Just In
- 9 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 10 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 10 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 12 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟ್ರಕ್ ಚಾಲಕರಿಗಾಗಿ ಲಸಿಕಾ ಅಭಿಯಾನ ಆರಂಭಿಸಿದ ಡೈಮ್ಲರ್
ಪ್ರಮುಖ ಕಮರ್ಷಿಯಲ್ ವಾಹನ ತಯಾರಕ ಕಂಪನಿಯಾದ ಡೈಮ್ಲರ್ ಇಂಡಿಯಾ ತನ್ನ ಟ್ರಕ್ ಚಾಲಕರನ್ನು ಕರೋನಾ ವೈರಸ್'ನಿಂದ ರಕ್ಷಿಸಲು ಕೋವಿಡ್ 19 ಲಸಿಕೆಗಳನ್ನು ನೀಡುತ್ತಿದೆ.
ಚೆನ್ನೈ ಬಳಿಯ ಒರಗಡಂ ಉತ್ಪಾದನಾ ಘಟಕದಲ್ಲಿ ಕೆಲಸ ಮಾಡುತ್ತಿರುವ ಕಂಪನಿಯ ಟ್ರಕ್ ಚಾಲಕರಿಗೆ ಲಸಿಕೆ ನೀಡಲಾಗಿದೆ. ನಿನ್ನೆ ಮೊದಲ ದಿನ 60 ಕ್ಕೂ ಹೆಚ್ಚು ಟ್ರಕ್ ಚಾಲಕರಿಗೆ ಉಚಿತ ಲಸಿಕೆ ನೀಡಲಾಯಿತು. ಡೈಮ್ಲರ್ ಕಂಪನಿಯು ಈ ಹಿಂದೆಯೇ ತನ್ನ ಉತ್ಪಾದನಾ ಘಟಕದಲ್ಲಿರುವ ನೌಕರರಿಗೆ ಲಸಿಕೆ ಹಾಕುವ ಕಾರ್ಯವನ್ನು ಆರಂಭಿಸಿತ್ತು.
ಈ ಅಭಿಯಾನದ ಅಡಿಯಲ್ಲಿ ಕಂಪನಿಯ 3,000 ಕ್ಕೂ ಹೆಚ್ಚು ಉದ್ಯೋಗಿಗಳಿಗೆ ಲಸಿಕೆ ನೀಡಲಾಗಿದೆ. ಈಗ ಡೈಮ್ಲರ್ ಕಂಪನಿಯು ಇನ್ನೂ 3,000 ಉದ್ಯೋಗಿಗಳಿಗೆ ಲಸಿಕೆ ನೀಡಲು ಮುಂದಾಗಿದೆ.
ಗುತ್ತಿಗೆ ನೌಕರರು ಹಾಗೂ ಇನ್ನಿತರ ನೌಕರರು ಈ ಲಸಿಕೆ ಅಭಿಯಾನದಿಂದ ಪ್ರಯೋಜನ ಪಡೆಯಲಿದ್ದಾರೆ. ಇದರ ನಡುವೆಯೇ ಕಂಪನಿಯು ನಿನ್ನೆ ತನ್ನ ಟ್ರಕ್ ಚಾಲಕರಿಗೆ ಲಸಿಕೆ ಶಿಬಿರವನ್ನು ಆರಂಭಿಸಿದೆ.
ಈ ವರ್ಷದ ಮೇ ತಿಂಗಳಿನಲ್ಲಿ ಡೈಮ್ಲರ್ ಇಂಡಿಯಾ ತನ್ನ ಉತ್ಪಾದನಾ ಘಟಕದಲ್ಲಿ ಲಸಿಕೆ ಕೇಂದ್ರವನ್ನು ಆರಂಭಿಸಿತ್ತು. ಅಂದಿನಿಂದ ಐದು ವ್ಯಾಕ್ಸಿನೇಷನ್ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಕಂಪನಿ ಹೇಳಿದೆ.
ದಿನಕ್ಕೆ 250 ಉದ್ಯೋಗಿಗಳಿಗೆ ಲಸಿಕೆ ನೀಡುವುದಾಗಿ ಕಂಪನಿ ತಿಳಿಸಿದೆ. ಡೈಮ್ಲರ್ ಕಂಪನಿಯು ತನ್ನ ಎಲ್ಲಾ ಉದ್ಯೋಗಿಗಳು ಮೊದಲ ಹಂತದ ಲಸಿಕೆ ಪಡೆದಿರುವುದನ್ನು ಖಚಿತ ಪಡಿಸುವ ಸಲುವಾಗಿ ಈ ಕಾರ್ಯವನ್ನು ಆರಂಭಿಸಿದೆ.
ಮೊದಲ ಲಸಿಕೆ ಪಡೆದ ಪ್ರತಿಯೊಬ್ಬರಿಗೂ ಎರಡನೇ ಹಂತದ ಲಸಿಕೆ ನೀಡುವ ಕಾರ್ಯವನ್ನು ಈಗ ಆರಂಭಿಸಲಾಗಿದೆ. ಡೈಮ್ಲರ್ ಕಂಪನಿಯ ಪ್ರಕಾರ ಈ ಕಾರ್ಯವು ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ.
ಕರೋನಾ ವೈರಸ್ ಎರಡನೇ ಅಲೆಯಿಂದಾಗಿ ಭಾರತದಲ್ಲಿ ಹಲವಾರು ಜನರು ಪ್ರಾಣ ಕಳೆದು ಕೊಂಡರು. ಶೀಘ್ರದಲ್ಲೇ ಕರೋನಾ ವೈರಸ್ ಮೂರನೇ ಅಲೆ ಅಪ್ಪಳಿಸಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಲಸಿಕೆಗಳು ಮಾತ್ರ ಮೂರನೇ ಅಲೆಯಿಂದ ಜನರನ್ನು ರಕ್ಷಿಸುತ್ತವೆ ಎಂಬ ಭರವಸೆಯಿದೆ.
ಕರೋನಾ ಸಂಕಷ್ಟದ ಸಮಯದಲ್ಲಿ ಡೈಮ್ಲರ್ ಕಂಪನಿಯು ಸರ್ಕಾರಕ್ಕೆ ವಿವಿಧ ರೀತಿಯಲ್ಲಿ ನೆರವಾಗುತ್ತಿದೆ. ಕಂಪನಿಯು ವೈದ್ಯಕೀಯ ವಿಮೆ, ಕುಟುಂಬಕ್ಕೆ ಆರ್ಥಿಕ ನೆರವು ನೀಡುವುದು ಹಾಗೂ ಮಕ್ಕಳ ಬೋಧನಾ ವೆಚ್ಚ ಭರಿಸುವುದು ಸೇರಿದಂತೆ ಹಲವು ಕಾರ್ಯಗಳನ್ನು ಮಾಡುತ್ತಿದೆ.
ಗಮನಿಸಿ: ಕೆಲವು ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.