Just In
- 1 hr ago Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- 1 hr ago ಬೈಕಿನಂತೆ ಮೈಲೇಜ್ ಕೊಡೋದ್ರಿಂದ ಈ ಹ್ಯುಂಡೈ ಕಾರಿನ ಮಾಲೀಕರು ಫುಲ್ ಖುಷ್
- 1 hr ago ಮಹೀಂದ್ರಾ ಪ್ರೀಯರಿಗೆ ಭಾರೀ ಸಿಹಿಸುದ್ದಿ: ಗಲ್ಲಿಗಲ್ಲಿಯಲ್ಲಿ ಶುರುವಾಗುತ್ತಾ ಸ್ಕಾರ್ಪಿಯೋ ಹವಾ!
- 2 hrs ago ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಬೆಸ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓಡುತ್ತವೆ!
Don't Miss!
- News ವೃದ್ಧರ ಗೌಪ್ಯ ಮತದಾನ ವೇಳೆ ಅಕ್ರಮ: ಸಿಪಿಎಂ ಏಜೆಂಟ್ ಹಸ್ತಕ್ಷೇಪ: Video Viral
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Movies ಹಳೇ ಟ್ವೀಟ್ ಹಾಕಿ ರಕ್ಷಿತ್ ಶೆಟ್ಟಿ ಹೇಳಿದ್ದೇನು? 'ರಿಚರ್ಡ್ ಆಂಟನಿ' ಕಥೆ ಏನಾಯ್ತು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರೋನಾ ವೈರಸ್: ಸೈರನ್ ಮೊಳಗಿಸಿ ಧನ್ಯವಾದ ಸಲ್ಲಿಸಿದ ಪೊಲೀಸರು
ಕೆಲ ದಿನಗಳ ಹಿಂದಷ್ಟೇ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊವೊಂದು ವೈರಲ್ ಆಗಿತ್ತು. ಈ ವೀಡಿಯೊದಲ್ಲಿ ನೂರಾರು ಕಾರುಗಳು ಮಹಿಳೆಯೊಬ್ಬರಿಗೆ ಗೌರವ ಸಲ್ಲಿಸಿದ್ದವು. ಗೌರವ ಸ್ವೀಕರಿಸಲು ಆ ಮಹಿಳೆ ತಮ್ಮ ಮನೆಯ ಹೊರಗೆ ನಿಂತಿದ್ದರು.
ಹೀಗೆ ಮನೆಯಿಂದ ಹೊರಬಂದು ನೂರಾರು ಕಾರುಗಳಿಂದ ಸಲ್ಯೂಟ್ ಹೊಡೆಸಿಕೊಂಡ ಮಹಿಳೆ ಭಾರತೀಯ ಮೂಲದವರು, ಅದರಲ್ಲೂ ಹೆಮ್ಮೆಯ ಕನ್ನಡತಿ ಎಂಬುದು ವಿಶೇಷ. ಈ ಕನ್ನಡತಿ ಅಮೆರಿಕಾದಲ್ಲಿರುವ ವಿಂಡ್ಸರ್ ಆಸ್ಪತ್ರೆಯಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದು, ಅಮೆರಿಕಾದಲ್ಲಿರುವ ಕರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.
ಕರೋನಾ ವೈರಸ್ ಇಡೀ ಜಗತ್ತನ್ನು ತತ್ತರಿಸುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ಹೆಮ್ಮೆಯ ಕನ್ನಡತಿ ಹಗಲು ಇರುಳೆನ್ನದೇ ಕರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಈ ಕಾರಣಕ್ಕೆ ನೂರಾರು ಅಮೆರಿಕನ್ನರು ಒಟ್ಟುಗೂಡಿ ಅವರಿಗೆ ಧನ್ಯವಾದ ಸಲ್ಲಿಸಿದರು.
MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ
ಅಮೇರಿಕಾದಲ್ಲಿ ಭಾರತೀಯ ಮಹಿಳೆಗೆ ನೀಡಿದ ಈ ಗೌರವವು ಭಾರತದಲ್ಲಿಯೂ ಸಂಚಲನವನ್ನುಂಟು ಮಾಡಿದೆ. ಈಗ ಇದೇ ರೀತಿಯ ಘಟನೆಯೊಂದು ಭಾರತದಲ್ಲಿಯೂ ನಡೆದಿದೆ. ಆದರೆ ಈ ಘಟನೆಯಲ್ಲಿ ದೆಹಲಿ ಪೊಲೀಸರು ಧನ್ಯವಾದ ಸಲ್ಲಿಸಿರುವುದು ವಿಶೇಷ.
