Just In
- 2 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 3 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 4 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 4 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Movies ಮಾನ್ವಿತಾ ಮದುವೆಯಾಗ್ತಿರೋ ಆ ಅದೃಷ್ಟವಂತ ಇವ್ರೇ; ಟಗರು ಪುಟ್ಟಿ ಲೈಫ್ ಪಾರ್ಟನರ್ ಫುಲ್ ಡೀಟೆಲ್ಸ್
- News ಆಕ್ಸಿಸ್ ಬ್ಯಾಂಕ್ಗೆ ಬರೋಬ್ಬರಿ 7,129 ಕೋಟಿ ರೂಪಾಯಿ ಲಾಭ!
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪೊಲೀಸರ ಮೇಲೆ ಹಲ್ಲೆ ನಡೆಸಿ ವಾಹನ ಜಖಂಗೊಳಿಸಿದ ಕೊಲೆ ಆರೋಪಿ ಸಂಬಂಧಿಕರು
ಪೊಲೀಸರ ಜೀವನವು ಅಪಾಯಗಳಿಂದ ಕೂಡಿರುತ್ತದೆ. ಕೆಲವೊಮ್ಮೆ ಪೊಲೀಸರು ಕರ್ತವ್ಯದ ವೇಳೆ ಅಪಾಯಕಾರಿ ಸಂದರ್ಭಗಳನ್ನು ಎದುರಿಸ ಬೇಕಾಗುತ್ತದೆ. ಈ ರೀತಿಯ ಸಂದರ್ಭಗಳನ್ನು ಎದುರಿಸಲು ಪೊಲೀಸರು ತರಬೇತಿ ಪಡೆದಿರುತ್ತಾರೆ.
ಇತ್ತೀಚಿಗೆ ಪುಣೆ ಪೊಲೀಸ್ ಅಧಿಕಾರಿಗಳ ತಂಡವು ಸಂಕಷ್ಟಕ್ಕೆ ಸಿಲುಕಿತ್ತು. ಕೊಲೆ ಆರೋಪಿಯನ್ನು ಹುಡುಕಿಕೊಂಡು ಪುಣೆ ಪೊಲೀಸರು ಉತ್ತರ ಪ್ರದೇಶಕ್ಕೆ ತೆರಳಿದ್ದಾಗ ಈ ಘಟನೆ ಸಂಭವಿಸಿದೆ. ಪುಣೆ ನಗರದ ಫರ್ಸಖಾನಾ ಪೊಲೀಸ್ ಠಾಣೆಯ ಐವರು ಪೊಲೀಸರು ಉತ್ತರ ಪ್ರದೇಶದ ಘಜಿಯಾಬಾದ್ಗೆ ತೆರಳಿದ್ದರು.
ಹೆಡ್ ಕಾನ್ಸ್ಟೆಬಲ್ ಕೊಲೆಗೆ ಸಂಬಂಧಿಸಿದಂತೆ ಅವರು ಮಹಿಳೆಯೊಬ್ಬಳನ್ನು ಹುಡುಕುತ್ತಿದ್ದರು. ಮಹಿಳೆಯನ್ನು ಬಂಧಿಸಲು ಮುಂದಾದ ಪೊಲೀಸರ ಮೇಲೆ ಆರೋಪಿಯ ಕಡೆಯವರು ಹಲ್ಲೆ ನಡೆಸಿದ್ದಾರೆ.
MOST READ:ವಾಹನ ಖರೀದಿಸುವವರಿಗೆ, ಮಾರಾಟ ಮಾಡುವವರಿಗೆ ನೆರವಾಗುವ ಆರ್ಟಿಒ ಫಾರಂಗಳಿವು!
ಇದರ ಜೊತೆಗೆ ಪುಣೆ ಪೊಲೀಸರ ಟೊಯೊಟಾ ಇನೋವಾ ಕ್ರಿಸ್ಟಾ ಕಾರ್ ಅನ್ನು ಜಖಂಗೊಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಪುಣೆಯ ವಲಯ 1ರ ಡಿಸಿಪಿ ಪ್ರಿಯಾಂಕಾ ನಾರ್ನಾವರೆ, ನಮ್ಮ ಪೊಲೀಸರು ಗಾಜಿಯಾಬಾದ್ ಪೊಲೀಸರ ಜೊತೆ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಆರೋಪಿಗಳನ್ನು ಬಂಧಿಸಿರುವ ನಮ್ಮ ತಂಡವು ಪುಣೆಗೆ ವಾಪಸಾಗಿದೆ ಎಂದು ಹೇಳಿದರು. ಹೆಡ್ ಕಾನ್ಸ್ಟೆಬಲ್ ಕೊಲೆಯಲ್ಲಿ ಆರೋಪಿಯಾಗಿರುವ ಮಹಿಳೆ ಘಟನೆಯ ಬಳಿಕ ಗಾಜಿಯಾಬಾದ್ಗೆ ಪರಾರಿಯಾಗಿದ್ದಳು.
MOST READ:ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು
ಮೇ 5ರ ಮಧ್ಯರಾತ್ರಿ ಫರ್ಖಾನಾ ಪೊಲೀಸ್ ಠಾಣೆಯ ಮುಖ್ಯ ಪೇದೆ 48 ವರ್ಷದ ಸಮೀರ್ ಸೈಯದ್ ಎಂಬುವವರನ್ನು ಬುಧ್ವಾರ್ ಪೆತ್ನಲ್ಲಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದ ಆರೋಪಿಯನ್ನು ಕಾಸಿನ್ ಪೆತ್ನ ಪ್ರವೀಣ್ ಮಹಾಜನ್ ಎಂದು ಗುರುತಿಸಲಾಗಿದೆ.
