Just In
- 12 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 12 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 13 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 14 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- News ಹಳೇ ಹುಲಿ ಪಿಸಿ ಮೋಹನ್ ಎದುರು ಮನ್ಸೂರ್ ಅಲಿ ಖಾನ್ ಕಣಕ್ಕೆ; ಮತ್ತೊಮ್ಮೆ ಇತಿಹಾಸ ಬರೆಯುತ್ತಾರಾ ಬಿಜೆಪಿ ಕಲಿ?
- Finance ಜಗತ್ತಿಗೆ ಭಾರತವೇ ಬಾಸ್, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದ್ದು ಏನು?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ಡೌನ್ ನಡುವೆಯೂ ಬುದ್ದಿ ಕಲಿಯದ ಜನ, ಅತಿ ವೇಗದಿಂದ ಹೆಚ್ಚಾದ ರಸ್ತೆ ಅಪಘಾತಗಳು..!
ರಸ್ತೆ ಅಪಘಾತಗಳಿಂದಾಗಿ ನಮ್ಮ ದೇಶದಲ್ಲಿ ವಿಶ್ವದಲ್ಲೇ ಅತಿ ಹೆಚ್ಚು ಸಾವು ನೋವುಗಳು ಸಂಭವಿಸುತ್ತವೆ. ಭಾರತದಲ್ಲಿ ಪ್ರತಿ ವರ್ಷ ರಸ್ತೆ ಅಪಘಾತಗಳಿಂದ 1.50 ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪುತ್ತಿದ್ದಾರೆ. ರಸ್ತೆ ಅಪಘಾತಗಳನ್ನು ಕಡಿಮೆಗೊಳಿಸಲು ಸರ್ಕಾರವು ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿದೆ.
ರಸ್ತೆ ಅಪಘಾತಗಳಿಗೆ ಸಂಚಾರ ನಿಯಮಗಳ ಉಲ್ಲಂಘನೆಯು ಪ್ರಮುಖ ಕಾರಣವಾಗಿದೆ. ಸಂಚಾರ ನಿಯಮಗಳ ಉಲ್ಲಂಘನೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರವು ದಂಡದ ಪ್ರಮಾಣವನ್ನು ಹೆಚ್ಚಿಸಿ ಹೊಸ ಮೋಟಾರು ವಾಹನ ಕಾಯ್ದೆಯನ್ನು 2019ರ ಸೆಪ್ಟೆಂಬರ್ 1ರಿಂದ ಜಾರಿಗೆ ತಂದಿದೆ. ತೀವ್ರ ವಿರೋಧದ ನಡುವೆಯೂ ದಂಡದ ಪ್ರಮಾಣವನ್ನು ಹಲವಾರು ಪಟ್ಟು ಹೆಚ್ಚಿಸಲಾಗಿದೆ.
ರಸ್ತೆ ಅಪಘಾತಗಳ ಸಂಖ್ಯೆಯನ್ನು ಕಡಿಮೆಗೊಳಿಸಲು ವಿವಿಧ ಕ್ರಮಗಳನ್ನು ಕೈಗೊಳ್ಳಲಾಗಿದೆ. ಲಾಕ್ಡೌನ್ ಅವಧಿಯಲ್ಲಿ ಸಂಭವಿಸಿದ ಅಪಘಾತಗಳ ಅಂಕಿಅಂಶಗಳನ್ನು ಈಗ ಬಿಡುಗಡೆಗೊಳಿಸಲಾಗಿದೆ. ಮಾರಣಾಂತಿಕ ಕರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಭಾರತದಲ್ಲಿ ಲಾಕ್ಡೌನ್ ಜಾರಿಗೊಳಿಸಲಾಗಿದೆ.
MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ
ಮೊದಲ ಹಂತದ ಲಾಕ್ಡೌನ್ ಅನ್ನು ಮಾರ್ಚ್ 24ರಿಂದ ಏಪ್ರಿಲ್ 14ರವರೆಗೆ ಜಾರಿಗೊಳಿಸಲಾಗಿತ್ತು. ಕೋವಿಡ್ -19 ವೈರಸ್ ಹರಡುವಿಕೆ ನಿಯಂತ್ರಣಕ್ಕೆ ಬಾರದ ಕಾರಣ ಮೇ 3ರವರೆಗೆ ವಿಸ್ತರಿಸಲಾಯಿತು. ಮೂರನೇ ಹಂತದ ಲಾಕ್ಡೌನ್ ಅನ್ನು ಮೇ 17ರವರೆಗೆ ವಿಸ್ತರಿಸಲಾಗಿದೆ.
ಸೇವ್ಲೈಫ್ ಫೌಂಡೇಶನ್ 2 ಹಂತದ ಲಾಕ್ಡೌನ್ ವೇಳೆಯಲ್ಲಿ ಸಂಭವಿಸಿದ ರಸ್ತೆ ಅಪಘಾತಗಳ ಅಂಕಿಅಂಶಗಳನ್ನು ಬಿಡುಗಡೆಗೊಳಿಸಿದೆ. ಈ ವರದಿಯ ಪ್ರಕಾರ, ಮಾರ್ಚ್ 24 ರಿಂದ ಮೇ 3ರವರೆಗೆ ಭಾರತದಲ್ಲಿ 600ಕ್ಕೂ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸಿವೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಲಾಕ್ಡೌನ್ನ ಮೊದಲ 40 ದಿನಗಳ ಅವಧಿಯಲ್ಲಿ ಭಾರತವು 600ಕ್ಕೂ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸಿವೆ. ಈ ಅಪಘಾತಗಳಲ್ಲಿ 30%ನಷ್ಟು ಜನರು ಮನೆಗೆ ಮರಳುತ್ತಿದ್ದವರು. ಲಾಕ್ಡೌನ್ ಸಮಯದಲ್ಲಿ ನಡೆದ ಈ ರಸ್ತೆ ಅಪಘಾತಗಳಲ್ಲಿ 57%ನಷ್ಟು ಜನರು ವೇಗವಾಗಿ ವಾಹನ ಚಾಲನೆ ಮಾಡಿ ಸಾವನ್ನಪ್ಪಿದ್ದಾರೆ.
