Just In
- 6 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 8 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 9 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 10 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರೋನಾ ವೈರಸ್ ಎಫೆಕ್ಟ್: ಸಂಚಾರ ಸ್ಥಗಿತಗೊಳಿಸಲು ಖಾಸಗಿ ಬಸ್ ಮಾಲೀಕರ ನಿರ್ಧಾರ
ಕರೋನಾ ವೈರಸ್ ಹರಡದಂತೆ ತಡೆಯುವ ಕಾರಣಕ್ಕೆ ದೇಶಾದ್ಯಂತ ಮೇ 3ರವರೆಗೆ 2ನೇ ಹಂತದ ಲಾಕ್ಡೌನ್ ಜಾರಿಗೊಳಿಸಲಾಗಿದೆ. ಈ ಕಾರಣಕ್ಕೆ ದೇಶಾದ್ಯಂತ ಎಲ್ಲಾ ರೀತಿಯ ಸಾರಿಗೆ ಸೇವೆಗಳನ್ನು ರದ್ದುಪಡಿಸಲಾಗಿದೆ.
ಈ ಕರೋನಾ ವೈರಸ್ಗೆ ಯಾವುದೇ ಮದ್ದಿಲ್ಲ. ಮುನ್ನೆಚ್ಚರಿಕೆಯೊಂದೇ ಮದ್ದು. ಸಾಮಾಜಿಕ ಅಂತರ ಸೇರಿದಂತೆ ವಿವಿಧ ಕ್ರಮಗಳನ್ನು ಪಾಲಿಸಬೇಕಾದ ಅಗತ್ಯವಿದೆ. ಸಾಮಾಜಿಕ ಅಂತರ ಅನುಸರಿಸದವರಿಗೆ ಕರೋನಾ ವೈರಸ್ ಸೋಂಕು ಹರಡುವ ಸಾಧ್ಯತೆಗಳಿವೆ.
ಸಾಮಾಜಿಕ ಅಂತರವನ್ನು ಕಾಪಾಡುವ ಉದ್ದೇಶದಿಂದ ಲಾಕ್ಡೌನ್ ನಂತರ ಜನರು ಸಾರ್ವಜನಿಕ ಸಾರಿಗೆಗೆ ಬದಲು ಸ್ವಂತ ವಾಹನಗಳಲ್ಲಿ ಪ್ರಯಾಣಿಸುವ ಸಾಧ್ಯತೆಗಳು ದಟ್ಟವಾಗಿವೆ. ಜನರು ಬಸ್, ಟ್ಯಾಕ್ಸಿಗಳಲ್ಲಿ ಪ್ರಯಾಣಿಸಲು ಹಿಂಜರಿದು ತಮ್ಮ ಸ್ವಂತ ವಾಹನಗಳಲ್ಲಿ ಪ್ರಯಾಣಿಸಲು ನಿರ್ಧರಿಸಬಹುದು.
MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್
ಇದರಿಂದಾಗಿ ಲಾಕ್ಡೌನ್ ನಂತರ, ಕಾರು ಸೇರಿದಂತೆ ಇತರ ವಾಹನಗಳ ಮಾರಾಟವು ಹೆಚ್ಚಾಗುವ ಸಾಧ್ಯತೆಗಳಿವೆ. ಸದ್ಯಕ್ಕೆ ಲಾಕ್ಡೌನ್ನಿಂದಾಗಿ ವಾಹನಗಳ ಮಾರಾಟವು ತೀವ್ರವಾಗಿ ಕುಸಿದಿದೆ. ಆದರೆ ಮುಂಬರುವ ದಿನಗಳಲ್ಲಿ, ಕರೋನಾ ವೈರಸ್ ಕಾರಣದಿಂದಾಗಿಯೇ ವಾಹನಗಳ ಮಾರಾಟದಲ್ಲಿ ಹೆಚ್ಚಳ ಕಂಡುಬರಲಿದೆ.
ಬಸ್ಸು, ಟ್ಯಾಕ್ಸಿಗಳಲ್ಲಿ ಪ್ರಯಾಣಿಸಿದರೆ ಕರೋನಾ ಹರಡಬಹುದೆಂಬ ಭಯವು ಜನರಿಗೆ ವಾಹನಗಳನ್ನು ಖರೀದಿಸಲು ಪ್ರೇರಣೆ ನೀಡಲಿದೆ. ಇದು ವಾಹನ ತಯಾರಕ ಕಂಪನಿಗಳಿಗೆ ಸಂತಸವನ್ನುಂಟು ಮಾಡಿದರೂ, ಖಾಸಗಿ ಬಸ್ ಮಾಲೀಕರನ್ನು ಆತಂಕಕ್ಕೆ ದೂಡಿದೆ.
MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!
ಕರೋನಾ ವೈರಸ್ ಹರಡುವುದನ್ನು ತಡೆಗಟ್ಟಲು ಏಪ್ರಿಲ್ 14ರವರೆಗೆ ಜಾರಿಗೊಳಿಸಲಾಗಿದ್ದ ಲಾಕ್ಡೌನ್ ಅನ್ನು ಮೇ 3ರವರೆಗೆ ವಿಸ್ತರಿಸಲಾಗಿದೆ. ಲಾಕ್ಡೌನ್ ಸಡಿಲಗೊಳಿಸಿದ ನಂತರ ಬಸ್ಸುಗಳು ಸಂಚಾರ ಆರಂಭಿಸಿದರೂ ಅವು ಲಾಭ ಕಾಣಬಹುದೇ ಎಂಬ ಪ್ರಶ್ನೆ ಎದುರಾಗಿದೆ.
