Just In
- 23 min ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 25 min ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
- 1 hr ago Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- 1 hr ago ಯುಎಸ್ಎ, ಕೆನಡಾಗೂ ಕಾಲಿಟ್ಟ ಭಾರತೀಯ ಬೈಕ್: ಮುಂದುವರೆದ ವಿಶ್ವಗುರು ಭಾರತದ ನಾಗಾಲೋಟ
Don't Miss!
- News DK Shivakumar: ಕಾಂಗ್ರೆಸ್ ಭವಿಷ್ಯದಲ್ಲಿ ನನ್ನನ್ನು ಸಿಎಂ ಮಾಡಲಿದೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Movies STD ಬೂತ್ನಲ್ಲಿ ಕೆಲಸ ಮಾಡುವಾಗ 500 ರೂ. ಸಂಬಳ; ಶೋ ಆರಂಭಿಸಿದ ಮೇಲೆ ಗಳಿಸಿದ್ದೆಷ್ಟು ಕೋಟಿ?
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಈತ ಪ್ರಯಾಣಿಸಿದ್ದು ಎಷ್ಟು ದೂರ ಗೊತ್ತಾ?
ಕರೋನಾ ವೈರಸ್ನಿಂದಾಗಿ ವಿಶ್ವದ ಎಲ್ಲಾ ದೇಶಗಳು ತತ್ತರಿಸಿವೆ. ಇದರಿಂದ ಭಾರತವೂ ಹೊರತಾಗಿಲ್ಲ. ಭಾರತದಲ್ಲಿ ಕರೋನಾ ವೈರಸ್ ಹೆಚ್ಚಿನ ಪ್ರಮಾಣದಲ್ಲಿ ಹರಡುವುದನ್ನು ತಡೆಗಟ್ಟಲು ಕೇಂದ್ರ ಸರ್ಕಾರವು ಏಪ್ರಿಲ್ 14ರವರೆಗೆ 21 ದಿನಗಳ ಲಾಕ್ ಡೌನ್ ಘೋಷಿಸಿದೆ.
ಲಾಕ್ ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಬಸ್, ರೈಲು, ಮೆಟ್ರೋ ರೈಲು ಹಾಗೂ ವಿಮಾನಗಳ ಸೇವೆಯನ್ನು ರದ್ದುಪಡಿಸಲಾಗಿದೆ. ಬಹುತೇಕ ರಾಜ್ಯಗಳು ತಮ್ಮ ಗಡಿಗಳನ್ನು ಮುಚ್ಚಿವೆ. ಜನ ಹೊರಗೆ ಬರದಂತೆ ಹಲವಾರು ನಿರ್ಬಂಧಗಳನ್ನು ವಿಧಿಸಲಾಗಿದೆ. ಈ ಕಾರಣದಿಂದಾಗಿ, ರಸ್ತೆಗಳು ಜನರಿಲ್ಲದೇ ಬಿಕೋ ಎನ್ನುತ್ತಿವೆ.
ಈ ಸನ್ನಿವೇಶದಲ್ಲಿ ವ್ಯಕ್ತಿಯೊಬ್ಬರು ಸುಮಾರು 2,300 ಕಿ.ಮೀ ಪ್ರಯಾಣಿಸಿದ್ದಾರೆ. ಈ ರೀತಿ ಪ್ರಯಾಣ ಬೆಳೆಸಲು ಅವರಿಗೆ ವಿಶೇಷ ಅನುಮತಿ ನೀಡಲಾಗಿದೆ. ಇದರ ಹಿಂದೆ ಬಲವಾದ ಕಾರಣವಿದೆ. ಅಂದ ಹಾಗೆ ಇಷ್ಟು ದೂರ ಪ್ರಯಾಣಿಸಿದ ವ್ಯಕ್ತಿಯ ಹೆಸರು ಅನಿಂದ್ಯಾ ರಾಯ್.
ಇವರು ಪಶ್ಚಿಮ ಬಂಗಾಳದವರಾಗಿದ್ದು, ಮಹಾರಾಷ್ಟ್ರದ ಮುಂಬೈನಲ್ಲಿ ನೆಲೆಸಿದ್ದಾರೆ. ಕರೋನಾ ವೈರಸ್ ಹರಡುವುದನ್ನು ತಡೆಯಲು ಜನರು ಹೊರಗೆ ಬರದಂತೆ ಸರ್ಕಾರವು ಸಾರ್ವಜನಿಕರಿಗೆ ಮನವಿ ಮಾಡಿದೆ. ಅನಿವಾರ್ಯತೆ ಇಲ್ಲದಿದ್ದರೆ ಮನೆಯಿಂದ ಹೊರಬಾರದಂತೆ ಹೇಳಲಾಗಿದೆ. ವಿನಾ ಕಾರಣ ಅಡ್ಡಾಡುವವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ.
ಬಹಳಷ್ಟು ಜನರು ಸರ್ಕಾರದ ಮನವಿಗೆ ಸ್ಪಂದಿಸಿ ಮನೆಯಲ್ಲಿಯೇ ಉಳಿದಿದ್ದಾರೆ. ಇದರಲ್ಲಿ ಅನಿಂದ್ಯಾ ರಾಯ್ ಕೂಡ ಸೇರಿದ್ದಾರೆ. ಅವರು ಎಲ್ಲಾ ನಿಯಮಗಳನ್ನು ಸರಿಯಾಗಿ ಪಾಲಿಸುತ್ತಿದ್ದಾರೆ. ಕಳೆದ ವಾರ ಅವರಿಗೆ ಅವರ ತಂದೆ ತೀರಿಕೊಂಡಿರುವ ಸುದ್ದಿ ಬಂದಿದೆ. ಈ ವಿಷಯವನ್ನು ಅವರಿಗೆ ಅವರ ತಾಯಿ ಸೆಲ್ ಫೋನ್ ಮೂಲಕ ತಿಳಿಸಿದ್ದಾರೆ.
