Just In
- 1 hr ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 2 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 3 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 3 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಸಿದ್ದರಾಮಯ್ಯ ಕೊಟ್ಟ ಭರವಸೆ ಏನು?
- Movies ''ಹೆಣ್ಮಕ್ಕಳು ಎಲ್ಲೆಲ್ಲೋ ಹೋದರು'' ಎಂದ ಶ್ರುತಿಗೆ ಮಹಿಳಾ ಆಯೋಗ ನೋಟಿಸ್ ; 07 ದಿನದ ಗಡುವು..!
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಳುವಾದ ಕಾರಿಗೆ ದಂಡದ ಚಲನ್ ಪಡೆದ ಕಾರು ಮಾಲೀಕ
ರಾಷ್ಟ್ರ ರಾಜಧಾನಿ ದೆಹಲಿಯ ನಿವಾಸಿಯೊಬ್ಬರು ತಮ್ಮ ಕಾರು ಕಳುವಾದ 20 ದಿನಗಳ ನಂತರ ಪೂರ್ವ ದೆಹಲಿಯ ವಿವೇಕ್ ವಿಹಾರ್ ಪೊಲೀಸರಿಂದ ದಂಡದ ಚಲನ್ ಪಡೆದಿದ್ದಾರೆ. ಕಾರ್ ಅನ್ನು ಅತಿ ವೇಗದಲ್ಲಿ ಚಾಲನೆ ಮಾಡಿದ ಕಾರಣಕ್ಕೆ ಈ ದಂಡ ವಿಧಿಸಲಾಗಿದೆ.
ಜೂನ್ 6ರಂದು ಪಶ್ಚಿಮ ದೆಹಲಿಯ ಹರಿ ನಗರ ನಿವಾಸಿ ಯೋಗೇಶ್ ಪೋದ್ದಾರ್ ರವರ ಕಾರ್ ಅನ್ನು ವಿವೇಕ್ ವಿಹಾರ್ ಕಾಲೋನಿಯಲ್ಲಿ ನಿಲ್ಲಿಸಿದ್ದಾಗ ಕಳುವು ಮಾಡಲಾಗಿತ್ತು. ಈ ಕುರಿತು ಅವರು ದೂರು ದಾಖಲಿಸಿದ್ದರು. ಆದರೂ ಜೂನ್ 26 ರಂದು ಅವರಿಗೆ ಇ-ಚಲನ್ ನೀಡಲಾಗಿದೆ. ಈ ಚಲನ್ ನಲ್ಲಿ ಮಿಲೇನಿಯಮ್ ಡಿಪೋ ಬಳಿ ನಿಗದಿತ ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ಕಾರು ಚಾಲನೆ ಮಾಡಿದ ಕಾರಣಕ್ಕೆ ದಂಡ ವಿಧಿಸಲಾಗಿದೆ ಎಂದು ಹೇಳಲಾಗಿದೆ.
ಚಲನ್ ನಲ್ಲಿ ಕಾರಿನ ಸಂಖ್ಯೆ ಹಾಗೂ ಫೋಟೋವನ್ನು ಸಹ ಲಗತ್ತಿಸಲಾಗಿದೆ. ಯೋಗೇಶ್ ರವರು ಕಾರನ್ನು ನಿಲ್ಲಿಸಿದ್ದ ಸ್ಥಳದಲ್ಲಿ ಯಾವುದೇ ಸಿಸಿಟಿವಿಯನ್ನು ಅಳವಡಿಸಿರಲಿಲ್ಲವೆಂದು ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಈ ಸ್ಥಳದಲ್ಲಿ ಅಳವಡಿಸಿದ್ದ ಇತರ ಸಿಸಿಟಿವಿಗಳಲ್ಲಿಯೂ ಯಾವುದೇ ಸುಳಿವು ದೊರೆತಿಲ್ಲ.
MOST READ:ಪೊಲೀಸರಿಗೆ ತಲೆ ನೋವು ತಂದಿಟ್ಟ ಸೀಜ್ ಆದ ವಾಹನಗಳು
ಒಂದು ವಾರದ ತನಿಖೆಯ ನಂತರ, ಪೊಲೀಸರು ನ್ಯಾಯಾಲಯದಲ್ಲಿ ವಾಹನವು ಪತ್ತೆಯಾಗಿಲ್ಲವೆಂದು ವರದಿ ಸಲ್ಲಿಸಿದ್ದಾರೆ. ಇದಾದ ನಂತರ ಯೋಗೇಶ್ ರವರಿಗೆ ಇ-ಚಲನ್ ನೀಡಲಾಗಿದೆ. ಚಲನ್ ನಲ್ಲಿದ್ದ ಫೋಟೋ ಗಮನಿಸಿದ ಯೋಗೇಶ್ ರವರು ಕಾರಿನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲವೆಂದು ಹೇಳಿದ್ದಾರೆ.
ಕಾರಿನೊಳಗಿದ್ದ ಪ್ರತಿಮೆ ಹಾಗೂ ಕೆಲವು ಸ್ಟಿಕ್ಕರ್ಗಳನ್ನು ತೆಗೆದುಹಾಕಲಾಗಿದೆ. ಕಾರುಗಳ್ಳರು ಕಾರಿನ ಭಾಗಗಳನ್ನು ತೆಗೆದು ಮಾರಾಟ ಮಾಡಿರಬಹುದುದೆಂದು ಅವರು ಭಾವಿಸಿದ್ದರು. ಆದರೆ ಕಾರು ಇನ್ನೂ ಸುರಕ್ಷಿತವಾಗಿರುವುದು ಯೋಗೇಶ್ ರವರಿಗೆ ಆಶ್ಚರ್ಯವನ್ನುಂಟು ಮಾಡಿದೆ.
MOST READ:ಒಂದೇ ದಿನದಲ್ಲಿ ಸಾವಿರಕ್ಕೂ ಹೆಚ್ಚು ಆಂಬ್ಯುಲೆನ್ಸ್ ಪಡೆದ ಜಗನ್ ಸರ್ಕಾರ
ಯೋಗೇಶ್ ಈ ಬಗ್ಗೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸರಿಯಾದ ತನಿಖೆ ನಡೆಸಿದರೆ ಹಾಗೂ ಕಾರು ದೆಹಲಿಯಲ್ಲಿಯೇ ಇದ್ದರೆ, ಶೀಘ್ರದಲ್ಲೇ ತಮ್ಮ ಕಾರು ತಮಗೆ ದೊರೆಯಲಿದೆ ಎಂಬ ಆಶಾ ಭಾವನೆಯನ್ನು ಹೊಂದಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಇದೇ ರೀತಿಯ ಮತ್ತೊಂದು ಪ್ರಕರಣ ವರದಿಯಾಗಿತ್ತು. ದೆಹಲಿ ಹೈಕೋರ್ಟ್ ನ್ಯಾಯಾಧೀಶರ ಪತಿಯ ಕಾರನ್ನು ಕಳವು ಮಾಡಲಾಗಿತ್ತು. ಈ ಕಾರಿಗೂ ಸಹ ವೇಗವಾಗಿ ಕಾರು ಚಾಲನೆ ಮಾಡಲಾಗಿದೆ ಎಂಬ ಕಾರಣಕ್ಕೆ ದಂಡ ವಿಧಿಸಿ ಇ-ಚಲನ್ ನೀಡಲಾಗಿತ್ತು.
ಸೂಚನೆ: ಈ ಚಿತ್ರಗಳನ್ನು ರೆಫರೆನ್ಸ್ ಗಾಗಿ ಬಳಸಲಾಗಿದೆ.