ಕರೋನಾ ಭಯದಿಂದ ಜನ ತಮ್ಮ ವಾಹನಗಳಲ್ಲಿ ಪ್ರಯಾಣಿಸಬಹುದೆಂಬ ಭಯ ಖಾಸಗಿ ಬಸ್ ಮಾಲೀಕರನ್ನು ಕಾಡುತ್ತಿದೆ. ಈ ಕಾರಣಕ್ಕೆ ಕೇರಳದ ಖಾಸಗಿ ಬಸ್ ಮಾಲೀಕರು ಕೆಲವು ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ.
MOSTREAD: ನಟ ವಿಕ್ರಮ್ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್
ಲಾಕ್ಡೌನ್ ಅಂತ್ಯಗೊಂಡರೂ ಬಸ್ಸುಗಳನ್ನು ಓಡಿಸದಿರುವ ತಮ್ಮ ತೀರ್ಮಾನವನ್ನು ಕೇರಳ ಸರ್ಕಾರಕ್ಕೆ ತಿಳಿಸಲು ಮುಂದಾಗಿದ್ದಾರೆ. ಕೇರಳದ 10 ಸಾವಿರಕ್ಕೂ ಹೆಚ್ಚು ಖಾಸಗಿ ಬಸ್ ಮಾಲೀಕರು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.
ಜನರು ಬಸ್ಗಳಲ್ಲಿ ಸಾಮಾಜಿಕ ಅಂತರ ಕಾಪಾಡಲು ಮುಂದಾದರೆ ಅದರಿಂದಲೂ ನಷ್ಟ ಉಂಟಾಗುತ್ತದೆ ಎಂಬುದು ಸಹ ಅವರ ಆತಂಕಕ್ಕೆ ಕಾರಣವಾಗಿದೆ. ಈ ಕಾರಣಕ್ಕೆ ಬಸ್ಸುಗಳನ್ನು ಓಡಿಸದಿರಲು ನಿರ್ಧರಿಸಿದ್ದಾರೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಕರೋನಾ ವೈರಸ್ನಿಂದಾಗಿ ಈಗಾಗಲೇ ಭಾರೀ ಪ್ರಮಾಣದ ನಷ್ಟವನ್ನು ಅನುಭವಿಸುತ್ತಿರುವುದಾಗಿ ಅಲ್ಲಿನ ಖಾಸಗಿ ಬಸ್ ಮಾಲೀಕರು ಹೇಳಿದ್ದಾರೆ. ಕೇರಳ ರಾಜ್ಯವು ಈ ಸಮಸ್ಯೆಯನ್ನು ಹೇಗೆ ಪರಿಹರಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಕೋವಿಡ್ -19 ವೈರಸ್ ಹರಡುವುದನ್ನು ತಡೆಯುತ್ತಿರುವುದರಲ್ಲಿ ಹಾಗೂ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವುದರಲ್ಲಿ ಕೇರಳ ಸರ್ಕಾರವು ಕೈಗೊಂಡಿರುವ ಕ್ರಮಗಳು ದೇಶದ ಗಮನ ಸೆಳೆದಿವೆ. ಕೇರಳವು ಕರೋನಾದಿಂದ ಚೇತರಿಸಿಕೊಳ್ಳುತ್ತಿರುವ ವೇಳೆಯಲ್ಲಿಯೇ ಖಾಸಗಿ ಬಸ್ ಮಾಲೀಕರು ಈ ನಿರ್ಧಾರವನ್ನು ಕೈಗೊಂಡಿದ್ದಾರೆ.
ಕೇರಳ ಮಾತ್ರವಲ್ಲದೇ ಬೇರೆ ರಾಜ್ಯಗಳಲ್ಲಿಯೂ ಸಹ ಖಾಸಗಿ ಬಸ್ ಮಾಲೀಕರು ಇಂತಹ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಗಳಿವೆ. ಇದು ಖಾಸಗಿ ಬಸ್ಗಳಿಗೆ ಮಾತ್ರವಲ್ಲದೇ ಸರ್ಕಾರಿ ಬಸ್ಸುಗಳಿಗೆ ಸಹ ಅನ್ವಯಿಸುವ ಸಾಧ್ಯತೆಗಳಿವೆ.
ಸರ್ಕಾರಿ ಸ್ವಾಮ್ಯದ ಬಸ್ಸುಗಳು ಸಹ ನಷ್ಟಕ್ಕೆ ಗುರಿಯಾಗುವ ಸಾಧ್ಯತೆಗಳಿವೆ. ಕರೋನಾ ಸಮಸ್ಯೆ ಬಗೆಹರಿದ ನಂತರ ಜನರು ಕಾರು ಹಾಗೂ ದ್ವಿಚಕ್ರ ವಾಹನಗಳಲ್ಲಿ ಹೆಚ್ಚು ಸಂಚರಿಸುವುದರಿಂದ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆಗಳಿವೆ.
ಸೂಚನೆ: ಈ ಚಿತ್ರಗಳನ್ನು ರೆಫರೆನ್ಸ್ಗಾಗಿ ಬಳಸಲಾಗಿದೆ.