Just In
- 51 min ago Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- 13 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 16 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 16 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
Don't Miss!
- News Karnataka Weather: ಮೈಸೂರು, ಬಾಗಲಕೋಟೆ ಸೇರಿ ಎಂಟು ಜಿಲ್ಲೆಗಳಿಗೆ ತಂಪಿನ ಸುದ್ದಿ ಕೊಟ್ಟ ಹವಾಮಾನ ಇಲಾಖೆ
- Finance Zero Shadow Day: ಬೆಂಗಳೂರಿನಲ್ಲಿ ಇಂದು ಪ್ರಕೃತಿಯ ಅಚ್ಚರಿ
- Technology ಇಂದು ವಿವೋ T3x 5G ಸ್ಮಾರ್ಟ್ಫೋನ್ ಫಸ್ಟ್ ಸೇಲ್; ಬೆಲೆ 13,499ರೂ.!
- Lifestyle ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ಡೌನ್ ಸಂಕಷ್ಟ: ಊರು ತಲುಪಲು ಸೈಕಲ್ ಕದ್ದ ಕಾರ್ಮಿಕ, ಮುಂದೆ ಆಗಿದ್ದೇನು?
ಹಳ್ಳಿಗಳ ಜನರು ಉದ್ಯೋಗವನ್ನು ಅರಸಿ ಹಳ್ಳಿಗಳನ್ನು ತೊರೆದು ನಗರಗಳಲ್ಲಿ ವಾಸಿಸುವುದು ಸಹಜ. ಆದರೆ ಕರೋನಾ ವೈರಸ್ ಎಲ್ಲರ ಜೀವನವನ್ನು ತಲೆಕೆಳಗು ಮಾಡಿದೆ. ಕರೋನಾ ವೈರಸ್ ಎಲ್ಲರ ಜೀವನ, ಲೆಕ್ಕಾಚಾರಗಳನ್ನು ಬದಲಿಸಿ, ಹಲವು ಹೊಸ ಹೊಸ ಘಟನೆಗಳಿಗೆ ಸಾಕ್ಷಿಯಾಗುತ್ತಿದೆ.
ನಗರಗಳಿಗೆ ವಲಸೆ ಹೋಗಿದ್ದ ಲಕ್ಷಾಂತರ ಕಾರ್ಮಿಕರು ಈಗ ತಮ್ಮ ತಮ್ಮ ಊರುಗಳಿಗೆ ವಾಪಸ್ ಆಗುತ್ತಿದ್ದಾರೆ. ಕರೋನಾ ವೈರಸ್ ಹರಡದಂತೆ ತಡೆಯುವ ಉದ್ದೇಶದಿಂದ ಜಾರಿಗೊಳಿಸಲಾಗಿದ್ದ ಲಾಕ್ಡೌನ್ ಅನೇಕ ಕಾರ್ಮಿಕರ ಕೆಲಸವನ್ನು ಕಸಿದುಕೊಂಡಿದೆ. ಕರೋನಾ ವೈರಸ್ ಕಟ್ಟಡ ನಿರ್ಮಾಣ, ಕಾರ್ಖಾನೆ, ಹೋಟೆಲ್, ಬೇಕರಿ ಹಾಗೂ ಚಹಾ ಅಂಗಡಿಗಳ ಕಾರ್ಮಿಕರನ್ನು ನಿರುದ್ಯೋಗಿಗಳನ್ನಾಗಿ ಮಾಡಿದೆ.
ಇದರಿಂದಾಗಿ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ವಾಪಸ್ ಆಗಲು ಮುಂದಾದರು. ಆದರೆ ಲಾಕ್ಡೌನ್ ಕಾರಣದಿಂದಾಗಿ ಮಾರ್ಚ್ 24ರಿಂದ ಸಾರ್ವಜನಿಕ ಸಾರಿಗೆಗಳನ್ನು ರದ್ದುಪಡಿಸಲಾಗಿದೆ. ಸಾರ್ವಜನಿಕ ಸಾರಿಗೆ ವಾಹನಗಳಾದ ಬಸ್, ರೈಲು, ವಿಮಾನ, ಆಟೋ, ಟ್ಯಾಕ್ಸಿಗಳ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ
ಈ ಕಾರಣಕ್ಕೆ ಹಲವಾರು ಜನರು ತಮ್ಮ ಬಳಿಯಿರುವ ಸೈಕಲ್ಗಳಲ್ಲಿಯೇ ಸಾವಿರಾರು ಕಿಲೋಮೀಟರ್ ದೂರದಲ್ಲಿರುವ ಊರುಗಳನ್ನು ತಲುಪುತ್ತಿದ್ದಾರೆ. ಲಾಕ್ಡೌನ್ ಕಾರಣಕ್ಕೆ ಕಾರು ಹಾಗೂ ಬೈಕುಗಳಲ್ಲಿ ಪ್ರಯಾಣ ಮಾಡುವುದಕ್ಕೆ ವಿಶೇಷ ಅನುಮತಿ ಪಡೆಯಬೇಕಾಗುತ್ತದೆ.
