Just In
- 22 min ago Tata Curvv Vs Citroen Basalt: ಟಾಟಾಗೆ ಸೆಡ್ಡು ಹೊಡೆಯುವ ತಾಕತ್ತಿದೆಯೇ?
- 1 hr ago ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- 1 hr ago Vande Bharat: ವಂದೇ ಭಾರತ್ ಸ್ಲೀಪರ್ ವಿಶೇಷತೆಗಳು: ಇಂಟೀರಿಯರ್ಗೆ ಫಿದಾ ಆಗ್ತೀರ!
- 1 hr ago ಎಲೆಕ್ಟ್ರಿಕ್ ಲೋಕಕ್ಕೆ ಎಸ್ಯುವಿ ದೈತ್ಯನ ಎಂಟ್ರಿ: ಇನ್ನು ಉಳಿದ ಕಾರುಗಳನ್ನು ದೇವರೇ ಕಾಪಾಡಬೇಕು!
Don't Miss!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Movies "ಇವರು ಆಡೋ ಮಾತುಗಳಿಂದ ನಮ್ಮ ತಾಯಿ ಊಟ ಮಾಡ್ತಿಲ್ಲ"; ಕಣ್ಣೀರಿಟ್ಟ ವರ್ತೂರು ಸಂತೋಷ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪಾದಚಾರಿಗಳಿಗೆ, ಸೈಕಲ್ ಸವಾರರಿಗೆ ಸಿಹಿ ಸುದ್ದಿ ನೀಡಿದ ದೆಹಲಿ ಸರ್ಕಾರ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೋಟಾರ್ ವಾಹನಗಳಿಗೆ, ಪಾದಚಾರಿಗಳಿಗೆ ಹಾಗೂ ಸೈಕಲ್ ಸವಾರರಿಗೆ ಪ್ರತ್ಯೇಕ ಪಥಗಳನ್ನು ನಿರ್ಮಿಸಲು ದೆಹಲಿ ಸರ್ಕಾರವು ಮುಂದಾಗಿದೆ. ಈ ಮೂಲಕ ದೆಹಲಿಯನ್ನು ಸೈಕ್ಲಿಸ್ಟ್ ಹಾಗೂ ಪಾದಚಾರಿ ಸ್ನೇಹಿ ನಗರವನ್ನಾಗಿಸಲು ನಿರ್ಧರಿಸಲಾಗಿದೆ.
ದೆಹಲಿ ಮಾಸ್ಟರ್ ಪ್ಲ್ಯಾನ್ 2041ರ ಕರಡು ವರದಿಯು ಈ ಬಗ್ಗೆ ಮಾಹಿತಿ ನೀಡಿದೆ. ದೆಹಲಿ ಮಾಸ್ಟರ್ ಪ್ಲ್ಯಾನ್ 2041ರ ಕರಡು ವರದಿಯನ್ನು ದೆಹಲಿ ಅಭಿವೃದ್ಧಿ ಪ್ರಾಧಿಕಾರದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರಿಗೆ ತಮ್ಮ ಸಲಹೆ ಅಥವಾ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಕರಡು ವರದಿಯಲ್ಲಿ ವಿವಿಧ ಅಂಶಗಳ ಬಗ್ಗೆ ಮಾಹಿತಿ ನೀಡಲಾಗಿದೆ.
ಸಾರ್ವಜನಿಕ ಸಾರಿಗೆಯು ಅಗ್ಗದ ಆಯ್ಕೆ ಮಾತ್ರ ಆಗಿರದೆ ಜನರಿಗೆ ಅನುಕೂಲಕರವಾದ ಹಾಗೂ ಸುರಕ್ಷಿತವಾದ ಆಯ್ಕೆಯಾಗಿರಬೇಕು. ಜೊತೆಗೆ ಜನರ ಆರೋಗ್ಯಕ್ಕೂ ಪ್ರಯೋಜನಕಾರಿಯಾಗಬೇಕು ಎಂಬುದನ್ನು ಗಮನಿಸಬೇಕು.