ಭಾರತದಲ್ಲಿ ನಡೆಯುವ ರಸ್ತೆ ಅಪಘಾತಗಳಿಗೆ ಪ್ರಮುಖ ಕಾರಣ ವಾಹನ ಚಾಲಕರ ಹೆಚ್ಚಿನ ವೇಗ. ಲಾಕ್ಡೌನ್ ಅವಧಿಯಲ್ಲಿ ಬಸ್ಸು, ಆಟೋ, ಟ್ಯಾಕ್ಸಿ ಸೇರಿದಂತೆ ಎಲ್ಲಾ ರೀತಿಯ ಸಾರಿಗೆ ಸೇವೆಗಳನ್ನು ರದ್ದುಪಡಿಸಲಾಗಿತ್ತು. ಇದರ ಜೊತೆಗೆ ಖಾಸಗಿ ಕಾರು ಹಾಗೂ ದ್ವಿಚಕ್ರ ವಾಹನಗಳ ಸಂಚಾರವನ್ನು ಸಹ ನಿರ್ಬಂಧಿಸಲಾಗಿದೆ.
MOSTREAD: ನಟ ವಿಕ್ರಮ್ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್
ವಿನಾಕಾರಣ ಹೊರ ಬರುವ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತಿದೆ. ವಾಹನಗಳ ಸಂಚಾರವನ್ನು ನಿಷೇಧಿಸಿದ್ದ ಕಾರಣಕ್ಕೆ ವಾಹನ ಚಾಲಕರು ಅತಿ ವೇಗವಾಗಿ ವಾಹನ ಚಾಲನೆ ಮಾಡಿದ್ದಾರೆ. ಇದರಿಂದಾಗಿ ಸಾವುನೋವುಗಳ ಸಂಖ್ಯೆ ಹೆಚ್ಚಾಗಿದೆ.
ಭಾರತದಲ್ಲಿ ಕಳೆದ ಐದು ವಾರಗಳಲ್ಲಿ ನಡೆದ ರಸ್ತೆ ಅಪಘಾತಗಳಲ್ಲಿ 140 ಜನರು ಸಾವನ್ನಪ್ಪಿದ್ದಾರೆ. ದೆಹಲಿ, ಮಹಾರಾಷ್ಟ್ರ, ಗುಜರಾತ್, ಅಸ್ಸಾಂ, ಕೇರಳ, ಕರ್ನಾಟಕ, ರಾಜಸ್ಥಾನ, ಪಂಜಾಬ್ ಮತ್ತು ತಮಿಳುನಾಡಿನ ಒಂಬತ್ತು ರಾಜ್ಯಗಳಲ್ಲಿ ನಡೆದ ಅಪಘಾತಗಳಲ್ಲಿ 100 ಜನರು ಸಾವನ್ನಪ್ಪಿದ್ದಾರೆ.
MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!
ಈ ರಸ್ತೆ ಅಪಘಾತಗಳಿಂದಾಗಿ ವೈದ್ಯಕೀಯ ಸೇವೆಯಲ್ಲಿರುವವರ ಮೇಲೆ ಪರಿಣಾಮ ಉಂಟಾಗಿದೆ. ಕರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುವುದರ ಜೊತೆಗೆ ಗಾಯಾಳುಗಳಿಗೂ ಸಹ ಚಿಕಿತ್ಸೆ ನೀಡುವ ಹೊಣೆಗಾರಿಕೆ ಎದುರಾಗಿದೆ. ವಾಹನ ಚಾಲಕರು ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿದರೆ ಅಪಘಾತಗಳನ್ನು ತಪ್ಪಿಸಬಹುದು.
ದ್ವಿಚಕ್ರ ವಾಹನ ಚಾಲನೆ ಮಾಡುವಾಗ ಹೆಲ್ಮೆಟ್ ಧರಿಸಿವುದು, ಕಾರು ಚಾಲನೆ ಮಾಡುವಾಗ ಸೀಟ್ ಬೆಲ್ಟ್ ಧರಿಸುವುದನ್ನು ಪಾಲಿಸುವುದು ಒಳಿತು. ಜೊತೆಗೆ ಸಂಚಾರ ನಿಯಮಗಳನ್ನು ಪಾಲಿಸಿದರೆ ಅಪಘಾತಗಳ ಸಾಧ್ಯತೆಯನ್ನು ಕಡಿಮೆ ಮಾಡಬಹುದು.
ಸೂಚನೆ: ಈ ಚಿತ್ರಗಳನ್ನು ರೆಫರೆನ್ಸ್ಗಾಗಿ ಬಳಸಲಾಗಿದೆ.