ಅಂದ ಹಾಗೆ ದೆಹಲಿ ಪೊಲೀಸರು ಸೈರನ್ ಮೊಳಗಿಸಿ, ಸಿಖ್ ಗುರುದ್ವಾರ ಸಿಸ್ಟಂಗೆ ಧನ್ಯವಾದ ಸಲ್ಲಿಸಿದ್ದಾರೆ. ಲಾಕ್ಡೌನ್ನಿಂದ ಸಮಸ್ಯೆಗೆ ಸಿಲುಕಿರುವ ಜನರಿಗೆ ಸಿಖ್ ಗುರುದ್ವಾರ ಸಂಸ್ಥೆ ವಿವಿಧ ರೀತಿಯಲ್ಲಿ ನೆರವಾಗುತ್ತಿದೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಈ ಸಂಸ್ಥೆಯು ದೆಹಲಿಯಲ್ಲಿರುವ ವಲಸೆ ಕಾರ್ಮಿಕರಿಗೆ ಆಹಾರ ಹಾಗೂ ಅಗತ್ಯ ವಸ್ತುಗಳನ್ನು ಪೂರೈಸುತ್ತಿದೆ. ಆರ್ಥಿಕ ಸಂಕಷ್ಟದ ನಡುವೆಯೂ ಗುರುದ್ವಾರ ಸಂಸ್ಥೆ ಬಡವರ ಮೂಲಭೂತ ಅಗತ್ಯಗಳನ್ನು ಪೂರೈಸುತ್ತಿದೆ.
ಈ ಗುರುದ್ವಾರದಲ್ಲಿ ಪ್ರತಿ ದಿನ ಜಾತಿ, ಮತ, ಧರ್ಮಗಳನ್ನು ನೋಡದೇ ಬಡವರಿಗೆ ಹಾಗೂ ಸಾಮಾನ್ಯ ಜನರಿಗೆ ಊಟದ ವ್ಯವಸ್ಥೆ ಮಾಡಲಾಗುತ್ತದೆ. ವಿಶೇಷ ಸೇವೆಯನ್ನು ನೀಡುತ್ತಿರುವ ಸಿಖ್ ಗುರುದ್ವಾರ ಸಂಸ್ಥೆಗೆ ಗೌರವ ಸಲ್ಲಿಸಲು ದೆಹಲಿ ಪೊಲೀಸರು ನೂರಾರು ಸಂಖ್ಯೆಯಲ್ಲಿ ಗುರುದ್ವಾರದ ಸುತ್ತ ಜಮಾಯಿಸಿ ಮೆರವಣಿಗೆ ನಡೆಸುತ್ತಾ ಸೈರನ್ ಮೊಳಗಿಸಿದರು.
MOSTREAD: ನಟ ವಿಕ್ರಮ್ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್
ಅರ್ಧ ಗಂಟೆಗೂ ಹೆಚ್ಚು ಕಾಲ ನಡೆದ ಈ ಮೆರವಣಿಗೆಯಲ್ಲಿ ಉನ್ನತ ಅಧಿಕಾರಿಗಳು ಹಾಗೂ ಕೆಳ ಹಂತದ ಸಿಬ್ಬಂದಿ ಭಾಗವಹಿಸಿದ್ದರು. ಇದ್ದಕ್ಕಿದ್ದಂತೆ ಪೊಲೀಸ್ ಸೈರನ್ ಸದ್ದು ಮೊಳಗಿದ ಕಾರಣ ಏನು ನಡೆಯುತ್ತಿದೆ ಎಂದು ಅರಿಯದ ಸ್ಥಳೀಯರು ದಿಗ್ಭ್ರಮೆಗೊಳಗಾಗಿದ್ದರು.
ಕೆಲವರು ಪೊಲೀಸರ ಈ ಕೃತ್ಯಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಇನ್ನೂ ಕೆಲವರು ಕರೋನಾ ವೈರಸ್ ಹಿನ್ನೆಲೆಯಲ್ಲಿ ದೇಶವು ಸಮಸ್ಯೆ ಎದುರಿಸುತ್ತಿದ್ದು, ಪೆಟ್ರೋಲ್ ವ್ಯರ್ಥ ಮಾಡಿದ್ದು ಸರಿಯಲ್ಲವೆಂದು ಟೀಕಿಸಿದ್ದಾರೆ.
MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!
ದೇಶದಾದ್ಯಂತ ಅನೇಕ ಸಂಸ್ಥೆಗಳು, ಕಂಪನಿಗಳು ಕಾರ್ಮಿಕರಿಗೆ, ಬಡವರಿಗೆ ನೆರವಾಗುತ್ತಿವೆ. ಇದರಲ್ಲಿ ಆಟೋಮೊಬೈಲ್ ಕಂಪನಿಗಳ ಪಾತ್ರವು ಪ್ರಮುಖವಾಗಿದೆ. ಟಾಟಾ ಗ್ರೂಪ್ ಕರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ರೂ.1,500 ಕೋಟಿ ದೇಣಿಗೆ ನೀಡಿದೆ. ಉಳಿದ ಆರ್ಥಿಕ ನೆರವು ಹಾಗೂ ವೈದ್ಯಕೀಯ ನೆರವನ್ನು ನೀಡುತ್ತಿವೆ.