳನ್ನು ಸಲ್ಲಿಸಬೇಕು. ಈ ಸೇವೆಯನ್ನು ಪಡೆಯುವ ಒಂದು ದಿನ ಮೊದಲು ಅರ್ಜಿ ಸಲ್ಲಿಸಬೇಕು.
MOSTREAD: ನಟ ವಿಕ್ರಮ್ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್
ಇದರಿಂದಾಗಿ ಅನಗತ್ಯ ಗೊಂದಲ ಹಾಗೂ ತೊಂದರೆಗಳು ಉಂಟಾಗುವುದು ತಪ್ಪುತ್ತದೆ. ಈ ಸೇವೆಯನ್ನು ನಾನ್ ಎಮರ್ಜೆನ್ಸಿ ರೋಗಿಗಳಿಗೆ ಮಾತ್ರ ನೀಡಲಾಗುತ್ತದೆ. ಎಮರ್ಜೆನ್ಸಿ ರೋಗಿಗಳು ಆಂಬ್ಯುಲೆನ್ಸ್ಗಳನ್ನು ಬಳಸಿಕೊಳ್ಳಬಹುದು. ಗೌತಮ ಬುದ್ಧ ನಗರ ಜಿಲ್ಲಾಡಳಿತದ ಈ ಕ್ರಮದಿಂದ ಹಲವು ರೋಗಿಗಳಿಗೆ ಪ್ರಯೋಜನವಾಗುವ ನಿರೀಕ್ಷೆಗಳಿವೆ.
ಗೌತಮ ಬುದ್ಧ ನಗರ ಜಿಲ್ಲಾ ಆಡಳಿತವು ನೋಯ್ಡಾ ಹಾಗೂ ದೆಹಲಿ ನಡುವೆ ಜನರ ಓಡಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಪತ್ರಕರ್ತರು, ವೈದ್ಯರು ಹಾಗೂ ಕೋವಿಡ್ -19ರ ಅಗತ್ಯ ಕಾರ್ಯಗಳಲ್ಲಿ ತೊಡಗಿರುವವರಿಗೆ ವಿನಾಯಿತಿ ನೀಡಲಾಗಿದೆ.
MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!
ಇದರ ಜೊತೆಗೆ ಸರಕು ಸಾಗಣೆಗೂ ವಿನಾಯಿತಿ ನೀಡಲಾಗಿದೆ. ಕರೋನಾ ವೈರಸ್ ಹರಡುವುದನ್ನು ತಡೆಯುವುದು ಇದರ ಹಿಂದಿರುವ ಉದ್ದೇಶವಾಗಿದೆ. ಅಂದ ಹಾಗೆ ದೆಹಲಿಯು ಹೆಚ್ಚಿನ ಸಂಖ್ಯೆಯಲ್ಲಿ ಕರೋನಾ ವೈರಸ್ ಸೋಂಕಿತರನ್ನು ಹೊಂದಿದೆ.
ಸೂಚನೆ: ಈ ಚಿತ್ರಗಳನ್ನು ರೆಫರೆನ್ಸ್ಗಾಗಿ ಬಳಸಲಾಗಿದೆ.