ದೆಹಲಿಯು ವಾಯುಮಾಲಿನ್ಯದಿಂದ ಹೆಚ್ಚು ತತ್ತರಿಸಿರುವ ನಗರಗಳಲ್ಲಿ ಒಂದು ಎಂಬುದು ಗಮನಿಸಬೇಕಾದ ಸಂಗತಿ. ಇದರಿಂದಾಗಿ ದೆಹಲಿಯ ನಿವಾಸಿಗಳು ಬಳಲುವಂತಾಗಿದೆ. ಪೆಟ್ರೋಲ್, ಡೀಸೆಲ್ ಎಂಜಿನ್ ಮೂಲಕ ಸಾಗುವ ವಾಹನಗಳು ಹೊರಸೂಸುವ ಹೊಗೆ ವಾಯು ಮಾಲಿನ್ಯಕ್ಕೆ ಪ್ರಮುಖ ಕಾರಣವಾಗಿದೆ.
ಈ ಕಾರಣಕ್ಕೆ ಮೋಟಾರ್ ವಾಹನಗಳ ಬದಲು ಜನರಿಗೆ ಸೈಕಲ್ ಬಳಸುವಂತೆ ಹೇಳಲಾಗುತ್ತಿದೆ. ವಿಶ್ವದ ಹಲವು ದೇಶಗಳು ಈಗ ಇದೇ ರೀತಿಯ ಕ್ರಮಗಳನ್ನುಕೈಗೊಳ್ಳುತ್ತಿವೆ. ಇವುಗಳ ಜೊತೆಗೆ ಎಲೆಕ್ಟ್ರಿಕ್ ವಾಹನಗಳ ಬಳಕೆಯೂ ಹೆಚ್ಚುತ್ತಿದೆ.
ದೆಹಲಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚು ಪ್ರೋತ್ಸಾಹ ನೀಡಲಾಗುತ್ತಿದೆ. ಈ ಕರಡು ವರದಿಯ ಪ್ರಕಾರ ಪೆಟ್ರೋಲ್, ಡೀಸೆಲ್ ಎಂಜಿನ್ ಹೊಂದಿಲ್ಲದ ವಾಹನಗಳಿಗೆ ಹೆಚ್ಚು ಮೂಲಸೌಕರ್ಯ ಒದಗಿಸಲು ನಿರ್ಧರಿಸಲಾಗಿದೆ.
ಅಂದರೆ ಪಾದಚಾರಿ ಮಾರ್ಗ ಹಾಗೂ ಬೈಸಿಕಲ್ ಟ್ರ್ಯಾಕ್ಗಳಂತಹ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ಈ ಮಾರ್ಗಗಳು ಪರಿಸರ ಸ್ನೇಹಿಯಾಗುವುದರ ಜೊತೆಗೆ ಪಾದಚಾರಿಗಳಿಗೆ ಹಾಗೂ ಸೈಕ್ಲಿಸ್ಟ್'ಗಳಿಗೆ ನೆರವಾಗುತ್ತವೆ.
ಮೋಟಾರ್ ವಾಹನ, ಸೈಕಲ್ ಹಾಗೂ ಪಾದಚಾರಿಗಳಿಗೆ ಪ್ರತ್ಯೇಕ ಮಾರ್ಗಗಳನ್ನು ಸ್ಥಾಪಿಸುವುದರಿಂದ ಅಪಘಾತಗಳ ಸಂಖ್ಯೆಯು ಸಹ ಕಡಿಮೆಯಾಗುತ್ತದೆ. ದೆಹಲಿ ರಾಜ್ಯ ಸರ್ಕಾರವು ಎಲೆಕ್ಟ್ರಿಕ್ ವಾಹನ ನೀತಿಯಲ್ಲಿ ಉಳಿದ ರಾಜ್ಯಗಳಿಗಿಂತ ಒಂದು ಹೆಜ್ಜೆ ಮುಂದಿದೆ.
ದೆಹಲಿ ಸರ್ಕಾರವು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ಸಬ್ಸಿಡಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ನೀಡುತ್ತದೆ. ಇದರಿಂದಾಗಿ ದೆಹಲಿಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಜನರು ಉತ್ಸುಕರಾಗಿದ್ದಾರೆ. ದೇಹಲಿಯು ಭಾರತದ ಎಲೆಕ್ಟ್ರಿಕ್ ವಾಹನ ರಾಜಧಾನಿಯಾಗಿ ಹೊರಹೊಮ್ಮಿದರೆ ಅಚ್ಚರಿ ಪಡಬೇಕಾಗಿಲ್ಲ.
ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.