Just In
- 4 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 5 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 6 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 6 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Movies Mrunal Thakur:"ಸರಿಯಾದ ಸಂಗಾತಿ ಸಿಗೋದು ಕಷ್ಟ; ಸೇಫ್ಟಿಗೆ ಅಂಡಾಣು ಶೇಖರಿಸಿ ಇಟ್ಕೊಳೋಣ ಅಂತಿದೀನಿ"
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರತದ ರಸ್ತೆಗಳಲ್ಲಿ ಇವೆಲ್ಲಾ ಕಾಮನ್..!
ಭಾರತದಲ್ಲಿರುವ ರಸ್ತೆಗಳು ಪ್ರಪಂಚದಲ್ಲಿರುವ ಬಹು ಅಪಾಯಕಾರಿ ರಸ್ತೆಗಳ ಪೈಕಿ ಒಂದಾಗಿವೆ. ಭಾರತದಲ್ಲಿ ನಡೆಯುವ ರಸ್ತೆ ಅಪಘಾತಗಳೇ ಇವುಗಳನ್ನು ಖಚಿತಪಡಿಸುತ್ತವೆ. ಅಂಕಿ ಅಂಶಗಳ ಪ್ರಕಾರ, ಪ್ರತಿ ವರ್ಷ ಲಕ್ಷಾಂತರ ಭಾರತೀಯರು ರಸ್ತೆ ಅಪಘಾತಗಳಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.
ಭಾರತದ ರಸ್ತೆಗಳಲ್ಲಿ ಯಾವೆಲ್ಲಾ ಸಂಗತಿಗಳಿಂದ ಪ್ರಾಣ ಹೋಗುತ್ತದೆ ಎಂಬುದರ ಬಗ್ಗೆ ಈ ಲೇಖನದಲ್ಲಿ ನೋಡೋಣ. ಇದರಿಂದಾಗಿ ಮುಂದಿನ ಬಾರಿ ರಸ್ತೆಯಲ್ಲಿ ಸವಾರಿ ಮಾಡುವಾಗ ಈ ಸಂಗತಿಗಳ ಮೇಲೆ ಗಮನ ಹರಿಸಲು ಸಹಾಯವಾಗಲಿದೆ.
ರಾಂಗ್ ಸೈಡ್ ಸವಾರಿ
ಭಾರತದ ರಸ್ತೆಗಳಲ್ಲಿ ಸಂಚರಿಸುವಾಗ ಕಂಡು ಬರುವ ಸಾಮಾನ್ಯ ಸಂಗತಿಯೆಂದರೆ ರಾಂಗ್ ಸೈಡ್ ರೈಡಿಂಗ್. ಭಾರತದಲ್ಲಿರುವ ವಾಹನ ಸವಾರರು, ದೂರವನ್ನು ಕಡಿಮೆಗೊಳಿಸುವ ಕಾರಣಕ್ಕೆ ರಾಂಗ್ ಸೈಡಿನಲ್ಲಿ ಸವಾರಿ ಮಾಡುತ್ತಾರೆ. ರಾಂಗ್ ಸೈಡಿನಲ್ಲಿ ಸವಾರಿ ಮಾಡುವುದರಿಂದ ಟ್ರಾಫಿಕ್ ಜಾಮ್ ಉಂಟಾಗುವುದು ಮಾತ್ರವಲ್ಲದೇ, ಅಪಘಾತಗಳೂ ಸಂಭವಿಸುತ್ತವೆ.
ದನಗಳು
ರಸ್ತೆಗಳಲ್ಲಿ ಹೇಗೆಂದರೆ ಹಾಗೇ ನುಗ್ಗಿ ಅಡ್ಡ ಬರುವ ದನಗಳೂ ಸಹ ಭಾರತದಲ್ಲಿನ ವಾಹನ ಸವಾರರ ಪಾಲಿಗೆ ಬಹು ದೊಡ್ಡ ಅಪಾಯಕಾರಿಯಾಗಿವೆ. ಹೀಗೆ ಅಡ್ಡ ಬರುವ ದನಗಳಿಂದಲೇ ಪ್ರತಿ ವರ್ಷ ಅನೇಕ ಅಪಘಾತಗಳು ಸಂಭವಿಸಿವೆ.
ಗಮನಿಸಬೇಕಾದ ಸಂಗತಿಯೆಂದರೆ ಬೆಳಕಿಲ್ಲದ ಕಾರಣಕ್ಕೆ ಹಾಗೂ ಹೆಚ್ಚು ಮಂಜು ಬೀಳುವ ಕಾರಣಕ್ಕೆ ದನಗಳಿಂದ ಉಂಟಾಗುವ ಅಪಘಾತಗಳು ರಾತ್ರಿ ವೇಳೆಯಲ್ಲಿ ಅಥವಾ ಚಳಿಗಾಲದಲ್ಲಿ ಹೆಚ್ಚು ಸಂಭವಿಸುತ್ತವೆ.
