Just In
- 4 min ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 21 min ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 1 hr ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 1 hr ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- News 'ವಲಸೆ ಯಾಕ್ರಿ ನಿಮ್ಮೂರಲ್ಲೆ ಉದ್ಯೋಗ ಖಾತರಿ'- ನರೇಗಾ ಯೋಜನೆಯಡಿ ಲಕ್ಷಾಂತರ ನಿರುದ್ಯೋಗಿಗಳಿಗೆ ಉದ್ಯೋಗ
- Movies Shrirasthu Shubhamasthu:ದೀಪಿಕಾಗೆ ಉತ್ತರ ಕೊಡೋಕೆ ಆಗ್ತಿಲ್ಲ; ಇತ್ತ ಹೆಂಡತಿಗೆ ಸಮಾಧಾನ ಮಾಡೋಕೆ ಆಗ್ತಿಲ್ಲ!
- Sports ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಪಾಕ್ ತಂಡದ ಮಾಜಿ ನಾಯಕಿ
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ಡೌನ್ ಎಫೆಕ್ಟ್: ಸೈಕಲ್ನಲ್ಲೇ ಊರು ಸೇರುತ್ತಿರುವ ಕಾರ್ಮಿಕರು
ಕರೋನಾ ವೈರಸ್ ಇಡೀ ಜಗತ್ತನ್ನು ತತ್ತರಿಸುವಂತೆ ಮಾಡಿದೆ. ಕೋವಿಡ್ -19 ವೈರಸ್ ಹರಡುವುದನ್ನು ತಡೆಗಟ್ಟಲು ವಿಶ್ವದ ಹಲವು ದೇಶಗಳಲ್ಲಿ ಲಾಕ್ಡೌನ್ ಜಾರಿಗೊಳಿಸಲಾಗಿದೆ. ಇದರಿಂದಾಗಿ ವ್ಯಾಪಾರ ವಹಿವಾಟುಗಳು ಸ್ಥಗಿತಗೊಂಡಿವೆ.
ಭಾರತವೂ ಸಹ ಇದರಿಂದ ಹೊರತಾಗಿಲ್ಲ. ಭಾರತದಲ್ಲಿ ಮೊದಲು ಏಪ್ರಿಲ್ 14ರವರೆಗೆ ಲಾಕ್ಡೌನ್ ಜಾರಿಗೊಳಿಸಲಾಯಿತು. ಮಾರ್ಚ್ 23ರ ರಾತ್ರಿ ಲಾಕ್ಡೌನ್ ಜಾರಿಗೊಳಿಸುವ ಬಗ್ಗೆ ಘೋಷಣೆ ಮಾಡಲಾಯಿತು. ಈ ಲಾಕ್ಡೌನ್ ಮಾರ್ಚ್ 24ರಿಂದ ಜಾರಿಗೆ ಬಂದ ಕಾರಣ ಬೇರೆ ಊರುಗಳಲ್ಲಿದ್ದ ಜನರು ತಮ್ಮ ಊರಿಗೆ ಮರಳಲು ಆರಂಭಿಸಿದರು.
ಇನ್ನೂ ಕೆಲ ಜನರಿಗೆ ತಮ್ಮ ಊರುಗಳಿಗೆ ಮರಳಲು ಸಾಧ್ಯವಾಗಲಿಲ್ಲ. ಲಾಕ್ಡೌನ್ ಕಾರಣಕ್ಕೆ ಕೆಲವರು ತಮ್ಮ ಕೆಲಸಗಳನ್ನು ಕಳೆದುಕೊಂಡರು. ಯಾವುದೇ ಆಹಾರ ಸಿಗದ ಕಾರಣಕ್ಕೆ ತಮ್ಮ ಊರುಗಳಿಗೆ ಮರಳಲು ಆರಂಭಿಸಿದರು.
MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್
ಲಾಕ್ಡೌನ್ ಕಾರಣಕ್ಕೆ ಬಸ್ ಹಾಗೂ ರೈಲು ಸೇವೆಗಳನ್ನು ರದ್ದುಪಡಿಸಲಾಯಿತು. ಇದರಿಂದ ಕೆಲವರು ನಡೆದುಕೊಂಡೇ ಮನೆ ತಲುಪಿದರು. ನೂರಾರು ಕಿ.ಮೀ ದೂರ ನಡೆದು ಊರು ಸೇರಿದ ಘಟನೆಗಳು ವರದಿಯಾಗಿವೆ. ಕೆಲವರು ಸೈಕಲ್ ಮೂಲಕ ಸಾವಿರಾರು ಕಿ.ಮೀ ದೂರದಲ್ಲಿರುವ ಊರು ತಲುಪಿದ್ದಾರೆ.
ಒಡಿಶಾದ ಯುವಕನೊಬ್ಬ ಮುಂಬೈನಿಂದ 1,800 ಕಿ.ಮೀ ದೂರದಲ್ಲಿದ್ದ ತನ್ನ ಊರನ್ನು ಸೈಕಲ್ನಲ್ಲಿಯೇ ತಲುಪಿದ್ದ. ಸಾರಿಗೆ ಸೌಲಭ್ಯಗಳಲ್ಲಿದ ಕಾರಣಕ್ಕೆ ಕಾರ್ಮಿಕರು ಕಷ್ಟದಿಂದ ತಮ್ಮ ಊರು ತಲುಪುತ್ತಿದ್ದಾರೆ.
MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!
ಏಪ್ರಿಲ್ 14ರವರೆಗೆ ಜಾರಿಗೊಳಿಸಲಾಗಿದ್ದ ಲಾಕ್ಡೌನ್ ಅನ್ನು ಮೇ 3ರವರೆಗೆ ವಿಸ್ತರಿಸಲಾಗಿದೆ. ಇದರಿಂದ ಆತಂಕಕ್ಕೆ ಒಳಗಾಗಿರುವ ಕಾರ್ಮಿಕರು ತಮ್ಮ ಊರುಗಳಿಗೆ ವಾಪಸಾಗುತ್ತಿದ್ದಾರೆ. ಬಸ್ ಹಾಗೂ ರೈಲುಗಳಿಲ್ಲದ ಕಾರಣಕ್ಕೆ ಸೈಕಲ್ ಮೂಲಕವೇ ಊರುಗಳಿಗೆ ತೆರಳುತ್ತಿದ್ದಾರೆ.
ಮಹಾರಾಷ್ಟ್ರದಲ್ಲಿ ನೆಲೆಸಿರುವ ಮಧ್ಯಪ್ರದೇಶ ಮೂಲದ ಕಾರ್ಮಿಕರು ತಮ್ಮ ತವರು ರಾಜ್ಯಕ್ಕೆ ಸೈಕಲ್ ಮೂಲಕವೇ ಮರಳುತ್ತಿದ್ದಾರೆ. ಮಹಾರಾಷ್ಟ್ರದ ನಾಸಿಕ್ನಿಂದ ತಮ್ಮ ಪ್ರಯಾಣವನ್ನು ಆರಂಭಿಸಿರುವ ಕಾರ್ಮಿಕರು ಈ ಬಗ್ಗೆ ಮಾತನಾಡಿ, ಈ ಪ್ರಯಾಣ ಆರಂಭವಾಗಿ 5 ದಿನಗಳಾಗಿವೆ.
MOSTREAD: ನಟ ವಿಕ್ರಮ್ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್
ನಮ್ಮ ಊರನ್ನು ತಲುಪಲು ಸುಮಾರು 6 ದಿನಗಳು ಬೇಕಾಗುತ್ತವೆ. ಏಪ್ರಿಲ್ 14ರಂದು ಲಾಕ್ಡೌನ್ ಅಂತ್ಯವಾಗುತ್ತದೆ ಎಂದು ಭಾವಿಸಿದ್ದೇವು. ಮತ್ತೆ ವಿಸ್ತರಿಸಿರುವ ಕಾರಣಕ್ಕೆ ನಮ್ಮ ಊರಿಗೆ ವಾಪಸಾಗಲು ಯೋಜಿಸಿದೆವು. ಯಾವುದೇ ಸಾರಿಗೆ ಸೌಲಭ್ಯಗಳು ಲಭ್ಯವಿಲ್ಲದ ಕಾರಣಕ್ಕೆ ಸೈಕಲ್ನಲ್ಲಿಯೇ ಊರಿಗೆ ಹೋಗುತ್ತಿದ್ದೇವೆ ಎಂದು ಹೇಳಿದರು.
ಮಹಾರಾಷ್ಟ್ರದ ನಾಗ್ಪುರದಿಂದಲೂ ಕೆಲ ಕಾರ್ಮಿಕರು ಮಧ್ಯಪ್ರದೇಶಕ್ಕೆ ತೆರಳುತ್ತಿರುವ ಬಗ್ಗೆ ವರದಿಗಳಾಗಿವೆ. ಈ ಬಗ್ಗೆ ಮಾತನಾಡಿದ ಮಹಿಳೆಯೊಬ್ಬರು, ನಾನು, ನನ್ನ ಪತಿ ಹಾಗೂ ನಮ್ಮ ಒಂದು ವರ್ಷದ ಮಗು ಸೈಕಲ್ನಲ್ಲಿ ಊರಿಗೆ ವಾಪಸಾಗುತ್ತಿದ್ದೇವೆ. ಮಧ್ಯಪ್ರದೇಶದ ಸಿಯೋನಿ ನಮ್ಮ ಸ್ವಂತ ಊರು ಬಸ್ಗಳಿಲ್ಲದ ಕಾರಣಕ್ಕೆ ಸೈಕಲ್ನಲ್ಲಿ ವಾಪಸ್ ಆಗುತ್ತಿದ್ದೇವೆ ಎಂದು ಹೇಳಿದರು.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಕೋವಿಡ್ -19 ವೈರಸ್ನಿಂದಾಗಿ ಬಹುತೇಕ ಕಾರ್ಮಿಕರ ಬದುಕು ಅತಂತ್ರಕ್ಕೆ ಸಿಲುಕಿದೆ. ಕೇಂದ್ರ ಹಾಗೂ ಸಂಬಂಧಪಟ್ಟ ರಾಜ್ಯ ಸರ್ಕಾರಗಳು ನೆರವಿಗೆ ಧಾವಿಸಿ ಸಮಸ್ಯೆಯನ್ನು ಬಗೆಹರಿಸುತ್ತವೆ ಎಂಬ ನಿರೀಕ್ಷೆಯಲ್ಲಿದ್ದಾರೆ.