Just In
- 3 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 4 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 5 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 5 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- News Rain Alert: ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ: ಈ ಜಿಲ್ಲೆಗಳಲ್ಲಿ ಭಾರಿ ಬಿಸಿಲು
- Movies 'ಅರಸಿ' ಧಾರಾವಾಹಿಯಲ್ಲಿ ರಚಿತಾ ರಾಮ್ ಪತಿಯಾಗಿದ್ದ ಈ ನಟ ಯಾರು? 'ಅಮೃತಧಾರೆ'ಯಲ್ಲೇನು ಪಾತ್ರ?
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜಧಾನಿಯಲ್ಲಿ ಗಸ್ತು ನಿರ್ವಹಣೆಗಾಗಿ ನಿಯೋಜನೆಗೊಂಡ ಹೈ ಟೆಕ್ ಪೊಲೀಸ್ ಬಸ್..!
ದೇಶಾದ್ಯಂತ ಲೋಕಸಭಾ ಚುನಾವಣೆಯ ಕಾವು ರಂಗೇರುತ್ತಿದ್ದು, ಚುನಾವಣೆಯ ಹೊತ್ತಿನಲ್ಲಿ ಯಾವುದೇ ಅಹಿತಕರ ಘಟನೆಗಳನ್ನು ಸಂಭವಿಸದಂತೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದೇ ಒಂದು ದೊಡ್ಡ ಸವಾಲಿನ ಕೆಲಸ ಅಂದ್ರೆ ತಪ್ಪಾಗುವುದಿಲ್ಲ. ಅದರಲ್ಲೂ ಪುಲ್ವಾಮಾ ದಾಳಿಯ ನಂತರ ದೇಶದ ಗಡಿಪ್ರದೇಶಗಳಲ್ಲಿ ಅಷ್ಟೇ ಅಲ್ಲದೇ ದೇಶದ ಪ್ರಮುಖ ನಗರಗಳಲ್ಲೂ ಬಿಗಿಭದ್ರತೆಯನ್ನು ಕೈಗೊಳ್ಳಲಾಗುತ್ತಿದ್ದು, ಉಗ್ರರ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣು ಇಡಲಾಗುತ್ತಿದೆ.
ಹೌದು, ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಉಗ್ರರ ದಾಳಿ ಭೀತಿಯಿಂದಾಗಿ ರಾಜಧಾನಿ ದೆಹಲಿ ಸುತ್ತಮತ್ತ ಭಾರೀ ಬಿಗಿ ಭದ್ರತೆ ನಿಯೋಜಿಸಲಾಗುತ್ತಿದೆ. ಹೊರ ರಾಜ್ಯಗಳಿಂದ ದೆಹಲಿ ಪ್ರವೇಶಿಸುವ ವಾಹನಗಳ ಮಾಹಿತಿ ಜೊತೆಗೆ ಪ್ರತಿ ಗಲ್ಲಿ ಗಲ್ಲಿಯ ಮಾಹಿತಿಯನ್ನು ಸಂಗ್ರಹಿಸುತ್ತಿರುವ ಪೊಲೀಸರು, ಉಗ್ರ ಚಟುವಟಿಕೆಗಳಿಗೆ ಯಾವುದೇ ರೀತಿಯ ಆಸ್ಪದ ನೀಡದಂತೆ ಮನ್ನೇಚ್ಚರಿಕೆ ವಹಿಸಿದ್ದಾರೆ. ಜೊತೆಗೆ ಉಗ್ರ ಚಟುವಟಿಕೆಗಳನ್ನು ಪತ್ತೆಹಚ್ಚಲು ಆಧುನಿಕ ತಂತ್ರಜ್ಞಾನದ ಮೊರೆ ಹೋಗಿದ್ದು, ಗಸ್ತು ನಿರ್ವಹಣೆಗಾಗಿ ಹೈ ಟೆಕ್ ಮೊಬೈಲ್ ಕಂಟ್ರೋಲ್ ರೂಂ ಸೌಲಭ್ಯದ ಬಸ್ಗಳನ್ನು ಬಳಕೆ ಮಾಡುತ್ತಿದ್ದಾರೆ.
ಒಂದು ನಿರ್ದಿಷ್ಟ ಪ್ರದೇಶದಲ್ಲಿ ಯಾವುದೇ ರೀತಿಯ ಉಗ್ರ ಚಟುವಟಿಕೆಗಳು ಕಂಡಬಂದಲ್ಲಿ ಮಾಹಿತಿ ಸಂಗ್ರಹಿಸಲು ಈ ವಾಹನವು ಸಾಕಷ್ಟು ಸಹಕಾರಿಯಾಗಲಿದ್ದು, ದೆಹಲಿಯ ಸೂಕ್ಷ್ಮ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಈ ಹೈ ಟೆಕ್ ಬಸ್ ಅನ್ನು ನಿಯೋಜಿಸಲಾಗಿದೆ.
