Just In
- 19 min ago Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿಸಬೇಕೇ? ಆನ್-ರೋಡ್ ಬೆಲೆ ಎಷ್ಟು, EMI ಏನು?
- 1 hr ago ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- 1 hr ago ದೊಡ್ಡ ಸಿಗ್ನಲ್ ಕೊಟ್ಟ ಫೋರ್ಡ್: ಭಾರತಕ್ಕೆ ಬರುತ್ತಿದೆ ಹೊಸ ಎಸ್ಯುವಿ... ಟಾಟಾಗೆ ಆತಂಕ ಶುರು
- 2 hrs ago ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
Don't Miss!
- Finance ಆಪ್ ಸ್ಟೋರ್ನಿಂದ ವಾಟ್ಸಾಪ್, ಥ್ರೆಡ್ ತೆಗೆದುಹಾಕಿದ ಆಪಲ್!
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- News BMRCL: ಚಲ್ಲಘಟ್ಟ ಮೆಟ್ರೋ ನಿಲ್ದಾಣದ ಬಳಿ ಪಾದಚಾರಿ ಸೇತುವೆ ನಿರ್ಮಾಣ-ಪ್ರಯೋಜನೆಗಳೇನು ಹಾಗೂ ವೆಚ್ಚ ಎಷ್ಟು?
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Movies ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಮೇಲೆ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರೋನಾ ಕಾರಣಕ್ಕೆ ಕಾರಿನಲ್ಲೇ ತಂಗುತ್ತಿರುವ ವೈದ್ಯ..!
ಕರೋನಾ ವೈರಸ್ ಇಡೀ ದೇಶವನ್ನು ಆವರಿಸಿದೆ. ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವೈರಸ್ ತಡೆಗಟ್ಟಲು ಜನರು ಸೋಷಿಯಲ್ ಡಿಸ್ಟೆನ್ಸ್ನಂತಹ ಮೂಲ ವಿಧಾನಗಳನ್ನು ಅನುಸರಿಸುತ್ತಿದ್ದಾರೆ.
ಆಸ್ಪತ್ರೆಗಳಲ್ಲಿ ಕರೋನಾ ವೈರಸ್ ಪೀಡಿತ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಕೆಲವು ವೈದ್ಯರು ಕರ್ತವ್ಯ ಮುಗಿದ ನಂತರ ಮನೆಯಿಂದ ದೂರವಿರುತ್ತಿದ್ದಾರೆ. ಇನ್ನೂ ಕೆಲವರು ಮನೆಗೆ ಹೋಗುವಾಗ ಹೆಚ್ಚಿನ ಕಾಳಜಿಯನ್ನು ವಹಿಸುತ್ತಿದ್ದಾರೆ.
ಇದರಲ್ಲಿ ತಮ್ಮ ಕುಟುಂಬವನ್ನು ಸೋಂಕಿನಿಂದ ರಕ್ಷಿಸಲು ಕರ್ತವ್ಯ ಮುಗಿದ ನಂತರ ಮನೆಗೆ ಹೋಗುವ ಬದಲು ತಮ್ಮ ಕಾರುಗಳಲ್ಲಿಯೇ ಉಳಿದುಕೊಂಡಿರುವ ವೈದ್ಯರೂ ಸೇರಿದ್ದಾರೆ. ಚಿಕಿತ್ಸೆಯ ಸಮಯದಲ್ಲಿ ಅವರು ಕಾರನ್ನೇ ತಮ್ಮ ಮನೆಯನ್ನಾಗಿಸಿ ಕೊಂಡಿದ್ದಾರೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಕರೋನಾ ರೋಗಿಗಳಿಗೆ ಚಿಕಿತ್ಸೆ ನೀಡುವ ವೈದ್ಯರಲ್ಲಿ ಸೋಂಕಿನ ಅಪಾಯವು ಹಲವು ಪಟ್ಟು ಹೆಚ್ಚಾಗಿರುತ್ತದೆ. ಮಧ್ಯಪ್ರದೇಶದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಕರೋನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಸಚಿನ್ ನಾಯಕ್ರವರು ತಮ್ಮ ಕಾರನ್ನೇ ಮನೆಯನ್ನಾಗಿಸಿ ಕೊಂಡಿದ್ದಾರೆ.
ಅವರು ಆಸ್ಪತ್ರೆಯಲ್ಲಿ ಪ್ರತಿದಿನ ಕರೋನಾ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಇದರಿಂದಾಗಿ ಅವರು ಸೋಂಕಿಗೆ ಹೆಚ್ಚು ಒಳಗಾಗುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ, ಅವರು ಮನೆಗೆ ಹೋದರೆ, ಅವರ ಕುಟುಂಬಕ್ಕೆ ಸಹ ಸೋಂಕು ತಗುಲಲಿದೆ.
MOSTREAD: ವಾಹನ ಉತ್ಪಾದನೆ ಸ್ಥಗಿತದಿಂದಾಗಿ ಸಾವಿರಾರು ಕೋಟಿ ನಷ್ಟ
ಮುನ್ನೆಚ್ಚರಿಕೆ ಕಾರಣಕ್ಕಾಗಿ ಅವರು ತಮ್ಮ ಕುಟುಂಬದಿಂದ ದೂರವಿದ್ದು, ಮಾರುತಿ ಇಗ್ನಿಸ್ ಕಾರಿನಲ್ಲಿ ವಾಸಿಸುತ್ತಿದ್ದಾರೆ. ತಮಗೆ ಅಗತ್ಯವಿರುವ ವಸ್ತುಗಳನ್ನು ಕಾರಿನಲ್ಲಿ ಇಟ್ಟುಕೊಂಡಿದ್ದಾರೆ.
ಹಲವಾರು ದಿನಗಳಿಂದ ತಮ್ಮ ಮನೆಗೆ ಹೋಗಿಲ್ಲವೆಂದು ಸಚಿನ್ ನಾಯಕ್ರವರು ಹೇಳಿದ್ದಾರೆ. ಈ ಬಿಕ್ಕಟ್ಟಿನ ಸಮಯದಲ್ಲಿ ಕಾರಿನಲ್ಲಿ ಪ್ರತ್ಯೇಕವಾಗಿರುವುದು ಸರಿಯೆಂದು ಅವರು ಭಾವಿಸಿದ್ದಾರೆ.
MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್
ಕುಟುಂಬದವರ ಜೊತೆ ಮಾತನಾಡಬೇಕೇನಿಸಿದಾಗ ಮೊಬೈಲ್ನಲ್ಲಿ ವಾಯ್ಸ್ ಕಾಲ್ ಅಥವಾ ವೀಡಿಯೊ ಕಾಲ್ ಮೂಲಕ ಮಾತನಾಡುತ್ತಾರೆ. ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ರವರು ಸಚಿನ್ ಅವರ ನಡೆಯನ್ನು ಸೋಷಿಯಲ್ ಮೀಡಿಯಾದಲ್ಲಿ ಶ್ಲಾಘಿಸಿದ್ದಾರೆ.