ಅನಿಂದ್ಯಾ ರಾಯ್ ಅವರ ತಂದೆ ಪಶ್ಚಿಮ ಬಂಗಾಳದಲ್ಲಿ ವಾಸಿಸುತ್ತಿದ್ದರು. ಅವರು ಕಲ್ಕತ್ತಾ ಹೈಕೋರ್ಟ್ನಲ್ಲಿ ವಕೀಲರಾಗಿ ಕೆಲಸ ಮಾಡುತ್ತಿದ್ದರು. ಅವರು ಪಶ್ಚಿಮ ಬಂಗಾಳಕ್ಕೆ ಹೋಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದರು. ಲಾಕ್ ಡೌನ್ ಕಾರಣಕ್ಕೆ ವಿಮಾನ, ಬಸ್ ಹಾಗೂ ರೈಲು ಸೇವೆಗಳನ್ನು ರದ್ದುಪಡಿಸಲಾಗಿತ್ತು.
ತಮ್ಮ ಊರಿಗೆ ಹೋಗುವುದು ಹೇಗೆ ಎಂಬ ಗೊಂದಲಕ್ಕೊಳಗಾದ ಅವರಿಗೆ ಇಂಟರ್ ನೆಟ್ ನಲ್ಲಿ ಪರಿಹಾರ ಸಿಕ್ಕಿದೆ. ಮಹಾರಾಷ್ಟ್ರ ಸಾರಿಗೆ ಆಯುಕ್ತರು ಅನಿಂದ್ಯಾ ರಾಯ್ ರವರಿಗೆ ಪ್ರಯಾಣಿಸಲು ವಿಶೇಷ ಪಾಸ್ ನೀಡಿದ್ದಾರೆ. ತಂದೆಯ ಮರಣ ಪ್ರಮಾಣಪತ್ರ ಸೇರಿದಂತೆ ದಾಖಲೆಗಳ ಪ್ರತಿಯನ್ನು ಸಲ್ಲಿಸಿದ ನಂತರ ಅವರಿಗೆ ವಿಶೇಷ ಅನುಮತಿ ನೀಡಲಾಯಿತು.
MOST READ:ವಾಹನ ಸವಾರರ ಕಾಲಿಗೆ ಬೀಳುತ್ತೇನೆಂದ ಸಂಚಾರಿ ಪೊಲೀಸ್, ಕಾರಣವೇನು ಗೊತ್ತಾ?
ಸರ್ಕಾರಿ ಅಧಿಕಾರಿಗಳಿಂದ ವಿಶೇಷ ಅನುಮತಿ ಪಡೆದ ನಂತರ ಅನಿಂದ್ಯಾ ರಾಯ್ ಹಾಗೂ ಅವರ ಸ್ನೇಹಿತ ಪ್ರಯಾಣವನ್ನು ಆರಂಭಿಸಿದ್ದಾರೆ. ಅವರಿಬ್ಬರು ಕಳೆದ ಶುಕ್ರವಾರ ಚತ್ತೀಸ್ಗಢ ತಲುಪಿದ್ದಾರೆ. ಅವರನ್ನು ಆ ಗಡಿಯಲ್ಲಿ ತಡೆದು ನಿಲ್ಲಿಸಲಾಯಿತು. ಆಯುಕ್ತರು ನೀಡಿದ್ದ ವಿಶೇಷ ಪಾಸ್ ತೋರಿಸುವ ಮೂಲಕ ಘಟನೆಯನ್ನು ವಿವರಿಸಿದ್ದಾರೆ.
MOST READ: ವಾಹನ ಉತ್ಪಾದನೆ ಸ್ಥಗಿತದಿಂದಾಗಿ ಸಾವಿರಾರು ಕೋಟಿ ನಷ್ಟ
ನಂತರ ಅಲ್ಲಿದ್ದ ಅಧಿಕಾರಿಗಳು ಅವರಿಗೆ ಹಾದುಹೋಗಲು ಅವಕಾಶ ನೀಡಿದ್ದಾರೆ. ಪ್ರವಾಸದುದ್ದಕ್ಕೂ ಅವರು ಕಾರಿನೊಳಗೆ ಮಲಗಿದ್ದರು. ಲಾಕ್ ಡೌನ್ ಇದ್ದ ಕಾರಣ, ಎಲ್ಲಾ ಹೋಟೆಲ್ ಹಾಗೂ ರೆಸ್ಟೋರೆಂಟ್ಗಳನ್ನು ಮುಚ್ಚಲಾಗಿತ್ತು. ಪ್ರಯಾಣವನ್ನು ಆರಂಭಿಸಿದ ನಂತರ ಅವರು ಕಾರಿನಲ್ಲಿದ್ದ ಆಹಾರ ಹಾಗೂ ನೀರನ್ನು ಮಾತ್ರ ಬಳಸಿದ್ದಾರೆ.
MOST READ: ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್
ತಂದೆಯ ಸಾವಿನ ಸುದ್ದಿ ಕೇಳಿದ ನಂತರ ಅನಿಂದ್ಯಾರವರು ಪರಿಸ್ಥಿತಿಯನ್ನು ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಅಧಿಕಾರಿಗಳು ಅವರ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಅವರಿಗೆ ನೆರವಾಗಿದ್ದಾರೆ. ಅನಿಂದ್ಯಾರವರಿಗೆ ಹಲವಾರು ರಾಜ್ಯದ ಅಧಿಕಾರಿಗಳಿಂದ ನೆರವು ದೊರೆತಿರುವುದು ಗಮನಾರ್ಹ.
ಮೂಲ: ನ್ಯೂಸ್ 18