ಕೆಟ್ಟು ನಿಲ್ಲುವ ವಾಹನಗಳು
ಸಡನ್ನಾಗಿ ಕೆಟ್ಟು ಹೋಗುವ ವಾಹನಗಳನ್ನು ರಸ್ತೆಬದಿಯಲ್ಲಿ ಸುರಕ್ಷಿತವಾಗಿ ನಿಲ್ಲಿಸಬೇಕು. ಇದು ಇತರ ವಾಹನ ಚಾಲಕರಿಗೆ ಪಾಠವಾಗಬೇಕು. ಆದರೆ ಯಾರೂ ಇದನ್ನು ಪಾಲಿಸುವುದಿಲ್ಲ. ಕೆಟ್ಟು ಹೋದ ವಾಹನಗಳನ್ನು ರಸ್ತೆ ಮಧ್ಯದಲ್ಲಿಯೇ ನಿಲ್ಲಿಸುತ್ತಿರುವುದರಿಂದ ಉಳಿದ ವಾಹನ ಚಾಲಕರಿಗೂ ಕಿರಿಕಿರಿ.
ವೇಗವಾಗಿ ಹೋಗುವಾಗ ರಸ್ತೆಮಾರ್ಗದಲ್ಲಿ ಕೆಟ್ಟು ಹೋಗಿರುವ ವಾಹನಗಳು ತಕ್ಷಣಕ್ಕೆ ಕಾಣಿಸುವುದಿಲ್ಲ. ನಿಂತಿರುವ ವಾಹನಗಳನ್ನು ನೋಡಿದ ತಕ್ಷಣ ವೇಗದಲ್ಲಿರುವ ವಾಹನವನ್ನು ತಕ್ಷಣಕ್ಕೆ ನಿಯಂತ್ರಿಸಲು ಆಗುವುದಿಲ್ಲ. ಇದರಿಂದಾಗಿ ಭಾರತದಲ್ಲಿ ಹೆಚ್ಚಿನ ಸಂಖ್ಯೆಯ ರಸ್ತೆ ಅಪಘಾತಗಳು ಸಂಭವಿಸುತ್ತವೆ.
MOST READ: ಖಾಸಗಿ ವಿಮಾನ ಹೊಂದಿರುವ ಉದ್ಯಮಿಗಳಿವರು..!
ಅನಗತ್ಯ ವಸ್ತುಗಳು
ಉರುಳಿ ಬಿದ್ದಿರುವ ಮರ, ಕಲ್ಲು ಹಾಗೂ ಕಸದಂತಹ ಅನಗತ್ಯ ವಸ್ತುಗಳನ್ನು ಭಾರತದ ರಸ್ತೆಗಳಲ್ಲಿ ಕಾಣಬಹುದು. ಇವುಗಳೂ ಸಹ ರಸ್ತೆ ಅಪಘಾತಗಳಿಗೆ ಕಾರಣವಾಗುತ್ತವೆ.
MOST READ: ವಿಮಾನಗಳಲ್ಲಿ ಬಿಳಿ ಬಣ್ಣವನ್ನೇ ಬಳಕೆ ಮಾಡುವುದರ ಹಿಂದಿನ ಕಾರಣವೇನು?
ರಸ್ತೆ ಗುಂಡಿಗಳು
ಭಾರತದ ಹೆಚ್ಚಿನ ರಸ್ತೆಗಳು ಗುಂಡಿ ಬಿದ್ದು ಹಳ್ಳಗಳಂತಾಗಿವೆ. ಮಳೆಗಾಲದಲ್ಲಂತೂ ರಸ್ತೆ ಯಾವುದು, ಗುಂಡಿ ಯಾವುದು ಎಂಬುದೇ ಕಾಣುವುದಿಲ್ಲ. ಭಾರತದ ರಸ್ತೆಗಳಲ್ಲಿ ರಸ್ತೆ ಗುಂಡಿಗಳು ದೊಡ್ಡ ಸಮಸ್ಯೆಯನ್ನು ತಂದೊಡ್ಡುತ್ತಿವೆ. ಮಳೆಯಿಂದಾಗಿ ಹಾಗೂ ಟ್ರಕ್ಗಳಂತಹ ಭಾರೀ ವಾಹನಗಳ ನಿರಂತರ ಓಡಾಟದಿಂದಾಗಿ ರಸ್ತೆಗಳು ಹಾಳಾಗುತ್ತಿವೆ.
MOST READ: ಬೈಕುಗಳಲ್ಲಿ ಡೀಸೆಲ್ ಎಂಜಿನ್ ಏಕೆ ಬಳಸಲ್ಲ ಗೊತ್ತಾ?
ಅದರಲ್ಲೂ ಕಚ್ಚಾ ರಸ್ತೆಗಳಲ್ಲಿ ಪ್ರಯಾಣಿಸುವಾಗ ಹೆಚ್ಚು ಜಾಗರೂಕರಾಗಿರಬೇಕು. ಸಾಧ್ಯವಾದಷ್ಟು ಆ ರಸ್ತೆಗಳಲ್ಲಿ ಸಂಚರಿಸುವುದನ್ನು ಕಡಿಮೆ ಮಾಡಿ. ಅಂತಹ ರಸ್ತೆಗಳಲ್ಲಿ ಸಂಭವಿಸುವ ಅಪಘಾತಗಳು ಜೀವಕ್ಕೆ ಮಾರಕವಾಗಬಲ್ಲವು.