ಅತ್ಯಾಧುನಿಕ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಈ ಮೊಬೈಲ್ ಕಂಟ್ರೋಲ್ ರೂಂ ಬಸ್ನಲ್ಲಿ ಭದ್ರತಾ ಕಾರ್ಯಾಚರಣೆಗೆ ಸಹಾಯಕ್ಕಾಗಿ ಕಾನ್ಫರೆನ್ಸ್ ರೂಂ, ಆಪರೇಷನ್ ಸೆಂಟರ್ ಮತ್ತು ಸಂವಹನ ಮಾಧ್ಯಮ ವಿಭಾಗವನ್ನು ಹೊಂದಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ, ಗುಸ್ತುನಿರ್ವಹಣಾ ಸಿಬ್ಬಂದಿ ಮತ್ತು ಸೆಕ್ಯುರಿಟಿ ಎಜೆನ್ಸಿಗಳಿಂದ ಮಾಹಿತಿ ಸಂಗ್ರಹಿಸಲು ಸಹಕಾರಿಯಾಗಿದೆ.
ಪ್ರಮುಖವಾಗಿ ಚುನಾವಣಾ ರ್ಯಾಲಿಗಳು ಮತ್ತು ಬೃಹತ್ ಪ್ರತಿಭಟನೆಗಳ ಸಂದರ್ಭಗಳಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಭದ್ರತೆ ವಹಿಸುವುದು ಒಂದು ಸವಾಲಿನ ವಿಚಾರವಾಗಿದ್ದು, ಮೊಬೈಲ್ ಕಂಟ್ರೊಲ್ ರೂಂ ಮೂಲಕ ಭದ್ರತೆಯನ್ನು ಸಮರ್ಥವಾಗಿ ನಿಭಾಯಿಸಬಹುದಾಗಿದೆ.
MOST READ: ಭದ್ರತೆಗಾಗಿ ಮತ್ತೊಂದು ದುಬಾರಿ ಕಾರು ಖರೀದಿಸಿದ ಉದ್ಯಮಿ ಮುಕೇಶ್ ಅಂಬಾನಿ..!
ಮೊಬೈಲ್ ಕಂಟ್ರೊಲ್ ರೂಂನಲ್ಲಿ ಸಿಸಿಟಿವಿ ದೃಶ್ಯಗಳನ್ನು ವಿಕ್ಷಿಸಲು ದೊಡ್ಡದಾದ ಸ್ಕ್ರೀನ್ಗಳನ್ನು ಹಾಕಲಾಗಿದ್ದು, ಜೊತೆಗೆ ಪೊಲೀಸ್ ಅಧಿಕಾರಿಗಳಿಗಾಗಿ ಕಾನ್ಪರೆನ್ಸ್ ರೂಂ ಮತ್ತು ತತಕ್ಷಣದ ಮಾಹಿತಿ ಸಂಗ್ರಹಿಸುವ ಆಧುನಿಕ ಸೌಲಭ್ಯಗಳು ಈ ವಾಹನದಲ್ಲಿ ಜೋಡಣೆ ಮಾಡಲಾಗಿದೆ.
ಸದ್ಯಕ್ಕೆ ದೆಹಲಿ ಪೊಲೀಸರು ಕೇವಲ ಒಂದು ಮೊಬೈಲ್ ಕಂಟ್ರೋಲ್ ರೂಂ ಬಸ್ ಮಾದರಿಯನ್ನು ಪರೀಕ್ಷಾರ್ಥವಾಗಿ ಬಳಕೆ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಇಂತಹ ಬಸ್ಗಳನ್ನು ಕಾರ್ಯಾಚರಣೆಗೆ ಬಳಕೆ ಮಾಡಿಕೊಳ್ಳುವುದಾಗಿ ದೆಹಲಿ ಪೊಲೀಸ್ ಕಮೀಷನರ್ ಅಮುಲ್ಯಾ ಪಾಟ್ನಾಯಿಕ್ ಮಾಹಿತಿ ನೀಡಿದ್ದಾರೆ.
MOST READ: ಬೆಂಕಿಯಲ್ಲಿ ಸುಟ್ಟು ಕರಕಲಾದವು ಸಾವಿರಾರು ಕೋಟಿ ಮೌಲ್ಯದ 2 ಸಾವಿರ ಐಷಾರಾಮಿ ಕಾರುಗಳು
ಇನ್ನೊಂದು ವಿಶೇಷ ಅಂದ್ರೆ, ಈ ಮೊಬೈಲ್ ಕಂಟ್ರೋಲ್ ರೂಂ ಬಸ್ ಮಾದರಿಯು ನಮ್ಮ ಬೆಂಗಳೂರಿನಲ್ಲೇ ಸಿದ್ದವಾಗಿದ್ದು, ಮಿಸ್ಟ್ರಾಲ್ ಎನ್ನುವ ಆಟೋಮೊಬೈಲ್ ಬಿಡಿಭಾಗ ಜೋಡಣಾ ಸಂಸ್ಥೆಯು ರೂ. 3.7 ಕೋಟಿಗೆ ಈ ವಾಹನವನ್ನು ಪೊಲೀಸ್ ಇಲಾಖೆಯ ಬೇಡಿಕೆಯೆಂತೆ ವಿನ್ಯಾಸ ಮಾಡಿದೆ.