ಲಾಕ್‌ಡೌನ್ ವಿನಾಯಿತಿ ಹಿನ್ನೆಲೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಚುರುಕು ಮುಟ್ಟಿಸಿದ ಕೇಂದ್ರ ಸರ್ಕಾರ

ಕರೋನಾ ವೈರಸ್ ಹರಡದಂತೆ ತಡೆಯುವ ಸಲುವಾಗಿ ವಿಶ್ವದಾದ್ಯಂತ ಅನೇಕ ದೇಶಗಳಲ್ಲಿ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಭಾರತದಲ್ಲಿ ಮೊದಲ ಹಂತದ ಲಾಕ್‌ಡೌನ್ ಅನ್ನು ಮಾರ್ಚ್ 24ರಿಂದ ಏಪ್ರಿಲ್ 14ರವರೆಗೆ ಜಾರಿಗೊಳಿಸಲಾಗಿತ್ತು.

ಲಾಕ್‌ಡೌನ್ ವಿನಾಯಿತಿ ಹಿನ್ನೆಲೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಚುರುಕು ಮುಟ್ಟಿಸಿದ ಕೇಂದ್ರ ಸರ್ಕಾರ

ಎರಡನೇ ಹಂತದ ಲಾಕ್‌‌ಡೌನ್ ಅನ್ನು ಮೇ 3ರವರೆಗೆ ವಿಸ್ತರಿಸಲಾಗಿದೆ. ಲಾಕ್‌ಡೌನ್ ವೇಳೆಯಲ್ಲಿ ಜನರ ಓಡಾಟದ ಮೇಲೆ ನಿರ್ಭಂಧ ವಿಧಿಸಲಾಗಿದೆ. ಈ ಕಾರಣದಿಂದಾಗಿ, ಅನೇಕ ಜನರಿಗೆ ಕೆಲಸವಿಲ್ಲದಂತಾಗಿದೆ. ಜೊತೆಗೆ ದೇಶದ ಆರ್ಥಿಕ ವ್ಯವಸ್ಥೆ ಕುಂಠಿತಗೊಂಡಿದೆ. ಈಗ ಲಾಕ್‌ಡೌನ್ ನಿಯಮಗಳಲ್ಲಿ ಕೊಂಚ ವಿನಾಯಿತಿ ನೀಡಲಾಗಿದೆ.

ಲಾಕ್‌ಡೌನ್ ವಿನಾಯಿತಿ ಹಿನ್ನೆಲೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಚುರುಕು ಮುಟ್ಟಿಸಿದ ಕೇಂದ್ರ ಸರ್ಕಾರ

ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಆರ್ಥಿಕತೆಯನ್ನು ಮರುಸ್ಥಾಪಿಸಲು ಮುಂದಾಗಿದೆ. ಕೆಲ ದಿನಗಳ ಹಿಂದಷ್ಟೇ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿರವರು ಪ್ರತಿದಿನ 60 ಕಿ.ಮೀನಷ್ಟು ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸುವ ಗುರಿಯನ್ನು ಹೊಂದಿರುವುದಾಗಿ ತಿಳಿಸಿದ್ದರು.

MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ

ಲಾಕ್‌ಡೌನ್ ವಿನಾಯಿತಿ ಹಿನ್ನೆಲೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಚುರುಕು ಮುಟ್ಟಿಸಿದ ಕೇಂದ್ರ ಸರ್ಕಾರ

ಕೋವಿಡ್ -19 ವೈರಸ್ ಹಾವಳಿಯ ನಂತರ ಆರ್ಥಿಕ ವ್ಯವಸ್ಥೆಯು ವೇಗವಾಗಿ ಚೇತರಿಸಿಕೊಳ್ಳಲಿದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರವು ಹೆದ್ದಾರಿ ಕಾಮಗಾರಿಗಳನ್ನು ವೇಗಗೊಳಿಸಲು ಮುಂದಾಗಿದೆ. ಯಾವುದೇ ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಪ್ರಮುಖ ಪಾತ್ರವಹಿಸುತ್ತವೆ ಎಂಬುದನ್ನು ಗಮನಿಸಬೇಕು.

ಲಾಕ್‌ಡೌನ್ ವಿನಾಯಿತಿ ಹಿನ್ನೆಲೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಚುರುಕು ಮುಟ್ಟಿಸಿದ ಕೇಂದ್ರ ಸರ್ಕಾರ

ಲಾಕ್‌‌ಡೌನ್‌ನಿಂದಾಗಿ ಸ್ಥಗಿತಗೊಂಡಿದ್ದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಈಗ ವೇಗ ನೀಡಲಾಗಿದೆ. ಭಾರತದಲ್ಲಿರುವ 75%ನಷ್ಟು ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಪುನರಾರಂಭಿಸಲಾಗಿದೆ.

MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್

ಲಾಕ್‌ಡೌನ್ ವಿನಾಯಿತಿ ಹಿನ್ನೆಲೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಚುರುಕು ಮುಟ್ಟಿಸಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರವು ಏಪ್ರಿಲ್ 20ರಿಂದ, ಜಾರಿಗೆ ಬರುವಂತೆ ಕೆಲವು ಷರತ್ತುಗಳೊಂದಿಗೆ ಲಾಕ್‌ಡೌನ್‌ಗೆ ಹಲವು ವಿನಾಯಿತಿಗಳನ್ನು ನೀಡಿದೆ. ಕೋವಿಡ್ -19 ವೈರಸ್ ಸೋಂಕು ಕಡಿಮೆಯಿರುವ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸಲು ಕೆಲವು ಇಲಾಖೆಗಳಿಗೆ ಅವಕಾಶ ನೀಡಲಾಗಿದೆ.

ಲಾಕ್‌ಡೌನ್ ವಿನಾಯಿತಿ ಹಿನ್ನೆಲೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಚುರುಕು ಮುಟ್ಟಿಸಿದ ಕೇಂದ್ರ ಸರ್ಕಾರ

ಲಾಕ್‌‌ಡೌನ್‌ ನಿಯಮಗಳಲ್ಲಿನ ಸಡಿಲತೆಯಿಂದಾಗಿ 70%ನಷ್ಟು ಹೆದ್ದಾರಿ ಕಾಮಗಾರಿಗಳನ್ನು ಏಪ್ರಿಲ್ 20ರಿಂದ ಪುನರಾರಂಭಿಸಲಾಗಿದೆ. ಒಟ್ಟು 375 ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, 260 ಯೋಜನೆಗಳನ್ನು ಪುನರಾರಂಭಿಸಲು ಅನುಮತಿ ನೀಡಲಾಗಿದೆ.

MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ

ಲಾಕ್‌ಡೌನ್ ವಿನಾಯಿತಿ ಹಿನ್ನೆಲೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಚುರುಕು ಮುಟ್ಟಿಸಿದ ಕೇಂದ್ರ ಸರ್ಕಾರ

ರಾಷ್ಟ ರಾಜಧಾನಿ ದೆಹಲಿ ಪ್ರದೇಶದಲ್ಲಿ ಯಾವುದೇ ಕಾಮಗಾರಿಯನ್ನು ಪುನರಾರಂಭಿಸಲು ಅನುಮತಿ ನೀಡಿಲ್ಲ. ಈ ಭಾಗದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿರುವ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ.

ಲಾಕ್‌ಡೌನ್ ವಿನಾಯಿತಿ ಹಿನ್ನೆಲೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಚುರುಕು ಮುಟ್ಟಿಸಿದ ಕೇಂದ್ರ ಸರ್ಕಾರ

ಈ ಬಗ್ಗೆ ಮಾತಾಣದಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕೆಲವು ಸ್ಥಳಗಳಲ್ಲಿ ಯೋಜನಾ ಕಾರ್ಯಗಳು ನಡೆಯುತ್ತಿವೆ. ಕೆಲವು ಸ್ಥಳಗಳಲ್ಲಿ ಕಾರ್ಮಿಕರಿಗೆ ಹೆಚ್ಚಿನ ಬೇಡಿಕೆಯಿದೆ. ಇದೇ ವೇಳೆ ಕೆಲವು ಭಾಗಗಳಲ್ಲಿ ದಾಸ್ತಾನು ಹಾಗೂ ಕಚ್ಚಾ ವಸ್ತುಗಳಿಗೆ ಕೊರತೆಯುಂಟಾಗುವ ನಿರೀಕ್ಷೆಗಳಿವೆ ಎಂದು ಹೇಳಿದಾರೆ.

MOSTREAD: ನಟ ವಿಕ್ರಮ್‌ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್

ಲಾಕ್‌ಡೌನ್ ವಿನಾಯಿತಿ ಹಿನ್ನೆಲೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಚುರುಕು ಮುಟ್ಟಿಸಿದ ಕೇಂದ್ರ ಸರ್ಕಾರ

ಕೋವಿಡ್ -19 ವೈರಸ್‌ನಿಂದ ಉಂಟಾಗಿರುವ ಆರ್ಥಿಕ ವ್ಯವಸ್ಥೆಯ ಕುಸಿತವನ್ನು ಸರಿಪಡಿಸಲು ಕೇಂದ್ರ ಸರ್ಕಾರವು ಹಲವು ಸವಾಲುಗಳನ್ನು ಎದುರಿಸುತ್ತಿದೆ. ಮೂಲಸೌಕರ್ಯಗಳ ಪ್ರಮುಖ ಭಾಗವಾಗಿರುವ ಕಾರಣಕ್ಕೆ ಹೆದ್ದಾರಿ ಕಾಮಗಾರಿಗಳನ್ನು ಪುನರ್ ಆರಂಭಿಸಲಾಗಿದೆ.

ಸೂಚನೆ: ಈ ಚಿತ್ರಗಳನ್ನು ರೆಫರೆನ್ಸ್‌ಗಾಗಿ ಬಳಸಲಾಗಿದೆ.

Most Read Articles

Kannada
English summary
National Highway projects resume after partial lifting of Lockdown. Read in Kannada.
Story first published: Friday, April 24, 2020, 11:22 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X