Just In
- 43 min ago ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- 1 hr ago ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- 1 hr ago 'ಬಾಹುಬಲಿ' ಎಸ್ಯುವಿ ಪರಾಕ್ರಮ: ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ವಿಶೇಷತೆಗಳೇನು?
- 1 hr ago Honda: ಭಾರತ ನಿರ್ಮಿಸಿದ ಹೋಂಡಾ ಕಾರಿಗೆ ಮುಗಿಬಿದ್ದ ಜಪಾನ್ ಜನ!
Don't Miss!
- News ಮತದಾನಕ್ಕೆ ಕೌಂಟ್ಡೌನ್: ಚಾಮರಾಜನಗರ ಲೋಕಸಭಾ ಕ್ಷೇತ್ರದ ಮತಗಟ್ಟೆಗಳಲ್ಲಿ ಸಿದ್ಧತೆ ಹೇಗಿದೆ?-ಮಾಹಿತಿ
- Movies ತಮನ್ನಾ ಪಾಲಿಗೆ 'ದುಬಾರಿ' ಆಯಿತು 'ಪ್ರಚಾರ' ; ಮಿಲ್ಕಿ ಬ್ಯೂಟಿಯನ್ನ ವಿಚಾರಣೆಗೆ ಕರೆದ ಸೈಬರ್ ಇಲಾಖೆ..!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Lifestyle ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೇಂಜ್ ರೋವರ್ ಟಯರ್ ಸ್ಪೋಟ- ಅಪಾಯದಿಂದ ಪಾರಾದ ಸುರೇಶ್ ರೈನಾ..!!
ಕ್ರಿಕೆಟಿಗ ಸುರೇಶ್ ರೈನಾ ಚಾಲನೆ ಮಾಡುತ್ತಿದ್ದ ರೇಂಜ್ ರೋವರ್ ಎಸ್ಯುವಿ ಕಾರಿನ ಟಯರ್ ಸ್ಫೋಟಗೊಂಡ ಪರಿಣಾಮ ಸಣ್ಣ ಪ್ರಮಾಣದ ಅಪಘಾತ ಸಂಭವಿಸಿರುವ ಘಟನೆಯಲ್ಲಿ ಉತ್ತರಪ್ರದೇಶದ ಇಟಾವಾದಲ್ಲಿ ನಡೆದಿದೆ.
ಕ್ರಿಕೆಟಿಗ ಸುರೇಶ್ ರೈನಾ ಚಾಲನೆ ಮಾಡುತ್ತಿದ್ದ ರೇಂಜ್ ರೋವರ್ ಎಸ್ಯುವಿ ಕಾರಿನ ಟಯರ್ ಸ್ಫೋಟಗೊಂಡ ಪರಿಣಾಮ ಸಣ್ಣ ಪ್ರಮಾಣದ ಅಪಘಾತ ಸಂಭವಿಸಿರುವ ಘಟನೆಯಲ್ಲಿ ಉತ್ತರಪ್ರದೇಶದ ಇಟಾವಾದಲ್ಲಿ ನಡೆದಿದೆ.
ದುಲೀಪ್ ಟ್ರೋಫಿ ಪಂದ್ಯಾವಳಿಯಲ್ಲಿ ಭಾಗವಹಿಸಲು ದೆಹಲಿಯಿಂದ ಕಾನ್ಪುರಕ್ಕೆ ತಮ್ಮ ರೇಂಜ್ ರೋವರ್ ಕಾರ್ ನಲ್ಲಿ ಪ್ರಯಾಣ ಮಾಡುತ್ತಿದ್ದಾಗಲೇ ಈ ಘಟನೆ ನಡೆದಿದ್ದು, ಸುರೇಶ್ ರೈನಾ ಅವರೇ ಕಾರು ಚಾಲನೆ ಮಾಡುತ್ತಿದ್ದರು.
ಕಾರು ನಿಧಾನಗತಿಯಲ್ಲಿದ್ದ ಪರಿಣಾಮ ಯಾವುದೇ ಪ್ರಾಣಾಪಾಯವಿಲ್ಲದೆ ಸುರೇಶ್ ರೈನಾ ಪಾರಾಗಿದ್ದು, ಆಕಸ್ಮಿಕವಾಗಿ ಕಾರಿನ ಟಯರ್ ಸ್ಪೋಟಗೊಂಡ ಹಿನ್ನೆಲೆ ಸುರೇಶ್ ರೈನಾ ಕೆಲಕಾಲ ಆತಂಕಕ್ಕೆ ಒಳಗಾಗಿದ್ದರು.
Recommended Video
ನಿನ್ನೆ ತಡರಾತ್ರಿ 2 ಗಂಟೆಗೆ ಈ ಘಟನೆ ನಡೆದಿದ್ದು, ಅಪಘಾತದ ಬಳಿಕ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಪೊಲೀಸರು ಸುರೇಶ್ ರೈನಾ ಅವರನ್ನು ಬೇರೊಂದು ಕಾರಿನಲ್ಲಿ ಕಾನ್ಪುರಕ್ಕೆ ತೆರಳಲು ವ್ಯವಸ್ಥೆ ಮಾಡಿದ್ದಾರೆ.
ಅದೃಷ್ಛವಶಾತ್ ಕಾರಿನ ಟಯರ್ ಸ್ಪೋಟದ ವೇಳೆ ರೈನಾ ನಿಧಾನ ಗತಿಯಲ್ಲಿ ಕಾರು ಚಲಾಯಿಸುತ್ತಿದ್ದುದರಿಂದ ಯಾವುದೇ ಅನಾಹುತ ಸಂಭವಿಸಲಿಲ್ಲ. ಇಲ್ಲದಿದ್ದರೇ ಗಂಭೀರ ಪ್ರಮಾಣದ ಹಾನಿಯನ್ನು ಎದುರಿಸಬೇಕಿತ್ತು.
ಸದ್ಯ ದುಲೀಪ್ ಟ್ರೋಫಿ ಪಂದ್ಯದಲ್ಲಿ ಪಾಲ್ಗೊಳ್ಳಲು ಕಾನ್ಪುರಕ್ಕೆ ಸುರೇಶ್ ರೈನ್ ಆಗಮಿಸಿದ್ದು, ಘಟನೆ ಹಿನ್ನೆಲೆ ಟೀಂ ಇಂಡಿಯಾ ಸದಸ್ಯರು ರೈನಾ ಭೇಟಿಯಾಗಿ ಘಟನೆಯ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಡ್ರೈವ್ ಸ್ಪಾರ್ಕ್ ಅಭಿಪ್ರಾಯ
ಕೆಲವು ಬಾರಿ ಟಯರ್ ಸ್ಪೋಟಗಳು ದೊಡ್ಡ ಅನಾಹುತಗಳಿಗೆ ಎಡೆಮಾಡಿಕೊಡುವುದರಲ್ಲಿ ಯಾವುದೇ ಅನುಮಾನವಿಲ್ಲ. ಹೀಗಾಗಿ ವಾಹನ ಮಾಲೀಕರು ಆಗಾಗ ತಾಂತ್ರಿಕ ದೋಷಗಳ ಬಗ್ಗೆ ಗಮನಹರಿಸಬೇಕಲ್ಲದೇ ಉತ್ತಮ ಕಾರ್ಯಕ್ಷಮತೆಯ ಟಯರ್ ಬಳಕೆ ಮಾಡುವುದು ಒಳಿತು.