ಇಲ್ಲದಿದ್ದರೆ, ಅಂತಹ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ. ಆದರೆ ಬಡ ಕಾರ್ಮಿಕರ ಬಳಿ ಕಾರ್ ಆಗಲಿ ಅಥವಾ ಬೈಕ್ ಆಗಲಿ ಇಲ್ಲದಿರುವುದರಿಂದ, ಅವರು ಸೈಕಲ್ ಮೂಲಕವೇ ಪ್ರಯಾಣಿಸುತ್ತಿದ್ದಾರೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಆದರೆ ಸ್ವಂತ ಸೈಕಲ್ ಸಹ ಹೊಂದಿರದ ಕೂಲಿ ಕಾರ್ಮಿಕನೊಬ್ಬ ತನ್ನ ಊರು ತಲುಪಲು ಬೇರೆಯವರ ಸೈಕಲ್ ಕದ್ದಿದ್ದಾನೆ. ರಾಜಸ್ಥಾನದ ಭರತ್ಪುರದಲ್ಲಿ ಕೂಲಿ ಕಾರ್ಮಿಕನಾಗಿರುವ ಮುಹಮ್ಮದ್ ಇಕ್ಬಾಲ್ ಎಂಬಾತನೇ ಸೈಕಲ್ ಕದ್ದವನು. ಆತನ ಹುಟ್ಟೂರು ಉತ್ತರ ಪ್ರದೇಶದ ಬರೇಲಿ.
ಲಾಕ್ಡೌನ್ ಕಾರಣದಿಂದಾಗಿ ಆತ ಭರತ್ಪುರದಲ್ಲಿ ಸಂಕಷ್ಟವನ್ನು ಎದುರಿಸಬೇಕಾಯಿತು. ಬರೇಲಿಗೆ ಹೋಗಲು ನಿರ್ಧರಿಸಿದ ಆತನ ಬಳಿ ಯಾವುದೇ ವಾಹನವಿರಲಿಲ್ಲ. ತನ್ನ ಮಗನೊಂದಿಗೆಬರೇಲಿಗೆ ಹೊರಟ, ಮೊಹಮ್ಮದ್ ಇಕ್ಬಾಲ್ ಭರತ್ಪುರದ ರಾರಾ ಗ್ರಾಮದ ಸಹಾಬ್ ಸಿಂಗ್ ಅವರ ಮನೆಯಲ್ಲಿ ನಿಲ್ಲಿಸಿದ್ದ ಸೈಕಲ್ ಅನ್ನು ಕದ್ದಿದ್ದಾನೆ.
MOSTREAD: ನಟ ವಿಕ್ರಮ್ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್
ಆತನ ಊರು ಭರತ್ಪುರದಿಂದ 250 ಕಿಲೋಮೀಟರ್ ದೂರದಲ್ಲಿದೆ. ಸೈಕಲ್ ಕದ್ದ ನಂತರ ಅಷ್ಟಕ್ಕೇ ಸುಮ್ಮನಾಗದ ಮೊಹಮ್ಮದ್ ಇಕ್ಬಾಲ್ ಕ್ಷಮಾಪಣಾ ಪತ್ರವೊಂದನ್ನು ಬರೆದು ಸೈಕಲ್ ಕದ್ದ ಜಾಗದಲ್ಲಿ ಇಟ್ಟಿದ್ದಾನೆ.
ಆ ಪತ್ರದಲ್ಲಿ, ನಾನೊಬ್ಬ ಸಾಮಾನ್ಯ ಕೂಲಿ ಕೆಲಸ ಮಾಡುವವನು. ನನ್ನ ಊರಿಗೆ ಹೋಗಲು ಬೇರೆ ದಾರಿ ಕಾಣದೇ ಅಸಹಾಯಕನಾಗಿ ನಿಮ್ಮ ಸೈಕಲ್ ಕದ್ದಿದ್ದೇನೆ. ನನ್ನ ಮಗನ ಜೊತೆಗೆ ಊರಿಗೆ ಹೋಗಬೇಕಾದ ಕಾರಣಕ್ಕೆ ಈ ಕೆಲಸಕ್ಕೆ ಇಳಿದೆ. ದಯವಿಟ್ಟು ನನ್ನನ್ನು ಕ್ಷಮಿಸಿ ಎಂದು ಹೇಳಿದ್ದಾನೆ.
MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!
ಕರೋನಾ ವೈರಸ್ ಹರಡದಂತೆ ಜಾರಿಗೊಳಿಸಲಾದ ಲಾಕ್ಡೌನ್ ಕಾರ್ಮಿಕರ ಜೀವನದ ಮೇಲೆ ಹೇಗೆ ಪರಿಣಾಮ ಬೀರಿದೆ ಎಂಬುದಕ್ಕೆ ಈ ಘಟನೆ ಒಂದು ಉದಾಹರಣೆಯಾಗಿದೆ. ಪ್ರತಿದಿನ ಇದೇ ರೀತಿಯ ಹಲವು ಘಟನೆಗಳು ನಡೆಯುತ್ತಿವೆ.
ಲಾಕ್ಡೌನ್ನಿಂದ ಹೆಚ್ಚು ತೊಂದರೆಗೆ ಒಳಗಾಗುತ್ತಿರುವವರಲ್ಲಿ ಹೊರ ರಾಜ್ಯದ ಕಾರ್ಮಿಕರು ಸೇರಿದ್ದಾರೆ. ಈಗ ಪರಿಸ್ಥಿತಿ ಬದಲಾಗಿದ್ದು, ಕೇಂದ್ರ ಸರ್ಕಾರ ಹಾಗೂ ಆಯಾ ರಾಜ್ಯ ಸರ್ಕಾರಗಳು ಹೊರ ರಾಜ್ಯಗಳ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸಲು ಕ್ರಮ ಕೈಗೊಳ್ಳುತ್ತಿವೆ.
ಸೂಚನೆ: ಈ ಚಿತ್ರಗಳನ್ನು ರೆಫರೆನ್ಸ್ಗಾಗಿ ಬಳಸಲಾಗಿದೆ.