ಘಟನೆಯ ಬಳಿಕ ಪ್ರವೀಣ್ ಮಹಾಜನ್'ನನ್ನು ಬಂಧಿಸಲಾಗಿತ್ತು. ತನಿಖೆ ವೇಳೆ ಈ ಪ್ರಕರಣದಲ್ಲಿ ಮಹಿಳೆಯೊಬ್ಬಳು ಭಾಗಿಯಾಗಿರುವುದು ತಿಳಿದು ಬಂದಿದೆ. ಆಕೆಯನ್ನು ಕಲ್ಪನಾ ಪ್ರವೀಣ್ ಮಹಾಜನ್ ಎಂದು ಗುರುತಿಸಲಾಗಿದೆ.
MOST READ:10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್
ಈ ಘಟನೆಯ ಬಳಿಕ ಕಲ್ಪನಾ ಗಾಜಿಯಾಬಾದ್ಗೆ ಪರಾರಿಯಾಗಿದ್ದ ಕಾರಣ ಪುಣೆ ಪೊಲೀಸರ ತಂಡವೊಂದನ್ನು ಗಾಜಿಯಾಬಾದ್ಗೆ ಕಳುಹಿಸಲಾಯಿತು. ಹೀಗೆಗಾಜಿಯಾಬಾದ್ಗೆ ತೆರಳಿದ್ದ ತಂಡದ ಮೇಲೆ ದಾಳಿ ನಡೆಸಲಾಗಿದೆ.
ವರದಿಗಳ ಪ್ರಕಾರ ನಂದಾಗ್ರಾಮ್ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ದೀನ್ ದಯಾಳ್ ಪುರಿ ಎಂಬ ಸ್ಥಳದಲ್ಲಿ ಪೊಲೀಸರಿದ್ದ ತಂಡದ ಮೇಲೆ ಹಲ್ಲೆ ಮಾಡಲಾಗಿದೆ. ಕಲ್ಪನಾಳನ್ನು ಬಂಧಿಸಲು ಪೊಲೀಸರು ಸ್ಥಳಕ್ಕೆ ತಲುಪಿದರೂ ಯಾವುದೇ ಪ್ರಯೋಜನವಾಗಲಿಲ್ಲ.
MOST READ:ವರ್ಷಗಳ ಕಾಲ ಉಪ್ಪು ನೀರಿನಲ್ಲಿದ್ದರೂ ಹಡಗುಗಳ ಆಂಕರ್ಗಳಿಗೆ ತುಕ್ಕು ಹಿಡಿಯದಿರಲು ಕಾರಣಗಳಿವು
ಕಲ್ಪನಾಳೊಂದಿಗೆ ಸಂಪರ್ಕದಲ್ಲಿದ್ದ ಅಂಕಿತ್ ಎಂಬ ವ್ಯಕ್ತಿಯನ್ನು ಪೊಲೀಸರ ತಂಡವು ಪತ್ತೆ ಹಚ್ಚಿ ಆತನ ವಿಚಾರಣೆ ಆರಂಭಿಸಿದೆ. ಈ ವೇಳೆ ಅಂಕಿತ್ನ ಸಂಬಂಧಿಕರು ಹಾಗೂ ನೆರೆಹೊರೆಯವರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ.
ಪುಣೆ ಪೊಲೀಸರ ತಂಡದ ನೇತೃತ್ವ ವಹಿಸಿದ್ದ ಸಹಾಯಕ ಪೊಲೀಸ್ ಇನ್ಸ್ಪೆಕ್ಟರ್ ಪಾಟೀಲ್ ತಮ್ಮನ್ನು ಪರಿಚಯಿಸಿಕೊಂಡಿದ್ದಾರೆ. ಆದರೆ ಜನರು ಅವರ ಮಾತನ್ನು ಕೇಳುವ ಪರಿಸ್ಥಿತಿಯಲ್ಲಿರಲಿಲ್ಲ.
MOST READ:ಜೀವದ ಹಂಗು ತೊರೆದು ಮಗುವಿನ ಪ್ರಾಣ ಉಳಿಸಿದ ರಿಯಲ್ ಹೀರೋಗೆ ಬೈಕ್ ಉಡುಗೊರೆ ನೀಡಿದ ಜಾವಾ ಕಂಪನಿ
ಪೊಲೀಸರ ಮೇಲೆ ದಾಳಿ ನಡೆಸಿದವರು ಪೊಲೀಸರ ಬಳಿಯಿದ್ದ ಮೊಬೈಲ್ ಫೋನ್, ಐಡೆಂಟಿಟಿ ಕಾರ್ಡ್'ಗಳನ್ನು ಕಸಿದು ಕೊಂಡಿದ್ದಾರೆ. ಜೊತೆಗೆ ಪೊಲೀಸರ ಬಳಿಯಿದ್ದ ಶಸ್ತ್ರಾಸ್ತ್ರ ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ. ಈ ಘಟನೆಯಲ್ಲಿ ಹಲವು ಪೊಲೀಸರು ಗಾಯಗೊಂಡಿದ್ದಾರೆ.